Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜನವಿರೋಧಿ ಸುತ್ತೋಲೆಗಳನ್ನು ತಕ್ಷಣ ಹಿಂದಕ್ಕೆ ಪಡೆಯಿರಿ : ಕೊಡಗು ಬಿಜೆಪಿ ಆಗ್ರಹ*
ಇತ್ತೀಚಿನ ಸುದ್ದಿಗಳು

*ಜನವಿರೋಧಿ ಸುತ್ತೋಲೆಗಳನ್ನು ತಕ್ಷಣ ಹಿಂದಕ್ಕೆ ಪಡೆಯಿರಿ : ಕೊಡಗು ಬಿಜೆಪಿ ಆಗ್ರಹ*

July 12, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.12 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರ ಅರಣ್ಯ ಭೂಮಿ, ಮರಗಳ ಹಕ್ಕು ಮತ್ತು ವನ್ಯಜೀವಿ ವಸ್ತುಗಳ ಕುರಿತು ಜನವಿರೋಧಿಯಾಗಿ ಹೊರಡಿಸಿರುವ ಸುತ್ತೋಲೆಗಳನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆಯುವಷ್ಟರಲ್ಲೆ ಜಿಲ್ಲೆಯ ಜನತೆಗೆ ಮಾರಕವಾಗುವ ಸುತ್ತೋಲೆಗಳನ್ನು ಹೊರಡಿಸಿದೆ. ಜಿಲ್ಲೆಯ ಬೆಳೆಗಾರರ ಮರದ ಹಕ್ಕಿಗೆ ಚ್ಯುತಿಯನ್ನುಂಟು ಮಾಡುವ ಮತ್ತು ವನ್ಯಜೀವಿ ವಸ್ತುಗಳ ಕುರಿತು ಜನರ ಭಾವನೆಗೆ ದಕ್ಕೆ ತರುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದರು.
ಅರಣ್ಯ ಸಂಪತ್ತಿನ ರಕ್ಷಣೆಗಾಗಿ 1976 ರ ಮರಗಳ ಸಂರಕ್ಷಣಾ ಕಾಯ್ದೆ ಇದ್ದು, ಅದರಲ್ಲಿ ಅತ್ಯಂತ ವಿವರವಾಗಿ ಯಾವ ಮರಗಳನ್ನು ಕಡಿಯಬಹುದು, ಸಂರಕ್ಷಿಸಬೇಕೆನ್ನುವ ವಿವರಗಳಿದೆ. ಹೀಗಿರುವಾಗ ಅನಗತ್ಯವಾಗಿ ಮರಗಳ ಸರ್ವೇ ಸುತ್ತೋಲೆಯನ್ನು ಹೊರಡಿಸುವ ಮೂಲಕ ಜಿಲ್ಲೆಯ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಟೀಕಿಸಿದರು.
::: ಇಒ, ಪಿಡಿಒಗಳಿಗೆ ಸುತ್ತೋಲೆ :::
ಪ್ರಸ್ತುತ ಸರ್ಕಾರ ಅರಣ್ಯ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿ ಅದಕ್ಕೆ ನಿವೃತ್ತ ಅಧಿಕಾರಿ ರೇಣುಕಾಂಬ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇತ್ತೀಚೆಗೆ ಇವರು ಅರಣ್ಯ ವಿಚಾರಗಳಿಗೆ ಸಂಬಂಧ ಪಡದ ತಾಲ್ಲೂಕು ಪಂಚಾಯ್ತಿಗಳ ಇಒ ಮತ್ತು ಗ್ರಾ.ಪಂ ಪಿಡಿಒಗಳಿಗೆ ಸುತ್ತೋಲೆಯೊಂದನ್ನು ಹೊರಡಿಸಿ, ಅವರ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಅರಣ್ಯಭೂಮಿಯ ಬಗ್ಗೆ ವಿವರವಾದ ಮಾಹಿತಿ ಒದಗಿಸುವಂತೆ ತಿಳಿಸಿದ್ದಾರೆ. ಅಲ್ಲದೆ ಮೀಸಲು ಅರಣ್ಯವನ್ನು ವಿಸ್ತರಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿದರು.
ಈಗ ಇರುವ ಅರಣ್ಯ ಪ್ರದೇಶಗಳನ್ನು ಮೊದಲು ಸಂರಕ್ಷಿಸಲಿ ಎಂದು ಒತ್ತಾಯಿಸಿದ ಬೋಪಯ್ಯ ಅವರು, ಅರಣ್ಯ ಕಾನೂನು ಜಾರಿಗೆ ಬಂದು ಸುಮಾರು 50 ವರ್ಷ ಕಳೆದಿದ್ದು, ಈ ಅವಧಿಯಲ್ಲಿ ತಲೆದೋರದ ಸಮಸ್ಯೆ ಈಗಿನ ಕಾಂಗ್ರೆಸ್ ಸರ್ಕಾರದಿಂದ ಎದುರಾಗಿದೆ ಎಂದು ಟೀಕಿಸಿದರು.
