Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಯನಾಡ್ ದುರಂತ : ಪಶ್ಚಿಮ ಘಟ್ಟಗಳ 57,000 ಚದರ ಕಿಲೋಮೀಟರ್ ಪರಿಸರ-ಸೂಕ್ಷ್ಮ ಎಂದು ಘೋಷಿಸಲು ಮತ್ತೆ  ಕರಡು ಆಧಿಸೂಚನೆ ಹೊರಡಿಸಿದ ಕೇಂದ್ರ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಭಾರತ

*ವಯನಾಡ್ ದುರಂತ : ಪಶ್ಚಿಮ ಘಟ್ಟಗಳ 57,000 ಚದರ ಕಿಲೋಮೀಟರ್ ಪರಿಸರ-ಸೂಕ್ಷ್ಮ ಎಂದು ಘೋಷಿಸಲು ಮತ್ತೆ  ಕರಡು ಆಧಿಸೂಚನೆ ಹೊರಡಿಸಿದ ಕೇಂದ್ರ*

ಆಗಷ್ಟ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನವದೆಹಲಿ NEWS DESK ಆ.4 : (ಕೋವರ್‌ ಕೊಲ್ಲಿ ಇಂದ್ರೇಶ್‌) ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತದ ನಂತರ  ಕೇಂದ್ರ ಸರ್ಕಾರ ಜುಲೈ 31 ರಂದು ವಿವರವಾದ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು , ಇದು ಸುಮಾರು ಶೇ.36 ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಲು ಪ್ರಸ್ತಾಪಿಸಿದೆ. ಈ ಪ್ರದೇಶವು ವಯನಾಡಿನ 13 ಹಳ್ಳಿಗಳನ್ನು ಮತ್ತು ಕೇರಳ ರಾಜ್ಯದಲ್ಲಿ ಸುಮಾರು 10,000 ಚದರ ಕಿ.ಮೀ. ಪ್ರದೇಶವನ್ನು ಸೂಕ್ಷ್ಮ ವ್ಯಾಪ್ತಿಗೆ ತರಲಾಗುತ್ತಿದೆ.  ಆ ಪ್ರಕಾರ ಪಶ್ಚಿಮ ಘಟ್ಟಗಳ ಸುಮಾರು 57,000 ಚದರ ಕಿಲೋಮೀಟರ್   ಪ್ರದೇಶವನ್ನು ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲು  ನಿರ್ಧರಿಸಿದೆ.  ಈ ಕುರಿತು ಕೇಂದ್ರಕ್ಕೆ ತಮ್ಮ ಅಭಿಪ್ರಾಯಗಳನ್ನು ನೀಡಲು ನಾಗರಿಕರಿಗೆ 60 ದಿನಗಳ ಕಾಲಾವಕಾಶ ನೀಡಲಾಗಿದೆ, ನಂತರ ಅಂತಿಮ ಅಧಿಸೂಚನೆಯನ್ನು ರಾಜ್ಯವಾರು ಅಥವಾ ಸಂಯೋಜಿತ ಆದೇಶವನ್ನು ಪ್ರಕಟಿಸಲಾಗುವುದು ಎಂದು ಕರಡು ಅಧಿಸೂಚನೆಯಲ್ಲಿ ಹೇಳಲಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ಮತ್ತು ಗುಜರಾತ್ – ಆರು ರಾಜ್ಯಗಳಲ್ಲಿ 56,826 ಚದರ ಕಿ.ಮೀ ಪ್ರದೇಶವನ್ನು ‘ಪರಿಸರ ಸೂಕ್ಷ್ಮ’ ಎಂದು ಘೋಷಿಸಲು ಉದ್ದೇಶಿಸಲಾಗಿದೆ,  ಈ ಅಧಿಸೂಚನೆ ಜಾರಿಗೆ ಬಂದರೆ ಈ ಪ್ರದೇಶಗಳಲ್ಲಿ  ವಾಣಿಜ್ಯ ಚಟುವಟಿಕೆಯ ಮೇಲೆ ಹಲವಾರು ನಿರ್ಬಂಧಗಳನ್ನು  ವಿಧಿಸಲಾಗುತ್ತದೆ. ಕೇಂದ್ರದಿಂದ ಕರಡು ಅಧಿಸೂಚನೆ ಹೊರಡಿಸಿರುವುದು ಇದು ಆರನೇ ಬಾರಿ ಆಗಿದ್ದು  ಕೊನೆಯ ಕರಡನ್ನು ಜುಲೈ 2022 ರಲ್ಲಿ  ಹೊರಡಿಸಲಾಗಿತ್ತು. ಮತ್ತು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿ ಅಧಿಸೂಚನೆಯನ್ನು ಅಂತಿಮಗೊಳಿಸಲು ಸಮಿತಿಯನ್ನು ಸಹ ರಚಿಸಲಾಯಿತು. ಅತಿರೇಕದ ವ್ಯಾಪಾರೀಕರಣ ಮತ್ತು ‘ಪರಿಸರ ಸೂಕ್ಷ್ಮ ಪ್ರದೇಶ’  ಎಂದು ಪಟ್ಟಿ ಮಾಡದಿರುವುದು  ವಯನಾಡ್ ದುರಂತದ ಹಿಂದಿನ ಪ್ರಮುಖ ಕಾರಣಗಳೆಂದು ಗುರುತಿಸಲಾಗಿದೆ,  ಈ ದುರಂತದಲ್ಲಿ ಸುಮಾರು 300 ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೇಂದ್ರದ ಕರಡು ಅಧಿಸೂಚನೆಯ ಪ್ರಕಾರ ವಯನಾಡಿನಲ್ಲಿ ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ಉದ್ದೇಶಿಸಿರುವ ಗ್ರಾಮಗಳೆಂದರೆ ಪೆರಿಯ, ತಿರುನೆಲ್ಲಿ, ತೊಂಡರ್‌ನಾಡ್, ತ್ರಿಸಿಲೇರಿ, ಕಿಡಂಗನಾಡ್, ನೂಲ್‌ಪುಳ, ಅಚೂರಾನಂ, ಚುಂಡೇಲ್, ಕೊಟ್ಟಪ್ಪಾಡಿ, ಕುನ್ನತ್ತಿದವಕ, ಪೊಝುತಾನ, ತಾರಿಯೋಡ್ ಮತ್ತು ವೆಳ್ಳರಿಮಲ ಆಗಿವೆ.  