Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಸುವರ್ಣ ಸಂಭ್ರಮ ಸ್ಪರ್ಧಾ ಕಾರ್ಯಕ್ರಮ : ಕೊಡಗಿನ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ಸುವರ್ಣ ಸಂಭ್ರಮ ಸ್ಪರ್ಧಾ ಕಾರ್ಯಕ್ರಮ : ಕೊಡಗಿನ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ*

ಆಗಷ್ಟ್ 29, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಆ.29 NEWS DESK : ನಮ್ಮ ರಾಜ್ಯವು ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷಗಳು ತುಂಬಿವೆ. ಆ ಪ್ರಯುಕ್ತ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಮ್ಮ ನಾಡಿನ ಬಹುಸಂಸ್ಕೃತಿ ಯನ್ನು ಸಾರುವ ‘ಕರ್ನಾಟಕ ಸುವರ್ಣ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಸೆ.24 ಮತ್ತು 25 ರಂದು ಕಾರ್ಯಕ್ರಮ ನಡೆಯಲಿದೆ. ಕೊಡಗು ಹಾಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿರುವ ಆರು ಅಕಾಡೆಮಿಗಳಾದ ಕೊಡವ, ಅರೆಭಾಷೆ, ತುಳು, ಕೊಂಕಣಿ, ಬ್ಯಾರಿ ಹಾಗೂ ಯಕ್ಷಗಾನ ಅಕಾಡೆಮಿಗಳ ಸಹಭಾಗಿತ್ವದಲ್ಲಿ ಮಂಗಳೂರಿನಲ್ಲಿ ಬಹುಸಂಸ್ಕೃತಿಯ ಕಾರ್ಯಕ್ರಮ ನಡೆಯಲಿದೆ. ಅಲ್ಲಿ ಆರು ಅಕಾಡೆಮಿಗಳಿಂದ ಸಾಂಸ್ಕೃತಿಕ ಪ್ರದರ್ಶನ, ವಿಚಾರಗೋಷ್ಠಿ, ಚಿತ್ರಕಲಾ ಸ್ಪರ್ಧೆ, ಭಾಷಣಸ್ಪರ್ಧೆ, ಕಿರುಚಿತ್ರ ಸ್ಪರ್ಧೆ, ಸಮೂಹಗಾನ ಸೇರಿದಂತೆ ಹತ್ತಾರು ಬಗೆಯ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು, ರಾಜ್ಯ ವಿಧಾನ ಸಭೆಯ ಅಧ್ಯಕ್ಷರು(ಸ್ಪೀಕರ್), ಮೂರು ಜಿಲ್ಲೆಯ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು, ಇಲಾಖಾಧಿಕಾರಿಗಳು, ಗಣ್ಯರು ಸೇರಿದಂತೆ ಇಡೀ ಎರಡು ದಿನದ ಕಾರ್ಯಕ್ರಮಕ್ಕೆ ಮೆರಗು ನೀಡಲಿದ್ದಾರೆ. ಈ ಸಂಬಂಧ ಕೊಡಗಿನಲ್ಲಿ ಕೆಲವೊಂದು ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾಯ ಜಿಲ್ಲೆಗಳಲ್ಲಿ ಸಮಾಲೋಚನ ಸಭೆಯನ್ನು ನಡೆಸಲಾಯಿತು. ಇದೀಗ ಕೊಡಗಿನಲ್ಲಿ ಪ್ರೌಢ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದ್ದು, ಪ್ರಥಮ ಬಹುಮಾನ ರೂ.3000 ನಗದು ಮತ್ತು ಪ್ರಮಾಣ ಪತ್ರ, ದ್ವಿತೀಯ ಬಹುಮಾನ ರೂ.2000 ನಗದು ಮತ್ತು ಪ್ರಮಾಣ ಪತ್ರ, ತೃತೀಯ ಬಹುಮಾನ ರೂ.1000 ಹಾಗೂ ಪ್ರಮಾಣ ಪತ್ರ ಕೊಡಲಾಗುವುದು. ಚಿತ್ರಕಲಾ ಸ್ಪರ್ಧೆಯಲ್ಲಿ ಒಂದು ಶಾಲೆಯಿಂದ ಗರಿಷ್ಠ ಮೂವರು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಸ್ಪರ್ಧೆಯಲ್ಲಿ ಪ್ರೌಢ ಶಾಲೆಯ 8ನೇ, 9ನೇ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಚಿತ್ರ ಬಿಡಿಸಲು ಎ3 ಅಳತೆಯ ಡ್ರಾಯಿಂಗ್ ಶೀಟ್‍ನ್ನು ಅಕಾಡೆಮಿಗಳ ವತಿಯಿಂದ ನೀಡಲಾಗುವುದು. ಚಿತ್ರ ಬಿಡಿಸಲು ಬೇಕಾದ ಪರಿಕರಗಳನ್ನು ವಿದ್ಯಾರ್ಥಿಗಳೇ ತರಬೇಕು. ಪೆನ್ಸಿಲ್ ಶೇಡಿಂಗ್, ಕ್ರಯಾನ್, ಬಣ್ಣದ ಪೆನ್ಸಿಲ್, ಸ್ಕೆಚ್ ಪೆನ್ ಮತ್ತು ವಾಟರ್ ಕಲರ್ ಪೈಕಿ ಯಾವುದಾದರೂ ಒಂದು ಮಾಧ್ಯಮದಲ್ಲಿ ಚಿತ್ರ ರಚಿಸಬಹುದಾಗಿದೆ. ಚಿತ್ರ ಬಿಡಿಸಲು ಗರಿಷ್ಠ 90 ನಿಮಿಷಗಳ ಕಾಲಾವಕಾಶ ನಿಗಧಿ ಪಡಿಸಲಾಗಿದೆ.
