Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಪ್ರತಿಭಾನ್ವಿತ ಆಟಗಾರ ರಿಕ್ಕಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಪ್ರತಿಭಾನ್ವಿತ ಆಟಗಾರ ರಿಕ್ಕಿ*

ಮೇ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 22 NEWS DESK : ವಿಶಾಲವಾದ ಮರಗಳ ನೆರಳಿನಲ್ಲಿ ಹಾಗೂ ಪಶ್ಚಿಮ ಘಟ್ಟಗಳ ಕಾವಲಿನ ಅಡಿಯಲ್ಲಿ, ಕೊಡಗಿನ ಹಾಕಿಯ ಇತಿಹಾಸದ ಪಯಣವನ್ನು ಆರಂಭಿಸಿದಾಗ, ಈ ದಾರಿಯನ್ನು ಸುಗಮಗೊಳಿಸಿದವರನ್ನು ನೆನೆಯುತ್ತಾ, ಕೊಡಗಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಹಾಕಿ ಆಟಗಾರರಲ್ಲಿ ಕರ್ತಮಾಡ ರಿಕ್ಕಿ ಗಣಪತಿಯವರು ಕೂಡ ಒಬ್ಬರು.
ಬಿರುನಾಣಿ ಗ್ರಾಮದ ದಿವಂಗತ ಕರ್ತಮಾಡ ಚಂಗಪ್ಪ ಹಾಗೂ ಸ್ವಾತಿ (ತಾಮನೆ ಮನೆಯಪಂಡ) ದಂಪತಿಯರ ಪುತ್ರನಾಗಿ ರಿಕ್ಕಿ ಗಣಪತಿಯವರು 29 ಮಾರ್ಚ್ 1968ರಂದು ಜನಿಸಿದರು. ಗೋಣಿಕೊಪ್ಪಲು ಸೆಂಟ್ ಥಾಮಸ್ ಶಾಲೆಯಲ್ಲಿ ಓದುತ್ತಿರುವಾಗಲೇ, ಪೊನ್ನಂಪೇಟೆಯ ಪುಚ್ಚಿಮಾಡ ಹರೀಶ್ ಮಾಸ್ಟರ್ ಅವರ ತರಬೇತಿಯಲ್ಲಿ ಹಾಕಿಯ ಭವಿಷ್ಯಕ್ಕೆ ಮುನ್ನುಡಿ ಬರೆದರು.
ಪ್ರೌಢ ಶಿಕ್ಷಣವನ್ನು ಪೊನ್ನಂಪೇಟೆ ಶಾಲೆಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ಅಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ದೇವಯ್ಯನವರು ಇವರಿಗೆ ಹಾಕಿಯ ತರಬೇತಿಯಲ್ಲಿ ಮಾರ್ಗದರ್ಶನ ನೀಡಿದರು. ಇವರು ಪದವಿಯನ್ನು ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನಲ್ಲಿ ಪಡೆದರು. ಕಾಲೇಜು ದಿನಗಳಲ್ಲಿಯೂ ಅನೇಕ ಹಾಕಿ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ನಂತರ ಮ್ಯಾಥ್ಯೂ ಜೇಕಬ್ ಅವರ ತರಬೇತಿಯಿಂದ ಮಂಗಳೂರು ಕ್ರೀಡಾ ಶಾಲೆಗೆ ಸೇರಿದರು.

ಕ್ರೀಡಾ ಸಾಧನೆ :: 1988ರ ಮುಂಬೈ, 1989ರ ಮಧ್ಯಪ್ರದೇಶ, 1990 ಜಮ್ಮು ಮತ್ತು ಕಾಶ್ಮೀರ, 1992ರ ರಾಜಸ್ಥಾನ ಮತ್ತು 1993ರ ಮುಂಬೈನಲ್ಲಿ ನಡೆದ ಹಿರಿಯರ ರಾಷ್ಟ್ರೀಯ ಹಾಕಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

1988ರ ಆಂಧ್ರಪ್ರದೇಶ, 1989ರ ಹೈದರಾಬಾದ್, 1993ರ ಕೊಡಗು ಹಾಗೂ 1995ರ ಕೇರಳದಲ್ಲಿ ನಡೆದ ದಕ್ಷಿಣ ವಲಯದ ಹಾಕಿ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.
1992 ಹಾಗೂ 1993 ರಲ್ಲಿ ಪಂಜಾಬ್ ನಲ್ಲಿ ನಡೆದ ಫೆಡರೇಶನ್ ಕಪ್, 1989 ಹಾಗೂ 1993ರಲ್ಲಿ ರಾಜಸ್ಥಾನದಲ್ಲಿ ನಡೆದ ಅಖಿಲ ಭಾರತ ಡಿ.ಸಿ.ಎಂ ಶ್ರೀರಾಮ್ ಹಾಕಿ ಪಂದ್ಯಾವಳಿ, 1992ರ ಚೆನ್ನೈನಲ್ಲಿ ನಡೆದ ಅಖಿಲ ಭಾರತ ಎಂ.ಸಿ.ಸಿ ಹಾಕಿ ಪಂದ್ಯಾಟ, ಕೊಲ್ಕತ್ತಾದಲ್ಲಿ ನಡೆದ ಬೇಟನ್ ಕಪ್ ಹಾಗು ದೆಹಲಿಯಲ್ಲಿ ನಡೆದ ನೆಹರು ಕಪ್ ಹೀಗೆ ಅನೇಕ ಪಂದ್ಯಾವಳಿಗಳಲ್ಲಿ ಕರ್ನಾಟಕದ ಪರ ಆಡಿದ ಕೀರ್ತಿ ಇವರದು.

