Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಮಾಗಮ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಮಾಗಮ ಸಭೆ*

ಜುಲೈ 31, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.31 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅಕಾಡೆಮಿ ಅಧ್ಯಕ್ಷ  ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ‘ಸಮಾಗಮ ಸಭೆಗೆ’ ಉತ್ತಮ ಸ್ಪಂದನೆ ದೊರೆಯಿತು.
ನಗರದ ಗಾಂಧಿ ಭವನದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರು, ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಅರೆಭಾಷೆ ಸಮುದಾಯದ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ನಿರ್ದೇಶಕರು ಸೇರಿದಂತೆ ಹಲವರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಅಕಾಡೆಮಿ ಮೊದಲ ಸಭೆಯಲ್ಲಿ ಅಕಾಡೆಮಿ ಚಟುವಟಿಕೆ ಸಂಬಂಧಿಸಿದಂತೆ ಕಳೆದ ಎರಡು ಅವಧಿಯಲ್ಲಿನ ಫೆಲೋಶಿಪ್‌ನ ಪುಸ್ತಕ ಹೊರತರಲು ಬಾಕಿ ಇದ್ದು, ಮೊದಲ ಸಭೆಯಲ್ಲಿಯೇ ಪುಸ್ತಕ ಹೊರ ತರಲು ನಿರ್ಧರಿಸಿರುವುದು ವಿಶೇಷವಾಗಿದೆ ಎಂದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ‘ಹಿಂಗಾರ’ ಪುಸ್ತಕವನ್ನು ಹೊರತರಲಾಗುತ್ತಿದ್ದು, ಕಳೆದ 18 ತಿಂಗಳಿ0ದ ಪುಸ್ತಕ ಹೊರತಂದಿಲ್ಲ. ಹಾಗಾಗಿ ‘ಹಿಂಗಾರ ಸಂಯುಕ್ತ ಸಂಚಿಕೆ’ ಹೊರತರಲು ನಿರ್ಧರಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಹಾಗೆಯೇ 2022-2023 ನೇ ಅವಧಿಯ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನವನ್ನು ನೀಡಲು ಮೊದಲ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸದಾನಂದ ಮಾವಜಿ  ಹೇಳಿದರು.
ಈಗಾಗಲೇ ಅಕಾಡೆಮಿ ವತಿಯಿಂದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಹುತಾತ್ಮ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಿಕೊಂಡು ಬರಲಾಗುತ್ತಿದೆ. ಅದೇ ರೀತಿ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣಾ ದಿನವನ್ನು ಸುಳ್ಯದಲ್ಲಿ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.
‘ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಲೇಖನ, ಕವನ, ನಾಟಕ, ಸಾಕ್ಷ್ಯ ಚಿತ್ರ ಹೀಗೆ ವಿವಿಧ ರೀತಿಯ ಚಟುವಟಿಕೆಗಳನ್ನು ಆಯೋಜಿಸಲು ಅಕಾಡೆಮಿ ನಿರ್ಧರಿಸಿದ್ದು, ಸಾಹಿತ್ಯ, ಸಂಸ್ಕೃತಿ, ಸಂಶೋಧನೆ ಹಾಗೂ ದಾಖಲೀಕರಣಕ್ಕೆ ಒತ್ತು ನೀಡಲಾಗಿದೆ ಎಂದರು.
