
ಮಡಿಕೇರಿ ಜು.25 NEWS DESK : ಗಾಳಿಯ ರಭಸಕ್ಕೆ ಅಪಾಯದ ಮುನ್ಸೂಚನೆ ಇದ್ದರೂ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಶಾಲೆಗಳಿಗೆ ಬೆಳಿಗ್ಗೆ ರಜೆ ಘೋಷಿಸಲಾಗಿದೆ. ಬುಧವಾರ ಮತ್ತು ಗುರುವಾರ ಎರಡೂ ದಿನವೂ ಹೀಗೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಕೆಲವು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸುರಿಯುವ ಮಳೆಯ ನಡುವೆ ಶಾಲೆಗೆ ಬಂದು ಮತ್ತೆ ಮನೆಗೆ ಮರಳಿದ್ದಾರೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿಕ್ಷಣಾಧಿಕಾರಿಗಳು ಸಕಾಲದಲ್ಲಿ ಸಂಜೆಯೇ ರಜೆ ಘೋಷಣೆ ಮಾಡಬೇಕು ಎಂದ ಪೋಷಕರು ಒತ್ತಾಯಿಸಿದ್ದಾರೆ.







