
ಮಡಿಕೇರಿ ಜು.25 NEWS DESK : ಹೆಚ್ಚಿನ ಮಳೆ ಮತ್ತು ಗಾಳಿಯಿಂದ ವಿದ್ಯುತ್ ಕಂಬ ಹಾಗೂ ಪರಿವರ್ತಕಗಳಿಗೆ ಹಾನಿಯಾಗಿದ್ದು, ಸರಿಪಡಿಸುವ ಕಾರ್ಯ ನಡೆದಿದೆ. ಈ ಸಂಬಂಧ ಸೆಸ್ಕ್ ಇಇ ಅನಿತಾ ಬಾಯಿ ಇಂದು ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ವ್ಯಾಪ್ತಿಗೆ ಭೇಟಿ ನೀಡಿ ಪರಿಶೀಲಿಸಿದರು. ಹಾಗೆಯೇ ಮಾದಾಪುರ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಆಲಿಸಿದರು.








