Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಕೀಲರ ಮೇಲೆ ಹಲ್ಲೆ ನಡೆಸಿದರೆ ಮೂರು ವರ್ಷ ಜೈಲು ಗ್ಯಾರಂಟಿ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ವಕೀಲರ ಮೇಲೆ ಹಲ್ಲೆ ನಡೆಸಿದರೆ ಮೂರು ವರ್ಷ ಜೈಲು ಗ್ಯಾರಂಟಿ*

ಜೂನ್ 14, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಜೂ.14 NEWS DESK : ರಾಜ್ಯದ ವಕೀಲ ಸಮುದಾಯವನ್ನು ಸಂಭವನೀಯ ಹಲ್ಲೆ , ಬೆದರಿಕೆ , ಕಿರುಕುಳದಂತಹ ಕೃತ್ಯಗಳಿಂದ ರಕ್ಷಿಸಲು ರಾಜ್ಯ ಸರ್ಕಾರವು “ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023′ Karnataka Prohibition of violence against advocates act ̳̄2023(KPVA act) ಜಾರಿಗೆ ತಂದಿದೆ.
ಈ ಕುರಿತು ಜೂನ್‌ 10ರಂದು ರಾಜ್ಯ ಸರ್ಕಾರವು ಗೆಜೆಟ್‌ ಅಧಿಸೂಚನೆ ಹೊರಡಿಸಿದ್ದು ನೂತನ ಕಾಯ್ದೆ , ಆ ದಿನದಿಂದಲೇ ಜಾರಿಗೆ ಬರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ. ಅದರಂತೆ, ಇನ್ನು ಮುಂದೆ ವಕೀಲರು ತಮ್ಮ ವೃತ್ತಿಪರ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅವರ ಮೇಲೆ ಹಲ್ಲೆ ನಡೆಸುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದು ನಿಷೇಧಿಸಲಾಗಿದ್ದು, ಒಂದೊಮ್ಮೆ ಇಂತಹ ಕೃತ್ಯಗಳು ನಡೆದಲ್ಲಿ ಅದು ಶಿಕ್ಷಾರ್ಹ ಅಪರಾಧವಾಗಲಿದೆ.
ತಮ್ಮ ಕರ್ತವ್ಯವನ್ನು ನಿರ್ವಹಿಸುವಾಗ, ವಕೀಲರು ಪ್ರತಿವಾದಿ ಕಕ್ಷಿದಾರರ ದುರುದ್ದೇಶಪೂರಿತ ಮತ್ತು ನಿಷ್ಪ್ರಯೋಜಕ ಕಾನೂನು ಕ್ರಮಕ್ಕೆ ಗುರಿಯಾಗುತ್ತಾರೆ, ಅದು ಅವರ ಕರ್ತವ್ಯಗಳ ಕಾರ್ಯಕ್ಷಮತೆ ಮತ್ತು ನ್ಯಾಯದ ಆಡಳಿತಕ್ಕೆ ಅಡ್ಡಿಪಡಿಸುತ್ತದೆ ಎಂದು ಕಾನೂನಿನ ಹೇಳಿಕೆ ಮತ್ತು ವಸ್ತುಗಳು ಎತ್ತಿ ತೋರಿಸುತ್ತವೆ. ಈ ಕಾನೂನನ್ನು ಡಿಸೆಂಬರ್ 11, 2023 ರಂದು ಕರ್ನಾಟಕದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದರು. ನಂತರ ಇದನ್ನು ಕರ್ನಾಟಕ ವಿಧಾನಸಭೆಯು ಡಿಸೆಂಬರ್ 12, 2023 ರಂದು ಅಂಗೀಕರಿಸಿತು. ಮಾರ್ಚ್ 20, 2024 ರಂದು ಕಾನೂನು ರಾಜ್ಯಪಾಲರ ಒಪ್ಪಿಗೆಯನ್ನು ಪಡೆಯಿತು.

