Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪದಲ್ಲಿ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ : ವಿದ್ಯೆಯಿಂದ ಪ್ರಬಲರಾಗಿ : ನಿವೃತ್ತ ಶಿಕ್ಷಕ ವಿನಯನ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪದಲ್ಲಿ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ : ವಿದ್ಯೆಯಿಂದ ಪ್ರಬಲರಾಗಿ : ನಿವೃತ್ತ ಶಿಕ್ಷಕ ವಿನಯನ್ ಕರೆ*

ಆಗಷ್ಟ್ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಗೋಣಿಕೊಪ್ಪ ಆ.26 NEWS DESK : ಹಿಂದುಳಿದ ಸಮುದಾಯಗಳು ಸಮಾಜದ ಮುಂದುವರಿದ ಭಾಗವಾಗಲು ಸಂಘಟನೆಯಿಂದ ಸದೃಢರಾಗಿ ವಿದ್ಯೆಯಿಂದ ಪ್ರಬಲರಾಗಬೇಕು ಎಂದು ಕೇರಳ ತಲಶೇರಿ ನಿವೃತ್ತ ಶಿಕ್ಷಕ ವಿನಯನ್ ಕರೆ ನೀಡಿದರು. ಗೋಣಿಕೊಪ್ಪ ಪಟೇಲ್ ನಗರದಲ್ಲಿರುವ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಗೋಣಿಕೊಪ್ಪಲು ಎಸ್‍ಎನ್‍ಡಿಪಿ ಶಾಖ ಯೋಗಂ ಆಯೋಜಿಸಿದ ಶ್ರೀ ನಾರಾಯಣ ಗುರುಗಳ 170ನೇ ಜಯಂತಿ ಆಚಾರಣೆಯಲ್ಲಿ ಮುಖ್ಯ ಭಾಷಣಗಾರರಾಗಿ ಮಾತನಾಡಿದರು. ಕತ್ತಲೆಯಿಂದ ಬೆಳಕಿನೆಡೆಗೆ ನಮ್ಮನ್ನು ದಾಟಿಸುವ ವ್ಯಕ್ತಿತ್ವ ಉಳ್ಳವರು ಗುರುಗಳಾಗುತ್ತಾರೆ. ಅಂತಹ ಮಹಾನ್ ಗುರು ನಾರಾಯಣ ಗುರುಗಳಾಗಿದ್ದಾರೆ. ಅವರ ಆದರ್ಶ ಪಾಲನೆ, ತತ್ವ, ಚಿಂತನೆಗಳು ನಮ್ಮೆಲ್ಲರ ಬದುಕಿನ ಬೆಳಕಾಗಬೇಕು ಎಂದು ಸಲಹೆ ನೀಡಿದರು. ದನಕನಗಳು ಬೇಕು ಎಂದು ಪ್ರಾರ್ಥಿಸುವ ಬದಲಾಗಿ ಜ್ಞಾನಕ್ಕಾಗಿ ಪ್ರಾರ್ಥಿಸುವುದರಿಂದ ಮನುಷ್ಯನಲ್ಲಿ ಶಾಂತಿ ನೆಲೆಸುತ್ತದೆ. ಜೀವನವನ್ನು ಸುಂದರವಾಗಿಸಿಕೊಳ್ಳಲು ಜ್ಞಾನದ ಬೆಳಕಿನಲ್ಲಿ ಹೊತ್ತಿಸಿಕೊಳ್ಳುವ ಪ್ರಾರ್ಥನೆಯಾಗಲಿ ಎಂದು ಅಭಿಪ್ರಾಯ ಮಂಡಿಸಿದರು. ನಂತರ ನಾರಾಯಣ ಗುರುಗಳ ಜೀವನವನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ಒಂದೇ ಜಾತಿ, ಒಂದೇ ಮತ ಎಂಬುವುದು ಶಾಶ್ವತವಾಗಿ ಉಳಿದುಕೊಳ್ಳಲಿ. ಗುರುಗಳು ಹಾಕಿಕೊಟ್ಟ ಆದರ್ಶ ಪಾಲನೆ ನಮ್ಮ ಬದುಕಿನ ಬೆಳಕಾಗಲಿ. ಸಂಘಟನಾತ್ಮಕವಾಗಿ ಬಲಗೊಂಡು ಸಮುದಾಯದ ಬೆಳವಣಿಗೆಯು ಸಾಗಲಿ ಎಂದು ಹಾರೈಸಿದರು. ಎಸ್‍ಎನ್‍ಡಿಪಿ ಯೂನಿಯನ್ ಜಿಲ್ಲಾಧ್ಯಕ್ಷ ಲೋಕೇಶ್ ಮಾತನಾಡಿ, ಹಿಂದುಳಿದ ಸಮುದಾಯ ಸಮಾಜದ ಮುಂದುವರಿಕೆಯ ಭಾಗವಾಗಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಪ್ರತಿಯೊಬ್ಬರು ಶಿಕ್ಷಣವಂತರಾಗುವ ಮೂಲಕ ಈ ಸಮಾಜದಲ್ಲಿ ಪ್ರಬಲವಾಗಿ ಉಳಿದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಚರಣೆ ಸಮಿತಿ ಅಧ್ಯಕ್ಷ ಪಿ.ಜಿ.ರಾಜಶೇಖರ್, ಜಾತಿಯ ವಿಷ ಬೀಜದ ವರ್ತುಲದಲ್ಲಿ ನಲುಗಿಹೋಗಿದ್ದ ಜನರನ್ನು ಮೇಲೆಕೆತ್ತಲು ನಾರಾಯಣ ಗುರುಗಳು ಬಹುದೊಡ್ಡ ಸಾಮಾಜಿಕ ಆಂದೋಲನವನ್ನು ಮಾಡಿದರು. ದಾರ್ಶನಿಕರಾಗಿದ್ದ ಗುರುಗಳು ತನ್ನ ಅನುಯಾಯಿಗಳಿಗೆ ಬುದ್ದಿ ಮಾತನ್ನು ಹೇಳುತ್ತಾ “ಯಾರು ಸಹ ಧರ್ಮ ಭ್ರಷ್ಟರಾಗದಿರಿ, ಯಾವುದೇ ಕಾರಣಕ್ಕೂ ಧರ್ಮವನ್ನು ಬಿಟ್ಟೂ ಮತಾಂತರವಾಗದಿರಿ” ಎಂಬ ಕಿವಿಮಾತನ್ನು ಹೇಳಿದರು. ಸಮಾಜಕ್ಕೆ ಬಹುದೊಡ್ಡ ಶಾಪವಾದ ಜಾತಿ ವ್ಯವಸ್ಥೆಯ ವಿರುದ್ಧ ನಿರಂತರ ಹೋರಾಡಿದರು. ಮನುಕುಲದ ಏಳಿಗೆಗಾಗಿ ಸರ್ವಸ್ವವನ್ನು ತ್ಯಜಿಸಿ ಸನ್ಯಾಸಿಗಳಾದರು. ಅವರು ಹಾಕಿಕೊಟ್ಟ ಚಿಂತನೆಯ ಮಾರ್ಗ ಇಂದು ನಾವು ಪಾಲಿಸುತ್ತಾ ಬಂದಿದ್ದೇವೆ. ನಾರಾಯಣ ಗುರುಗಳ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಂಡು ಹೊಸ ಯುಗವನ್ನು ನಿರ್ಮಿಸುವಲ್ಲಿ ಸಫಲತೆಯನ್ನು ನಾವುಗಳು ಕಾಣಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಬಿ.ಎನ್.ಪ್ರಕಾಶ್, ಧಾನ್ ಸುಬ್ಬಯ್ಯ, ಎಸ್‍ಎನ್‍ಡಿಪಿ ಶಾಖ ಯೋಗಂ ಅಧ್ಯಕ್ಷ ಟಿ.ಕೆ.