
ಮಡಿಕೇರಿ ಆ.15 NEWS DESK : ರಾಷ್ಟ್ರ ಭಕ್ತಿ ಮತ್ತು ರಾಷ್ಟ್ರ ಪ್ರೇಮವನ್ನು ಪ್ರತಿಯೊಬ್ಬ ಭಾರತೀಯರು ಮೈಗೂಡಿಸಿಕೊಳ್ಳುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಹಿರಿಯ ಟ್ರಸ್ಟಿಗಳಾದ ಟಿ.ಪಿ. ರಮೇಶ್ ಕರೆ ನೀಡಿದರು.ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿತ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ಅವರು, ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದವರನ್ನು ಯುವ ಸಮೂಹ ಸ್ಮರಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆಯೆಂದು ತಿಳಿಸಿದರು. ಸ್ವಾತಂತ್ರ್ಯೋತ್ಸವದಲ್ಲಿ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್, ಟ್ರಸ್ಟಿ ಶ್ರೀಧರ್ ಹೂವಲ್ಲಿ ಹಾಗೂ ವ್ಯವಸ್ಥಾಪಕಿ ಯಮುನ, ಸವಿತ, ರಾಜೇಶ್ ಹಾಗೂ ಯಶೋಧ, ವರ್ತಕರಾದ ರೆಹಮಾನ್, ಅಶ್ರಫ್, ಮಕ್ಕಳಾದ ತರುಣ್ ಬಜೆಕೋಡಿ, ಜೆ.ಎ.ಚರಿತಾ ಮತ್ತಿತರರು ಭಾಗವಹಿಸಿದ್ದರು.








