Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್.ಆರ್.ವಿ ಫುಟ್ಬಾಲ್ ಚಾಂಪಿಯನ್ ಲೀಗ್ : ಟೀಮ್ ಬ್ರದರ್ಸ್ ಚಾಂಪಿಯನ್, ಟೀಮ್ ಭಗವತಿ ರನ್ನರ್ಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್.ಆರ್.ವಿ ಫುಟ್ಬಾಲ್ ಚಾಂಪಿಯನ್ ಲೀಗ್ : ಟೀಮ್ ಬ್ರದರ್ಸ್ ಚಾಂಪಿಯನ್, ಟೀಮ್ ಭಗವತಿ ರನ್ನರ್ಸ್*

ಜುಲೈ 9, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.9 NEWS DESK : ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ನಡೆದ ಎಸ್.ಆರ್.ವಿ ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಬ್ರದರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಟೀಮ್ ಭಗವತಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.
ತೃತೀಯ ಹಾಗೂ ನಾಲ್ಕನೇ ಸ್ಥಾನವನ್ನು ಟೀಮ್ ಒನ್ ಟಚ್ ಮತ್ತು ವೈಲ್ಡ್ ಮಾಸ್ಟರ್ಸ್ ತಂಡ ಪಡೆದು ಕೊಂಡಿತು.
ನಗರದ ಗಾಂಧಿ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ಒಟ್ಟು ಹತ್ತು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು.
ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಟೀಮ್ ಬ್ರದರ್ಸ್ ತಂಡವು ಟೀಮ್ ಒನ್ ಟಚ್ ವಿರುದ್ಧ ಪೆನಲ್ಟಿಯಲ್ಲಿ 1-0 ಜಯ ಸಾಧಿಸಿ ನೇರವಾಗಿ ಫೈನಲ್ ಗೆ ಅರ್ಹತೆ ಪಡೆದುಕೊಂಡಿತು.
ಟೀಮ್ ಭಗವತಿ ಹಾಗೂ ವೈಲ್ಡ್ ಮಾಸ್ಟರ್ಸ್ ತಂಡದ ನಡುವೆ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಟೀಮ್ ಭಗವತಿ ತಂಡವು ಪೆನಲ್ಟಿ ಶೂಟ್ ಔಟ್ ನಲ್ಲಿ 8-7 ರ ಜಯ ಪಡೆದು ಕ್ವಾಲಿಫಯರ್‍ಗೆ ಲಗ್ಗೆ ಇಟ್ಟಿತು.
ಟೀಮ್ ಭಗವತಿ ಹಾಗೂ ಟೀಮ್ ಒನ್ ಟಚ್ ತಂಡದ ನಡುವೆ ನಡೆದ ದ್ವಿತೀಯ ಕ್ವಾಲಿಫಯರ್ ರೋಚಕ ಹಣಹಣಿಯಲ್ಲಿ 2 ತಂಡವು ಪೂರ್ಣ ಅವಧಿಯಲ್ಲಿ ಯಾವುದೆ ಗೋಲ್‍ಗಳಿಸದೆ ಸಮಬಲ ಸಾಧಿಸಿ ಪೆನಲ್ಟಿಯತ್ತ ಸಾಗಿತು. ಪೆನಲ್ಟಿ ಶೂಟೌಟ್‍ನಲ್ಲಿ ಟೀಮ್ ಭಗವತಿ ತಂಡವು 2-0 ಗೋಲುಗಳ ಅಂತರದಲ್ಲಿ ಗೆದ್ದು ಫೈನಲ್ ಗೆ ದ್ವಿತೀಯ ಅರ್ಹತೆ ಪಡೆದುಕೊಂಡಿತು.
ಟೀಮ್ ಭಗವತಿ ಹಾಗೂ ಟೀಮ್ ಬ್ರದರ್ಸ್ ತಂಡದ ನಡುವೆ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಮ್ ಬ್ರದರ್ಸ್ ತಂಡವು ಭಗವತಿ ವಿರುದ್ಧ 3-0 ಅಂತರದಲ್ಲಿ ಗೆದ್ದು ಎಸ್.ಆರ್.ವಿ ಫುಟ್ಬಾಲ್ ಚಾಂಪಿಯನ್ ಲೀಗ್ ಸೀಸನ್-1 ರ ಚಾಂಪಿಯನ್ ಪಟ್ಟ ಅಲಂಕರಿಸಿತು.
