Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಓಂಕಾಳು ಬಳಕೆಯಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳು*
ಇತ್ತೀಚಿನ ಸುದ್ದಿಗಳು ರೋಗ ಮುಕ್ತ

*ಓಂಕಾಳು ಬಳಕೆಯಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳು*

ಮೇ 20, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಓಂ ಕಾಳನ್ನು ಅಡುಗೆಗೆ ಸಾಮಾನ್ಯವಾಗಿ ಉಪಯೋಗಿಸುತ್ತಲೇ ಇರುತ್ತೇವೆ. ಆದರೆ, ಈ ಓಂ ಕಾಳನ್ನು ಸೇವಿಸುವುದರಿಂದ ಹತ್ತು ಹಲವು ಆರೋಗ್ಯಕಾರಿ ಲಾಭಗಳಿದೆ. ಸಾಕಷ್ಟು ಮಂದಿ ಹೊಟ್ಟೆ, ಕರುಳು ಹಾಗೂ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಅಂಗಾಂಗಗಳಲ್ಲಿ ಹುಣ್ಣುಗಳಿಂದ ಬಳಲುತ್ತಿರುತ್ತಾರೆ, ಈ ಹುಣ್ಣುಗಳಿಂದ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿರುತ್ತಾರೆ, ಇದಕ್ಕಾಗಿ ಹಲವು ಔಷಧಗಳ ಮೊರೆ ಹೋಗಿರುತ್ತಾರೆ. ಆದರೆ, ಓಂ ಕಾಳುಗಳು ಇಂತಹ ಹುಣ್ಣುಗಳನ್ನು ವಾಸಿಮಾಡಲು ಪರಿಣಾಮಕಾರಿಯಾಗಿದೆ ಎಂದರೆ ಆಶ್ಚರ್ಯವಾಗಬಹುದು.

ಓಂ ಕಾಳುಗಳು ಅಸಿಡಿಟಿ, ಗ್ಯಾಸ್ ಸಮಸ್ಯೆ, ಜೀರ್ಣಕ್ರಿಯೆಯ ವಿಳಂಬವಾಗುವ ತೊಂದರೆಗಳನ್ನು ಸರಿಪಡಿಸುತ್ತದೆ. ಜೀರ್ಣಕ್ರಿಯೆಯ ತೊಂದರೆಗಳನ್ನು ಸರಿಮಾಡಿಕೊಳ್ಳಲು ಅರ್ಧ ಚಮಚದಷ್ಟು ಓಂಕಾಳು ಗಳನ್ನು ಜಗಿದು ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ಕುಡಿಯಬಹುದು.

ಕಾಳುಗಳು ತೈವನ್ ಎಂಬ ಅಂಶವನ್ನು ಒಳಗೊಂಡಿದೆ. ಈ ಅಂಶವು ಕೀಟಾಣುಗಳ ಹಾಗೂ ಶಿಲಿಂಧ್ರಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದೆ. ಹಲವಾರು ಚರ್ಮ ಸಮಸ್ಯೆಗಳು ಶಿಲಿಂಧ್ರದ ಮುಖಾಂತರ  ಬರಬಹುದು. ಇಂತಹ ಸಮಸ್ಯೆಗಳಿಗೆ ಕೇವಲ ನಿಮಿಷಗಳಲ್ಲಿ ಓಂಕಾಳು ಗಳನ್ನು ಬಳಸಿ ಪರಿಹಾರ ಕಂಡುಕೊಳ್ಳಬಹುದು.

ಕೆಲವು ಓಂ ಕಾಳುಗಳನ್ನು ತೆಗೆದುಕೊಂಡು ಕುಟ್ಟಿ ಪುಡಿ ಮಾಡಿ ಅವುಗಳನ್ನು ನಿಮ್ಮ ಚರ್ಮ ಸಮಸ್ಯೆ ಇರುವ ಜಾಗಕ್ಕೆ ನೇರವಾಗಿ ಹಚ್ಚಬಹುದು. ಮೊಡವೆ ಅಥವಾ ಕಲೆಗಳು ತಮ್ಮ ಬಣ್ಣವನ್ನು ಕಳೆದುಕೊಳ್ಳಬೇಕು ಎಂದಿದ್ದರೆ ಓಂ ಕಾಳುಗಳ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ನಂತೆ ತಯಾರಿಸಿ. ಇದನ್ನು ಮೊಡವೆಗಳು ಇರುವ ಜಾಗಕ್ಕೆ ಹಚ್ಚಿ 15 ನಿಮಿಷದ ವರೆಗೆ ಹಾಗೆ ಬಿಟ್ಟು ನಂತರ ತೊಳೆದುಕೊಳ್ಳಿ.

ಹೊಟ್ಟೆಯ ತಳಮಳ ಅಥವಾ ಹೊಟ್ಟೆಯ ನೋವುಗಳು ನಮ್ಮ ಆಹಾರ ಸರಿಯಾಗಿ ಜೀರ್ಣವಾಗದೇ ಇದ್ದಾಗ ಸಂಭವಿಸಬಹುದು. ಇಂತಹ ಸಮಯದಲ್ಲಿ ನಿಮಗೆ ಓಂ ಕಾಳುಗಳು ಸಹಾಯ ಮಾಡುತ್ತದೆ. ಜೀರ್ಣವಾಗದ ಆಹಾರವು ಮಲವಿಸರ್ಜನೆಯ ಮೂಲಕ ದೇಹದಿಂದ ಹೊರ ಹೋಗದಿದ್ದಾಗ ಕೂಡ ಹೊಟ್ಟೆಯ ಸಮಸ್ಯೆಗಳು ಬರಬಹುದು. ಓಂ ಕಾಳುಗಳನ್ನು ಜಗಿದು ತಿನ್ನುವುದರ ಮುಖಾಂತರ ಈ ತೊಂದರೆಯಿಂದ ಹೊರಬರಬಹುದು. ಓಂ ಕಾಳುಗಳನ್ನು ಕುಟ್ಟಿ ಪುಡಿಮಾಡಿ ನೀರಿನೊಂದಿಗೆ ಬೆರೆಸಿ ಸೇವಿಸುವುದರಿಂದ ಗರ್ಭಿಣಿ ಮಹಿಳೆಯರಿಗೆ ಉಂಟಾಗುವ ಸಮಸ್ಯೆಗಳು ಹಾಗೂ ಸಾಮಾನ್ಯ ಮಹಿಳೆಯರಲ್ಲಿ ಉಂಟಾಗುವ ಋತುಚಕ್ರದ ಏರುಪೇರುಗಳನ್ನು ಸರಿ ಮಾಡಿಕೊಳ್ಳಬಹುದು. ಓಂ ಕಾಳುಗಳನ್ನು ಸ್ವಲ್ಪ ಹುರಿದು ನಂತರ ನೀರಿಗೆ ಹಾಕಿ ಕುದಿಸಿ ಆ ನೀರನ್ನು ಸೋಸಿ ಕುಡಿಯಬಹುದು.

ಓಂಕಾಳು ಗಳಲ್ಲಿ ಹೆಚ್ಚಿನ ನಾರಿನಂಶ ಇರುವುದರಿಂದ ದೇಹದಲ್ಲಿ ಅನಗತ್ಯವಾಗಿ ಶೇಖರಣೆಯಾಗಿರುವ ಕೊಬ್ಬನ್ನು ಕೂಡ ತೆಗೆಯಲು ಸಹಾಯ ಮಾಡುತ್ತದೆ. ಆರ್ಥ್ರೈಟಿಸ್ ನಿಂದ ಉಂಟಾದ ಮೂಳೆಗಳ ಬಳಿ ಇರುವ ಕೆಂಪು ಕಲೆಗಳು ಹಾಗೂ ನೋವನ್ನು ಇದು ಹೋಗಲಾಡಿಸುತ್ತದೆ. ಓಂ ಕಾಳುಗಳಲ್ಲಿ ಉರಿಯೂತ ಗಳನ್ನು ಶಮನ ಮಾಡುವ ಗುಣಗಳಿವೆ. ಆರ್ಥ್ರೈಟಿಸ್ ನಿಂದ ಉಂಟಾಗಿರುವ ಮೂಳೆಗಳ ಊತವನ್ನು ಕಡಿಮೆ ಮಾಡಲು ಸಹ ಇದು ಸಹಾಯ ಮಾಡುತ್ತದೆ.

ಓಂ ಕಾಳುಗಳನ್ನು ನಿಂಬೆಯ ರಸದಲ್ಲಿ ನೆನೆಸಿ ಇದಕ್ಕೆ ಕಪ್ಪು ಉಪ್ಪನ್ನು ಬೆರೆಸಿ ಸೂರ್ಯನ ಕಿರಣಗಳ ಕೆಳಗೆ ಒಣಗಿಸಿದಾಗ ನಂತರದ ದಿನಗಳಲ್ಲಿ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಲು ಇವುಗಳನ್ನು ಬಳಸಿಕೊಳ್ಳಬಹುದು. ಅಡುಗೆ ಮನೆಯಲ್ಲಿ ಬಹಳ ಸುಲಭವಾಗಿ ಕಾಳುಗಳನ್ನು ಉಪಯೋಗಿಸುವ ವಿಧವೆಂದರೆ ನಿಮ್ಮ ಟೀ ಜೊತೆಗೆ ಓಂ ಕಾಳುಗಳನ್ನು ಬೇಯಿಸಿ ಕುಡಿಯಬಹುದು.

