Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಡಾನೆ ಹಾವಳಿ, ವಿದ್ಯುತ್ ಸಮಸ್ಯೆ ವಿರುದ್ಧ ಬೀದಿಗಿಳಿದ ಗ್ರಾಮಸ್ಥರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಡಾನೆ ಹಾವಳಿ, ವಿದ್ಯುತ್ ಸಮಸ್ಯೆ ವಿರುದ್ಧ ಬೀದಿಗಿಳಿದ ಗ್ರಾಮಸ್ಥರು*

ಜುಲೈ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.11 : ಕಾಡಾನೆ ಹಾವಳಿ ಹಾಗೂ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ, ನರಿಯಂದಡ ಗ್ರಾಮ ಪಂಚಾಯ್ತಿ ಹಾಗೂ ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಿಯಂದಡ, ಕೋಕೇರಿ, ಚೇಲಾವರ, ಕರಡ, ಅರಪಟ್ಟು, ಪೊದವಾಡ, ಮರಂದೋಡ, ಕಕ್ಕಬೆ ಗ್ರಾಮಸ್ಥರು ಚೆಯ್ಯಂಡಾಣೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಾಪೋಕ್ಲು-ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಈ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ತೋಟಗಳಿಗೆ ಲಗ್ಗೆ ಇಟ್ಟು ಕೃಷಿ ಫಸಲುಗಳನ್ನು ಧ್ವಂಸಗೊಳಿಸುತ್ತಿವೆ. ಸುಮಾರು 70ರಿಂದ 80ಕ್ಕೂ ಹೆಚ್ಚು ಕಾಡಾನೆಗಳು ಈ ವ್ಯಾಪ್ತಿಯಲ್ಲಿ ನಿರಂತರ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡಿಲ್ಲ ಹಾಗೂ ನಿರಂತರ ವಿದ್ಯುತ್ ಸಮಸ್ಯೆಯಿಂದ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅರಣ್ಯ ಇಲಾಖೆ ಹಾಗು ಚೆಸ್ಕಾಂ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ರಸ್ತೆ ತಡೆ ನಡೆಸಲು ಗ್ರಾಮಸ್ಥರು ಮುಂದಾದ ಸಂದರ್ಭ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹಾಗೂ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಅವರು ಸ್ಥಳಕ್ಕೆ ಆಗಮಿಸಿ, ರಸ್ತೆ ತಡೆ ನಡೆಸದಂತೆ ಗ್ರಾಮಸ್ಥರ ಮನವೊಲಿಸಿದ ಹಿನ್ನೆಲೆಯಲ್ಲಿ ರಸ್ತೆ ತಡೆಯನ್ನು ಕೈಬಿಡಲಾಯಿತು. ಆದರೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.
ನರಿಯಂದಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಕಳೆದ ವರ್ಷ ಇದೆ ಜಾಗದಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ಕೂಡಲೇ ಆನೆಗಳನ್ನು ಹಿಡಿಯುವ ಆಶ್ವಾಸನೆ ನೀಡಿ ತೆರಳಿದ ಅರಣ್ಯಧಿಕಾರಿಗಳು ಇತ್ತ ತಿರುಗಿ ನೋಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 15 ದಿನಗಳ ಒಳಗೆ ಕಾಡಾನೆಗಳನ್ನು ಸೆರೆಹಿಡಿಯುವಂತೆ ಗಡುವು ನೀಡಿದರಲ್ಲದೇ, ಸ್ಪಂದನೆ ದೊರೆಯದಿದ್ದಲ್ಲಿ ಉಚ್ಛ ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಸಿದರು.
ನರಿಯಂದಡ ಗ್ರಾಮಸ್ಥ ಪೊಕ್ಕುಳಂಡ್ರ ದನೋಜ್ ಮಾತನಾಡಿ, ನಮ್ಮ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಆನೆಗಳು ತೋಟಗಳಲ್ಲಿ ದಾಂದಲೆ ನಡೆಸುತ್ತಿವೆ. ಆನೆಗಳ ನಿಯಂತ್ರಣಕ್ಕೆ ಇಲಾಖೆಗಳಿಗೆ ಹಲವು ಬಾರಿ ಮನವಿ ಮಾಡಿದರು ಇದುವರೆಗೂ ಯಾವುದೇ ಪ್ರಯೋಜನವಾಗಲಿಲ್ಲ ಎಂದರು.
ಕೊಕೇರಿ ಗ್ರಾಮಸ್ಥರಾದ ಮಚ್ಚಂಡ ಸುಮತಿ, ಕಕ್ಕಬೆ ಯುವಕಪಾಡಿ ಗ್ರಾಮಸ್ಥ ಅಂಜಪರವಂಡ ಕುಶಾಲಪ್ಪ, ನರಿಯಂದಡ ಗ್ರಾಮದ ಬಟ್ಟಿಯಂಡ ಜಯರಾಂ, ಅಶೋಕ್, ಚೇಲಾವರದ ತಮ್ಮಯ್ಯ ಮತ್ತಿತರರು ಮಾತನಾಡಿದರು.
ಪ್ರತಿಭಟನಾ ಸ್ಥಳಕ್ಕೆ ಡಿ.ಎಫ್.ಒ ಜಗನ್ನಾಥ್ ಭೇಟಿ ನೀಡಿ ಈ ವ್ಯಾಪ್ತಿಯಲ್ಲಿರುವ 5 ಕಾಡಾನೆಗಳನ್ನು ಸೆರೆ ಹಿಡಿಯಲು ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ವಿರಾಜಪೇಟೆ ವಲಯ ಅರಣ್ಯಧಿಕಾರಿ ಕಳ್ಳಿರ ದೇವಯ್ಯ ಮಾತನಾಡಿ, ಇಲ್ಲಿರುವ ಆನೆಗಳ ನಿಯಂತ್ರಣಕ್ಕೆ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಈಗ 5 ಆನೆಗಳನ್ನು ಸೆರೆ ಹಿಡಿಯಲು ಪ್ರಸ್ತಾವನೆ ಸಲ್ಲಿಸಿದ್ದು ಶೀಘ್ರ ಕಾರ್ಯಾಚರಣೆ ನಡೆಸುತ್ತೇವೆ. ಎಂದು ಹೇಳಿದರು. ಮೂರ್ನಾಡು ಚೆಸ್ಕಾಂ ಅಧಿಕಾರಿ ಸಂಪತ್ ಮಾತನಾಡಿ, ವಿದ್ಯುತ್ ಸಮಸ್ಯೆ ಕುರಿತು ಕೂಡಲೇ ಕ್ರಮ ಕೈಗೊಂಡು ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ 7 ಗ್ರಾಮಕ್ಕೆ ಒಳಪಟ್ಟ ಗ್ರಾಮಸ್ಥರು, 2 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳು, ಗ್ರಾಮ ಪಂಚಾಯಿತಿ ಸದಸ್ಯರು, ಪಾಲ್ಗೊಂಡಿದ್ದರು. ವಿರಾಜಪೇಟೆ ಅರಣ್ಯಧಿಕಾರಿ ಎಸಿಎಫ್ ನೆಹರು, ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಚೆಸ್ಕಾಂ ಜೆ.ಇ. ಚಿತ್ರೇಶ್, ಮತ್ತಿತರರು ಸ್ಥಳದಲ್ಲಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರ ಜನರಲ್ಲಿ…

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.