Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*
  • *ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
  • *ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
  • *”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡ್ಲಿಪೇಟೆಯಲ್ಲಿ ಶರಣ ಸಂಸ್ಕೃತಿ ಪ್ರಸಾರ ಗೋಷ್ಠಿ : ಸಾಮಾಜಿಕ ಹಾಗೂ ಸಾಂಸ್ಕೃತಿಕ ತಲ್ಲಣಗಳಿಗೆ ವಚನ ಸಾಹಿತ್ಯ ದಿವ್ಯ ಔಷಧಿ : ಡಾ.ಜಮೀರ್ ಅಹಮದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡ್ಲಿಪೇಟೆಯಲ್ಲಿ ಶರಣ ಸಂಸ್ಕೃತಿ ಪ್ರಸಾರ ಗೋಷ್ಠಿ : ಸಾಮಾಜಿಕ ಹಾಗೂ ಸಾಂಸ್ಕೃತಿಕ ತಲ್ಲಣಗಳಿಗೆ ವಚನ ಸಾಹಿತ್ಯ ದಿವ್ಯ ಔಷಧಿ : ಡಾ.ಜಮೀರ್ ಅಹಮದ್*

ಆಗಷ್ಟ್ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೊಡ್ಲಿಪೇಟೆ ಆ.8 NEWS DESK : ಸಮಾಜದಲ್ಲಿ ಇಂದು ನಡೆಯುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ತಲ್ಲಣಗಳಿಗೆ ವಚನ ಸಾಹಿತ್ಯ ದಿವ್ಯ ಔಷಧಿಯಾಗಿದೆ. ನಾಡಿನ ಸಂಸ್ಕೃತಿಗಳ ಅಧಃಪತನಕ್ಕೆ ಅನಕ್ಷರಸ್ಥರಿಗಿಂತ ಅಕ್ಷರಸ್ಥರ ಬೇಜವಬ್ದಾರಿಯ ವರ್ತನೆಗಳೇ ಕಾರಣ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹಮದ್ ವಿಷಾದಿಸಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಕೊಡ್ಲಿಪೇಟೆಯಲ್ಲಿನ ಡಾ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಗುರು ಪಂಚಾಕ್ಷರ ಶಿವಾಚಾರ್ಯರ ದತ್ತಿ “ಶರಣ ಸಂಸ್ಕೃತಿ ಪ್ರಸಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದಲ್ಲಿಂದು ಘಟಿಸುತ್ತಿರುವ ಬಹುತೇಕ ಸಮಸ್ಯೆಗಳಿಗೆ ಹನ್ನೆರಡನೇ ಶತಮಾನದ ವಚನಕಾರರು ನೀಡಿದ ಸಾಮಾಜಿಕ ಸಂದೇಶಗಳು ಪರಿಹಾರವಾಗಿವೆ. ಬಸವೇಶ್ವರರಾದಿಯಾಗಿ ವಚನಕಾರರು ನಡೆ ನುಡಿಗಳೆರಡನ್ನು ಒಂದಾಗಿಸಿ ಕಾಯಕವೇ ಕೈಲಾಸ, ಎನಗಿಂತ ಕಿರಿಯರಿಲ್ಲ. ಶಿವ ಶರಶರಣರಿಗಿಂತ ಹಿರಿಯರಿಲ್ಲ ಲೋಕದ ಡೊಂಕನ್ನು ನೀವೇಕೆ ತಿದ್ದುವಿರಿ.. ನಿಮ್ಮನ್ನು ನೀವು ತಿದ್ದಿಕೊಂಡು ನೋಡಿ. ಸಮಾಜವೇ ಬದಲಾಗಿರುತ್ತದೆ ಎಂದು ಸಾರಿದರು. ಕಲಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ ಎಂಬ ಮತ್ತೊಂದು ವಚನವೊಂದರ ಸಾರ ಸಾಕು. ಮನುಷ್ಯ ಎಲ್ಲರೊಳಗೆ ಒಂದಾಗಿ ಶಾಂತಿ, ಸಮಧಾನ, ಸಹಬಾಳ್ವೆಯ ಬದುಕು ಕಟ್ಟಲು. ಆದರೆ ಆಗುತ್ತಿರುವುದೇನು ಅಂತರಂಗವನ್ನು ಕೊಳಕು ಮಾಡಿಕೊಂಡು ಬಹಿರಂಗದ ನಾಟಕ ವಾಡುತ್ತಿದ್ದೇವೆ ಎಂದು ಜಮೀರ್ ಅಹಮದ್ ನುಡಿದರು. ಇಂದಿನ ಸಾಮಾಜಿಕ ಹಾಗೂ ಸಾಂಸ್ಕೃತಿಕ ತಲ್ಲಣಗಳಿಗೆ ವಚನ ಸಾಹಿತ್ಯದ ಅರಿವು ಮೂಲ ಮಂತ್ರವಾಗಿದೆ ಎಂದು ಜಮೀರ್ ಅಹಮದ್ ಬಣ್ಣಿಸಿದರು. ಸಾನಿಧ್ಯ ವಹಿಸಿದ್ದ ಕೊಡ್ಲಿಪೇಟೆಯ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ ಆಶೀರ್ವಚನ ನೀಡಿ, ಸಮಸಮಾಜ ನಿರ್ಮಾಣಕ್ಕೆ ಹನ್ನೆರಡನೇ ಶತಮಾನದಲ್ಲಿನ ಶರಣರ ಪರಂಪರೆ ನಾಡಿಗೆ ನೀಡಿರುವ ಕೊಡುಗೆ ಅಪಾರವಾದುದು ಎಂದರು. ಬಸವೇಶ್ವರರು 900 ವರ್ಷಗಳ ಹಿಂದೆಯೇ ಅನುಭವ ಮಂಟಪವನ್ನು ತೆರೆಯುವ ಮೂಲಕ ಎಲ್ಲಾ ಜಾತಿ ಹಾಗೂ ಧರ್ಮಗಳ ಶರಣರನ್ನು ಇವನಾರವ ಎನ್ನದೇ ಇವ ನಮ್ಮವನೆಂದು ಪುರಸ್ಕರಿಸಿ ಸಮಾನತೆ ತಂದರು. ಮಾನವ ಹಕ್ಕುಗಳ ಆಯೋಗವನ್ನು ಸರ್ಕಾರಗಳು ಇತ್ತೀಚೆಗೆ ರಚಿಸಿವೆ. ಆದರೆ ಬಸವಣ್ಣ ಅವನ ಕಾಲಾವಧಿಯಲ್ಲಿಯೇ ಸಮಾಜದಲ್ಲಿನ ನೊಂದು, ಬೆಂದ ಕಡು ಬಡ ಜನರಿಗೆ ಸಮನಾದ ನ್ಯಾಯ ನೀಡುತ್ತಿದ್ದರು ಎಂದು ಶ್ರೀಗಳು ಹೇಳಿದರು. ಇಂದು ವಿದ್ಯಾರ್ಥಿ ಹಂತದಲ್ಲಿಯೇ ಮಕ್ಕಳಿಗೆ ಸಂಸ್ಕಾರ ಹಾಗೂ ಶರಣರ ವಿಚಾರಧಾರೆಗಳ ಅರಿವು ಮೂಡಿಸಿದಲ್ಲಿ ಭವಿಷ್ಯದಲ್ಲಿ ಉತ್ತಮ ಸಮಾಜವನ್ನು ಕಾಣಲು ಸಾಧ್ಯ ಎಂದರು. ಶರಣ ಸಂಸ್ಕೃತಿ ಪ್ರಸಾರ ಕಾರ್ಯಕ್ರಮದಿಂದ ಪ್ರಭಾವಿತರಾದ ಸಂಸ್ಥೆಯ ಪ್ರಾಂಶುಪಾಲ ಮಹೇಶ್ ಮಾತನಾಡಿ, ಇನ್ನು ಮುಂದೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ನಿತ್ಯವೂ ವಚನಗಳ ಅರಿವು ಮೂಡಿಸಿ ಕಲಿಸಲಾಗುವುದು ಎಂದರು. ಕೊಡ್ಲಿಪೇಟೆಯ ಶ್ರೀ ಶಿವಕುಮಾರ ಸ್ವಾಮೀಜಿ ವಿದ್ಯಾಸಂಸ್ಥೆಯ ನಿರ್ದೇಶಕ ಹೆಚ್.ಎಂ.ದಿವಾಕರ್ ಮಾತನಾಡಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಉಪನ್ಯಾಸಕರಾದ ಡಿ.ಪಿ.ಸತೀಶ್ ಇದ್ದರು. ಸಂಸ್ಥೆಯ ಅನುಷಾ ಹಾಗೂ ಅಮೀನಾ ತಂಡದಿಂದ ವಚನಗಾಯನ ನಡೆಯಿತು. ವಿದ್ಯಾರ್ಥಿನಿ ಅಲೀಮಾ ಸ್ವಾಗತಿಸಿದರು. ಯಶಸ್ವಿನಿ ವಂದಿಸಿದರು. ಸತೀಶ್ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.30 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ…

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.