Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 
  • *ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
  • *ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*
  • *ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*
  • *ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*
  • *ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*
  • *ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
  • *ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*
  • *ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ನಿಂದ ಗ್ರಾಹಕರ ಹಕ್ಕುಗಳ ಕುರಿತು ಸಂವಾದ : ಮೂಲಹಕ್ಕುಗಳ ಬಗ್ಗೆ ಗ್ರಾಹಕರಿಗೆ ಅರಿವಿದ್ದಾಗ ಸಮಸ್ಯೆಗಳಿಗೆ ಪರಿಕಾರ ಸುಲಭಸಾಧ್ಯ : ಮುರಳೀಧರನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ನಿಂದ ಗ್ರಾಹಕರ ಹಕ್ಕುಗಳ ಕುರಿತು ಸಂವಾದ : ಮೂಲಹಕ್ಕುಗಳ ಬಗ್ಗೆ ಗ್ರಾಹಕರಿಗೆ ಅರಿವಿದ್ದಾಗ ಸಮಸ್ಯೆಗಳಿಗೆ ಪರಿಕಾರ ಸುಲಭಸಾಧ್ಯ : ಮುರಳೀಧರನ್*

ಜುಲೈ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.31 NEWS DESK : ವಿದ್ಯುತ್ ಸೇರಿದಂತೆ ಮೂಲಸೌಲಭ್ಯಗಳ ಬಗ್ಗೆ ಗ್ರಾಹಕರಿಗೆ ಸರಿಯಾದ ಜಾಗೃತಿ ಇಲ್ಲದಿರುವುದರಿಂದಲೇ ಅನೇಕ ಸಮಸ್ಯೆಗಳಿಗೆ ನಿರೀಕ್ಷಿತ ಪರಿಹಾರ ದೊರಕದಾಗಿದೆ. ತಮ್ಮ ಮೂಲ ಹಕ್ಕುಗಳ ಬಗ್ಗೆ ಗ್ರಾಹಕರು ಜಾಗೃತರಾಗಬೇಕಾದ ಅನಿವಾಯ೯ತೆ ಇಂದಿನ ಕಾಲಘಟ್ಟದಲ್ಲಿದೆ ಎಂದು ಬೆಂಗಳೂರಿನ ಗ್ರಾಹಕರ ಹಕ್ಕುಗಳ ಶಿಕ್ಷಣ ಮತ್ತು ಜಾಗೃತಿ ಟ್ರಸ್ಟ್ ಸ್ಥಾಪಕಾಧ್ಯಕ್ಷ ವೈ.ಜಿ.ಮುರಳೀಧರನ್ ಕರೆ ನೀಡಿದ್ದಾರೆ.
ನಗರದಲ್ಲಿ ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿತ ಗ್ರಾಹಕರ ಹಕ್ಕುಗಳ ಕುರಿತ ಸಂವಾದ ಕಾಯ೯ಕ್ರಮದಲ್ಲಿ ಮಾತನಾಡಿದ ಅವರು, ವಿದ್ಯುತ್, ಆಹಾರಪದಾಥ೯ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಅದನ್ನು ಬಳಸುವ ಗ್ರಾಹಕರಿಗೆ ತಮ್ಮ ಮೂಲ ಹಕ್ಕುಗಳ ಬಗ್ಗೆಯೇ ಸರಿಯಾದ ತಿಳುವಳಿಕೆ ಇಲ್ಲದಾಗಿದೆ. ಇದರಿಂದಾಗಿಯೇ ಸಮಸ್ಯೆಗಳು ಪರಿಹಾರ ಕಾಣುವ ಬದಲಿಗೆ ಮತ್ತಷ್ಟು ಹೆಚ್ಚಾಗುತ್ತಿದೆ, ಗ್ರಾಹಕರು  ಜಾಗೃತರಾದಾಗ ಮಾತ್ರ ಅನೇಕ ಸಮಸ್ಯೆಗಳು ಸಮಾಜದಲ್ಲಿ ಪರಿಹಾರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪರಿಸರ ಸಂರಕ್ಷಣೆ ಹಾಗೂ ಅಭಿವೖದ್ದಿ ಯೋಜನೆಗಳಲ್ಲಿ ಸಮನ್ವಯ ಇದ್ದಾಗ ಯಾವುದೇ ಸಮಸ್ಯೆಯಾಗುವುದಿಲ್ಲ,  ದೇಶದಲ್ಲಿ ಅಭಿವೃದ್ಧಿ ಯೋಜನೆಗಳು ಪರಿಸರ ಸಮತೋಲನದೊಂದಿಗೆ ಜಾರಿಯಾದಾಗ ದೇಶದ ಪ್ರಗತಿಯೂ ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟ ಮುರಳೀಧರ್,  ವಿದ್ಯುತ್ ರಂಗದಲ್ಲಿ ನಗರ ಪ್ರದೇಶಗಳ ಪೈಕಿ ಬಿಲ್ ಸಮಸ್ಯೆ ಕಂಡುಬರುತ್ತಿದ್ದರೆ, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆ ಎದುರಿಸುತ್ತಿದ್ದೇವೆ, ಗ್ರಾಹಕ ತನಗೆ ಬರುವ ಬಿಲ್ ನ್ನು ಸರಿಯಾಗಿ ತಿಳಿದುಕೊಳ್ಳದೇ ಇರುವುದರಿಂದಾಗಿ ಅನೇಕ ಗ್ರಾಹಕರು ಸಮಸ್ಯೆ ಎದುರಿಸುವಂತಾಗಿದೆ, ವಿದ್ಯುತ್ ನಿಯಂತ್ರಣಗಳೇನು, ಗ್ರಾಹಕರಿಗೆ ಇರುವ ಹಕ್ಕುಗಳೇನು ಎಂಬುದನ್ನು ಸ್ಥಳೀಯವಾಗಿ ಸಂಘಸಂಸ್ಥೆಗಳ ಮೂಲಕ ಜನರಿಗೆ ತಿಳಿಸಬೇಕಾದ ಅಗತ್ಯ ಇಂದಿನ ಕಾಲಘಟ್ಟದಲ್ಲಿದೆ ಎಂದೂ ಮುರಳೀಧರನ್  ಹೇಳಿದರು.
