Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
  • *ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*
  • *ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*
  • *”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ : ಹಲವು ಸಮಸ್ಯೆ ಅನಾವರಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ : ಹಲವು ಸಮಸ್ಯೆ ಅನಾವರಣ*

ಜುಲೈ 5, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.5 NEWS DESK : ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಾವದಾನದಿಂದ ಸಂವಾದ ನಡೆಸಿದರು.
ಆರಂಭದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮಾತನಾಡಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತುಂಬಾ ದೂರವಿದ್ದು, ಬಸ್ ಸೌಲಭ್ಯ ಸಮರ್ಪಕವಾಗಿಲ್ಲದೆ ಕಠಿಣ ಪರಿಸ್ಥಿತಿಯನ್ನು ಪ್ರತಿನಿತ್ಯ ಎದುರಿಸುತ್ತಿದ್ದು, ಈ ಸಂಬಂಧ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಅಂತರ್ಜಾಲ ಸಂಪರ್ಕವಿಲ್ಲದೆ ಅಧ್ಯಯನ ಮತ್ತು ಮಾಹಿತಿ ಸಂಗ್ರಹಕ್ಕೆ ತುಂಬಾ ತೊಂದರೆಯಾಗಿದೆ. ಈಗಿರುವ ವೈಫೈ ಸೇವೆ ಒಂದು ಅಥವಾ ಎರಡು ಕೊಠಡಿಗೆ ಸಾಲುವುದಿಲ್ಲ. ಆದ್ದರಿಂದ ಟವರ್ ನಿರ್ಮಾಣ ಮಾಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಆರ್.ಶರಣಪ್ರಕಾಶ ಪಾಟೀಲ ಅವರು ಸದ್ಯ ವೈಪೈ ಸೇವೆಯನ್ನು ವಿಸ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಸ್ ಸೌಲಭ್ಯವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುಡ್ಡಗಾಡು ಪ್ರದೇಶವಾಗಿರುವುದರಿಂದ ಕೆಲವೊಂದು ಕೊರತೆಗಳನ್ನು ಎದುರಿಸಬೇಕಿದ್ದು, ಸಾಧ್ಯವಾದಷ್ಟು ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುವುದು ಎಂದರು.
ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಆಟದ ಮೈದಾನ ಇಲ್ಲದೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಯೊಬ್ಬರು ಗಮನ ಸೆಳೆದರು.
ಜಾಗ ವಿಶಾಲವಾಗಿ ಇರದಿರುವುದರಿಂದ ಸದ್ಯ ಬಾಸ್ಕೇಟ್ ಬಾಲ್, ವಾಲಿಬಾಲ್, ಇಂತಹ ಆಟಗಳನ್ನು ಆಡಲು ಅಗತ್ಯ ಜಾಗ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಕಾಲೇಜಿನ ಆವರಣದಲ್ಲಿ ಕನಿಷ್ಠ 100*100 ಆಟದ ಮೈದಾನ ನಿರ್ಮಾಣ ಮಾಡಲು ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ವೈದ್ಯಕೀಯ ಕಾಲೇಜಿನಲ್ಲಿ ಕುಡಿಯುವ ನೀರಿನ ಸಂಪರ್ಕ ಸಮರ್ಪಕವಾಗಿಲ್ಲ. ಬೇಸಿಗೆ ಸಂದರ್ಭದಲ್ಲಂತೂ ತುಂಬಾ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ವಿದ್ಯಾರ್ಥಿನಿಯೊಬ್ಬರು ಬೆಳಕು ಚೆಲ್ಲಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಮಂತರ್ ಗೌಡ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವುದರಿಂದ ಜಲಜೀವನ್ ಮಿಷನ್ ಯೋಜನೆಯಡಿ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ. ಸದ್ಯ ಹೊಸ ಬೋರ್‍ವೆಲ್ ಅನ್ನು ನಾಳೆಯೇ ಕೊರೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬರು ಮಾತನಾಡಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯ ಸ್ಥಾಪಿಸಬೇಕು. ವಿದ್ಯಾರ್ಥಿ ನಿಲಯ ಇಲ್ಲದೆ ತುಂಬಾ ತೊಂದರೆಯಾಗಿದೆ ಎಂದು ಅವರು ಸಚಿವರ ಗಮನಕ್ಕೆ ತಂದರು.
