Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»Uncategorized»*ಮಡಿಕೇರಿಯಲ್ಲಿ ದೇವರಾಜ ಅರಸು ಜನ್ಮದಿನಾಚರಣೆ : ಅರಸು ಜನಮಾನಸದಲ್ಲಿ ಸದಾ ನೆಲೆಸಿರುವ ಸಾಮಾಜಿಕ ನ್ಯಾಯದ ಹರಿಕಾರ : ಎ.ಲೋಕೇಶ್ ಕುಮಾರ್ ಶ್ಲಾಘನೆ*
Uncategorized

*ಮಡಿಕೇರಿಯಲ್ಲಿ ದೇವರಾಜ ಅರಸು ಜನ್ಮದಿನಾಚರಣೆ : ಅರಸು ಜನಮಾನಸದಲ್ಲಿ ಸದಾ ನೆಲೆಸಿರುವ ಸಾಮಾಜಿಕ ನ್ಯಾಯದ ಹರಿಕಾರ : ಎ.ಲೋಕೇಶ್ ಕುಮಾರ್ ಶ್ಲಾಘನೆ*

ಆಗಷ್ಟ್ 20, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.20 : ಹಿಂದುಳಿದ ಆಯೋಗ ಸ್ಥಾಪನೆ, ಭೂ ಸುಧಾರಣೆ ಕಾಯ್ದೆ, ಜನತಾ ನ್ಯಾಯಾಲಯ, ಜೀತ ವಿಮುಕ್ತಿ ಸೇರಿದಂತೆ ಹಲವು ಸಾಮಾಜಿಕ ಕಳಕಳಿಯ ಜನಪರ ಕಾರ್ಯಕ್ರಮಗಳನ್ನು ಜಾರಿ ತಂದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜು ಅರಸು ಅವರು ಜನಮಾನಸದಲ್ಲಿ ಸದಾ ನೆಲೆಸಿರುತ್ತಾರೆ ಎಂದು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್ ಅವರು ಶ್ಲಾಘಿಸಿದ್ದಾರೆ. ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜು ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಕಂಡ ಹಲವು ಮುಖ್ಯಮಂತ್ರಿಗಳಲ್ಲಿ ದಿವಗಂತ ದೇವರಾಜ ಅರಸು ಅವರು ಶ್ರೇಷ್ಠ ಸಾಮಾಜಿಕ ಸುಧಾರಕರಾಗಿದ್ದರು. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅವರ ಅಧಿಕಾರವಧಿಯಲ್ಲಿ ಸಮಾಜದಲ್ಲಿ ಅನೇಕ ಸುಧಾರಣೆಗಳನ್ನು ತಂದರು. “ಬಡತನ ನಿರ್ಮೂಲನೆ” ಅವರ ಮೊದಲ ಆದ್ಯತೆ. ಅಧಿಕಾರದಲ್ಲಿರುವಾಗ ಸಮಾಜಕ್ಕೆ ಒಳಿತು ಮಾಡುವ ದಿಸೆಯಲ್ಲಿ ಕಾರ್ಯ ನಿರ್ವಹಿಸಿದ ಅರಸು ಅವರು ಜನಮಾನಸದಲ್ಲಿ ಸದಾ ನೆಲೆಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ಭಾರಿ ಕಾರ್ಯನಿರ್ವಹಿಸಿ ಎಲ್ಲಾ ಜಾತಿ, ಜನಾಂಗದವರನ್ನು ಒಗ್ಗೂಡಿಸುವ ಪ್ರಮುಖ ಕಾರ್ಯಮಾಡಿದ್ದಾರೆ. ಹಿಂದುಳಿದ ಮತ್ತು ಅಲ್ಪಸಂಖ್ಯಾತರಲ್ಲಿ ಆರ್ಥಿಕವಾಗಿ ಸಬಲರಲ್ಲದವರನ್ನು ಶೈಕ್ಷಣಿಕವಾಗಿ ಮುಂದೆ ತರಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅವಕಾಶ ವಂಚಿತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಪ್ರೋತ್ಸಾಹಧನ, ಸಮಾಜಮುಖಿ ಕೆಲಸಗಳನ್ನು ಮಾಡಿದ್ದಾರೆ ಎಂದು ಲೋಕೇಶ್ ಕುಮಾರ್ ಬಣ್ಣಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತವಿಕವಾಗಿ ಮಾತನಾಡಿದ ಅಹಿಂದ ಒಕ್ಕೂಟದ ಸ್ಥಾಪಕರು ಹಾಗೂ ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಹಿಂದುಳಿದ ವರ್ಗ, ದುರ್ಬಲ ವರ್ಗ, ಅಲ್ಪಸಂಖ್ಯಾತರ ಏಳಿಗೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ದೇವರಾಜು ಅರಸು ಅವರಿಗೆ ಸಲ್ಲುತ್ತದೆ. ಅಂತಹ ಸಮಾಜ ಸುಧಾರಕರಿಗೆ ಸದಾ ಗೌರವ ಸಲ್ಲಿಸಬೇಕು. ರಾಜಕೀಯ ರಹಿತವಾಗಿ, ಜಾತ್ಯತೀತ ನಿಲುವಿನಲ್ಲಿ ಸರ್ವಧರ್ಮ ಸಮನ್ವಯತೆಯ ಹಾದಿಯಲ್ಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿಯನ್ನು ಕಲ್ಪಿಸಿ ಮಲ ಹೊರುವ ಸಂಪ್ರದಾಯವನ್ನು ರದ್ದು ಮಾಡಿದರು. 16 ಸಾವಿರ ಉದ್ಯೋಗ ಖಾಯಂಗೊಳಿಸಿದರು. ಮೈಸೂರಿಗೆ ಕರ್ನಾಟಕ ಎಂದು ನಾಮಕರಣ ಮಾಡಿ ಸಮಸಮಾಜ ನಿರ್ಮಾಣಕ್ಕೆ ದೊಡ್ಡ ಶಕ್ತಿಯಾಗಿ ಕಾರ್ಯನಿರ್ವಹಿಸಿದರು ಎಂದು ರಮೇಶ್ ತಿಳಿಸಿದರು. ಕೊಡಗಿನಲ್ಲಿ ಅಹಿಂದ ಒಕ್ಕೂಟ ಅಸ್ತಿತ್ವಕ್ಕೆ ತರುವ ಮೂಲಕ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಅನೇಕ ಸಮಸ್ಯೆಗಳನ್ನು ಪರಿಹರಿಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಹಲವು ಗ್ರಾ.ಪಂ ವ್ಯಾಪ್ತಿಯಲ್ಲಿ ಮನೆ ಕಳೆದುಕೊಂಡವರಿಗೆ ಅದೇ ಗ್ರಾ.ಪಂ ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಿಸಿಕೊಡುವ ಅವಶ್ಯಕತೆ ಇದೆ ಎಂದರು. ಆಸಕ್ತರು ರಾಜಕೀಯ ರಹಿತವಾದ ಅಹಿಂದ ಸಂಘಟನೆಯ ಸದಸ್ಯರಾಗಬಹುದು. ಸಮಾಜಮುಖಿಯಾಗಿ ಕೆಲಸ ಮಾಡಲು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ.ಕೆ.ಹೆಚ್.ಮುಸ್ತಫ ಅವರು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಅದ್ಭುತ ವ್ಯಕ್ತಿಯಾಗಿದ್ದು, ಜಾತ್ಯತೀತತೆಯ ನೆಲೆಗಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಭೂ ಒಡೆತನ, ಮೀಸಲಾತಿ ಸೌಲಭ್ಯಗಳನ್ನು ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಅರಸು ಅವರು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದರು. ಚದುರಿದ ಸಮುದಾಯಗಳನ್ನು ಒಗ್ಗೂಡಿಸಿ, ಬಸವಣ್ಣನವರ ದಾರಿಯನ್ನು ಆಯ್ದುಕೊಂಡು ಚಳವಳಿಗಳನ್ನು ರೂಪಿಸಿದರು. ನಿಜವಾದ ಕರ್ನಾಟಕದ ಮಾದರಿ ಅರಸು ಅವರಲ್ಲಿದೆ ಎಂದು ಬಣ್ಣಿಸಿದ ಮುಸ್ತಫ ಅವರು ಅರಸು ಅವರು ನಡೆದುಬಂದ ಹಾದಿಯನ್ನು ವಿವರಿಸಿದರು. ತಮ್ಮ ರಾಜಕೀಯ ಭವಿಷ್ಯದಲ್ಲಿ ಹಲವು ಏಳುಬೀಳುಗಳನ್ನು ಕಂಡ ಅರಸು ಅವರು ತಮ್ಮ ಆಸ್ತಿಯನ್ನೆ ಮನೆಯ ಕೆಲಸದಾತನಿಗೆ ನೀಡುವ ಮೂಲಕ ಮಾದರಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಅರಸು ಜಾರಿಗೊಳಿಸಿದ ಭೂ ಸುಧಾರಣಾ ಕಾಯ್ದೆ, ಜೀತಮುಕ್ತಿ ಕಾಯ್ದೆ, ಋಣಪರಿಹಾರ ಕಾಯ್ದೆಯಂತಹ ಕ್ರಾಂತಿಕಾರಿ ನಿರ್ಧಾರಗಳು ಬಡವರು, ತಳಸಮುದಾಯದವರು, ಕೃಷಿ ಕಾರ್ಮಿಕರು ಸ್ವಾಭಿಮಾನದ ಬದುಕು ಸಾಧಿಸಲು ನೆರವಾದವು. ರಾಜ್ಯದ ಅಸಂಖ್ಯಾತ ಧ್ವನಿ ಇಲ್ಲದ ಜನಾಂಗಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತಂದರು. ಮೈಸೂರು ಎಂದಿದ್ದ ರಾಜ್ಯದ ಹೆಸರನ್ನು ಕರ್ನಾಟಕ ಎಂದು ಅಧಿಕೃತವಾಗಿ ಘೋಷಿಸಿದ್ದು, ಕನ್ನಡವನ್ನು ಆಡಳಿತ ಭಾಷೆಯಾಗಿ ಅಂಗೀಕರಿಸಿದ್ದು, ಅಂದಿನ ಮಟ್ಟಿಗೆ ವಿನೂತನವೆನಿಸಿದ್ದ ತೀರ್ಮಾನವಾಗಿತ್ತು. ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇಂತಹ ಮಹಾನ್ ನಾಯಕ ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲಾ ನಡೆದು ಸಮಾಜದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮುಸ್ತಫ ಹೇಳಿದರು. ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಸುಭಾಷ್ ನಾಣಯ್ಯ ಅವರು ಮಾತನಾಡಿ, ದಿವಗಂತ ಡಿ.ದೇವರಾಜು ಅರಸು ಹಾಗೂ ತಮ್ಮ ತಂದೆಯೊಂದಿಗಿನ ಒಡನಾಟವನ್ನು ಬಣ್ಣಿಸಿದರು. ವಕೀಲ ಕುಞಬ್ದುಲ್ಲಾ ಮಾತನಾಡಿ, ಸಂವಿಧಾನವನ್ನು ಯಥಾವತ್ತಾಗಿ ಜಾರಿಗೆ ತಂದಾಗ ಮಾತ್ರ ಎಲ್ಲರೂ ದೇಶವನ್ನು ಆಳುವ ದೊರೆಗಳಾಗಲು ಸಾಧ್ಯ. ಆ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸಂಘಟನೆಯ ಮುಖಂಡರುಗಳನ್ನು ಒಗ್ಗೂಡಿಸಿ ಅಹಿಂದವನ್ನು ಬಲಪಡಿಸಬೇಕು ಎಂದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್, ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ.ಮುದ್ದಯ್ಯ, ಸರ್ಕಾರಿ ನೋಟರಿ ಹಾಗೂ ವಕೀಲರಾದ ಬಿ.ಇ.ಜಯೇಂದ್ರ, ಕೊಡಗು ಜಿಲ್ಲಾ ವಕ್ಫ್ ಸಮಿತಿ ಮಾಜಿ ಅಧ್ಯಕ್ಷ ಕೆ.