ಅರಣ್ಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಆಯಾ ಪಂಚಾಯ್ತಿ ವ್ಯಾಪ್ತಿಯ ಅರಣ್ಯದ ಮಾಹಿತಿ ಬೇಕಿದ್ದಲ್ಲಿ ಅದನ್ನು ಸಂಬಂಧ ಪಟ್ಟ ಕಂದಾಯ ಇಲಾಖೆಯಿಂದ ಪಡೆಯಬೇಕೇ ಹೊರತು ಪಂಚಾಯ್ತಿ ಅಧಿಕಾರಿಗಳಿಂದ ಅಲ್ಲ. ದಕ್ಷಿಣ ಕೊಡಗಿನ ನಿಟ್ಟೂರು ಗ್ರಾಮದ ಕೊಟ್ಟಗೇರಿಯಲ್ಲಿರುವ 8 ಏಕರೆ ದೇವರಕಾಡು, ಹುದಿಕೇರಿಯ ಹೈಸೊಡ್ಲೂರುವಿನ ದೇವರಕಾಡುಗಳ ಸ್ಥಿತಿಗತಿಗಳ ಬಗ್ಗೆ ಇವರು ಮಾಹಿತಿ ಕೇಳಿದ್ದಾರೆ. ಅಲ್ಲದೆ ಇನ್ನೂ ಕೆಲವು ಗ್ರಾ.ಪಂ ಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೊಡಗಿನ ಸಂಸ್ಕøತಿ, ಧಾರ್ಮಿಕ ಪರಂಪರೆಗಳಲ್ಲಿ ಪ್ರಾಣಿಜನ್ಯವಾದ ಕೊಂಬು ಮೊದಲಾದವನ್ನು ದೇವರ ಉತ್ಸವಗಳಲ್ಲಿ ಬಳಸಲಾಗುತ್ತದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಲ್ಲಿ ಜಾರಿಗೆ ಬಂದ ಸಂದರ್ಭದಿಂದಲೆ ಯಾರೆಲ್ಲ ವನ್ಯಜೀವಿಗೆ ಸಂಬಂಧಪಟ್ಟ ವಸ್ತುಗಳನ್ನು ಇರಿಸಿಕೊಂಡಿದ್ದಾರೋ ಅದನ್ನೂ ಘೋಷಿಸಿಕೊಳ್ಳಬೇಕೆಂದು ತಿಳಿಸಲಾಗಿದೆ. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ವನ್ಯಜೀವಿ ಉತ್ಪನ್ನಗಳನ್ನು ಹಿಂದಿರುಗಿಸುವ ಸುತ್ತೋಲೆ ಹೊರಡಿಸಿ ಅನಗತ್ಯ ಗೊಂದಲವನ್ನು ಹುಟ್ಟು ಹಾಕಿದೆ. ಈ ಸುತ್ತೋಲೆ ಹೊರಡಿಸಿದ್ದು ಕಾಂಗ್ರೆಸ್ ಸರ್ಕಾರ, ಸಂಬಂಧಪಟ್ಟ ಸಚಿವರು ಕಾಂಗ್ರೆಸ್‍ನವರೆ ಆಗಿದ್ದಾರೆ.
ಆದರೆ ಸೋಜಿಗವೆಂದರೆ ಇಂತಹ ಸುತ್ತೋಲೆಗೆ ತಡೆಯಾಜ್ಞೆ ತಂದವರು ಕಾಂಗ್ರೆಸ್ ನವರೇ ಆಗಿದ್ದು, ಅದನ್ನೇ ದೊಡ್ಡ ವಿಚಾರ ಎನ್ನುವಂತೆ ಬಿಂಬಿಸಿಕೊಳ್ಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಇಬ್ಬರು ಶಾಸಕರು ಜಿಲ್ಲೆಯ ಜನರ ಬಗ್ಗೆ ಕಾಳಜಿ ತೋರಿ ಸುತ್ತೋಲೆ ಹಿಂದಕ್ಕೆ ಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಬೋಪಯ್ಯ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ ಕುಮಾರ್ ಹಾಗೂ ವಕ್ತಾರ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು. 

Share. Facebook Twitter Pinterest LinkedIn Tumblr Email WhatsApp
Previous Article*ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷಾ ಪರಿವೀಕ್ಷಕರಾಗಿ ನೇಮಕ*
Next Article *ಮಡಿಕೇರಿಯಲ್ಲಿ ನೀಮಾ ಮೈಸೂರು ಪ್ರಾಂತ್ಯದ ಸಮಾವೇಶ*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.