ಅಪರಾಧ ತಡೆಗಟ್ಟುವಿಕೆ ಮತ್ತು ಅಪರಾಧಿಗಳ ಶಿಕ್ಷೆ ಕುರಿತ ಎಂಟನೇ ವಿಶ್ವಸಂಸ್ಥೆಯ ಕಾಂಗ್ರೆಸ್ ಹವಾನಾ, ಕ್ಯೂಬಾದಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಭಾರತ ಭಾಗವಹಿಸಿತ್ತು, ಆ ಪ್ರಕಾರ “ವಕೀಲರ ಪಾತ್ರದ ಮೂಲಭೂತ ತತ್ವಗಳನ್ನು” ಈ ಕಾಯ್ದೆಯ ಮೂಲಕ ಅಳವಡಿಸಿಕೊಂಡಿದೆ ಎಂದು ನೂತನ ಕಾನೂನು ಎತ್ತಿ ತೋರಿಸುತ್ತದೆ.
ಈ ನೂತನ ಕಾಯ್ದೆಯು ವಕೀಲರು ಬೆದರಿಕೆ, ಅಡ್ಡಿ, ಕಿರುಕುಳ ಅಥವಾ ಅನುಚಿತ ಹಸ್ತಕ್ಷೇಪರಹಿತವಾಗಿ ತಮ್ಮ ಎಲ್ಲ ವೃತ್ತಿಪರ ಕಾರ್ಯ ಮತ್ತು ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗಿಸಬೇಕು, ವಕೀಲರು ದೇಶ ಮತ್ತು ವಿದೇಶ ಎರಡರಲ್ಲಿಯೂ ಮುಕ್ತವಾಗಿ ಪ್ರಯಾಣಿಸಲು ಮತ್ತು ಅವರ ಕಕ್ಷಿದಾರರೊಂದಿಗೆ ಸಮಾಲೋಚಿಸಲು ಸಾಧ್ಯವಾಗಬೇಕು. ವಕೀಲರು ಮಾನ್ಯ ಮಾಡಿದ ವೃತ್ತಿಪರ ಕರ್ತವ್ಯಗಳು, ಮಾನಕಗಳು ಮತ್ತು ನೈತಿಕತೆಗಳ ಅನುಸಾರ ತೆಗೆದುಕೊಂಡ ಕ್ರಮಕ್ಕಾಗಿ ಅಭಿಯೋಜನೆ/ಆಡಳಿತಾತ್ಮಕ, ಆರ್ಥಿಕ ಅಥವಾ ಇತರ ನಿರ್ಬಂಧಗಳನ್ನು ಅನುಭವಿಸತಕ್ಕದ್ದಲ್ಲ ಅಥವಾ ಭಯಪಡತಕ್ಕದ್ದಲ್ಲ ಎಂಬುದನ್ನು ಸರಕಾರ ಖಚಿತಪಡಿಸಬೇಕು. ವಕೀಲರ ತಮ್ಮ ಕರ್ತವ್ಯ ನಿರ್ವಹಣೆ ಮಾಡುವಾಗ ಅವರ ಭದ್ರತೆಗೆ ಬೆದರಿಕೆ ಒಡ್ಡಿದಾಗ ಸಂಬಂಧಿಸಿದ ಪ್ರಾಧಿಕಾರಗಳು ಅವರನ್ನು ಸಂಪೂರ್ಣವಾಗಿ ಸಂರಕ್ಷಿಸಬೇಕು, ನ್ಯಾಯವಾದಿಗಳು ಯಾವುದೇ ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೆ ತಮ್ಮ ವೃತ್ತಿಪರ ಸೇವೆಗಳನ್ನು ಸಲ್ಲಿಸುವುದಕ್ಕಾಗಿ ಹಾಗೂ ಅದಕ್ಕೆ ಸಂಬಂಧಿಸಿದ ಮತ್ತು ಪ್ರಾಸಂಗಿಕವಾದ ವಿಷಯಗಳಿಗಾಗಿ ಅವರ ಮೇಲಿನ ಹಿಂಸೆಯನ್ನು ನಿಷೇಧಿಸಿ ಅವರಿಗೆ ರಕ್ಷಣೆ ನೀಡುವುದು ಕಾಯ್ದೆಯ ಮೂಲ ಉದ್ದೇಶ ಆಗಿದೆ.