ಪುರುಷೋತ್ತಮ್, ಮಹಿಳಾ ವಿಭಾಗ ಅಧ್ಯಕ್ಷೆ ರಮಾವತಿ, ನಾರಾಯಣ ಗುರುಗಳ ಆದರ್ಶ ತತ್ವ ಪಾಲನೆಗಳ ಬಗ್ಗೆ ಮಾತನಾಡಿದರು. ಗೋಣಿಕೊಪ್ಪಲು ಎಸ್‍ಎನ್‍ಡಿಪಿ ಶಾಖ ಯೋಗಂ ಪ್ರಧಾನ ಕಾರ್ಯದರ್ಶಿ ವಿ.ಭಾಸ್ಕರ್, ಪ್ರಾಸ್ತವಿಕ ನುಡಿಗಳನ್ನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿರುವ ಸಂಘದ ಸದಸ್ಯರುಗಳ ಮಕ್ಕಳಾದ ಮೈಸೂರಮ್ಮ ನಗರದ ಕೆ.ಆರ್.ಸುನಿಲ್, ಶಾಲಿನಿ ದಂಪತಿ ಪುತ್ರಿ ಕೆ.ಎಸ್.ಶಿವಾಲಿ, ಎ.ಆರ್. ಸುರೇಶ್, ಪಿ.ಎನ್. ಸಿಂದು ದಂಪತಿಗಳ ಪುತ್ರಿ ಎ.ಎಸ್ ಲಕ್ಷ್ಯ, ಪಿ.ಯು.ಸಿ.ವಾಣಿಜ್ಯ ವಿಭಾಗದಲ್ಲಿ ಅಧಿಕ ಅಂಕ ಪಡೆದು ಸಾಧನೆ ಮಾಡಿರುವ ಗೋಣಿಕೊಪ್ಪಲುವಿನ ಕೆ.ಕೆ.ಸಂಜಯ್, ಅಪರ್ಣ ಸಂಜಯ್ ದಂಪತಿಗಳ ಪುತ್ರಿ ಆದಿತಿ ಸಂಜಯ್, ಜೋಡುಬೀಟಿ ನಿವಾಸಿ ಸಿ.ಕೆ. ದಿನೇಶ್, ಲತಿಕ ಸಿ.ಕೆ ದಂಪತಿ ಪುತ್ರಿ ಸಿ.ಡಿ.ದೀಕ್ಷಿತ ಮತ್ತು ವಿಜ್ಞಾನ ವಿಭಾಗದಲ್ಲಿ ಅಧಿಕಾ ಅಂಕ ಗಳಿಸಿದ ಗೋಣಿಕೊಪ್ಪಲುವಿನ ವಿ.ವಿ.ಅರುಣ್‍ಕುಮಾರ್, ಜ್ಯೋತಿ ಅರುಣ್ ದಂಪತಿಗಳ ಪುತ್ರ ಚಿಂತನ್ ವಿ.ಎ, ಬಿ.ಸಿ. ಉಮೇಶ್, ಪವಿತ್ರ ಉಮೇಶ್ ಅವರ ಪುತ್ರಿ ಮೋನಿಕ, ಎಂ.ವಿ.ಮದುಸೂಧನ್, ಪ್ರೀತು. ಎಂ.ದಂಪತಿಗಳ ಪುತ್ರಿ ಆಶ್ವಿನಿ. ಎಂ ಸನ್ಮಾನಿಸಲಾಯಿತು. ಹಿರಿಯ ಸಾಧಕರುಗಳಾದ ಎಂ.ಪಿ.ಜನಾರ್ಧನ ಇವರ ಪರವಾಗಿ ಎಂ.ಪಿ. ರಮಾವತಿ ಜತೆಗೆ ಕೆ.ಜೆ.ಜಯೇಂದ್ರನ್, ಪಿ.ಕೆ.ವಿಜಯನ್, ವೇಣುಗೋಪಾಲ್, ವಿಕ್ರಮನ್ ಪಿಳ್ಳೆ, ಯು.ಆರ್. ಮೋಹನ್‍ರಾಜ್, ಕೆ.ಎನ್.ಮೋಹನ್‍ದಾಸ್, ಪಿ.ಜಿ.ರಾಜಶೇಖರ್, ಸಿ.ಕೆ.ರಾಜೇಂದ್ರನ್, ರುಕ್ಮಿಣಿ ಕೃಷ್ಣ, ಕೆ.ವೈ. ಸಂಜಿತ್, ಪಿ.ಕೆ.ಪ್ರವೀಣ್ ಗೌರವಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಡಳಿತ ಮಂಡಳಿ ಸದಸ್ಯರುಗಳು ಆಚರಣಾ ಸಮಿತಿ ಸದಸ್ಯರುಗಳು ಮಹಿಳಾ ಘಟಕ ಸದಸ್ಯರುಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.