Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*
  • *ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
  • *ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
  • *”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಾಕೃತಿಕ ವಿಕೋಪಕ್ಕಿಂತ ಇದು ಅಪಾಯಕಾರಿ : 4 ವರ್ಷಗಳಲ್ಲಿ ಕೊಡಗಿನಲ್ಲಿ 144 ಸಾವು : ಸ್ವಯಂಕೃತ ತಪ್ಪುಗಳಿಂದಾಗುವ ಸಾವಿನ ಸಂಖ್ಯೆ ಹೆಚ್ಚಳ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಾಕೃತಿಕ ವಿಕೋಪಕ್ಕಿಂತ ಇದು ಅಪಾಯಕಾರಿ : 4 ವರ್ಷಗಳಲ್ಲಿ ಕೊಡಗಿನಲ್ಲಿ 144 ಸಾವು : ಸ್ವಯಂಕೃತ ತಪ್ಪುಗಳಿಂದಾಗುವ ಸಾವಿನ ಸಂಖ್ಯೆ ಹೆಚ್ಚಳ*

ಆಗಷ್ಟ್ 8, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.8 NEWS DESK : ಪ್ರಾಕೃತಿಕ ವಿಕೋಪದಿಂದ ಸಂಭವಿಸುವ ಸಾವಿಗಿಂತ, ಸ್ವಯಂಕೃತ ತಪ್ಪುಗಳಿಂದ ಉಂಟಾಗುವ ಸಾವಿನ ಸಂಖ್ಯೆ ಹೆಚ್ಚಿದೆ. ಕಳೆದ 4 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳಿಗೆ ತುತ್ತಾಗಿ ಸುಮಾರು 144 ಮಂದಿ ಮೃತಪಟ್ಟಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಕಾರದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ತಂತ್ರಜ್ಞಾನ ಯುಗದಲ್ಲಿ ಪ್ರಾಕೃತಿಕ ವಿಕೋಪದ ಬಗ್ಗೆ ಮುನ್ನೆಚ್ಚರ ವಹಿಸಿದರೂ ಸಹ ಅಲ್ಲಲ್ಲಿ ವಿಕೋಪಗಳು ಸಂಭವಿಸಿ ಸಾವು ನೋವುಗಳು ಉಂಟಾಗುತ್ತದೆ. ಆದರೆ ಸ್ವಯಂಕೃತದಿಂದ ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಸಾವು ನೋವುಗಳು ಸಂಭವಿಸುತ್ತಿರುವುದು ದುರಂತ ಎಂದು ಸುಂದರ್ ರಾಜ್ ಹೇಳಿದರು.
::: 144 ಸಾವು :::
ಕಳೆದ ನಾಲ್ಕು ವರ್ಷದಲ್ಲಿ ಕೊಡಗು ಜಿಲ್ಲೆಯಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳಿಗೆ ತುತ್ತಾಗಿ ಸುಮಾರು 144 ಮಂದಿ ಮೃತಪಟ್ಟಿದ್ದಾರೆ. 