ಕರ್ನಾಟಕದ  ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ರಾಜ್ಯದ ಆರು ಅರಣ್ಯ ಪ್ರದೇಶಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳನ್ನು (ESZ) ಗುರುತಿಸಿ ಘೋಷಿಸುವ ಅರಣ್ಯ ಇಲಾಖೆಯ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.   ರಾಜ್ಯದ  ಗದಗ ಜಿಲ್ಲೆಯ  ಕಪ್ಪತಗುಡ್ಡ ವನ್ಯಜೀವಿ ಅಭಯಾರಣ್ಯ, ತುಮಕೂರಿನ ಬುಕ್ಕಾಪಟ್ಟಣದ ಚಿಂಕಾರ ವನ್ಯಜೀವಿ ಅಭಯಾರಣ್ಯ, ಕೋಲಾರದ ಕಾಮಸಂದ್ರ ವನ್ಯಜೀವಿ ಅಭಯಾರಣ್ಯ, ಅಣಶಿ ರಾಷ್ಟ್ರೀಯ ಉದ್ಯಾನವನ ಮತ್ತು ದಾಂಡೇಲಿ ವನ್ಯಜೀವಿ ಸಂರಕ್ಷಿತ ಪ್ರದೇಶ ಮತ್ತು  ನಾಗರಹೊಳೆ ಅಭಯಾರಣ್ಯ ಸೂಕ್ಷ್ಮ ವಲಯಕ್ಕೆ ಸೇರಿವೆ.  “ಇಎಸ್‌ಜೆಡ್  ಎಂದು ಘೋಷಣೆಯಾದರೆ ಅರಣ್ಯದಿಂದ  10 ಕಿಮೀ  ವರೆಗೆ   ವಾಣಿಜ್ಯ ಕಟ್ಟಡ ಮತ್ತು ಚಟುವಟಿಕೆಗಳಿಗೆ ಸರ್ಕಾರ ನಿರ್ಬಂಧ ವಿಧಿಸಲಿದೆ.  ಈ ಪ್ರದೇಶದಲ್ಲಿ ಗಣಿಗಾರಿಕೆ, ಕಲ್ಲುಗಣಿಗಾರಿಕೆ ಮತ್ತು ಮರಳು ಗಣಿಗಾರಿಕೆ ಮೇಲೆ ಸಂಪೂರ್ಣ ನಿಷೇಧ ವಿಧಿಸಲಾಗುತ್ತದೆ, ಅಸ್ತಿತ್ವದಲ್ಲಿರುವ ಗಣಿಗಳನ್ನು ಅಂತಿಮ ಅಧಿಸೂಚನೆ ದಿನಾಂಕದಿಂದ ಅಥವಾ ಗುತ್ತಿಗೆಯ ಮುಕ್ತಾಯದವರೆಗೆ ಹಂತಹಂತವಾಗಿ ಮುಚ್ಚಲಾಗುವುದು. ಹೊಸ ಉಷ್ಣ ವಿದ್ಯುತ್ ಯೋಜನೆಗಳನ್ನು ನಿಷೇಧಿಸುತ್ತದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಕಾರ್ಯನಿರ್ವಹಿಸುವುದನ್ನು ಮುಂದುವರಿಸಬಹುದು. ಆದರೆ, ಯಾವುದೇ ವಿಸ್ತರಣೆಗೆ ಅವಕಾಶವಿಲ್ಲ ಎಂದು ಹೇಳುತ್ತದೆ. ಅಸ್ತಿತ್ವದಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ನವೀಕರಣ ಹೊರತುಪಡಿಸಿ, ದೊಡ್ಡ ಪ್ರಮಾಣದ ನಿರ್ಮಾಣ ಯೋಜನೆಗಳು ಮತ್ತು ಟೌನ್‌ಶಿಪ್‌ಗಳನ್ನು ಸಹ ನಿಷೇಧಿಸಲು ಪ್ರಸ್ತಾಪಿಸಲಾಗಿದೆ. 20,000 ಚದರ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನ ನಿರ್ಮಾಣ ಪ್ರದೇಶಗಳು, ಹೊಸ ಮತ್ತು ವಿಸ್ತರಣೆ ಟೌನ್‌ಶಿಪ್‌ಗಳು ಮತ್ತು 50 ಹೆಕ್ಟೇರ್ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತೀರ್ಣ ಅಥವಾ 1,50,000 ಚದರ ಮೀಟರ್‌ ನಿರ್ಮಾಣ ಪ್ರದೇಶವಿರುವ ಅಭಿವೃದ್ಧಿ ಯೋಜನೆಗಳನ್ನು ನಿಷೇಧಿಸುವ ಪ್ರಸ್ತಾಪವಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಮಾ.7 : ವಿರಾಜಪೇಟೆ ಮೂಲದ ಪ್ರಸ್ತುತ ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನೆಲೆಸಿರುವ ಕೆ.ಎಲ್.ಸೂರಜ್ (29) ಅವರು…

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.