Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 
  • *ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
  • *ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*
  • *ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*
  • *ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*
  • *ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*
  • *ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
  • *ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*
  • *ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ : ಪತ್ರಿಕೆಗಳು ಸಕಾರಾತ್ಮಕ ವಿಮರ್ಶೆ ಮಾಡಿ ಸಮಾಜವನ್ನು ತಿದ್ದಲಿ : ಅಪ್ಪಚ್ಚುರಂಜನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಪತ್ರಿಕಾ ದಿನಾಚರಣೆ : ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ : ಪತ್ರಿಕೆಗಳು ಸಕಾರಾತ್ಮಕ ವಿಮರ್ಶೆ ಮಾಡಿ ಸಮಾಜವನ್ನು ತಿದ್ದಲಿ : ಅಪ್ಪಚ್ಚುರಂಜನ್*

ಆಗಷ್ಟ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.1 NEWS DESK : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಜಿಲ್ಲಾ ಘಟಕ, ಕುಶಾಲನಗರ ಪ್ರಸ್ ಕ್ಲಬ್ ಟ್ರಸ್ಟ್ ವತಿಯಿಂದ ಸಂಗಮ ಟಿ.ವಿ.ನ್ಯೂಸ್ ಚಾನಲ್ ಹಾಗೂ ವಂಶಿ ನ್ಯೂಸ್ ಬಳಗದ ಆಶ್ರಯದಲ್ಲಿ ಕುಶಾಲನಗರ ಪಟ್ಟಣದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ 15 ಮಂದಿಗೆ ‘ಕಾವೇರಿ ರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರ0ಜನ್ ಮಾತನಾಡಿ, ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾ ರಂಗವು ಇಂದು ಕ್ರಿಯಾಶೀಲವಾಗಿ ಹಾಗೂ ಪ್ರಭಾವಿ ಮಾಧ್ಯಮವಾಗಿ ಬೆಳೆದಿದ್ದು, ರಾಜಕಾರಣಿಗಳು ಮತ್ತು ಅಧಿಕಾರಿ ವರ್ಗ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ತಪ್ಪುಗಳಿದ್ದಲ್ಲಿ ಅದನ್ನು ತಿದ್ದುವ ಮೂಲಕ ಸಕಾರಾತ್ಮಕ ವಿಮರ್ಶೆಗಳನ್ನು ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಸಮಾಜದಲ್ಲಿ ಉತ್ತಮ ಸೇವಾ ಕಾರ್ಯ ಮಾಡಿದವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅವರ ಸೇವೆಗೆ ಮತ್ತಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ರಂಜನ್ ಹೇಳಿದರು.
ಮುಖ್ಯ ಭಾಷಣ ಮಾಡಿದ ನಿವೃತ್ತ ಚಿತ್ರಕಲಾ ಶಿಕ್ಷಕ ಹಾಗೂ ಚಿಂತಕ ಉ.ರಾ.ನಾಗೇಶ್, ಪತ್ರಿಕಾ ರಂಗವು ಇಂದು ಸಂವಿಧಾನದ ನಾಲ್ಕನೇ ಅಂಗವಾಗಿ ಬೃಹತ್ತಾಗಿ ಬೆಳೆದಿದ್ದು, ಇದು ಸಮಾಜದ ಸ್ವಾಸ್ಥ್ಯದ ಬೆಳವಣಿಗೆಗೆ ಶ್ರಮಿಸುತ್ತಿವೆ ಎಂದರು. ರಾಜ್ಯದಲ್ಲಿ ಮೊದಲ ಬಾರಿಗೆ ಮಂಗಳೂರಿನಿ0ದ ಹೊರ ಬಂದ ಮಂಗಳೂರು ಸಮಾಚಾರ ಕನ್ನಡ ಪತ್ರಿಕೆಯು ಬರವಣಿಗೆಯ ಮೂಲಕ ಬಂದ ಕುರಿತು ಅವರು ತಿಳಿಸಿದರು.
ವಕೀಲ ಆರ್.ಕೆ.ನಾಗೇಂದ್ರಬಾಬು ಮಾತನಾಡಿ, ಇಂದಿನ ಯುವ ಸಮಾಜವನ್ನು ಯಾವುದೇ ಮಾಧ್ಯಮಗಳಾಗಲೀ, ದೃಶ್ಯ ಮಾಧ್ಯಗಳಾಗಲೀ ಯಾವುದೇ ರೀತಿಯಲ್ಲಿ ಕ್ರೌರ್ಯದ ಕಡೆಗೆ ಕೊಂಡೊಯ್ಯದೇ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಿದೆ ಎಂದರು.
