
ಮಡಿಕೇರಿ ಸೆ.13 NEWS DESK : “2024-25 ನೇ ಸಾಲಿನ ಶ್ರೀ ಭಗಂಡೇಶ್ವರ – ತಲಕಾವೇರಿ ದೇವಾಲಯದಲ್ಲಿ ಸೆ.17 ರಂದು ಜರುಗುವ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ” ಕುರಿತು ಪೂರ್ವ ಸಿದ್ಧತೆ ಬಗ್ಗೆ ಚರ್ಚಿಸಲು ಸಲುವಾಗಿ ಸೆ.14 ರಂದು “ಅಪರಾಹ್ನ 3.30 ಗಂಟೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅಧ್ಯಕ್ಷತೆಯಲ್ಲಿ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಆದುದರಿಂದ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ – 2024” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ, ಚರ್ಚಿಸಲು ಸಂಘ ಸಂಸ್ಥೆಗಳ ಅಧ್ಯಕ್ಷರು, ಎಲ್ಲಾ ಸಮುದಾಯಗಳ ಮುಖಂಡರು, ಊರಿನ ಹಿರಿಯರು, ನಾಡಿನ ಎಲ್ಲಾ ದೇವಾಲಯಗಳ ತಕ್ಕಮುಖ್ಯಸ್ಥರುಗಳು ಮತ್ತು ಸಾರ್ವಜನಿಕರು ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿ ತುಲಾ ಸಂಕ್ರಮಣ ಜಾತ್ರೆಯನ್ನು ಯಶಸ್ವಿಯಾಗಲು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿಗಳು ಕೋರಿದ್ದಾರೆ.








