Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ರೋಗ ಮುಕ್ತ»*ಅಜೀರ್ಣ ನಿವಾರಣೆಗೆ ಆಹಾರೌಷಧಿಗಳು*
ರೋಗ ಮುಕ್ತ

*ಅಜೀರ್ಣ ನಿವಾರಣೆಗೆ ಆಹಾರೌಷಧಿಗಳು*

ಜುಲೈ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

(NEWS DESK) ಅಜೀರ್ಣ ಸಾಮಾನ್ಯವಾಗಿ ಎಲ್ಲರಲ್ಲಿಯೂ ಕಂಡು ಬರುವ ತೊಂದರೆಯಾಗಿದೆ. ಎಲ್ಲರನ್ನೂ ಒಂದಲ್ಲ ಒಂದು ದಿನ ಈ ತೊಂದರೆ ಕಾಡಿಸಿಯೇ ಕಾಡಿಸಿರುತ್ತದೆ. ಪ್ರಾರಂಭದಲ್ಲಿ ಇದು ಅತ್ಯಂತ ಸರಳವಾಗಿ ಕಾಣಿಸಿದರೂ, ಸತತ ಕಾಡುವ ಅಜೀರ್ಣ, ಹೊಟ್ಟಯುಬ್ಬರ, ಹೈಪರ್ ಎಸಿಡಿಟಿ, ಮಲಬದ್ಧತೆ, ಗ್ಯಾಸ್ ಟ್ರಬಲ್ ಮುಂತಾದ ತೊಂದರೆಗಳಿಗೆ ನಾಂದಿಯಾಗಬಹುದು.

ಪ್ರತಿನಿತ್ಯ ಒಂದು ಅಥವಾ ಎರಡು ಬಾರಿ ಖಾಲಿ ಹೊಟ್ಟ್ಟೆಯಲ್ಲಿ ತಂಪು ಪಟ್ಟಿಯನ್ನು 20 ನಿಮಿಷಗಳಕಾಲ ಹಾಕಿಕೊಳ್ಳಬೇಕು. (ತಣ್ಣಿರಿನಲ್ಲಿ ನೆನೆಸಿದ ಬಟ್ಟೆಯನ್ನು ಎರಡು ಮೂರು ಸುತ್ತ ಹೊಟ್ಟ್ಟೆಗೆ ಕಟ್ಟಿ ಹೊರಗಿನಿಂದ ಒಣ ಉಲ್ಲನ್ ಬಟ್ಟೆಯನ್ನು ಸುತ್ತಬೇಕು.)

ಆಯಸ್ಕಾಂತದ ಮೇಲೆ ಗಾಜಿನ ಬಾಟ್ಲಿಯಲ್ಲಿ ನೀರನ್ನು ಇಟ್ಟು ಉತ್ತರ ಹಾಗೂ ದಕ್ಷಿಣ ಧ್ರ್ರುವಗಳಲ್ಲಿ ಬೇರೆ ಬೇರೆಯಾಗಿ ಛಾರ್ಜ ಆದ ನೀರನ್ನು ಸಮ ಪ್ರಮಾಣದಲ್ಲಿ ಸೇರಿಸಿ ಪ್ರತಿನಿತ್ಯ ಮೂರು ಬಾರಿ ಒಂದೊಂದು ಗ್ಲಾಸ್‍ನಂತೆ ಸೇವಿಸಬೇಕು. (ಪ್ರಕೃತಿ ಚಿಕಿತ್ಸಕರ ಸಲಹೆ ಪಡೆದು ಈ ಚಿಕಿತ್ಸೆ ತೆಗೆದುಕೊಳ್ಳುವುದು ಉತ್ತಮ)

ಮುಂಜಾನೆ ಎದ್ದ ಕೂಡಲೇ ಮೂರರಿಂದ ನಾಲ್ಕು ಲೋಟ ಶುದ್ಧವಾದ ನೀರನ್ನು ಸೇವಿಸುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.

