Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಜೀರ್ಣ ನಿವಾರಣೆಗೆ ಆಹಾರೌಷಧಿಗಳು*
ರೋಗ ಮುಕ್ತ

*ಅಜೀರ್ಣ ನಿವಾರಣೆಗೆ ಆಹಾರೌಷಧಿಗಳು*

July 12, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

(NEWS DESK) ಅಜೀರ್ಣ ಸಾಮಾನ್ಯವಾಗಿ ಎಲ್ಲರಲ್ಲಿಯೂ ಕಂಡು ಬರುವ ತೊಂದರೆಯಾಗಿದೆ. ಎಲ್ಲರನ್ನೂ ಒಂದಲ್ಲ ಒಂದು ದಿನ ಈ ತೊಂದರೆ ಕಾಡಿಸಿಯೇ ಕಾಡಿಸಿರುತ್ತದೆ. ಪ್ರಾರಂಭದಲ್ಲಿ ಇದು ಅತ್ಯಂತ ಸರಳವಾಗಿ ಕಾಣಿಸಿದರೂ, ಸತತ ಕಾಡುವ ಅಜೀರ್ಣ, ಹೊಟ್ಟಯುಬ್ಬರ, ಹೈಪರ್ ಎಸಿಡಿಟಿ, ಮಲಬದ್ಧತೆ, ಗ್ಯಾಸ್ ಟ್ರಬಲ್ ಮುಂತಾದ ತೊಂದರೆಗಳಿಗೆ ನಾಂದಿಯಾಗಬಹುದು.

ಪ್ರತಿನಿತ್ಯ ಒಂದು ಅಥವಾ ಎರಡು ಬಾರಿ ಖಾಲಿ ಹೊಟ್ಟ್ಟೆಯಲ್ಲಿ ತಂಪು ಪಟ್ಟಿಯನ್ನು 20 ನಿಮಿಷಗಳಕಾಲ ಹಾಕಿಕೊಳ್ಳಬೇಕು. (ತಣ್ಣಿರಿನಲ್ಲಿ ನೆನೆಸಿದ ಬಟ್ಟೆಯನ್ನು ಎರಡು ಮೂರು ಸುತ್ತ ಹೊಟ್ಟ್ಟೆಗೆ ಕಟ್ಟಿ ಹೊರಗಿನಿಂದ ಒಣ ಉಲ್ಲನ್ ಬಟ್ಟೆಯನ್ನು ಸುತ್ತಬೇಕು.)

ಆಯಸ್ಕಾಂತದ ಮೇಲೆ ಗಾಜಿನ ಬಾಟ್ಲಿಯಲ್ಲಿ ನೀರನ್ನು ಇಟ್ಟು ಉತ್ತರ ಹಾಗೂ ದಕ್ಷಿಣ ಧ್ರ್ರುವಗಳಲ್ಲಿ ಬೇರೆ ಬೇರೆಯಾಗಿ ಛಾರ್ಜ ಆದ ನೀರನ್ನು ಸಮ ಪ್ರಮಾಣದಲ್ಲಿ ಸೇರಿಸಿ ಪ್ರತಿನಿತ್ಯ ಮೂರು ಬಾರಿ ಒಂದೊಂದು ಗ್ಲಾಸ್‍ನಂತೆ ಸೇವಿಸಬೇಕು. (ಪ್ರಕೃತಿ ಚಿಕಿತ್ಸಕರ ಸಲಹೆ ಪಡೆದು ಈ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ)

ಮುಂಜಾನೆ ಎದ್ದ ಕೂಡಲೇ ಮೂರರಿಂದ ನಾಲ್ಕು ಲೋಟ ಶುದ್ಧವಾದ ನೀರನ್ನು ಸೇವಿಸುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.

ವಾರದಲ್ಲಿ ಒಂದು ಬಾರಿ ಮುಂಜಾನೆ 8-10 ಲೋಟ ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ಉಪ್ಪು ಹಾಕಿ ಗಟಗಟನೆ ಕುಡಿದು ಬೆರಳನ್ನು ಗಂಟಲಿಗೆ ಹಾಕಿ ಸಪ್ರಯತ್ಮದಿಂದ ವಾಂತಿ ಮಾಡಬೇಕು. ಇದರಿಂದ ಶೇಖರಣೆಗೊಂಡ ಹೆಚ್ಚಿನ ಆಮ್ಲ ಹೊರ ಹೋಗಿ ಜೀರ್ಣಕೋಶದ ಆರೋಗ್ಯ ವರ್ಧಿಸುತ್ತದೆ. ಇದನ್ನು ಯೋಗಶಾಸ್ತ್ರದಲ್ಲಿ ವಮನ ಧೌತಿ ಎನ್ನುತ್ತಾರೆ. ಏರು ರಕ್ತದೊತ್ತಡ ಇರುವವರು ಉಪ್ಪನ್ನು ಹಾಕದೇ ನೀರನ್ನು ಉಪಯೋಗಿಸಬೇಕು. ಮೊದಲಬಾರಿ ಅಭ್ಯಾಸ ಮಾಡುವಾಗ ಪ್ರಕೃತಿ ಚಿಕಿತ್ಸಾ ವೈದ್ಯರ ಮಾರ್ಗದರ್ಶನದಲ್ಲಿ ಮಾಡುವದು ಒಳಿತು.

ದಿನದಲ್ಲಿ ಮೂರು ಬಾರಿ ಮಾತ್ರ ಆಹಾರ ಸೇವಿಸುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕು. ಹೆಚ್ಚು ಬಾರಿ ಹೆಚ್ಚೆಚ್ಚು ತಿಂದಷ್ಟು ಅಜೀರ್ಣ ಹೆಚ್ಚುತ್ತಾ ಹೋಗುತ್ತದೆ.

ವಾರದಲ್ಲಿ ಒಂದು ದಿನ ಕೇವಲ ಹಣ್ಣುಗಳು ಮತ್ತು ಹಣ್ಣಿನ ರಸವನ್ನು ಮಾತ್ರ ಸೇವಿಸಬೇಕು. ಆಹಾರದಲ್ಲಿ ಕರಿದ ತಿಂಡಿಗಳು ಮತ್ತು ಬೇಕರಿ ತಿನಿಸುಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಆಹಾರ ಸೇವಿಸುವಾಗ ಹೊಟ್ಟೆಯ ಅರ್ಧಭಾಗವನ್ನು ಘನ ಆಹಾರದಿಂದ, ಕಾಲುಭಾಗವನ್ನು ದ್ರವ ಆಹಾರದಿಂದ ತುಂಬಿಸಿ ಇನ್ನುಳಿದ ಕಾಲು ಭಾಗವನ್ನು ಖಾಲಿ ಬಿಡಬೇಕು.

ಊಟದ ಮಧ್ಯೆ ನೀರನ್ನು ಕುಡಿಯಬಾರದು. ಒಂದು ಲೋಟ ಮಜ್ಜಿಗೆ ತೆಗೆದುಕೊಳ್ಳಬಹುದು. ಊಟಕ್ಕೆ ಅರ್ಧಗಂಟೆ ಮೊದಲು ಹಾಗೂ ಒಂದು ಗಂಟೆಯ ನಂತರ ನೀರನ್ನು ಯಥೇಚ್ಛವಾಗಿ ಕುಡಿಯಬಹುದು. ಸೇವಿಸಿದ ಆಹಾರ ಪೂರ್ತಿಯಾಗಿ ಜೀರ್ಣವಾಗಲು ದೈಹಿಕ ಶ್ರಮ ಅತ್ಯಗತ್ಯ. ಪ್ರತಿದಿನ ಕನಿಷ್ಠ ಒಂದು ಗಂಟೆಯ ಯೋಗಾಭ್ಯಾಸ ರೂಢಿಸಿಕೊಳ್ಳಿ.