ಚಿತ್ರಕಲಾ ಸ್ಪರ್ಧೆಯ ವಿಷಯ : ‘ಕೊಡಗಿನ ಬಹುಸಂಸ್ಕೃತಿ ಪರಂಪರೆ’ ::  ಕೊಡಗಿನ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. “ಕರ್ನಾಟಕ ಬಹುಸಂಸ್ಕೃತಿ ಪರಂಪರೆಗೆ ಕೊಡಗಿನ ಕೊಡುಗೆ, ಹಾಗೂ ಇಂದಿನ ಸವಾಲುಗಳು” ವಿಷಯವಾಗಿ ಒಂದು ಕಾಲೇಜಿನಿಂದ ಕನಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಅವಕಾಶ ಕೊಡಲಾಗುವುದು. ಭಾಷಣವು 10 ನಿಮಿಷಗಳಿಗೆ ಮೀರಬಾರದು. ಭಾಷೆ ಕನ್ನಡ ಮಾತ್ರ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಪ್ರಥಮ ಬಹುಮಾನ ರೂ.3000 ನಗದು ಮತ್ತು ಪ್ರಮಾಣ ಪತ್ರ, ದ್ವಿತೀಯ ಬಹುಮಾನ ರೂ.2000 ನಗದು ಮತ್ತು ಪ್ರಮಾಣ ಪತ್ರ, ತೃತೀಯ ಬಹುಮಾನ ರೂ.1000 ನಗದು ಮತ್ತು ಪ್ರಮಾಣ ಪತ್ರ.
ಭಾಷಣ ಸ್ಪರ್ಧೆಯನ್ನು ಮೊದಲು ಆಯಾಯ ತಾಲೂಕು ಮಟ್ಟದಲ್ಲಿ ನಡೆಸಲಾಗುವುದು. ಇದಕ್ಕೆ ಸಂದಂಧಿಸಿದಂತೆ ಆಯಾಯ ತಾಲೂಕು ಕೇಂದ್ರದಲ್ಲಿ ಇಲಾಖಾ ವತಿಯಿಂದ ನಿಗಧಿ ಪಡಿಸುವ ವಿದ್ಯಾ ಸಂಸ್ಥೆಯಲ್ಲಿ ಸ್ಪರ್ಧೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲಾಗುವುದು. ಜಿಲ್ಲಾ ಮಟ್ಟದ ಸ್ಪರ್ಧೆಯ ಸ್ಥಳವನ್ನು ಮುಂದೆ ತಿಳಿಸಲಾಗುವುದು.
ಜಿಲ್ಲೆಯ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಿರುಚಿತ್ರ ಹಾಗೂ ಸಮೂಹ ಗಾನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಿರುಚಿತ್ರ ಸ್ಪರ್ಧೆಗೆ ಆಯಾಯ ಪದವಿ ಹಾಗೂ ಸ್ನಾತಕೋತ್ತರ ಕಾಲೇಜಿನಿಂದ ಕನಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವುದು.