ಕರ್ನಾಟಕ ಹೆಸರು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ನಾಲ್ಕು ಕಂದಾಯ ವಿಭಾಗದಲ್ಲಿ ಕಾರ್ಯಕ್ರಮ ಆಯೋಜಿಸಲು ಸರ್ಕಾರ ನಿರ್ಧರಿಸಿದ್ದು, ಆ ನಿಟ್ಟಿನಲ್ಲಿ ಮೈಸೂರು ವಿಭಾಗಕ್ಕೆ ಸಂಬ0ಧಿಸಿದ0ತೆ ಮಂಗಳೂರಿನಲ್ಲಿ 5 ಭಾಷಾ ಅಕಾಡೆಮಿಗಳು, ಒಂದು ಯಕ್ಷಗಾನ ಅಕಾಡೆಮಿ ಸೇರಿ ಸೆಪ್ಟೆಂಬರ್ 24 ಮತ್ತು 25 ರಂದು ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಅಕಾಡೆಮಿ ಕಾರ್ಯಚಟುವಟಿಕೆಗಳು ಮತ್ತು ಅಭಿವೃದ್ಧಿಗೆ ಸಂಬ0ಧಿಸಿದ0ತೆ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಅರೆಭಾಷೆ ಸಮುದಾಯದ ವಿವಿಧ ಸಂಘಟನೆಗಳ ನಿರ್ದೇಶಕರು ನೀಡಿರುವ ಸಲಹೆಗೆ ಪೂರಕವಾಗಿ ಕಾರ್ಯಕ್ರಮ ಹಾಗೂ ಪುಸ್ತಕ ಪ್ರಕಟಣೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷರು ತಿಳಿಸಿದರು.
ಅಕಾಡೆಮಿ ಮಾಜಿ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣ ಕಜೆಗದ್ದೆ ಅವರು ಮಾತನಾಡಿ ಅರೆಭಾಷೆಗೆ ಸಂಬ0ಧಿಸಿದ0ತೆ ಐಎಸ್‌ಒ ಸ್ಥಾನಮಾನ ಪಡೆಯಲು ಮತ್ತಷ್ಟು ಶ್ರಮಿಸಬೇಕಿದೆ. ಅರೆಭಾಷೆ ಸಾಹಿತ್ಯ ಮತ್ತು ಸಂಶೋಧನೆ ಹಾಗೂ ಪ್ರಕಟಣೆಗೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.
ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್ ಅವರು ಮಾತನಾಡಿ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯು ಭಾಷಾ ಅಕಾಡೆಮಿಯಾಗಿದ್ದು, ಅರೆಭಾಷೆ, ಸಂಸ್ಕೃತಿ, ಸಾಹಿತ್ಯ, ಕಲೆ ನಾಡಿನಾದ್ಯಂತ ಪಸರಿಸುವಂತಾಗಬೇಕು. ‘ಹಿಂಗಾರ ತ್ರೈಮಾಸಿಕ’ ಪತ್ರಿಕೆಯನ್ನು ಕಾಲ ಕಾಲಕ್ಕೆ ಹೊರತರಬೇಕು ಎಂದು ಹೇಳಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರು ಮಾತನಾಡಿ ಅರೆಭಾಷೆ ಅಕಾಡೆಮಿ ಕಾರ್ಯಚಟುವಟಿಕೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟಗಳಿಂದ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬರಲಾಗಿದೆ. ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿೆ ಒಳ್ಳೆಯ ಹೆಸರು ಮಾಡುವಂತಾಗಬೇಕು ಎಂದು ಹೇಳಿದರು.
ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೆರಿಯನ ಜಯಾನಂದ ಅವರು ಮಾತನಾಡಿ ಕೊಡಗು ಜಿಲ್ಲೆಗೂ ಸಹ ಅಕಾಡೆಮಿ ಸದಸ್ಯರಾಗುವ ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು.