ಹೆಸರುವಾಸಿ ಆಟಗಾರ ::  ಕೊಡಗಿನಲ್ಲಿ ನಡೆದ ಅನೇಕ ಪ್ರತಿಷ್ಠಿತ ಕೌಟುಂಬಿಕ ಹಾಕಿ ಪಂದ್ಯಗಳಲ್ಲಿ ಆಡಿದ ಕೀರ್ತಿ ಇವರದು, ರಿಕ್ಕಿ ಅವರು ಉತ್ತಮ ಮುನ್ನಡೆ ಆಟಗಾರನೆಂದು ಖ್ಯಾತಿ ಪಡೆದಿದ್ದಾರೆ. ತನ್ನ ವಿಶೇಷ ಶೈಲಿಯ ಆಟದಿಂದ ಪ್ರೇಕ್ಷಕರನ್ನು ಮಂತ್ರಮುಗ್ದರನ್ನಾಗಿಸುವ ಪರಿಣಿತ ಆಟಗಾರ.

:: ನೆಸ್ಲೆ ಇಂಡಿಯಾ :: ಅಂದಿನ ಪ್ರಥಮ ವರ್ಷದ ನೆಸ್ಲೆ ಕಪ್ ಅನ್ನು ಓಯಸಿಸ್ ಜೋಡುಪೆಟ್ಟಿ ತಂಡಕ್ಕೆ ಅದ್ಭುತವಾಗಿ ಆಡಿ ಕಪ್ ಅನ್ನು ಗೆದ್ದು ಕೊಟ್ಟರು.

:: ಹಾಕಿ ಕರ್ನಾಟಕ :: ಇವರು ಹಾಕಿ ಕರ್ನಾಟಕದ ಹಿರಿಯ ಉಪಾಧ್ಯಕ್ಷರು, ಕರ್ನಾಟಕ ಸೀನಿಯರ್ ತಂಡಕ್ಕೆ ತರಬೇತಿದಾರ ಹಾಗೂ ಮ್ಯಾನೇಜರ್ ಆಗಿದ್ದಾರೆ.
ಪ್ರಸ್ತುತ ಕೆನರಾ ಬ್ಯಾಂಕ್ ನ ಹಿರಿಯ ವ್ಯವಸ್ಥಾಪಕ ಹುದ್ದೆಯಲ್ಲಿದ್ದಾರೆ. ಕೆನರಾ ಬ್ಯಾಂಕ್ ಹಾಕಿ ತಂಡವನ್ನು ಕಟ್ಟಿ-ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ತಮ್ಮ ಪತ್ನಿ ರೂಪ ಹಾಗೂ ಮಕ್ಕಳಾದ ಧ್ರುವ್ ಉತ್ತಪ್ಪ ಹಾಗೂ ಆರ್ಯನ್ ಅಯ್ಯಣ್ಣ ಅವರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

:: ಗಿನ್ನಿಸ್ ದಾಖಲೆಗೆ ಶುಭ ಹಾರೈಕೆ ::  ಇತ್ತೀಚೆಗೆ ನಡೆದ ಕುಡ್ಯೋಳಂಡ ಹಾಕಿ ಹಬ್ಬವು ಗಿನ್ನಿಸ್ ದಾಖಲೆಗೆ ಸೇರ್ಪಡೆಗೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸುತ್ತಾ, ತಮ್ಮನೆಲ್ಲ ಕರೆದು ಸಮ್ಮಿಲನ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಿದ್ದಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಹಾಕಿ ಕರ್ನಾಟಕದ ವತಿಯಿಂದ ಕುಡ್ಯೋಳಂಡ ಕುಟುಂಬಕ್ಕೆ ಶುಭ ಕೋರಿದರು.
ಹಾಕಿಯಲ್ಲಿ ತನ್ನನ್ನು ಮೂರು ದಶಕಗಳಿಗಿಂತಲೂ ಹೆಚ್ಚಾಗಿ ತೊಡಗಿಸಿಕೊಂಡು, ಕೊಡಗಿನ ಹಾಕಿ ಕೂರ್ಗ್ ಮತ್ತು ಎಲ್ಲಾ ಹಾಕಿ ಆಟಗಾರರೊಡನೆ ಒಳ್ಳೆಯ ಸ್ನೇಹ ಸಂಬಂಧವನ್ನು ಹೊಂದಿದ್ದು, ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ, ಸದಾ ಸನ್ಮುಖಿ, ನಮ್ಮ ದೇಶದ ಹಿರಿಮೆ ಹಾಗೂ ಕೊಡಗಿನ ಗರಿಮೆಯನ್ನು ದೇಶದ ಉದ್ದಕ್ಕೂ ಸಾರಿದ್ದಾರೆ. ಇದೇ ರೀತಿ ಹಾಕಿಗೆ ಇನ್ನು ಹೆಚ್ಚು ಕೊಡುಗೆಗಳನ್ನು ನೀಡಲಿ ಹಾಗೂ ಕೊಡಗಿನ ಯುವ ಆಟಗಾರರನ್ನು ಯಶಸ್ಸಿನ ಹಾದಿಯತ್ತ ಕೊಂಡೊಯ್ಯಲಿ ಎಂಬುದು ಕ್ರೀಡಾಪ್ರೇಮಿಗಳ ಮನದಾಸೆ.

ಕ್ರೀಡಾ ವಿಶ್ಲೇಷಣೆ :: ಚೆಪ್ಪುಡೀರ ಕಾರ್ಯಪ್ಪ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಸೋಮವಾರಪೇಟೆಯ ಸಾಮಾಜಿಕ ಹೋರಾಟಗಾರ್ತಿ ಡಾ.ಕಾವೇರಿ ಹೆಚ್.ಎಂ ಅವರು ದಕ್ಷಿಣ ಏಷ್ಯಾ ದೇಶಗಳ ಆದಿವಾಸಿಗಳ…

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.