Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*
  • *ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
  • *ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*
  • *”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆ : ಧರಣಿ ಸತ್ಯಾಗೃಹ ನಡೆಸಿದ ಸಿಎನ್‌ಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆ : ಧರಣಿ ಸತ್ಯಾಗೃಹ ನಡೆಸಿದ ಸಿಎನ್‌ಸಿ*

ಆಗಷ್ಟ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.9 : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಆದಿಮ ಸಂಜಾತ ಜನಾಂಗಗಳ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಅಂತರಾಷ್ಟ್ರೀಯ ಕಾನೂನಿನ್ವಯ ಕೊಡವರ ಸಂವಿಧಾನಿಕ ಹಕ್ಕುಗಳನ್ನು ಮಂಡಿಸಿತು. ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿರುವ ಆದಿಮಸಂಜಾತ ಕೊಡವ ಬುಡಕಟ್ಟು ಜನರ ಹಕ್ಕೋತ್ತಯದ ಬಗ್ಗೆ ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯವ ಸಲುವಾಗಿ ಸತ್ಯಾಗೃಹ ನಡೆಸಿರುವುದಾಗಿ ಧರಣಿಯ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದರು. ವಿಶ್ವ ರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಘೋಷಣೆಯ ಅನ್ವಯ ಆದಿಮ ಸಂಜಾತರ ಹಕ್ಕುಗಳ ರಕ್ಷಣೆಗೆ ರೂಪಿಸಿದ ವಿಧಿಗಳಾದ 3, 5, 26, 31 ಮತ್ತು 32ರ ಪ್ರಕಾರ ಕೊಡವ ಆದಿಮ ಸಂಜಾತರ ಹಕ್ಕುಗಳನ್ನು ಮಂಡನೆ ಮಾಡಿದರು. ಕೊಡವರು ಈ ಪವಿತ್ರ ಕೊಡವ ನೆಲದ ಮೂಲನಿವಾಸಿ ಆದಿಮಸಂಜಾತ ಬುಡಕಟ್ಟು ಸಮುದಾಯದವರಾಗಿದ್ದಾರೆ. ಕೊಡವರಿಗಿರುವ ಏಕೈಕ ನೆಲೆ ಕೊಡವ ಲ್ಯಾಂಡ್ ಕೊಡವರ ಸಾಂಪ್ರದಾಯಿಕ ಹಾಗೂ ಅವಿಭಾಜ್ಯ ಮಾತೃಭೂಮಿಯಾಗಿದೆ. ಕೊಡವರ ಜನ್ಮಭೂಮಿ ಈ ಭೂಮಂಡಲದಷ್ಟೇ ಪ್ರಾಚೀನವಾಗಿದೆ. ಕೊಡವ ಬುಡಕಟ್ಟು ಜನಾಂಗವು ಮಾನವ ಜನಾಂಗದಷ್ಟೇ ಹಳೆಯದಾಗಿದೆ. ಈ ಕೊಡವ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಯನ್ನು