ಕ್ರೀಡಾಕೂಟದಲ್ಲಿ ಹೈ ಸ್ಕೋರರ್ ಆಗಿ ಟೀಮ್ ಬ್ರದರ್ಸ್ ತಂಡದ ಹಿಶಾಮ್ ಪಡೆದು ಕೊಂಡರೆ, ಬೆಸ್ಟ್ ಡಿಫೆಂಡರ್ ಪ್ರಶಸ್ತಿಯನ್ನು ಟೀಮ್ ಒನ್ ಟಚ್ ತಂಡದ ದಿನೇಶ್ (ಕುಳ್ಳಿ) ಪಡೆದುಕೊಂಡರು, ಉತ್ತಮ ಗೋಲ್ ಕೀಪರ್ ಪ್ರಶಸ್ತಿಯನ್ನು ಟೀಮ್ ಬ್ರದರ್ಸ್ ತಂಡದ ಸುರೇಶ್ ಪಡೆದುಕೊಂಡರೆ, ಉದಯೋನ್ಮಕ ಪ್ರಶಸ್ತಿಯನ್ನು ಟೀಮ್ ಭಗವತಿ ತಂಡದ ಆಕಾಶ್ ಪಡೆದರು. ಸರಣಿ ಪುರುಷೋತ್ತಮ ಪ್ರಶಸ್ತಿಯನ್ನು ಟೀಮ್ ಭಗವತಿ ತಂಡದ ನಾಯಕ ಲೋಹಿತ್ ಪಡೆದುಕೊಂಡರು.
ಸಮಾರೋಪ ಸಮಾರಂಭ : ಶ್ರೀ ರಾಜೇಶ್ವರಿ ವಿದ್ಯಾಲಯದ ಕಾರ್ಯದರ್ಶಿ ಸಚಿನ್ ವಾಸುದೇವ್ ಅವರ ಸಮ್ಮುಖದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಡಿ.ವೈ.ಎಸ್.ಪಿ.ಮಹೇಶ್ ಕುಮಾರ್, ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಆದ್ದರಿಂದ ಪ್ರಸ್ತುತ ದಿನಗಳಲ್ಲಿ ಕ್ರೀಡಾಕೂಟಗಳನ್ನು ಹೆಚ್ಚು ಹೆಚ್ಚು ಆಯೋಜಿಸುವ ಅಗತ್ಯವಿದೆ ಎಂದರು.
ಶ್ರೀ ರಾಜೇಶ್ವರಿ ವಿದ್ಯಾಲಯದ ಅಧ್ಯಕ್ಷ ಗೋವಿಂದ ರಾಜು ಮಾತನಾಡಿ, ಕ್ರೀಡಾಕೂಟವನ್ನು ಆಯೋಜಿಸುವುದು ಸಣ್ಣ ಕೆಲಸವಲ್ಲ. ಸಂಘಟನಾ ಮನೋಭಾವನೆ ಮತ್ತು ಆರ್ಥಿಕ ಸ್ಥಿತಿಗತಿ ಸದೃಢವಾಗಿರಬೇಕು. ಪ್ರಥಮ ವರ್ಷದ ಕ್ರೀಡಾಕೂಟವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ರಾಜೇಶ್ವರಿ ವಿದ್ಯಾಲಯದ ಕಾರ್ಯದರ್ಶಿ ಸಚಿನ್ ವಾಸುದೇವ್, ಯುವಕ, ಯುವತಿಯರು ದುಶ್ಚಟಗಳಿಗೆ ಬಲಿಯಾಗಿ, ಕಾಲಹರಣ ಮಾಡುವುದನ್ನು ಬಿಟ್ಟು ಬಿಡುವಿನ ಸಮಯದಲ್ಲಿ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಶ್ರೀ ರಾಜೇಶ್ವರಿ ವಿದ್ಯಾಲಯದ ನಿರ್ದೇಶಕ ದೇವರಾಜು ಮಾತನಾಡಿ, ಪ್ರಥಮ ಬಾರಿಗೆ ಹೊನಲು ಬೆಳಕಿನ ಪಂದ್ಯ ಆಯೋಜನೆಗೊಂಡಿರುವುದು ಸಂತೋಷದ ವಿಷಯ. ಕ್ರೀಡೆ ಎಂದ ಕೂಡಲೇ ಬಾಲ್ಯದ ಜೀವನ ಮತ್ತೆ ಮರುಕಳಿಸುತ್ತದೆ. ಕ್ರೀಡೆಯನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿದಾಗ ಮಾತ್ರ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಲು ಸಾಧ್ಯ ಎಂದು ಹೇಳಿದರು.