ಗ್ರಾಹಕರಿಗೆ ಸರಬರಾಜಾಗುವ ವಿದ್ಯುತ್ ನ ಗುಣಮಟ್ಟಕ್ಕೆ ಕೂಡ ಮಾನದಂಡವಿದೆ, ವಿದ್ಯುತ್ ದರ ಪರಿಷ್ಕರಿಸುವ ಮುನ್ನ ಗ್ರಾಹಕನ ಅಭಿಪ್ರಾಯವನ್ನೂ ಕೇಳಬೇಕಾಗಿದೆ,  ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಇಂಥ ಆಗುಹೋಗುಗಳ ಬಗ್ಗೆ ಗ್ರಾಹಕ ಕೂಡ ಮೌನವಹಿಸದೇ ಜಾಗ್ರತನಾಗಿ ಪ್ರಶ್ನಿಸುವ ಅನಿವಾಯ೯ತೆ ಇಂದಿದೆ ಎಂದು ಅವರು ಹೇಳಿದರು.
ಪ್ರತೀ ತಿಂಗಳು ಪಡೆಯುವ ವಿದ್ಯುತ್ ಬಿಲ್ ನ್ನು ಎಷ್ಟು ಗ್ರಾಹಕರು ಸರಿಯಾಗಿ ಓದಿ ಮಾಹಿತಿ ತಿಳಿಯುತ್ತಾರೆ ಎಂದು ಪ್ರಶ್ನಿಸಿದ ಮುರಳೀಧರನ್ ,ಬಿಲ್ ನಲ್ಲಿ ನಮೂದಿಸಲಾಗುವ ಎಲ್ಲಾ ಅಂಶಗಳನ್ನು ಸರಿಯಾಗಿ ಓದಿ ಸೂಕ್ತವಾಗಿದೆಯೇ ಎಂದಾದ ಮೇಲೆ ಬಿಲ್ ಪಾವತಿಸಬೇಕು, ಇಲ್ಲದೇ ಹೋದಲ್ಲಿ ಬಿಲ್ ತಪ್ಪಾಗಿದ್ದರೂ ಗ್ರಾಹಕನ ಮೌನ ಭವಿಷ್ಯದಲ್ಲಿ ಸಮಸ್ಯೆಯಾಗಿ ಪರಿಣಮಿಸುತ್ತದೆ ಎಂದು ಮುರಳೀಧರನ್ ಎಚ್ಚರಿಸಿದರು.
ಕೊಡಗು ಜಿಲ್ಲಾ ಚೆಸ್ಕಾಂ ಅಧಿಕಾರಿ ಅನಿತಾಭಾಯಿ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿ, ಜಿಲ್ಲೆಯಲ್ಲಿ 13 ವಿದ್ಯುತ್ ಸಬ್ ಸ್ಚೇಷನ್ ಗಳ ಅಗತ್ಯವಿದ್ದು ಆದರೆ ಕೇವಲ 2 ಸಬ್ ಸ್ಟೇಷನ್ ಗಳು ಕಾಯ೯ನಿವ೯ಹಿಸುತ್ತಿದೆ, ಹೆಚ್ಚುವರಿ ಸಬ್ ಸ್ಟೇಷನ್ ಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಇದು ಮಂಜೂರಾಗಿ ಕಾಯ೯ಪ್ರವೖತ್ತವಾದಲ್ಲಿ ಕೊಡಗಿನೆಲ್ಲಡೆ ವಿದ್ಯುತ್ ಸಮಸ್ಯೆ ಪರಿಹಾರ ಸಾಧ್ಯವಿದೆ ಎಂದರು.
ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ  ಅಪ್ಪನೆರವಂಡ ನಂದಾ ಬೆಳ್ಯಪ್ಪ ಮಾತನಾಡಿ, ಚೆಸ್ಕಾಂ  ಮತ್ತು ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ನಡುವೆ ಸೌಹಾಧ೯ತೆ ಇದ್ದಾಗ ಅನೇಕ ಸಮಸ್ಯೆಗಳು ಪರಿಹಾರವಾಗುತ್ತದೆ. ಬೆಳೆಗಾರರನ್ನು ಗಣನೆಗೆ ತೆಗೆದುಕೊಂಡು ವಿಶ್ವಾಸಯುತವಾಗಿ ಕಾಯ೯ನಿವ೯ಹಿಸಿದಾಗ ಚೆಸ್ಕಾಂಗೆ ತೋಟದೊಳಗೆ ಕೂಡ ತಂತಿ ಮಾಗ೯ ಹಾಕಲು ಸುಲಭಸಾಧ್ಯವಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.  ಭವಿಷ್ಯದಲ್ಲಿ ಕೊಡಗಿನ ಕಾಫಿ ಬೆಳೆಗಾರರೂ ಸೇರಿದಂತೆ ಕೖಷಿಕರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆ ಸಂಬಂಧಿತ ಶಾಸಕರ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಪರಿಹಾರ ಕಂಡುಕೊಳ್ಳುವ ಉದ್ದೇಶವಿದೆ ಎಂದು ತಿಳಿಸಿದರು.
ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಗೌರವ ಸಲಹೆಗಾರ ಕೆ,ಕೆ,ವಿಶ್ವನಾಥ್, ವಂದಿಸಿದ ಕಾಯ೯ಕ್ರಮದಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ   ಅಜ್ಜೀರಂಡ ಎ.ಚಂಗಪ್ಪ, ಅಸೋಸಿಯೇಷನ್  ಕಾಯ೯ದಶಿ೯  ಚೊಟ್ಟೇರ ಕೆ.ಬೆಳ್ಯಪ್ಪ ಹಾಜರಿದ್ದರು. ಜಿಲ್ಲೆಯಾದ್ಯಂತಲಿನ ಬೆಳೆಗಾರ ಸದಸ್ಯರು ಸಂವಾದದಲ್ಲಿ ಪಾಲ್ಗೊಂಡು ಅನೇಕ ಮಾಹಿತಿಗಳನ್ನು ಗ್ರಾಹಕರ ಹಕ್ಕುಗಳ ಬಗ್ಗೆ ಪಡೆದರು.