ಎ.ಯಾಕೂಬ್ ಮಾತನಾಡಿ, ಪ್ರತಿ ಗ್ರಾಮಗಳಿಗೆ ತೆರಳಿ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಅಹಿಂದ ಒಕ್ಕೂಟವನ್ನು ಮತ್ತಷ್ಟು ಬಲಪಡಿಸಬೇಕು, ಆ ಮೂಲಕ ಜಿಲ್ಲೆಯಲ್ಲಿ ಅಹಿಂದ ಒಕ್ಕೂಟ ದೊಡ್ಡ ಶಕ್ತಿಯಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ವಕ್ಫ್ ಸಮಿತಿ ಮಾಜಿ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮನ್ ಹಾಗೂ ವಿವಿಧ ಸಮಾಜಗಳ ಮುಖಂಡರು ಪಾಲ್ಗೊಂಡಿದ್ದರು. ಸಹಮತ ವೇದಿಕೆಯ ರೇವತಿ ರಮೇಶ್ ಸ್ವಾಗತಿಸಿ, ಎಸ್.ಐ.ಮುನೀರ್ ಅಹಮ್ಮದ್ ನಿರೂಪಿಸಿ, ವಂದಿಸಿದರು. ಪ್ರೇಮ, ವೀಣಾಕ್ಷಿ, ಪ್ರೇಮ ಕೃಷ್ಣಪ್ಪ, ಮುಬಿನಾ, ವಾಸುದೇವ್, ಶಬರೀಶ್ ಸನ್ಮಾನಿತರ ಪರಿಚಯ ಮಾಡಿದರು.
::: ಸನ್ಮಾನಿತರು :::
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಹಾಗೂ ನಿವೃತ್ತ ಶಿಕ್ಷಕ ಎನ್.ವೀರಭದ್ರಯ್ಯ, ಸಮಾಜ ಸೇವಕ, ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ರಕ್ತದಾನಿ ಹಾಗೂ ಭಾಗಮಂಡಲ ಪೊಲೀಸ್ ಇಲಾಖೆಯ ಹೆಡ್‌ಕಾನ್ಸ್ಟೇಬಲ್ ಬಿ.ಎಂ.ರಾಮಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ರಾಜೇಶ್ ಯಲ್ಲಪ್ಪ, ನಗರಯೋಜನಾ ಪ್ರಧಿಕಾರದ ಅಧ್ಯಕ್ಷ ಕೆ.ಎ.ಆದಂ, ಸಮಾಜ ಸೇವಕ ಹಾಗೂ ವಕೀಲರಾದ ಕೆ.ವಿ.ಸುನಿಲ್, ಬೆಟ್ಟಗೇರಿ ಗ್ರಾ.ಪಂ ಅಧ್ಯಕ್ಷೆ ಚಳಿಯಂಡ ಕಮಲ ಉತ್ತಯ್ಯ ಮತ್ತು ಎಸ್.ಎಸ್.ಎಲ್‌ಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳಾದ ಐಗೂರು ಸರ್ಕಾರಿ ಪ್ರೌಢಶಾಲೆಯ ಸಿ.ಬಿ.ಬೆಸಿಲ್ (ಪರವಾಗಿ ಸಹೋದರಿ), ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆ.ಆರ್.ಬಬಿತ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*2.84 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಹಂತ-ಹಂತವಾಗಿ ಚಾಲನೆ: ಸಿಎಂ ಸಿದ್ದರಾಮಯ್ಯ ಭರವಸೆ*

ಫೆಬ್ರವರಿ 25, 2026

*ನಿರಂತರ ಅಧ್ಯಯನ ಹಾಗೂ ಏಕಾಗ್ರತೆ ಇದ್ದಲ್ಲಿ ಶೈಕ್ಷಣಿಕ ಸಾಧನೆ ಸಾಧ್ಯ… ವಿದ್ಯಾರ್ಥಿಗಳಿಗೆ ಡಾ.ದೀಪಿಕಾ ಕಿವಿ ಮಾತು*

ಫೆಬ್ರವರಿ 17, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.