ವಾರದಲ್ಲಿ ಒಂದು ಬಾರಿ ಮುಂಜಾನೆ 8-10 ಲೋಟ ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ಉಪ್ಪು ಹಾಕಿ ಗಟಗಟನೆ ಕುಡಿದು ಬೆರಳನ್ನು ಗಂಟಲಿಗೆ ಹಾಕಿ ಸಪ್ರಯತ್ಮದಿಂದ ವಾಂತಿ ಮಾಡಬೇಕು. ಇದರಿಂದ ಶೇಖರಣೆಗೊಂಡ ಹೆಚ್ಚಿನ ಆಮ್ಲ ಹೊರ ಹೋಗಿ ಜೀರ್ಣಕೋಶದ ಆರೋಗ್ಯ ವರ್ಧಿಸುತ್ತದೆ. ಇದನ್ನು ಯೋಗಶಾಸ್ತ್ರದಲ್ಲಿ ವಮನ ಧೌತಿ ಎನ್ನುತ್ತಾರೆ. ಏರು ರಕ್ತದೊತ್ತಡ ಇರುವವರು ಉಪ್ಪನ್ನು ಹಾಕದೇ ನೀರನ್ನು ಉಪಯೋಗಿಸಬೇಕು. ಮೊದಲಬಾರಿ ಅಭ್ಯಾಸ ಮಾಡುವಾಗ ಪ್ರಕೃತಿ ಚಿಕಿತ್ಸಾ ವೈದ್ಯರ ಮಾರ್ಗದರ್ಶನದಲ್ಲಿ ಮಾಡುವದು ಒಳಿತು.

ದಿನದಲ್ಲಿ ಮೂರು ಬಾರಿ ಮಾತ್ರ ಆಹಾರ ಸೇವಿಸುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕು. ಹೆಚ್ಚು ಬಾರಿ ಹೆಚ್ಚೆಚ್ಚು ತಿಂದಷ್ಟು ಅಜೀರ್ಣ ಹೆಚ್ಚುತ್ತಾ ಹೋಗುತ್ತದೆ.

ವಾರದಲ್ಲಿ ಒಂದು ದಿನ ಕೇವಲ ಹಣ್ಣುಗಳು ಮತ್ತು ಹಣ್ಣಿನ ರಸವನ್ನು ಮಾತ್ರ ಸೇವಿಸಬೇಕು. ಆಹಾರದಲ್ಲಿ ಕರಿದ ತಿಂಡಿಗಳು ಮತ್ತು ಬೇಕರಿ ತಿನಿಸುಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಆಹಾರ ಸೇವಿಸುವಾಗ ಹೊಟ್ಟೆಯ ಅರ್ಧಭಾಗವನ್ನು ಘನ ಆಹಾರದಿಂದ, ಕಾಲುಭಾಗವನ್ನು ದ್ರವ ಆಹಾರದಿಂದ ತುಂಬಿಸಿ ಇನ್ನುಳಿದ ಕಾಲು ಭಾಗವನ್ನು ಖಾಲಿ ಬಿಡಬೇಕು.

ಊಟದ ಮಧ್ಯೆ ನೀರನ್ನು ಕುಡಿಯಬಾರದು. ಒಂದು ಲೋಟ ಮಜ್ಜಿಗೆ ತೆಗೆದುಕೊಳ್ಳಬಹುದು. ಊಟಕ್ಕೆ ಅರ್ಧಗಂಟೆ ಮೊದಲು ಹಾಗೂ ಒಂದು ಗಂಟೆಯ ನಂತರ ನೀರನ್ನು ಯಥೇಚ್ಛವಾಗಿ ಕುಡಿಯಬಹುದು. ಸೇವಿಸಿದ ಆಹಾರ ಪೂರ್ತಿಯಾಗಿ ಜೀರ್ಣವಾಗಲು ದೈಹಿಕ ಶ್ರಮ ಅತ್ಯಗತ್ಯ. ಪ್ರತಿದಿನ ಕನಿಷ್ಠ ಒಂದು ಗಂಟೆಯ ಯೋಗಾಭ್ಯಾಸ ರೂಢಿಸಿಕೊಳ್ಳಿ.

