Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜೀವವಿಮೆಯಲ್ಲಿ ಮಹತ್ವದ ಮೈಲಿಗಲ್ಲು : ಇಂಡಿಯಾ ಪೋಸ್ಟ್‌ ನಿಂದ ಕೇವಲ 755  ರೂ.ಗಳಿಗೆ 15 ಲಕ್ಷ ರೂ. ವಿಮಾ ಸೌಲಭ್ಯ*
ಇತ್ತೀಚಿನ ಸುದ್ದಿಗಳು

*ಜೀವವಿಮೆಯಲ್ಲಿ ಮಹತ್ವದ ಮೈಲಿಗಲ್ಲು : ಇಂಡಿಯಾ ಪೋಸ್ಟ್‌ ನಿಂದ ಕೇವಲ 755  ರೂ.ಗಳಿಗೆ 15 ಲಕ್ಷ ರೂ. ವಿಮಾ ಸೌಲಭ್ಯ*

July 28, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನವದೆಹಲಿ NEWS DESK ಜು.28 : (ಕೋವರ್‌ ಕೊಲ್ಲಿ ಇಂದ್ರೇಶ್‌) ದೇಶದ ಜೀವವಿಮಾ ಮಾರುಕಟ್ಟೆ ದಿನೇ ದಿನೇ ವಿಸ್ತರಿಸುತ್ತಾ ಸಾಗಿದ್ದು  ಒಂದೆಡೆ ಖಾಸಗೀ ಕಂಪೆನಿಗಳು ಆರೋಗ್ಯ ವಿಮೆಗೆ ದುಬಾರಿ ದರ ವಿಧಿಸುತಿದ್ದರೆ ಸರ್ಕಾರಿ ಸಂಸ್ಥೆ  ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (IPPB)   ಬಡವರ ಕೈಗೆಟುಕುವ ವಿಮೆಯೊಂದನ್ನು  ಕಳೆದ ತಿಂಗಳು  ಬಿಡುಗಡೆ ಮಾಡಿದೆ.   ಇಷ್ಟೊಂದು ಅಗ್ಗದ ದರದಲ್ಲಿ ಜೀವವಿಮೆ ಒದಗಿಸುತ್ತಿರುವುದು  ಬಹುಶಃ  ವಿಶ್ವದಲ್ಲೇ ಮೊದಲು ಆಗಿದೆ. ಇಂದಿಗೂ ಜೀವವಿಮೆ ಪಡೆಯಲು ಬಡ ವರ್ಗದ ಜನ ಹಿಂದೇಟು ಹಾಕುತ್ತಿರುವುದು ದುಬಾರಿ ಆಗಿರುವ ಪ್ರೀಮಿಯಂ ದರದ ಕಾರಣದಿಂದಾಗಿ ಮಾತ್ರ.   ಆದರೆ ಇಧಿಗ  ಇಷ್ಟು ಅಗ್ಗದ ದರದಲ್ಲಿ ಜೀವವಿಮೆ ಒದಗಿಸುತ್ತಿರುವುದು  ಎಲ್ಲರಿಗೂ ವಿಮಾ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ. ಈಗ  ನೀವು ವರ್ಷಕ್ಕೆ  ಕೇವಲ 755 ರೂ. ಪಾವತಿಸಿ ಪಾಲಿಸಿ ಪಡೆದುಕೊಂಡು, ಅಪಘಾತಕ್ಕೀಡಾಗಿ  ಮೃತಪಟ್ಟರೇ ನಾಮಿನಿಯಾದ ಕುಟುಂಬದ ಸದಸ್ಯನಿಗೆ 15 ಲಕ್ಷ ರೂ. ಪಾವತಿಸುತ್ತಾರೆ. ಇನ್ನೂ ವಿಮೆ ತೆಗೆದುಕೊಂಡವರು ಮೃತಪಟ್ಟಾಗ ಮಾತ್ರವಲ್ಲದೇ, ಶಾಶ್ವತ ಅಂಗವೈಕಲ್ಯಕ್ಕೆ ಒಳಾಗದರೂ 15 ಲಕ್ಷ ರೂ. ಪಾವತಿಸಲಾಗುತ್ತಿದೆ. ಪಾಲಿಸಿದಾರರು ಮರಣ ಹೊಂದಿದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಿರಲು ಒಂದು ಲಕ್ಷ ರೂಪಾಯಿ ಮತ್ತು ಮದುವೆಗೆ ಇನ್ನೊಂದು ಲಕ್ಷ ರೂಪಾಯಿಗಳನ್ನು ಪಾವತಿಸಲಾಗುತ್ತದೆ. ಪಾಲಿಸಿದಾರ ಬದುಕಿದ್ದರೆ ವೈದ್ಯಕೀಯ ವೆಚ್ಚಕ್ಕಾಗಿ ಒಂದು ಲಕ್ಷ ರೂಪಾಯಿ ಪಾವತಿಸಲಾಗುತ್ತದೆ. ಆಸ್ಪತ್ರೆಯಲ್ಲಿ ಸಾಮಾನ್ಯ ಚಿಕಿತ್ಸೆಗೆ ಒಳಗಾದರೆ ದಿನಕ್ಕೆ 1000 ರೂಪಾಯಿ, ಐಸಿಯುನಲ್ಲಿ ದಾಖಲಾದರೆ ದಿನಕ್ಕೆ 2000 ರೂಪಾಯಿ ನೀಡಲಾಗುತ್ತದೆ. ಕೈ ಕಾಲು ಮುರಿದರೆ 25 ಸಾವಿರ ರೂ.ವರೆಗೆ ಪರಿಹಾರ ನೀಡಲಾಗುತ್ತದೆ. ವಾರ್ಷಿಕ 399 ರೂ ಪಾವತಿಸಿ ಪಾಲಿಸಿ ಪಡೆದರೆ ವ್ಯಕ್ತಿ ಅಪಘಾತದಲ್ಲಿ  ಮರಣ ಹೊಂದಿದರೆ 10 ಲಕ್ಷ ರೂ. ವರೆಗೆ ವಿಮೆ ಪಡೆಯಬಹುದು. ಶಾಶ್ವತ ಅಂಗವೈಕಲ್ಯ, ಕೈಕಾಲು, ಬ್ರೈನ್ ಸ್ಟ್ರೋಕ್ಗೆ ಒಳಗಾದರೆ 10 ಲಕ್ಷ ರೂ. ಪಾವತಿಸಲಾಗುತ್ತದೆ. ಲಿಸಿದಾರರಿಗೆ ಅಪಘಾತ ಸಂಭವಿಸಿ ಆಸ್ಪತ್ರೆಗೆ ದಾಖಲಾದರೆ ಒಳರೋಗಿ ವಿಭಾಗದಡಿ 60 ಸಾವಿರ ರೂ.ವರೆಗೆ ಕ್ಲೇಮ್ ಮಾಡುವ ಅವಕಾಶವಿದೆ. ಅದೇ ರೀತಿ ಹೊರರೋಗಿ ಕೋಟಾದಡಿ 30 ಸಾವಿರ ರೂ. ಕ್ಲೈಮ್ ಮಾಡಬಹುದು. ಚಿಕಿತ್ಸೆಯ ಸಮಯದಲ್ಲಿ ದಿನಕ್ಕೆ 1000 ರೂಪಾಯಿಗಳನ್ನು ನಗದು ರೂಪದಲ್ಲಿ ನೀಡಲಾಗುತ್ತದೆ. ಇದನ್ನು 10 ದಿನಗಳವರೆಗೆ ನೀಡಲಾಗುತ್ತದೆ. ಇಬ್ಬರು ಮಕ್ಕಳಿಗೆ ಶಾಲಾ ಶುಲ್ಕದ 10 ಪ್ರತಿಶತ ಅಥವಾ ಒಂದು ಲಕ್ಷ ರೂ ವರೆಗೆ ನಗದು ಆಯ್ಕೆ ಮಾಡಬಹುದು. ಅಷ್ಟೇ ಅಲ್ಲ, ಅಪಘಾತಕ್ಕೀಡಾದ ಪಾಲಿಸಿದಾರನ ಸಾರಿಗೆ ವೆಚ್ಚಕ್ಕಾಗಿ 25 ಸಾವಿರ ರೂ ನೀಡಲಾಗುತ್ತದೆ. ಪಾಲಿಸಿದಾರ ಒಂದು ವೇಳೆ ಮೃತಪಟ್ಟರೆ ಅಂತ್ಯಸಂಸ್ಕಾರಕ್ಕೆ ಇನ್ನೂ 5 ಸಾವಿರ ನೀಡಲಾಗುತ್ತದೆ.  299 ರೂಪಾಯಿಗಳ ಪ್ರೀಮಿಯಂ ಅನ್ನು ಆಯ್ಕೆ ಮಾಡಿಕೊಂಡರೆ ಅಪಘಾತದಲ್ಲಿ ಮರಣಹೊಂದಿದರೆ, ಅಂಗವಿಕಲರಾಗಿದ್ದರೆ ಅಥವಾ ಪಾರ್ಶ್ವವಾಯುವಿಗೆ ಒಳಗಾಗಿದ್ದರೆ ಮೇಲಿನ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು. ಇದರಲ್ಲಿ ಇತರ ಹೆಚ್ಚುವರಿ ಪ್ರಯೋಜನಗಳು ಇರುವುದಿಲ್ಲ. ಈ ಪಾಲಿಸಿಯನ್ನು 18 ರಿಂದ 65 ವರ್ಷ ವಯಸ್ಸಿನ ಯಾವುದೇ ಭಾರತೀಯ ನಾಗರಿಕರು ಮೇಲಿನ ಮೂರು ಪಾಲಿಸಿಗಳನ್ನು ತೆಗೆದುಕೊಳ್ಳಬಹುದು. ನಿಮ್ಮ ಸಮೀಪದ ಎಲ್ಲಾ ಅಂಚೆ ಕಚೇರಿಗಳಲ್ಲಿ ಈ ಪಾಲಿಸಿ ಲಭ್ಯವಿದೆ.  ಪೋಸ್ಟ್‌ ಆಫೀಸ್‌ ಗೆ ನೀವು ಕಾಲಿಡದೇ ವರುಷಗಳೇ ಆಗಿರಬಹುದಲ್ಲವೇ ? ಆದರೆ ಈ ಪಾಲಿಸಿಯು ನಿಮ್ಮನ್ನು ಕೂಡಲೇ ಪೋಸ್ಟ್‌ ಆಫೀಸಿಗೆ ತೆರಳುವಂತೆ ಮಾಡುವುದರಲ್ಲಿ ಸಂದೇಹವೇ ಇಲ್ಲ.  ಈ ಪಾಲಿಸಿ ಪಡೆಯುವಲ್ಲಿ ಇನ್ನೊಂದು ಅನುಕೂಲವೆಂದರೆ  ಅಲ್ಲಿ ನಿಮ್ಮನ್ನು ಯಾವುದೇ ದಾಖಲಾತಿ  ಜೆರಾಕ್ಸ್‌ ಪ್ರತಿ , ಫೋಟೋ ಏನೂ ಕೇಳುವುದಿಲ್ಲ.  ನಿಮ್ಮ ಆಧಾರ್‌ ಸಂಖ್ಯೆ ನಿಮಗೆ ತಿಳಿದಿದ್ದರೆ, ಹೆಬ್ಬೆರಳ ಅಚ್ಚು ಪಡೆದು  ಕೇವಲ 10 ನಿಮಿಷದಲ್ಲೇ ಪಾಲಿಸಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 155299 ಸಂಖ್ಯೆಗೆ  ಕರೆ ಮಾಡಿ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ವಿದ್ಯಾಲಯದಲ್ಲಿ ಶಿಕ್ಷಣ ಸಪ್ತಾಹ*  
Next Article *ಕಾಫಿ ತೋಟದಲ್ಲಿ ಕಾಡಾನೆ ಸಾವು*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.