ಸಿಪಿಐ ರಾಜೇಶ್ ಕೋಟ್ಯಾನ್ ಮಾತನಾಡಿ, ಪ್ರತಿಯೊಬ್ಬರೂ ದಿನನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ದಿನನಿತ್ಯದ ವಿದ್ಯಮಾನಗಳನ್ನು ತಿಳಿದುಕೊಳ್ಳಬೇಕು ಎಂದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ಅವರ ಸೇವೆಗೆ ಮತ್ತಷ್ಟು ಬೆಂಬಲ ನೀಡಿದಂತಾಗುತ್ತದೆ ಎಂದರು.
ಮು0ಬೈನ ಉದ್ಯಮಿ ಬಿ.ಎಸ್.ಸದಾಶಿವಶೆಟ್ಟಿ ಮಾತನಾಡಿ, ಎಲ್ಲರೂ ಕನ್ನಡ ಪತ್ರಿಕೆಗಳನ್ನು ಓದುವ. ಮೂಲಕ ನಮ್ಮ ನಾಡಿನ ಕಲೆ, ಸಂಸ್ಕೃತಿಯನ್ನು ಬೆಳೆಸಬೇಕು. ನಾಡಿನ ಕನ್ನಡ ಶಾಲೆಗಳ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ಸಂಗಮ ಟಿ.ವಿ.ಸುದ್ದಿವಾಹಿನಿಯ ಸಂಪಾದಕ ಎಚ್.ಎಂ.ರಘು, ನಾವು ಸಮಾಜದಲ್ಲಿ ವಿವಿಧ ಸಾಮಾಜಿಕ ಕಾರ್ಯದಲ್ಲಿ ತೊಡಗಿ ಉತ್ತಮ ಸಾಧನೆ ಮಾಡಿದವರನ್ನು ಗುರುತಿಸಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಇಂತಹ ಕಾರ್ಯಕ್ರಮಗಳಿಗೆ ಎಲ್ಲರೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿದರು. ಕರವೇ ರಾಜ್ಯ ಸಂಚಾಲಕಿ ದೀಪಾ ಪೂಜಾರಿ, ದಸಂಸಯ ಪ್ರಮುಖರಾದ ಕೆ.ಬಿ.ರಾಜು, ಎಚ್.ಜೆ.ದಾಮೋದರ ಇತರರು ಇದ್ದರು. ಸೋಮವಾರಪೇಟೆ ಸಂತ ಜೋಸೆಫರ ಕಾಲೇಜಿನ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರ್ವಹಿಸಿದರು.
ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ : ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ರಂಗಭೂಮಿ ಕಲಾವಿದ ಕೂಡ್ಲೂರಿನ ಭರಮಣ್ಣ ಟಿ.ಬೆಟಗೇರಿ, ಕುಶಾಲನಗರ ಮೂಕಾಂಬಿಕಾ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್, ಕರಾವೇ ಉಪಾಧ್ಯಕ್ಷ ಬಿ.ಎ.ದಿನೇಶ್, ಸಿಪಿಐ ರಾಜೇಶ್ ಕೋಟ್ಯಾನ್, ಮುಂಬೈ ಉದ್ಯಮಿ ಬಿ.ಎಸ್.ಸದಾಶಿವ ಶೆಟ್ಟಿ, ಪತ್ರಕರ್ತ ಅಂಚೆಮನೆ ಸುಧಿಕುಮಾರ್, ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಜೆ.ರಜನೀಕಾ0ತ್, ಅಂತರಾಷ್ಟ್ರೀಯ ಟೇಕ್ವಾಂಡೋ ಆಟಗಾರ ಎ.ಪಿ.ರಿಮೋನ್ ಪೊನ್ನಣ್ಣ, ಕುಶಾಲನಗರ ಫಾತಿಮ ಕಾನ್ವೆಂಟ್ ನ ದೈಹಿಕ ಶಿಕ್ಷಣ ಶಿಕ್ಷಕ ಎಂ.ಸAತೋಷ್ ಕುಮಾರ್, ಸ್ಥಳೀಯ ಸುಗಮ ಸಂಗೀತ ಕಲಾವಿದ ರವಿ ಆರ್.ಶಾಸ್ತ್ರಿ, ಜಿಲ್ಲಾ ಹೋಟೆಲ್ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಆರ್.ನಾಗೇಂದ್ರ, ಕುಂದಚೇರಿಯ ಆಶಾ ಕಾರ್ಯಕರ್ತೆ ಎಚ್.ಎಸ್.ರೀನಾ, ನೆಲ್ಯಹುದಿಕೇರಿಯ ಆಟೋರಿಕ್ಷಾ ಚಾಲಕಿ ಎಸ್.ಸುಜಾತ, ಗಜೇಂದ್ರಗಢದ ಸಾಹಿತಿ ಹನುಮಂತ ಲೀ ಸೋಮನಕಟ್ಟಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ “ಕಾವೇರಿ ರತ್ನ ಪ್ರಶಸ್ತಿ” ನೀಡಿ ಗೌರವಿಸಿ ಸನ್ಮಾನಿಸಲಾಯಿತು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ…

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*

ಮೇ 3, 2026

*ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*

ಮೇ 3, 2026

*ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*

ಮೇ 3, 2026

*ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*

ಮೇ 3, 2026

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 2026

*ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*

ಮೇ 3, 2026

*ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*

ಮೇ 3, 2026

*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*

ಮೇ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.