ಮೈಸೂರು ಗೌಡ ಸಮಾಜದ ಕೊಂಬಾರನ ಬಸಪ್ಪ ಅವರು ಮಾತನಾಡಿ ಅರೆಭಾಷೆ ಮಾತನಾಡುವವರು, ಕೊಡಗು, ದಕ್ಷಿಣ ಕನ್ನಡ, ಮೈಸೂರು, ಬೆಂಗಳೂರು ಇತರೆಡೆ ಇದ್ದು, ಎಲ್ಲೆಡೆ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಸುಳ್ಯ ತಾಲ್ಲೂಕಿನ ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್. ಗಂಗಾಧರ ಅವರು ಮಾತನಾಡಿ ಅರೆಭಾಷೆ ಅಕಾಡೆಮಿ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಆ ನಿಟ್ಟಿನಲ್ಲಿ ಗೌಡರ ಯುವ ಸೇವಾ ಸಂಘದಿAದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಪುದಿಯನೆರವನ ರೇವತಿ ರಮೇಶ್ ಅವರು ಮಾತನಾಡಿ ಅರೆಭಾಷೆಯು ಸಹ ಪ್ರದೇಶದಿಂದ ಪ್ರದೇಶಕ್ಕೆ ವ್ಯತ್ಯಾಸಗಳಿದ್ದು, ಆ ನಿಟ್ಟಿನಲ್ಲಿ ಕೊಡಗಿಗೆ ಸಂಬAಧಿಸಿದAತೆ ಸುದ್ದಿಜೊಂಪೆ ವಾಚಿಸಲಾಗುತ್ತಿದ್ದು, ಈ ಸಂಬ0ಧ ಪ್ರದೇಶವಾರು ಭಾಷೆ ವ್ಯತ್ಯಾಸವಿರುವುದರಿಂದ ತರಬೇತಿ ಶಿಬಿರ ಏರ್ಪಡಿಸುವಂತೆ ಸಲಹೆ ಮಾಡಿದರು.
ಬಾರಿಯಂಡ ಜೋಯಪ್ಪ ಅವರು ಮಾತನಾಡಿ ಕೊಡಗಿನಲ್ಲಿ ಸುದ್ದಿಜೊಂಪೆ ಓದುವಂತೆ ಮಂಗಳೂರು ಆಕಾಶವಾಣಿ ಕೇಂದ್ರದಲ್ಲಿಯೂ ಸಹ ಸುದ್ದಿಜೊಂಪೆ ಬಿತ್ತರಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಅಕಾಡೆಮಿ ಮಾಜಿ ಸದಸ್ಯರಾದ ಎ.ಟಿ.ಕುಸುಮಾಧರ ಅವರು ಮಾತನಾಡಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರವನ್ನು ಏರ್ಪಡಿಸುವಂತಾಗಬೇಕು. ಅಜ್ಜಿ ಕಥೆಗಳು, ಗಾದೆಗಳನ್ನು ಸಂಗ್ರಹಿಸಿ ಪುಸ್ತಕಗಳನ್ನು ಪ್ರಕಟಿಸುವಂತಾಗಬೇಕು. ಅರೆಭಾಷೆಯಲ್ಲಿ ಒಳ್ಳೆಯ ಹಾಡು, ಜಾನಪದ ಗೀತೆಗಳನ್ನು ದಾಖಲೀಕರಣ ಮಾಡಬೇಕು ಎಂದರು.
ಪುರುಷೋತ್ತಮ ಕಿರ್ಲಾಯ ಅವರು ಮಾತನಾಡಿ ‘ಹಿಂಗಾರ’ ತ್ರೈಮಾಸಿಕ ಪತ್ರಿಕೆಯು ಪ್ರತೀ ಮನೆಯಲ್ಲಿ ಇರುವಂತೆ ಆಗಬೇಕು ಎಂದು ಅವರು ತಿಳಿಸಿದರು.
ಜಯಪ್ರಕಾಶ್ ಮೋಂಟಡ್ಕ ಅವರು ಮಾತನಾಡಿ ಮಕ್ಕಳಿಗೆ ಅರೆಭಾಷೆ ಸಾಹಿತ್ಯ ನಾಟಕ ಶಿಬಿರವನ್ನು ಆಯೋಜಿಸುವಂತಾಗಬೇಕು ಎಂದು ಹೇಳಿದರು.
