Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಕ್ಕಬ್ಬೆ ಬಿಜೆಪಿ ಕಚೇರಿಯಲ್ಲಿ ಸಭೆ : ಕಾಂಗ್ರೆಸ್ ಪಕ್ಷಕ್ಕೆ ಯಾರೂ ಸೇರ್ಪಡೆಗೊಂಡಿಲ್ಲವೆಂದು ಸ್ಪಷ್ಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಕ್ಕಬ್ಬೆ ಬಿಜೆಪಿ ಕಚೇರಿಯಲ್ಲಿ ಸಭೆ : ಕಾಂಗ್ರೆಸ್ ಪಕ್ಷಕ್ಕೆ ಯಾರೂ ಸೇರ್ಪಡೆಗೊಂಡಿಲ್ಲವೆಂದು ಸ್ಪಷ್ಟನೆ*

ಜುಲೈ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜು.16 NEWS DESK : ಮಡಿಕೇರಿ ಗ್ರಾಮಾಂತರ ಮಂಡಲ ವ್ಯಾಪ್ತಿಯ ಕಕ್ಕಬ್ಬೆ ಬಿಜೆಪಿ ಶಕ್ತಿಕೇಂದ್ರದ ಮರಂದೋಡ ಬೂತ್ ನ ಬಿಜೆಪಿ ಕಾರ್ಯಕರ್ತರು ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾದ ಹಿನ್ನೆಲೆಯಲ್ಲಿ ಕಕ್ಕಬ್ಬೆ ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಭೆಯನ್ನು ಕರೆಯಲಾಗಿತ್ತು.
ಶಕ್ತಿಕೇಂದ್ರದ ಪ್ರಮುಖ್ ಸುನಂದ ಅವರು ಮಾತನಾಡಿ ಚೋಯಮಾಡಂಡ ಐನ್ ಮನೆಗೆ ಹೋಗುವ ಸಂಪರ್ಕ ರಸ್ತೆಯ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಮನವಿ ಪತ್ರವನ್ನು ನೀಡಲು ನಮ್ಮ ಕಾರ್ಯಕರ್ತರು ಹಾಗೂ ಕುಟುಂಬಸ್ಥರು ಕ್ಷೇತ್ರದ ಶಾಸಕರ ಗೃಹ ಕಚೇರಿಗೆ ಹೋಗಿದ್ದರು. ಈ ಸಂದರ್ಭ ಏಕಾಏಕಿ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲುಗಳನ್ನು ಹಾಕಿದ್ದಾರೆ. ಶಾಸಕರಿಗೆ ಮತ್ತು ವೇದಿಕೆಯಲ್ಲಿದ್ದವರಿಗೆ ಮುಜುಗರವಾಗಬಾರದೆಂಬ ಉದ್ದೇಶದಿಂದ ನಮ್ಮ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಶಾಲನ್ನು ಹಾಕಿಸಿಕೊಂಡಿದ್ದಾರೆ. ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎನ್ನುವುದು ಸುಳ್ಳು ವದಂತಿ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಮಡಿಕೇರಿ ಗ್ರಾಮಾಂತರ ಮಂಡಲ ಯುವಮೋರ್ಚಾ ಅಧ್ಯಕ್ಷ ಚೇತನ್ ಬಂಗೇರ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಯಾಗಿರುವ ಶಾಸಕರು ಕೇವಲ ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಶಾಸಕರಲ್ಲ. ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಎಲ್ಲಾ ಮತದಾರರಿಗೆ ಶಾಸಕರಾಗಿರುತ್ತಾರೆ. ಇದೇ ಮನೋಭಾವದಲ್ಲಿ ನಮ್ಮ ಪಕ್ಷದ ಹಿರಿಯ ಕಾರ್ಯಕರ್ತರು ಶಾಸಕರ ಗೃಹ ಕಚೇರಿಗೆ ಹೋದಂತಹ ಸಂದರ್ಭದಲ್ಲಿ ಮನವಿಪತ್ರವನ್ನು ತಡವಾಗಿ ಸ್ವೀಕರಿಸಿರುವುದಲ್ಲದೆ ಪಕ್ಷ ಸೇರ್ಪಡೆ ಎಂದು ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿದರು.
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸುಮಾರು 550 ಮತದಾರರು ಇರುವ ಮರದೋಂಡು ಬೂತ್ ನಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಯದುವೀರ್ ಅವರು 409 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರು ಕೇವಲ 111 ಮತಗಳನ್ನು ಗಳಿಸಿದ್ದಾರೆ. ಸುಭದ್ರವಾದ ಬಿಜೆಪಿ ಮತದಾರರಿರುವ ಬೂತ್ ನಲ್ಲಿ ಗೊಂದಲ ಸೃಷ್ಟಿಸಿ ಬಿಜೆಪಿಯ ಮತಗಳನ್ನು ತಮ್ಮೆಡೆಗೆ ಸೆಳೆಯುವ ಉದ್ದೇಶದಿಂದ ಪಕ್ಷ ಸೇರ್ಪಡೆಯ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕೊಡಗನ್ನು ಬಿಜೆಪಿಯ ಭದ್ರಕೋಟೆ ಎಂದು ಸಾಬೀತು ಮಾಡಿ ಕಾಂಗ್ರೆಸ್ ನ ಕುತಂತ್ರಕ್ಕೆ ತಕ್ಕ ಉತ್ತರವನ್ನು ನೀಡುತ್ತೇವೆ ಎಂದು ಚೇತನ್ ಬಂಗೇರ ತಿಳಿಸಿದರು.
ಯುವಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೊನ್ನಚೆಟ್ಟಿರ ವಿನೋದ್ ಮಾತನಾಡಿ ಶಾಸಕರು ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಿ ಎಂದರು.
ಸಭೆಯಲ್ಲಿ ಕಕ್ಕಬ್ಬೆ ಬಿಜೆಪಿ ಪ್ರಮುಖರಾದ ಚಂಡೀರ ಜಗದೀಶ್, ಮಡಿಕೇರಿ ಗ್ರಾಮಾಂತರ ಮಂಡಲ ಯುವ ಮೋರ್ಚಾದ ಉಪಾಧ್ಯಕ್ಷ ಮೇರಿಯಂಡ ಆದೇಶ, ಪದಾಧಿಕಾರಿಗಳಾದ ಚಂಡೀರ ರೋಷನ್, ಪಕ್ಷದ ಹಿರಿಯರು ಹಾಗೂ ಗ್ರಾಮಸ್ಥರುಗಳಾದ ಮುಕ್ಕಾಟಿರ ದೇವೇಂದ್ರ, ಮುಕ್ಕಾಟಿರ ರಮೇಶ್, ಕಲಿಯಂಡ ಯತೀಶ್, ಪರದಂಡ ಕರುಂಬಯ್ಯ, ರಾಬಿನ್ ಬೋಪಣ್ಣ, ರಂಜು ಚಂಗಪ್ಪ, ಬಾರಿಕೆ ನಂದ, ಮಾಚರ್ಂಡ ಪಳಂಗಪ್ಪ, ಬಾಲ್ಯಡಿರ ಸಂತು, ಬಡ್ಕಡ ಸುರೇಶ ಎನ್ ಶಂಭು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.