Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕ್ರೀಡಾಕಲಿಗಳ ಜಿಲ್ಲೆಯಲ್ಲೊಂದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಜಿಲ್ಲಾ ಕ್ರೀಡಾಂಗಣ : ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅವ್ಯವಸ್ಥೆಗಳದ್ದೇ ದರ್ಬಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕ್ರೀಡಾಕಲಿಗಳ ಜಿಲ್ಲೆಯಲ್ಲೊಂದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಜಿಲ್ಲಾ ಕ್ರೀಡಾಂಗಣ : ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅವ್ಯವಸ್ಥೆಗಳದ್ದೇ ದರ್ಬಾರ್*

ಜುಲೈ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.5 NEWS DESK : ಕೊಡವ ಹಾಕಿ ಹಬ್ಬದ ಮೂಲಕವೇ ವಿಶ್ವ ದಾಖಲೆ ಬರೆದಿರುವ ಕೊಡಗು ಜಿಲ್ಲೆ ಕ್ರೀಡಾ ಕಲಿಗಳ ನಾಡೆಂದೇ ಪ್ರಖ್ಯಾತಿ ಪಡೆದಿದೆ. ಆದರೆ ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿರುವ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಜಿಲ್ಲೆಯ ಕ್ರೀಡಾ ಕ್ಷೇತ್ರಕ್ಕೆ ಕಳಂಕ ತರುವಂತ್ತಿದೆ.
ಸುಮಾರು 20 ವರ್ಷಗಳ ಹಿಂದೆ ಯಥಾಸ್ಥಿತಿಯಲ್ಲಿದ್ದ ಮೈದಾನ ಕ್ರೀಡಾಪಟುಗಳ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾಗಿತ್ತು. ಈ ಮೈದಾನದಲ್ಲಿ ಆಟವಾಡಿದ ಜಿಲ್ಲೆಯ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಸುಮಾರು 300 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಹಾಕಿ ಪಂದ್ಯಗಳನ್ನು ಆಡಿದ ಮಾಜಿ ಒಲಂಪಿಯನ್ ಎ.ಬಿ.ಸುಬ್ಬಯ್ಯ ಅವರು ಕೂಡ ಇದೇ ಮೈದಾನದಿಂದ ಅರಳಿದ ಕ್ರೀಡಾ ಪ್ರತಿಭೆಯಾಗಿದ್ದಾರೆ. ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಮಾಜಿ ಒಲಂಪಿಯನ್ ಎಂ.ಎಂ.ಸೋಮಯ್ಯ, ಅಂತರರಾಷ್ಟ್ರೀಯ ಹಾಕಿ ಆಟಗಾರರಾದ ಬಾಳೆಯಡ ಸಿ.ಪೂಣಚ್ಚ, ವಿ.ಎಸ್.ವಿನಯ್ ಸೇರಿದಂತೆ ಅನೇಕ ಆಟಗಾರರಿಗೆ ಇದೇ ಮೈದಾನ ಕ್ರೀಡಾಸ್ಫೂರ್ತಿಯನ್ನು ತುಂಬಿತ್ತು.
ಜಿಲ್ಲೆಯ ಯುವ ಸಮೂಹಕ್ಕೆ ಕ್ರೀಡಾ ತರಬೇತಿ ನೀಡುವ ಮೂಲಕ ಹಲವು ಕ್ರೀಡಾ ಪ್ರತಿಭೆಗಳನ್ನು ರಾಷ್ಟ್ರಕ್ಕೆ ನೀಡಿದ ಹಿರಿಯ ಕ್ರೀಡಾಪಟು ಸಿ.ವಿ.ಶಂಕರ್ ಅವರು ಕೂಡ ಪ್ರತಿಭೆಗಳ ಅನಾವರಣಕ್ಕೆ ಇದೇ ಮೈದಾನವನ್ನು ವೇದಿಕೆಯನ್ನಾಗಿಸಿಕೊಂಡರು. ಆದರೆ ಇಂದು ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಹೆಸರನ್ನು ಹೊಂದಿರುವ ಜಿಲ್ಲಾ ಕ್ರೀಡಾಂಗಣ ಅವ್ಯವಸ್ಥೆಗಳ ಮೂಲಕವೇ ಕ್ರೀಡಾಪಟುಗಳಲ್ಲಿ ಬೇಸರವನ್ನು ಮೂಡಿಸಿದೆ.