ಜೀರಿಗೆಯೊಂದಿಗೆ ಈ ಕಾಳನ್ನು ಹುರಿದು ನೀರಿನಲ್ಲಿ ಬೇಯಿಸಿ ಸೋಸಿ, ಅದಕ್ಕೆ ಸಕ್ಕರೆ ಬೆರೆಸಿ ಕುಡಿದರೆ ನೈಸರ್ಗಿಕವಾಗಿಯೇ ಅಸಿಡಿಟಿ ಕಡಿಮೆಯಾಗುತ್ತದೆ.

ಓಂ ಕಾಳು ನಮ್ಮ ದೇಹದ ಜೀರ್ಣಕಾರಿ ಅಂಗಗಳಾದ ಹೊಟ್ಟೆ, ಕರುಳು ಮತ್ತು ಹುಣ್ಣಿನಂತಹ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಓಂ ಕಾಳು ಹೆಚ್ಚಾಗಿ ಆಮ್ಲೀಯತೆ, ಗ್ಯಾಸ್ ಮತ್ತು ಅಜೀರ್ಣಕ್ಕೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತವೆ. ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ನೀವು ಅರ್ಧ ಟೀ ಚಮಚ ಓಂ ಕಾಳು ಜಗಿದು ರಸ ನುಂಗಬೇಕು ಅಥವಾ ನೀರಿನೊಂದಿಗೆ ಈ ಕಾಳನ್ನು ಕುದಿಸಿ ಕೂಡ ಕುಡಿಯಬಹುದು.

ಒತ್ತಡ ಹಾಗೂ ಆಹಾರ ಕ್ರಮಗಳಿಂದ ಬಹಳ ಚಿಕ್ಕ ವಯಸ್ಸಿಗೆ ಬಿಳಿಕೂದಲು ಆರಂಭವಾಗುತ್ತದೆ. ಇಂತಹ ಸಮಸ್ಯೆಗೆ ಹಾಗೂ ಕೂದಲು ಉದುರುವ ಸಮಸ್ಯೆಗೆ ಓಂ ಕಾಳುಗಳನ್ನು ಬಳಸಿಕೊಳ್ಳಬಹುದು.

ಬಿಳಿ ಕೂದಲನ್ನು ಹೋಗಲಾಡಿಸಬೇಕು ಎಂದುಕೊಂಡಿದ್ದರೆ ಎರಡು ಚಮಚದಷ್ಟು ಓಂ ಕಾಳುಗಳನ್ನು ನೀರಿನಲ್ಲಿ ರಾತ್ರಿಯಿಡೀ ನೆನೆಸಿ ಬೆಳಿಗ್ಗೆ ನೀರನ್ನು ಸೋಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿ.

ಓಂ ಕಾಳಿನಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಇದು ಆಹಾರದ ಪರಿಮಳ ಮತ್ತು ರುಚಿಯನ್ನು ಹೆಚ್ಚಿಸುತ್ತದೆ. ನೀವು ಓಂ ಕಾಳನ್ನು ಹಲವು ವಿಧಗಳಲ್ಲಿ ಬಳಸಬಹುದು. ದಾಲ್, ಕರಿ ಅಥವಾ ಸಾಂಬಾರು ಮಾಡುವಾಗ ನೀವು ಓಂ ಕಾಳಿನ ಪುಡಿಯನ್ನು ಬಳಸಬಹುದು. ಅಜೀರ್ಣ ಸಮಸ್ಯೆಯನ್ನು ನಿವಾರಿಸಲು ಜೀರಿಗೆ ಬದಲು ಓಂ ಕಾಳು ಬಳಸಬಹುದು. ಇದನ್ನು ಮೌತ್ ಫ್ರೆಶ್ನರ್ ಆಗಿ ಕೂಡ ಬಳಸಬಹುದಾಗಿದೆ. ಗರ್ಭಾವಸ್ಥೆ ಸಮಯದಲ್ಲಿ ಓಮು ಕಾಳಿನ ಸೇವನೆ ರಕ್ತಶುದ್ಧೀಕರಣಗೊಳಿಸಿ, ದೇಹದಲ್ಲಿ ರಕ್ತ ಸಂಚಲನ ಹೆಚ್ಚಿಸುತ್ತದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.