:: ಆಹಾರೌಷಧಿಗಳು :: 
ಪುದಿನಾ ಸೊಪ್ಪಿನಲ್ಲಿ ಚಹಾ ತಯಾರಿಸಿ ಸೇವಿಸಿದರೆ ಜೀರ್ಣಶಕ್ತಿ ಹೆಚ್ಚುತ್ತದೆ.
ಊಟದ ನಂತರ ಏಲಕ್ಕಿ ಕಾಳುಗಳನ್ನಾಗಲಿ ಇಲ್ಲವೇ ಓಮಕಾಳುಗಳನ್ನಾಗಲೀ ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ.
ಅಜೀರ್ಣದ ತೊಂದರೆಯಿಂದ ಬಳಲುತ್ತಿರುವವರು ನೆಲ್ಲಿಕಾಯಿ ರಸಕ್ಕೆ ಬೆಲ್ಲ ಬೆರೆಸಿ ಕುಡಿಯುವುದರಿಂದ ಸಮಸ್ಯೆ ಪರಿಹಾರವಾಗುತ್ತದೆ.
ದ್ರಾಕ್ಷಿ, ಸೇಬು, ಕಿತ್ತಳೆ, ಮಾಗಿದ ಬಾಳೆಹಣ್ಣು ಸೇವಿಸುವುದರಿಂದ ಜೀರ್ಣಶಕ್ತಿ ವೃದ್ಧಿಸುತ್ತದೆ.
ಪ್ರತಿದಿನ ಮುಂಜಾನೆ ಒಂದು ಲೋಟ ತಣ್ಣಿರಿಗೆ ಒಂದು ಚಮಚ ಜೇನು ಬೆರೆಸಿ ಸೇವಿಸುತ್ತ ಬಂದರೆ ಜೀರ್ಣಶಕ್ತಿ ವೃದ್ಧಿಸುತ್ತದೆ.
ಮೂಲಂಗಿಯನ್ನು ಚೆನ್ನಾಗಿ ತೊಳೆದು, ತುರಿದು ಅದಕ್ಕೆ ಮೊಸರು ಬೆರೆಸಿ ಸೇವಿಸುವುದರಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.
ಹಸಿ ಸೌತೆಕಾಯಿಯನ್ನು ಸಣ್ಣಗೆ ಕತ್ತರಿಸಿ ಕೋಸಂಬರಿಯ ಹಾಗೆ ಮಾಡಿ ಅದಕ್ಕೆ ಕಾಳು ಮೆಣಸಿನ ಪುಡಿ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು ಹಾಕಿ ಇಂಗನ್ನು ನೀರಿನಲ್ಲಿ ನೆನೆಸಿ ಒಂದೆರಡು ಹನಿ ಬೆರೆಸಿ ಸೇವಿಸಿದರೆ ಜೀರ್ಣಶಕ್ತಿ ವರ್ಧಿಸುವುದು.
ಪ್ರತಿನಿತ್ಯ ಒಂದು ಹಿಡಿ ತುಳಸಿ ಎಲೆ ರಸವನ್ನು ಸೇವಿಸಿದರೆ ಒಳ್ಳೆಯದು.
1 ಚಮಚ ಕೊತ್ತಂಬರಿ ಬೀಜ, ಸ್ವಲ್ಪ ಶುಂಠಿಯನ್ನು ನೀರಿನಲ್ಲಿ ಕುದಿಸಿ, ಜೇನುತುಪ್ಪ ಬೆರೆಸಿ ಸೇವಿಸಿದರೆ ಅಜೀರ್ಣದಿಂದ ಉಂಟಾದ ಹೊಟ್ಟೆನೋವು ಪರಿಹಾರವಾಗುತ್ತದೆ.
ಮೆಂತ್ಯವನ್ನು ತುಪ್ಪದಲ್ಲಿ ಹುರಿದು ಅದಕ್ಕೆ ಉಪ್ಪು ಬೆರೆಸಿ ಕುಟ್ಟಿ ಪುಡಿಮಾಡಿ ಊಟದಲ್ಲಿ ಅನ್ನಕ್ಕೆ ಈ ಪುಡಿ ಸೇರಿಸಿ ಸೇವಿಸುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.

ಕೃಪೆ : ವಿಕಾಸ್ ಪೀಡಿಯ

ಮೂಲ: ಡಾ|| ವೆಂಕಟ್ರಮಣ ಹೆಗಡೆ

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರೀಕ್ಷೆ ದಿನಗಳು : ರಾತ್ರಿ ಜಾಗರಣೆ ಹಾನಿಕಾರಕ : ಡಾ.ಕೆ.ಬಿ.ಸೂರ್ಯಕುಮಾರ್* 

ಫೆಬ್ರವರಿ 22, 2026

*ಪಲಾವ್-ಪರೋಟಗೆ ಈ ಮೂಲಂಗಿ ರೈತಾನೇ ಬಾಸ್! ಒಮ್ಮೆ ಟ್ರೈ ಮಾಡಿದ್ರೆ ಹೋಟೆಲ್ ರುಚಿಯನ್ನೂ ಮರೆತುಬಿಡ್ತೀರಾ!*

ಫೆಬ್ರವರಿ 15, 2026

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

ಜನವರಿ 2, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.