ವಕೀಲರ ವಿರುದ್ಧ ಅಪರಾಧ ಎಸಗುವ ಯಾವನೇ ವ್ಯಕ್ತಿ ಆರು ತಿಂಗಳಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹ 1 ಲಕ್ಷ ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ ಎಂದು ಕಾನೂನು ಹೇಳಿದೆ. ಕಾಗ್ನಿಜೆಬಲ್‌ ಅಪರಾಧಕ್ಕೆ ಸಂಬಂಧಿಸಿದಂತೆ ವಕೀಲರನ್ನು ಬಂಧಿಸಿದಾಗ, ಪೊಲೀಸರು ಬಂಧಿಸಿದ 24 ಗಂಟೆಗಳ ಒಳಗೆ, ಬಂಧಿತ ವಕೀಲರು ಸದಸ್ಯರಾಗಿರುವ ವಕೀಲರ ಸಂಘದ ಅಧ್ಯಕ್ಷ ಅಥವಾ ಕಾರ್ಯದರ್ಶಿಗೆ ಮಾಹಿತಿ ನೀಡಬೇಕಿದೆ.
ಅದರ ಅಡಿಯಲ್ಲಿ ಶಿಕ್ಷಾರ್ಹವಾದ ಪ್ರತಿಯೊಂದು ಅಪರಾಧವನ್ನು ಪ್ರಥಮ ದರ್ಜೆಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕಿಂತ ಕೆಳಗಿಲ್ಲದ ನ್ಯಾಯಾಲಯವು ವಿಚಾರಣೆ ನಡೆಸುತ್ತದೆ ಎಂದು ಕಾನೂನು ಹೇಳುತ್ತದೆ.

2020ರಲ್ಲಿ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಕಡೆ ವಕೀಲರ ಮೇಲೆ ಹಲ್ಲೆ ನಡೆದ ಘಟನೆಗಳು ವರದಿಯಾಗಿದ್ದವು. ಹೆಚ್ಚಿದ ಹಲ್ಲೆ , ಕೊಲೆ ಹಿನ್ನೆಲೆಯಲ್ಲಿ ವಕೀಲರ ರಕ್ಷಣ ಕಾಯ್ದೆ ರೂಪುಗೊಳ್ಳಬೇಕು ಎಂಬ ಬಲವಾದ ಒತ್ತಾಯ ವಕೀಲರ ಸಮುದಾಯದಲ್ಲಿ ಎದ್ದಿತ್ತು. ಬೆಂಗಳೂರು ವಕೀಲರ ಸಂಘ ಸೇರಿದಂತೆ ರಾಜ್ಯದ ವಿವಿಧ ವಕೀಲ ಸಂಘಟನೆಗಳು ಈ ಕುರಿತು ಸರಕಾರಗಳ ಗಮನ ಸೆಳೆದು ಹೋರಾಟ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಕರಡು ಮಸೂದೆ ರಚನೆಗೆ ನಿರ್ಧರಿಸಿದ್ದ ಬೆಂಗಳೂರು ವಕೀಲರ ಸಂಘ, ಹಿರಿಯ ವಕೀಲರಾದ ಉದಯ್‌ ಹೊಳ್ಳ, ಸಿ.ಎಚ್‌. ಹನುಮಂತರಾಯ, ವೀರಾಜಪೇಟೆಯ ಇಂದಿನ ಶಾಸಕ ಎ.ಎಸ್‌. ಪೊನ್ನಣ್ಣ ಮತ್ತು ಡಿ.ಆರ್‌. ರವಿಶಂಕರ್‌ ಅವರನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು. ಸಮಿತಿಯು ರೂಪಿಸಿದ ಕರಡು ವಿಧೇಯಕವನ್ನು 2021 ರಲ್ಲಿ ಸರಕಾರಕ್ಕೆ ಸಲ್ಲಿಸಲಾಗಿತ್ತು.
ಈಗಾಗಲೇ ಕರ್ನಾಟಕದಲ್ಲಿ ವೈದ್ಯರು ಮತ್ತು ಪತ್ರಕರ್ತರಿಗೆ ಇದೇ ರೀತಿಯ ಕಾನೂನು ರಕ್ಷಣೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ವರದಿ : ಕೋವರ್‌ಕೊಲ್ಲಿ ಇಂದ್ರೇಶ್ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.