2021 ರಲ್ಲಿ 15 ಮಂದಿ, 2022 ರಲ್ಲಿ 50, 2023 ರಲ್ಲಿ 47, 2024 ರ ಜುಲೈ ಅಂತ್ಯದವರೆಗೆ 34 ಮಂದಿ ಮೃತಪಟ್ಟಿರುವುದು ವರದಿಯಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅವರು ತಿಳಿಸಿದರು. ಕಾಣೆಯಾದ ಹೆಣ್ಣು ಮಕ್ಕಳ ಪ್ರಕರಣ ಸೇರಿದಂತೆ, ಅಪ್ರಾಪ್ತೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ವರದಿಯಾಗಿದ್ದು, ಕಳೆದ ನಾಲ್ಕು ವರ್ಷದಲ್ಲಿ 125 ಪ್ರಕರಣ ದಾಖಲಾಗಿದೆ. ಇದರಲ್ಲಿ 61 ಪ್ರಕರಣಗಳು ಪೋಕ್ಸೋ ಪ್ರಕರಣಗಳಾಗಿ ಪರಿವರ್ತನೆಗೊಂಡಿದೆ. 2021 ರಲ್ಲಿ 29 ಇದರಲ್ಲಿ 13 ಪೋಕ್ಸೋ, 2022 ರಲ್ಲಿ 36 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 17 ಪೋಕ್ಸೋ, 2023 ರಲ್ಲಿ 33 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 12 ಪೋಕ್ಸೋ, 2024 ರ ಜುಲೈ ಅಂತ್ಯದವರೆಗೆ 27 ಪ್ರಕರಣಗಳಲ್ಲಿ 19 ಪೋಕ್ಸೋ ಪ್ರಕರಣಗಳು ವರದಿಯಾಗಿದೆ ಎಂದು ಮಾಹಿತಿ ನೀಡಿದರು. ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ಪ್ರಕರಣಗಳನ್ನು ಪೊಲೀಸರು ಪತ್ತೆಹಚ್ಚಿದ ಪರಿಣಾಮ ಮೂವರಿಗೆ 10 ವರ್ಷಗಳ ಕಾಲ ಕಠಿಣ ಶಿಕ್ಷೆ ಆಗಿದೆ. ಜೊತೆಗೆ ತಲಾ 1 ಲಕ್ಷ ರೂ ವರೆಗೆ ದಂಡ ವಿಧಿಸಲಾಗಿದೆ. ಹಾಗೆಯೇ ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಆದ್ದರಿಂದ ದುಶ್ಚಟಗಳಿಂದ ದೂರವಿರಬೇಕು ಎಂದು ಸಲಹೆ ಮಾಡಿದರು. ‘ಅಫೀಮು, ಹೆರಾಯಿನ್, ಕೋಕೇನ್, ಚರಸ್ ಮತ್ತಿತರ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗಬಾರದು. ಪ್ರತಿಯೊಬ್ಬರೂ ಸತ್ಪ್ರಜೆಯಾಗಿ ಬದುಕಬೇಕು. ಪೋಷಕರು ಸೇರಿದಂತೆ ಎಲ್ಲರೂ ಯುವಜನರಿಗೆ ಮಾಹಿತಿ, ಮಾರ್ಗದರ್ಶನ ನೀಡಬೇಕು ಎಂದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋವೈದ್ಯರಾದ ಡಾ.ಡೆವಿನ್ ಕರ್ಕಡ ಅವರು ಮಾತನಾಡಿ ಮದ್ಯ ಹಾಗೂ ಮಾದಕ ವಸ್ತುಗಳ ಅವಲಂಬನೆಗೆ ಒಳಗಾಗುವುದು ವ್ಯಸನವಾಗಿದೆ. ಇದು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಅಂಶಗಳ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಹೇಳಿದರು.
ವ್ಯಸನವು ಕುತೂಹಲ, ಸ್ನೇಹಿತರ ಒತ್ತಾಯ ಹೀಗೆ ವಿವಿಧ ಕಾರಣಗಳಿಂದ ಮಾದಕ ವಸ್ತುಗಳ ಸೇವನೆಗೆ ದಾಸರಾಗುತ್ತಾರೆ. ಧೂಮಪಾನ, ಗಾಂಜಾ ಮುಂತಾದವನ್ನು ಸೇದುವುದು, ಇಂಜೆಕ್ಷನ್ ಚುಚ್ಚಿಕೊಳ್ಳುವುದು, ಮತ್ತಿತರ ಅನೇಕ ವಿಧದಲ್ಲಿ ಮಾದಕ ದ್ರವ್ಯಗಳನ್ನು ಬಳಸಲಾಗುತ್ತದೆ, ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ವ್ಯಸನದಿಂದ ದೂರವಾಗಲು ಹಲವು ಮಾರ್ಗೋಪಾಯಗಳು ಇದ್ದು, ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಖ್ಯೆ 14416 ಇದಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು. ‘ಇತ್ತೀಚಿನ ದಿನಗಳಲ್ಲಿ ಅನೇಕರಲ್ಲಿ ಪುಸ್ತಕ ಓದುವುದಕ್ಕಿಂತ, ಮೊಬೈಲ್ ನೋಡುವುದು ಚಟವಾಗಿದೆ. ಇದು ಆರೋಗ್ಯಯುತ ಬೆಳವಣಿಗೆಯಲ್ಲ ಎಂದು ಡಾ.ಡೆವಿನ್ ಕರ್ಕಡ ಹೇಳಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಾನಸಿಕ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸತೀಶ್ ಕುಮಾರ್ ಎಸ್.ವಿ. ಅವರು ಮಾತನಾಡಿ ಮಾದಕ ವಸ್ತುಗಳ ಚಟಕ್ಕೆ ತುತ್ತಾದಲ್ಲಿ ಕುಟುಂಬ ಸಂಕಷ್ಟ ಎದುರಿಸಲಿದೆ. ಇದರಿಂದಾಗಿ ಸಮಾಜದ ಅಭಿವೃದ್ಧಿ ಕುಂಟಿತವಾಗಲಿದೆ ಎಂದರು. ಕ್ಲಿನಿಕಲ್ ಸೈಕಾಲಜಿಸ್ಟ್ ಸಿ.ರಮೇಶ್ ಅವರು ಮಾತನಾಡಿ ಪ್ರತಿಯೊಬ್ಬರಿಗೂ ಕೃಷಿಕರು ಮತ್ತು ಸೈನಿಕರು ಮಾದರಿಯಾಗಬೇಕು, ಯಾವುದೇ ಸಿನಿಮಾ ನಟ, ನಟಿಯರು ಮಾದರಿ ಅಲ್ಲ ಎಂದು ಪ್ರತಿಪಾದಿಸಿದರು. ಈ ಹಿಂದೆ ಮಕ್ಕಳಿಗೆ ಪ್ರಾಣಿ, ಪಕ್ಷಿ, ಚಂದ್ರನನ್ನು ತೋರಿಸಿ ಆಹಾರ ತಿನ್ನಿಸುತ್ತಿದ್ದರು, ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್ ತೋರಿಸಿಕೊಂಡು ಊಟ ಮಾಡಿಸುತ್ತಾರೆ ಇದು ಒಳ್ಳೆಯ ಬೆಳವಣಿಗೆಯೇ ಎಂದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಅವರು ಮಾತನಾಡಿ ಜೀವ ಇದ್ದಲ್ಲಿ ಮಾತ್ರ ಜೀವನ ಎಂಬುದನ್ನು ಅರಿತುಕೊಳ್ಳಬೇಕು. ಒಳ್ಳೆಯ ಅಭ್ಯಾಸ ರೂಢಿಸಿಕೊಳ್ಳಬೇಕು. ಕೆಲವರು ತಾವು ಕೆಡುವುದರ ಜೊತೆಗೆ ಇತರರನ್ನು ಕೆಡಿಸಲು ಮುಂದಾಗುತ್ತಾರೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಯಾವುದೇ ಕಾರಣಕ್ಕೂ ಹಾದಿ ತಪ್ಪಬಾರದು ಎಂದು ಕಿವಿ ಮಾತು ಹೇಳಿದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಮಾತನಾಡಿ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಅವಿರತವಾಗಿ ಶ್ರಮಿಸಿದ್ದಾರೆ. ಇವರ ಜನ್ಮ ದಿನವನ್ನು ಆಗಸ್ಟ್ ತಿಂಗಳಲ್ಲಿ ‘ವ್ಯಸನಮುಕ್ತ ದಿನಾಚರಣೆ’ಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ ಎಂದರು. ಉಪನ್ಯಾಸಕರಾದ ಗೌರಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಪೂರ್ಣಿಮಾ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿನೀಯರು ಪ್ರಾರ್ಥಿಸಿದರು. ಉಪನ್ಯಾಸಕರಾದ ಚಿದಾನಂದ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.30 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ…

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.