ಮಾಜಿ ಸದಸ್ಯರಾದ ಕೋರನ ಸರಸ್ವತಿ ಅವರು ಮಾತನಾಡಿ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಸಂಬ0ಧಿಸಿದ0ತೆ ಅನುವಾದ ಕೃತಿಗಳನ್ನು ಹೆಚ್ಚು ಪ್ರಕಟಿಸುವಂತಾಗಬೇಕು. ಅನುವಾದ ಕೃತಿಯು ಉತ್ತಮವಾಗಿರಬೇಕು ಎಂದರು.
ಚಂಡೀರ ಬಸಪ್ಪ ಅವರು ಮಾತನಾಡಿ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿ ಪಡಿಸುವಲ್ಲಿ ಮತ್ತಷ್ಟು ಶ್ರಮಿಸಬೇಕು ಎಂದರು.
ಸೂದನ ಈರಪ್ಪ ಅವರು ಮಾತನಾಡಿ ಬಂಟ್ವಾಳ, ಪುತ್ತೂರು, ವಿಟ್ಲ ಮತ್ತಿತರ ಕಡೆಯು ಸಹ ಅರೆಭಾಷಿಕರು ಇದ್ದು, ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದರು.
ವಿದೂಷಿ ಕಾವ್ಯಶ್ರೀ ಕಪಿಲ್ ಅವರು ಪ್ರಾರ್ಥಿಸಿದರು. ಯಾವುದೇ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆಗಳು ಅಗತ್ಯ. ಆ ನಿಟ್ಟಿನಲ್ಲಿ ಮುಂಚಿತವಾಗಿ ಮಾಹಿತಿ ನೀಡುವಂತಾಗಬೇಕು ಎಂದು ಹೇಳಿದರು.
ಅಕಾಡೆಮಿ ಸದಸ್ಯರಾದ ಜ್ಞಾನೇಶ್ ಅವರು ಮಾತನಾಡಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯನ್ನು ಮುಂದಿನ ದಿನಗಳಲ್ಲಿ ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂಬ ಬಗ್ಗೆ ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಅಗತ್ಯ ಸಹಕಾರಕ್ಕೆ ಕೋರಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಮಾತನಾಡಿದರು. ಪ್ರಮುಖರಾದ ತುಂತಜೆ ಗಣೇಶ್, ನವೀನ್ ಅಂಬೆಕಲ್ಲು, ಚಿಲ್ತಡ್ಕ ಪರಶುರಾಮ, ಸುರೇಶ್ ಅಮೈ, ಕೆ.ಟಿ.ವಿಶ್ವನಾಥ, ಎ.ಕೆ.ಹಿಮಕರ, ಸದಸ್ಯರಾದ ತೇಜಕುಮಾರ್ ಕುಡೆಕಲ್ ಹಾಗೂ ಪಿ.ಎಸ್.ಕಾರ್ಯಪ್ಪ ಇದ್ದರು.
ಸದಸ್ಯರಾದ ಸಂದೀಪ್ ಪುಳಕಂಡ್ರ, ಲೋಕೇಶ್ ಊರುಬೈಲು ಅವರು ಅರೆಭಾಷಿಕ ಸಂಘಟಕರನ್ನು ಗೌರವಿಸಿದರು. ಸದಸ್ಯರಾದ ಚಂದ್ರಶೇಖರ್ ಪೆರಾಲು ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ ಅವರು ನಿರೂಪಿಸಿದರು, ವಿದೂಷಿ ಕಾವ್ಯಶ್ರೀ ಕಪಿಲ್ ಪ್ರಾರ್ಥಿಸಿದರು, ರಿಜಿಸ್ಟ್ರಾರ್ ಚಿನ್ನಸ್ವಾಮಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.29 : ಕೂಡಿಗೆಯ ಸೈನಿಕ ಶಾಲೆ ಕೊಡಗು ತನ್ನ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ 2025–26ನೇ ಶೈಕ್ಷಣಿಕ…

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.