ವಿದ್ಯುತ್ ನಿಯಂತ್ರಣ ಆಯೋಗದ ಪ್ರಯೋಜನ ಪಡೆಯಿರಿ :: 2003 ರಲ್ಲಿ ವಿದ್ಯುತ್  ಕಾಯಿದೆ ಜಾರಿಯಾದಲ್ಲಿಂದ ವಿದ್ಯುತ್ ರಂಗ ಸಾಕಷ್ಟು ಬದಲಾವಣೆ ಕಂಡಿದೆ. ಸಕಾ೯ರದ ಹಿಡಿತದಲ್ಲಿದ್ದ ವಿದ್ಯುತ್ ಉತ್ಪಾದನೆ, ಪ್ರಸರಣ, ಸರಬರಾಜು ಖಾಸಗಿ ವಲಯಕ್ಕೆ ಹೋಗಿದೆ, ವಿದ್ಯುತ್ ಕ್ಷೇತ್ರವನ್ನು ನಿಯಂತ್ರಿಸಲು ಪ್ರತ್ಯೇಕವಾದ ವಿದ್ಯುತ್ ನಿಯಂತ್ರಣ ಆಯೋಗ ರಚಿಸಲಾಗಿದೆ. ಬಳಕೆದಾರರ ಹಿತವನ್ನು ರಕ್ಷಿಸುವುದು ಈ ಯೋಗದ ಮುಖ್ಯ ಕತ೯ವ್ಯವಾಗಿದ್ದು ಆಯೋಗದ ಪ್ರಯೋಜನವನ್ನು ಗ್ರಾಹಕರು ಪಡೆದುಕೊಂಡು ವಿದ್ಯುತ್ ಸಂಬಂಧಿತ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದೂ ಮುರಳೀಧರ್ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ…

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*

ಮೇ 3, 2026

*ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*

ಮೇ 3, 2026

*ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*

ಮೇ 3, 2026

*ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*

ಮೇ 3, 2026

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 2026

*ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*

ಮೇ 3, 2026

*ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*

ಮೇ 3, 2026

*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*

ಮೇ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.