:: ಆಹಾರೌಷಧಿಗಳು :: 
ಪುದಿನಾ ಸೊಪ್ಪಿನಲ್ಲಿ ಚಹಾ ತಯಾರಿಸಿ ಸೇವಿಸಿದರೆ ಜೀರ್ಣಶಕ್ತಿ ಹೆಚ್ಚುತ್ತದೆ.
ಊಟದ ನಂತರ ಏಲಕ್ಕಿ ಕಾಳುಗಳನ್ನಾಗಲಿ ಇಲ್ಲವೇ ಓಮಕಾಳುಗಳನ್ನಾಗಲೀ ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ.
ಅಜೀರ್ಣದ ತೊಂದರೆಯಿಂದ ಬಳಲುತ್ತಿರುವವರು ನೆಲ್ಲಿಕಾಯಿ ರಸಕ್ಕೆ ಬೆಲ್ಲ ಬೆರೆಸಿ ಕುಡಿಯುವುದರಿಂದ ಸಮಸ್ಯೆ ಪರಿಹಾರವಾಗುತ್ತದೆ.
ದ್ರಾಕ್ಷಿ, ಸೇಬು, ಕಿತ್ತಳೆ, ಮಾಗಿದ ಬಾಳೆಹಣ್ಣು ಸೇವಿಸುವುದರಿಂದ ಜೀರ್ಣಶಕ್ತಿ ವೃದ್ಧಿಸುತ್ತದೆ.
ಪ್ರತಿದಿನ ಮುಂಜಾನೆ ಒಂದು ಲೋಟ ತಣ್ಣಿರಿಗೆ ಒಂದು ಚಮಚ ಜೇನು ಬೆರೆಸಿ ಸೇವಿಸುತ್ತ ಬಂದರೆ ಜೀರ್ಣಶಕ್ತಿ ವೃದ್ಧಿಸುತ್ತದೆ.
ಮೂಲಂಗಿಯನ್ನು ಚೆನ್ನಾಗಿ ತೊಳೆದು, ತುರಿದು ಅದಕ್ಕೆ ಮೊಸರು ಬೆರೆಸಿ ಸೇವಿಸುವುದರಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.
ಹಸಿ ಸೌತೆಕಾಯಿಯನ್ನು ಸಣ್ಣಗೆ ಕತ್ತರಿಸಿ ಕೋಸಂಬರಿಯ ಹಾಗೆ ಮಾಡಿ ಅದಕ್ಕೆ ಕಾಳು ಮೆಣಸಿನ ಪುಡಿ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು ಹಾಕಿ ಇಂಗನ್ನು ನೀರಿನಲ್ಲಿ ನೆನೆಸಿ ಒಂದೆರಡು ಹನಿ ಬೆರೆಸಿ ಸೇವಿಸಿದರೆ ಜೀರ್ಣಶಕ್ತಿ ವರ್ಧಿಸುವುದು.
ಪ್ರತಿನಿತ್ಯ ಒಂದು ಹಿಡಿ ತುಳಸಿ ಎಲೆ ರಸವನ್ನು ಸೇವಿಸಿದರೆ ಒಳ್ಳೆಯದು.
1 ಚಮಚ ಕೊತ್ತಂಬರಿ ಬೀಜ, ಸ್ವಲ್ಪ ಶುಂಠಿಯನ್ನು ನೀರಿನಲ್ಲಿ ಕುದಿಸಿ, ಜೇನುತುಪ್ಪ ಬೆರೆಸಿ ಸೇವಿಸಿದರೆ ಅಜೀರ್ಣದಿಂದ ಉಂಟಾದ ಹೊಟ್ಟೆನೋವು ಪರಿಹಾರವಾಗುತ್ತದೆ.
ಮೆಂತ್ಯವನ್ನು ತುಪ್ಪದಲ್ಲಿ ಹುರಿದು ಅದಕ್ಕೆ ಉಪ್ಪು ಬೆರೆಸಿ ಕುಟ್ಟಿ ಪುಡಿಮಾಡಿ ಊಟದಲ್ಲಿ ಅನ್ನಕ್ಕೆ ಈ ಪುಡಿ ಸೇರಿಸಿ ಸೇವಿಸುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.

ಕೃಪೆ : ವಿಕಾಸ್ ಪೀಡಿಯ

ಮೂಲ: ಡಾ|| ವೆಂಕಟ್ರಮಣ ಹೆಗಡೆ

Share. Facebook Twitter Pinterest LinkedIn Tumblr Email WhatsApp
Previous Article*ಪಂಚರಾಮ ಕ್ಷೇತ್ರಗಳಲ್ಲಿ ಒಂದಾದ ದ್ರಾಕ್ಷರಾಮ ದೇವಾಲಯ*
Next Article *ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ*

Recommended: Website design development company services in Mangalore Forex Trading Teacher in India

Related Posts

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

January 2, 2026

*ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*

December 11, 2025

*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*

December 9, 2025

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.