ಕಿರುಚಿತ್ರವು : “ಕೊಡಗಿನ ಬಹುಸಂಸ್ಕೃತಿ ಪರಂಪರೆ”ಯನ್ನು ಪ್ರತಿಬಿಂಬಿಸುವಂತಿರಬೇಕು. ವಿಜೇತರಿಗೆ ಪ್ರಥಮ ಬಹುಮಾನ ರೂ.10,000 ನಗದು ಮತ್ತು ಪ್ರಮಾಣ ಪತ್ರ, ದ್ವಿತೀಯ ಬಹುಮಾನ ರೂ.5000 ಮತ್ತು ಪ್ರಮಾಣ ಪತ್ರ, ತೃತೀಯ ಬಹುಮಾನ ರೂ.3000 ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಕಿರುಚಿತ್ರವು 5 ನಿಮಿಷಗಳಿಗೆ ಮೀರಬಾರದು. ಭಾಷೆ ಕನ್ನಡ ಮಾತ್ರ. ಸ್ಪರ್ಧೆಗೆ ಕಿರುಚಿತ್ರ ಕಳುಹಿಸಿಕೊಡುವವರು kodavaacademy@gmail.com  2. arebaseacademy@gmail.com ಅಥವಾ ಪೆನ್ ಡ್ರೈವ್ ಮೂಲಕ ಈ ಮುಂದೆ ತಿಳಿಸಿದ ವಿಳಾಸಕ್ಕೆ ಕಳುಹಿಸಿಕೊಡಬಹುದು.
1. ಅಧ್ಯಕ್ಷರು / ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸ್ಕೌಟ್ಸ್ ಭವನ, ಮ್ಯಾನ್ಸ್ ಕಾಂಪೌಂಡ್ ಹತ್ತಿರ ಮಡಿಕೇರಿ.
2. ಅಧ್ಯಕ್ಷರು / ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಾಂಸ್ಕøತಿಕ ಅಕಾಡೆಮಿ, ಕಾಫಿ ಕೃಪ ಕಟ್ಟಡ ರಾಜಸೀಟು ರಸ್ತೆ, ಮಡಿಕೇರಿ. ಇಲ್ಲಗೆ ಕಳುಹಿಸಿಕೊಡುವುದು. ಕಿರುಚಿತ್ರ ತಯಾರಿಸಿದ ವಿದ್ಯಾರ್ಥಿಗಳ ಹೆಸರನ್ನು ಸಹಿ ಮತ್ತು ಮೊಹರಿನೊಂದಿಗೆ ಪ್ರಾಂಶುಪಾಲರು ದೃಡೀಕರಿಸತಕ್ಕದ್ದು.
ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗುವ ಸಮೂಹಗಾನ ಸ್ಪರ್ಧೆಗೆ ಪ್ರತಿ ತಂಡದಲ್ಲಿ 6 ಜನ ಸ್ಪರ್ಧಿಗಳಿರಬೇಕು. ‘ಕನ್ನಡದ ಮಹತ್ವ ಸಾರುವ’ ಹಾಡುಗಳಾಗಿರಬೇಕು. ಸಂಗೀತದ ಪರಿಕರಗಳನ್ನು ಬಳಸುವಂತಿಲ್ಲ. ಶ್ರುತಿ ಪೆಟ್ಟಿಗೆ ಬಳಸಲು ಅವಕಾಶವಿರುತ್ತದೆ. ಸಮೂಹಗಾನದಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ.5000 ನಗದು ಮತ್ತು ಪ್ರಮಾಣ ಪತ್ರ, ದ್ವಿತೀಯ ಬಹುಮಾನ ರೂ.3000 ನಗದು ಮತ್ತು ಪ್ರಮಾಣ ಪತ್ರ, ತೃತೀಯ ಬಹುಮಾನ 2000 ನಗದು ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಈ ಎಲ್ಲಾ ಸ್ಪರ್ಧೆಗಳ ಉಸ್ತುವಾರಿಯನ್ನು ಚಂದ್ರಶೇಖರ ಪೇರಾಲ್ ವಹಿಸಿಕೊಂಡಿದ್ದು, ಕೊಡಗಿನಲ್ಲಿ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಮೊಳ್ಳೆಕುಟ್ಟಡ ದಿನು ಬೋಜಪ್ಪ ಹಾಗೂ ಅರೆಭಾಷೆ ಅಕಾಡೆಮಿ ಸದಸ್ಯ ವಿನೋದ್ ಮೂಡಗದ್ದೆ ಸಂಚಾಲಕರಾಗಿರುತ್ತಾರೆ. ಹೆಚ್ಚಿನ ವಿವರಗಳಿಗೆ ಇವರ ಮೊಬೈಲ್ ಸಂಖ್ಯೆ 8660461442, 9741521197, 9535615759 ಮೂಲಕ ಸಂರ್ಪಕಿಸುವುದಾಗಿ ಅಕಾಡೆಮಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.    

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.