Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಶಸಾಪದಿಂದ ಹಡಪದ ಅಪ್ಪಣ್ಣ ಜಯಂತಿ : ಸಮಾನತೆಗಾಗಿ ದುಡಿದ ಶ್ರೇಷ್ಠ ಶರಣ ಹಡಪದ ಅಪ್ಪಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಶಸಾಪದಿಂದ ಹಡಪದ ಅಪ್ಪಣ್ಣ ಜಯಂತಿ : ಸಮಾನತೆಗಾಗಿ ದುಡಿದ ಶ್ರೇಷ್ಠ ಶರಣ ಹಡಪದ ಅಪ್ಪಣ್ಣ*

ಜುಲೈ 21, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.21 NEWS DESK :  ಹನ್ನೆರಡನೇ ಶತಮಾನದಲ್ಲಿ ಇದ್ದಂತಹ ಒಡೆದು ಆಳುವ ನೀತಿಯನ್ನು ಖಂಡಿಸಿ ಸಮಾಜದಲ್ಲಿ ಸಮಾನತೆಗಾಗಿ ಹೋರಾಡಿದ ಶ್ರೇಷ್ಠ ಶರಣ  ಹಡಪದ ಅಪ್ಪಣ್ಣ ಎಂದು ವಾಗ್ಮಿ ಹಾಗೂ  ವಸತಿ ನಿಲಯದ ಮೇಲ್ವಿಚಾರಕ  ಶ್ರೀಕಾಂತ್ ಹೇಳಿದರು.  ಕುಶಾಲನಗರ ತಾಲ್ಲೂಕು   ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಸ್ಥಳೀಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ  ಪ್ರವಚನ ನೀಡಿದ ಅವರು, ಹನ್ನೆರಡನೇ ಶತಮಾನದಲ್ಲಿ  ಸಮಾಜದಲ್ಲಿದ್ದ  ಮೇಲು ಕೀಳು, ಬಡವ – ಬಲ್ಲಿದ ಎಂಬಿತ್ಯಾದಿ  ತಾರತಮ್ಯ ಧೋರಣೆಗಳ ವಿರುದ್ಧ ಕಟುವಾದ ಶಬ್ಧಗಳಲ್ಲಿ  ಖಂಡಿಸಿದ ಅಪ್ಪಣ್ಣ ಅವರು ಬಸವಣ್ಣನ ಆಪ್ತ ಕಾರ್ಯದರ್ಶಿಯಾಗಿದ್ದರು. ಹಡಪದ ಸಮುದಾಯದ ವಿರುದ್ದ ಅಂದು ಬೇರೂರಿದ್ಧ ಕಂದಾಚಾರದ ವಿರುದ್ಧ ಸಮರ ಸಾರಿದ್ದ ಬಸವಣ್ಣ ತಮ್ಮಲ್ಲಿಗೆ ಬರುವ ಎಲ್ಲರೂ ಮೊದಲು ಹಡಪದ ಅಪ್ಪಣ್ಣ ಅವರನ್ನು ಕಂಡು ಮಾತನಾಡಿ ಬರುವಂತಹ ವಾತಾವರಣವನ್ನು  ಬಸವಣ್ಣನವರು ನಿರ್ಮಾಣ ಮಾಡಿದ್ದರು. ಶರಣರು ನುಡಿದಂತೆಯೇ ನಡೆದವರು. ಅವರ ನಂಬಿಕೆ ಹಾಗೂ ಆಚರಣೆಗಳಲ್ಲಿ ಯಾವುದೇ ಅಂತರವಿರಲಿಲ್ಲ. ಬಸವಾದಿ ಶರಣರು ಸತ್ಯ ಶುದ್ಧ ಕಾಯಕಕ್ಕೆ ನೀಡಿದ ಮಹತ್ವದಷ್ಟೇ ದಾಸೋಹಕ್ಕೂ ನೀಡಿದ್ದರು ಎಂದು ಶ್ರೀಕಾಂತ್ ವಿಮರ್ಶಿಸಿದರು. ಮುಖ್ಯ ಅತಿಥಿ ತೊರೆನೂರು ಸರ್ಕಾರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಟಿ.ಬಿ.ಮಂಜುನಾಥ್ ಮಾತನಾಡಿ, ಶರಣರು ತಮ್ಮ ಬದುಕಿನುದ್ದಕ್ಕೂ ಮೌಲ್ಯಾಧಾರಿತ ಚಿಂತನೆಗಳನ್ನು ಅಳವಡಿಸಿಕೊಂಡು ಸಮಾಜದ ಪರಿವರ್ತನೆಗೆ ಜೀವ ಸವೆಸಿದವರು. ಅಂತಹ ಶರಣರು ರಚಿಸಿದ ವಚನಗಳ ಸಾರವನ್ನು ಪ್ರತೀ ವಿದ್ಯಾರ್ಥಿಯೂ ಕೂಡ ಅರಿತು ಅದರಂತೆ ನಡೆಯಬೇಕಿದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ದೇವರಾಜು ಅರಸು ಹಿಂದುಳಿದ ವರ್ಗಗಳ ಇಲಾಖೆಯ ತಾಲ್ಲೂಕು ಅಧಿಕಾರಿ ಸ್ವಾಮಿ, ಬಸವಣ್ಣ ಸಾರಿ ಹೇಳಿದ ಕಲಬೇಡ ಕೊಲಬೇಡ ಎಂಬ ಸಪ್ತ ಸೂತ್ರವೊಂದನ್ನು ವಿದ್ಯಾರ್ಥಿಗಳು ಹಾಗೂ ಸಮಾಜ ಅರಿತು ಅದರಂತೆ ನಡೆದರೆ ರಾಮರಾಜ್ಯ ನಿರ್ಮಾಣ ವಾಗುತ್ತದೆ  ಎಂದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ,  ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧಿಕಾರಿ ಪರಮೇಶ್, ಕಾರ್ಯದರ್ಶಿ ಟಿ.ಬಿ.ಮಂಜುನಾಥ್, ಕುಶಾಲನಗರ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎಸ್.ಶಿವಾನಂದ ಇದ್ದರು. ವಿದ್ಯಾರ್ಥಿನಿಯರಾದ ಸ್ಮಿತಾ ನಿರೂಪಿಸಿ, ಲಕ್ಷಿತಾ ಸ್ವಾಗತಿಸಿ, ರಕ್ಷಿತಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರ ಜನರಲ್ಲಿ…

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.