ಕ್ರೀಡಾಂಗಣದ ಅಭಿವೃದ್ಧಿಯ ಹೆಸರಿನಲ್ಲಿ ಕೋಟ್ಯಾಂತರ ಹಣವನ್ನು ಖರ್ಚು ಮಾಡಲಾಗಿದೆ. ಮೈದಾನವನ್ನು ಕಾಂಕ್ರೀಟ್ ಕಟ್ಟಡಗಳ ಗೂಡಾಗಿಸಲಾಗಿದೆ. ಮೇಲಿನ ಭಾಗದ ವಿಶಾಲವಾದ ಮೈದಾನದಲ್ಲಿ ಕ್ರೀಡಾಕೂಟಗಳಿಗಿಂತ ಹೆಚ್ಚಾಗಿ ಇತರ ಕಾರ್ಯಕ್ರಮಗಳೇ ನಡೆಯುತ್ತವೆ. ದಸರಾ ಮತ್ತಿತರ ದೊಡ್ಡ ಕಾರ್ಯಕ್ರಮಗಳು ನಡೆದಾಗ ಮೈದಾನವನ್ನು ವಾಹನ ನಿಲುಗಡೆ ಪ್ರದೇಶವನ್ನಾಗಿ ಮಾರ್ಪಡಿಸಲಾಗುತ್ತದೆ. ಇದೇ ಕಾರಣಕ್ಕೆ ಮೈದಾನ ಹದಗೆಡುತ್ತಿದೆ ಎನ್ನುವುದು ಸ್ಥಳೀಯ ಕ್ರೀಡಾಪಟುಗಳ ಅಳಲಾಗಿದೆ. ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿ ಸಂದರ್ಭ ಕ್ರೀಡಾಸ್ಫೂರ್ತಿಗೆ ಪೂರಕವಾದ ಯಾವುದೇ ವೈಜ್ಞಾನಿಕ ಸ್ಪರ್ಷ ನೀಡಿಲ್ಲ.
ಇಂದು ಮೈದಾನದ ಸುತ್ತ ಕಾಡು ಬೆಳೆದುಕೊಂಡಿದೆ, ಯಾವುದೇ ಸುರಕ್ಷತಾ ಬೇಲಿ ವ್ಯವಸ್ಥೆ ಇಲ್ಲ. ಕನಿಷ್ಠ ನೀರು ಸರಾಗವಾಗಿ ಹರಿಯಲು ಚರಂಡಿ ವ್ಯವಸ್ಥೆ ಇಲ್ಲ. ಮಳೆನೀರು ಮೈದಾನ ತುಂಬಾ ನಿಂತು ಕೆಸರು ಆವರಿಸಿದೆ. ಈ ಕೆಸರಿನಲ್ಲಿ ವಾಹನಗಳು ನಿತ್ಯ ಸಂಚರಿಸುತ್ತಿರುವುದರಿಂದ ಮೈದಾನ ಸಂಪೂರ್ಣವಾಗಿ ಹದಗೆಟ್ಟಿದೆ. ಬೆಳಗ್ಗಿನ ವಾಯುವಿಹಾರಕ್ಕೆಂದು ಬರುವ ಪ್ರಕೃತಿ ಪ್ರಿಯರಿಗೆ ಈಗ ಮೈದಾನದಲ್ಲಿ ಒಂದು ಹೆಜ್ಜೆ ಇಡಲು ಕೂಡ ಸಾಧ್ಯವಾಗದ ಪರಿಸ್ಥಿತಿ ಇದೆ. ಕ್ರೀಡಾಪಟುಗಳಂತು ಹದಗೆಟ್ಟ ಮೈದಾನದಲ್ಲಿ ಅಭ್ಯಾಸ ಮಾಡುವುದನ್ನೇ ನಿಲ್ಲಿಸಿದ್ದಾರೆ.
ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಅವ್ಯವಸ್ಥೆಗಳಿಂದ ಕೂಡಿರುವ ಬಗ್ಗೆ ಸ್ಥಳೀಯ ಕ್ರೀಡಾಪಟುಗಳು ಹಲವು ಬಾರಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆದಿದ್ದಾರೆ. ಆದರೆ ಯಾರೂ ಕೂಡ ಇಲ್ಲಿಯವರೆಗೆ ಮೈದಾನಕ್ಕೆ ಕಾಯಕಲ್ಪ ನೀಡುವ ಮನಸ್ಸು ಮಾಡಿಲ್ಲ. ಜಿಲ್ಲಾ ಕೇಂದ್ರ ಸ್ಥಾನದಲ್ಲಿರುವ ಈ ಮೈದಾನ ಆಡಳಿತ ವ್ಯವಸ್ಥೆಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತ್ತಾಗಿದೆ.
ಅಭಿವೃದ್ಧಿಯ ಹೆಸರಿನಲ್ಲಿ ಕೋಟ್ಯಾಂತರ ಹಣ ಖರ್ಚು ಮಾಡುವ ಕ್ರೀಡಾ ಇಲಾಖೆ ನಂತರದ ದಿನಗಳಲ್ಲಿ ಕ್ರೀಡಾಂಗಣದ ನಿರ್ವಹಣೆ ಮತ್ತು ಸುರಕ್ಷತೆಗೆ ಆಸಕ್ತಿ ತೋರದೆ ಇರುವುದು ವಿಪರ್ಯಾಸ.
::: ಮಹಿಳಾ ಕ್ರೀಡಾಪಟುಗಳಿಗೆ ಕಷ್ಟ :::
ಮಳೆ ದಿನಗಳನ್ನು ಹೊರತು ಪಡಿಸಿ ಸೆಪ್ಟಂಬರ್ ತಿಂಗಳಿನಿಂದ ಮೇ ಅಂತ್ಯದವರೆಗೂ ವಿವಿಧ ಕ್ರೀಡಾಕೂಟಗಳು ಮತ್ತು ಕ್ರೀಡಾ ಶಿಬಿರಗಳು ಈ ಮೈದಾನದಲ್ಲಿ ನಡೆಯುತ್ತಿರುತ್ತದೆ. ಆದರೆ ಇಲ್ಲಿ ಬಟ್ಟೆ ಬದಲಿಸುವ ಕೋಣೆಗಳಿಲ್ಲ, ಸುಸಜ್ಜಿತ ಶೌಚಾಲಯದ ವ್ಯವಸ್ಥೆ ಇಲ್ಲ. ಇದರಿಂದ ಬಾಲಕಿಯರು ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚು ಕಷ್ಟ ಮತ್ತು ಮುಜುಗರ ಅನುಭವಿಸುವಂತ್ತಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮೊದಲೇ ಇಲ್ಲದಾಗಿದೆ.
::: ಕ್ರೀಡಾಂಗಣ ಸಮಿತಿ ಸಭೆ ನಡೆದಿಲ್ಲ :::
ಕ್ರೀಡಾಂಗಣಕ್ಕೆ ರಕ್ಷಣೆ ಇಲ್ಲದಾಗಿದೆ, ಮೈದಾನ ಎಲ್ಲಾ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿರುವುದರಿಂದ ಸಂಪೂರ್ಣವಾಗಿ ಹದಗೆಡುತ್ತಿದೆ. ವಾಹನಗಳು ರಾಜಾರೋಷವಾಗಿ ಮೈದಾನದ ಮಧ್ಯ ಓಡಾಡುತ್ತವೆ. ಮಕ್ಕಳು ಹಾಗೂ ಯುವ ಕ್ರೀಡಾಪಟುಗಳಿಗೆ ಆಡಲು ಸಾಧ್ಯವಾಗದ ಹೀನಾಯ ಪರಿಸ್ಥಿತಿಯಲ್ಲಿ ಮೈದಾನವಿದೆ. ಜಿಲ್ಲಾ ಕ್ರೀಡಾಂಗಣ ಸಮಿತಿಯ ಸಭೆ ನಡೆಯದೆ ವರ್ಷವೇ ಕಳೆದಿದೆ. ಸ್ವತ: ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳು ಕ್ರೀಡಾಂಗಣ ಮತ್ತು ಮೈದಾನದ ಅವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಸಭೆ ನಡೆಸಬೇಕು.(ಬಾಳೆಯಡ ಕಿಶನ್ ಪೂವಯ್ಯ, ಹಿರಿಯ ಕ್ರೀಡಾಪಟು)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.