ಹಾಗೆಯೇ ನರ್ಸಿಂಗ್ ಶಿಕ್ಷಣದಲ್ಲಿ ಬೋಧಕರ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಬೇಕು ಎಂದು ವಿದ್ಯಾರ್ಥಿಯೊಬ್ಬರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕೆ ಅವಕಾಶ ಮಾಡಲಾಗಿದೆ ಎಂದು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಆವರಣದಲ್ಲಿ ಪ್ರಾವಿಜನ್ ಸ್ಟೋರ್ ಇಲ್ಲದೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿಯೊಬ್ಬರು ಗಮನ ಸೆಳೆದರು.
ಈ ಕುರಿತು ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವರು ಕೆಎಂಎಫ್ ಮಳಿಗೆ ತೆರೆಯಲು ಅವಕಾಶ ಮಾಡುವಂತೆ ಸೂಚಿಸಿದರು.
ಎನ್‍ಎಚ್‍ಎಂನಡಿ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ವೈದ್ಯರೊಬ್ಬರು ಸಚಿವರ ಗಮನಕ್ಕೆ ತಂದರು. ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಸುಜಾತಾ ರಾಥೋಡ್ ಅವರು ವೇತನ ಪಾವತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಈ ಬಾರಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನದಲ್ಲಿ 29 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಾಗಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.
ನೀಟ್ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ವಿದ್ಯಾರ್ಥಿಗಳ ಜೊತೆ ಯಾರೂ ಸಹ ಚೆಲ್ಲಾಟ ಆಡಬಾರದು. ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು ಪ್ರತಿಯೊಬ್ಬರದ್ದಾಗಿದೆ. ಈ ಹಿಂದೆ ರಾಜ್ಯದಲ್ಲಿ ಸಿಇಟಿ ಮೂಲಕ ಇಡೀ ದೇಶದಲ್ಲಿಯೇ ಮಾದರಿಯಾಗಿ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ಕೇಂದ್ರದಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದಂತೆ ಒಂದೇ ಪರೀಕ್ಷೆ ಮಾಡಲಾಗುತ್ತಿದೆ.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿಗೆ ಸೂಕ್ತ ಬಂದೋ ಬಸ್ತ್ ಮಾಡಲಾಗಿದೆ. ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆದಷ್ಟು ಶೀಘ್ರ ಪರಿಹರಿಸಲಾಗುವುದು. ಉತ್ತಮ ಕ್ಯಾಂಪಸ್ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಂವಾದಕ್ಕೂ ಮೊದಲು ವೈದ್ಯಕೀಯ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದ ಸಚಿವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನಲ್ಲಿ ಬೋಧನೆ, ಗ್ರಂಥಾಲಯ ವ್ಯವಸ್ಥೆ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಡಿ ‘ಔಷಧಿಯ ಸಸ್ಯವನ’ ನಿರ್ಮಾಣಕ್ಕೆ ಸಚಿವರು ಚಾಲನೆ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಗ್ರಾ.ಪಂ.ಸದಸ್ಯರಾದ ಜಾನ್ಸನ್ ಪಿಂಟೋ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ಸಂಸ್ಥೆಯ ನಿರ್ದೇಶಕರಾದ ವಿಶಾಲ್ ಕುಮಾರ್, ಡಾ.ನಂಜುಂಡಯ್ಯ, ಡಾ.ಸತೀಶ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.24 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಗಣತಿ ನಮೂನೆಯ ಡಿಜಿಟಲೀಕರಣವು ಶೇ.80…

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026

*ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*

ಜುಲೈ 24, 2026

*”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 24, 2026

*ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ : ಪ್ರಮುಖರ ಬಂಧನ, ಬಿಡುಗಡೆ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.