ನಗರಸಭೆ ಮಾಜಿ ಸದಸ್ಯ ಚುಮ್ಮಿ ದೇವಯ್ಯ ಶ್ರೀ ರಾಜೇಶ್ವರಿ ವಿದ್ಯಾಲಯ ಉಪಾಧ್ಯಕ್ಷರಾದ ದಾಕ್ಷಾಯಿಣಿ ವಾಸುದೇವ್, ನಿರ್ದೇಶಕ ಸತೀಶ್, ಪ್ರಾಂಶುಪಾಲರಾದ ಲಕ್ಷ್ಮಿ ಸಚಿನ್, ಉಪಪ್ರಾಂಶುಪಾಲರಾದ ಮಂದಣ್ಣ, ಎಂಸಿಸಿ ಅಧ್ಯಕ್ಷ ಕ್ರಿಸ್ಟೋಫರ್, ಶ್ರೀ ರಾಜೇಶ್ವರಿ ವಿದ್ಯಾಲಯದ ಸದಸ್ಯರುಗಳಾದ ಕಿರಣ್ ಕುಮಾರ್, ಪ್ರಶಾಂತ್, ದಿಶಾಂತ್, ಪ್ರಜ್ವಲ್, ಪ್ರಮುಖರಾದ ತೆಕ್ಕಡ ಕಾಶಿ ಕಾವೇರಪ್ಪ, ಪವನ್, ಅಚ್ಚಯ್ಯ, ಧ್ಯಾನ್, ದೇವರಾಜು, ಹಾಗೂ ಎಸ್.ಆರ್.ವಿ ಫುಟ್ಬಾಲ್ ಚಾಂಪಿಯನ್ ಲೀಗ್ ನ ಆಯೋಜಕರಾದ ಸಚಿನ್ ವಾಸುದೇವ್, ಲೋಹಿತ್ (ಪಿಕ), ಸುರ್ಜಿತ್, ಮನೋಜ್, ಅಶೋಕ್, ಲಿಖಿತ್, ಬಿಬ್ಲ, ದಿನೇಶ್, ಬೆಂಝಿ ಹಾಜರಿದ್ದರು.
ಕ್ರೀಡಾಕೂಟದ ತೀರ್ಪುಗಾರರಾಗಿ ಸಿದ್ದಾಪುರ ಇಕ್ರಾ ಪಬ್ಲಿಕ್ ಸ್ಕೂಲ್‍ನ ದೈಹಿಕ ಶಿಕ್ಷಣ ಶಿಕ್ಷಕ ಎಂ.ಎಂ.ಉನ್ನೈಸ್ ಹಾಗೂ ಬೆಂಗಳೂರಿನ ನರಸಿಂಹ (ನಾಣಿ) ಕಾರ್ಯನಿರ್ವಹಿಸಿದರು. ವೀಕ್ಷಕ ವಿವರಣೆಯನ್ನು ವೀಕ್ಷಕ ವಿವರಣೆಗಾರ ತೀರ್ಥಹಳ್ಳಿಯ ಶಿವು ಗೌಡ ಹಾಗೂ ರಮೇಶ್ ಹೆಬ್ಬಟ್ಟಗೇರಿ ನಡೆಸಿಕೊಟ್ಟರು. ಲೈವ್ ಸ್ಕೋರರ್ ಆಗಿ ಅಶೋಕ್ ಮಡಿಕೇರಿ, ರಫೀಕ್, ಹಾಗೂ ಅಜಿತ್ ಕಾರ್ಯನಿರ್ವಹಿಸಿದರು.

ವರದಿ : ಅಶೋಕ್ ಮಡಿಕೇರಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.28 NEWS DESK : ನಗರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಅಮೃತ್ ಯೋಜನೆಯ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಕುರಿತು…

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026

*ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.