ಶಾಸನಬದ್ಧವಾಗಿ ಅನುಮೋದಿಸಬೇಕು. ಕೊಡವರ ಆವಾಸಸ್ಥಾನ, ಕೊಡವಲ್ಯಾಂಡ್, ಪಾರಂಪರಿಕ ಪ್ರಾಚೀನ ಭೂಮಿಗಳು, ರಾಜಕೀಯ-ಸಾಂಸ್ಕೃತಿಕ ಹಕ್ಕುಗಳು, ಜಾನಪದ ಗುರುತು, ದೈವಿಕ ವನಗಳು (ದೇವಕಾಡ್), ಮಂದ್ ಗಳಂತಹ ಗರ್ಭಗುಡಿಗಳು, ವನದೇವಿ, ವನ್ಯಮೃಗ, ಪಕ್ಷಿ ಮತ್ತು ಸಸ್ಯ ಸಂಕುಲಗಳು, ನೈಸರ್ಗಿಕ ನೀರು/ಜಲದೇವಿ, ಪರ್ವತ ದೇವಿ ದೀರ್ಘಕಾಲಿಕ ನದಿಗಳು, ದೇವಟ್ ಪರಂಬು ಕೊಡವ ನರಮೇಧದ ಸ್ಮಾರಕ, ದುರಂತ ಸ್ಥಳ ಮತ್ತು ಕೊಡವರ ಪವಿತ್ರ ತೀರ್ಥಯಾತ್ರ ಕ್ಷೇತ್ರ ತಲಕಾವೇರಿಯನ್ನು ಅಂತರರಾಷ್ಟ್ರೀಯ ಕಾನೂನಿನ ಪ್ರಕಾರ ವಿಶ್ವ ರಾಷ್ಟç ಸಂಸ್ಥೆ ಆದಿಮಸಂಜಾತರ ಹಕ್ಕುಗಳಡಿಯಲ್ಲಿ ಸಾಂವಿಧಾನಿಕವಾಗಿ ರಕ್ಷಿಸಬೇಕು, ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಒಳಗೊಂಡAತೆ ಕೊಡವಲ್ಯಾಂಡ್‌ನ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವ-ಆಡಳಿತವನ್ನು ವಿಶ್ವ ರಾಷ್ಟç ಸಂಸ್ಥೆಯ ಆದಿಮ ಸಂಜಾತ ಜನಾಂಗದ ಹಕ್ಕುಗಳ ಕುರಿತು ಹೊರಡಿಸಲಾದ ವಿಧಿ 3 (ಸ್ವಯಂ ನಿರ್ಣಯ ಹಕ್ಕು) 5 (ವಿಶಿಷ್ಟ ರಾಜಕೀಯ, ಕಾನೂನು, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಂರಕ್ಷಣೆ), 26 (ಭೂಮಿ, ಆವಾಸ್ಥಸ್ಥಾನದ ಸರಹದ್ದಿನ ಹಕ್ಕುಗಳ ರಕ್ಷಣೆ), 31 (ಬೌಧಿಕ ಆಸ್ತಿಯ ಹಕ್ಕು, ಪಾರಂಪರಿಕ ಹಕ್ಕು, ಸಾಂಪ್ರದಾಯಿಕ ಜ್ಞಾನದ ಅಭಿವ್ಯಕ್ತಿ ಇದೆಲ್ಲದರ ನಿಯಂತ್ರಣ ಮತ್ತು ಅಭಿವೃದ್ಧಿಯ ಹಕ್ಕು) ಮತ್ತು 32 (ಜಲಸಂಪನ್ಮೂಲ, ಪ್ರಕೃತಿ ಸಂಪನ್ಮೂಲಗಳ ಬಳಕೆಯ ಹಕ್ಕು) ಮೇಲ್ಕಣಿಸಿದ ಎಲ್ಲಾ ವಿಧಿ ವಿಧಾನಗಳು ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಆದಿಮ ಸಂಜಾತ ಕೊಡವ ಬುಡಕಟ್ಟು ಸಮುದಾಯಕ್ಕೆ ಸಂಪೂರ್ಣವಾಗಿ ಮತ್ತು ಪರಿಪೂರ್ಣವಾಗಿ ಅನ್ವಯವಾಗಲಿದ್ದು, ಒಡನೆ ಈ ಕುರಿತು ಸಂವಿಧಾನಾತ್ಮಕ ಕಸರತ್ತಿಗೆ ಒತ್ತು ನೀಡಬೇಕೆಂದು ಒತ್ತಾಯಿಸಿದರು. ಹಕ್ಕೋತ್ತಾಯಗಳ ಜ್ಞಾಪನಾ ಪತ್ರವನ್ನು ಜಿಲ್ಲಾಡಳಿತದ ಮೂಲಕ ವಿಶ್ವ ರಾಷ್ಟ್ರ ಸಂಸ್ಥೇಯ ಪ್ರಧಾನ ಕಾರ್ಯದರ್ಶಿ, ಯುನೆಸ್ಕೋ ಮಹಾನಿರ್ದೇಶಕರು, ಯುಎನ್‌ಎಚ್‌ಆರ್‌ಸಿಯ ಹೈಕಮಿಷನರ್, ಅಂತರರಾಷ್ಟ್ರೀಯ ನ್ಯಾಯಾಲಯದ ಅಧ್ಯಕ್ಷರು, ಜಿನಿವಾದಲ್ಲಿರುವ ವಿಶ್ವ ರಾಷ್ಟ್ರ ಸಂಸ್ಥೆಯ ಆದಿಮ ಸಂಜಾತರ ಹಕ್ಕುಗಳ ಶಾಶ್ವತ ವೇದಿಕೆಯಾದ ಯುನೈಟೈಡ್ ನೆಷನ್ಸ್ ಪರಮನೆಂಟ್ ಫೋರಂ ಆನ್ ಇಂಡಿಜಿನಸ್ ಇಶ್ಯೂಸ್,  ಸ್ಪೆಷಲ್ ರ‍್ಯಾಪೋರ್ಟಿಯರ್ ಆನ್ ದಿ ರೈಟ್ಸ್ ಆಫ್ ಇಂಡಿಜಿನಸ್ ಪಿಪಲ್ಸ್, ಭಾರತದ ರಾಷ್ಟ್ರಪತಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ, ಹಾರ್ವರ್ಡ್ ವಿದ್ವಾಂಸ ಡಾ.ಸುಬ್ರಮಣಿಯನ್ ಸ್ವಾಮಿ ಅವರುಗಳಿಗೆ ಸಲ್ಲಿಸಿದ ಎನ್.ಯು.ನಾಚಪ್ಪ ಕೊಡವ, ಬೇಡಿಕೆ ಈಡೇರುವಲ್ಲಿಯವರೆಗೆ ನಿರಂತರ ಹೋರಾಟ ಶಾಂತಿಯುತವಾಗಿ ನಡೆಯಲಿದೆ ಎಂದರು. ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯದ ಪ್ರಾಚೀನ ಸಾಂಪ್ರದಾಯಿಕ ಪರಿಕರಗಳ ಪ್ರದರ್ಶನದ ಮೂಲಕ ಸಿಎನ್‌ಸಿ ಪ್ರಮುಖರು ಧರಣಿ ನಡೆಸಿದರು. ಜ್ಞಾಪನ ಪತ್ರವನ್ನು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸ್ವೀಕರಿಸಿದರು. ಕಲಿಯಂಡ ಮೀನಾ ಪ್ರಕಾಶ್, ಚೋಳಪಂಡ ಜ್ಯೋತಿ ನಾಣಯ್ಯ, ಮುದ್ದಿಯಡ ಲೀಲಾವತಿ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ, ಪಟ್ಟಮಾಡ ಕುಶಾ, ಬೇಪಡಿಯಂಡ ದಿನು, ಅಜ್ಜಿಕುಟ್ಟೀರ ಲೋಕೇಶ್, ಕಿರಿಯಮಾಡ ಶೆರಿನ್, ಅರೆಯಡ ಗಿರೀಶ್, ಮಂದಪಂಡ ಮನೋಜ್, ನಂದೇಟಿರ ರವಿ, ಕೂಪದಿರ ಸಾಬು, ಮಣವಟ್ಟಿರ ಚಿಣ್ಣಪ್ಪ, ನಂದಿನೆರವಂಡ ಅಪ್ಪಯ್ಯ, ಪುಟ್ಟಿಚಂಡ ದೇವಯ್ಯ, ನಂದಿನೆರವಂಡ ವಿಜು, ಚೋಳಪಂಡ ನಾಣಯ್ಯ, ನಂದಿನೆರವಂಡ ಅಯ್ಯಣ್ಣ, ಸಾದೇರ ರಮೇಶ್, ಅವರೇಮಾದಂಡ ರಮೇಶ್ ಸತ್ಯಗೃಹದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.30 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳುರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ…

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.