
ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಅ.10 ರಂದು ಜಾನಪದ ದಸರಾ ಉತ್ಸವವನ್ನು ಮಡಿಕೇರಿ ದಸರಾ ಉತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ 4 ವಷ೯ಗಳಿಂದ ಮಡಿಕೇರಿ ದಸರಾ ಉತ್ಸವದಲ್ಲಿ ಕನಾ೯ಟಕ ಜಾನಪದ ಪರಿಷತ್ ಸಹಯೋಗದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಕನಾ೯ಟಕ ಕೊಡವ ಸಾಹಿತ್ಯ ಸಂಸ್ಕೖತಿ ಅಕಾಡೆಮಿ, ಕನಾ೯ಟಕ ಅರೆಭಾಷಾ ಸಾಹಿತ್ಯ ಸಂಸ್ಕೖತಿ ಅಕಾಡೆಮಿ, ಕನಾ೯ಟಕ ಬ್ಯಾರಿ ಸಾಹಿತ್ಯ ಸಂಸ್ಕೖತಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಜಾನಪದ ದಸರಾದಲ್ಲಿ ಈ ವಷ೯ವೂ ಕೊಡಗಿನ ಜಾನಪದ ಕಲಾವಿದರಿಗೆ ಕಲಾಪ್ರದಶ೯ನಕ್ಕೆ ಅವಕಾಶ ನೀಡಲಾಗುತ್ತಿದೆ. ಅ.10 ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ದಸರಾ ಕಾಯ೯ಕ್ರಮಗಳು ನಡೆಯುತ್ತವೆ ಎಂದೂ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಜಾನಪದ ದಸರಾದಲ್ಲಿ ಕಲಾ ಪ್ರದಶ೯ನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು ಸೆ.25 ರೊಳಗಾಗಿ ಅಜಿ೯ಗಳನ್ನು ಅಧ್ಯಕ್ಷರು, ಕೊಡಗು ಜಾನಪದ ಪರಿಷತ್, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ – 571201 ಇಲ್ಲಿಗೆ ಕಳುಹಿಸಬೇಕು, ಜಾನಪದ ದಸರಾ ಸಂಬಂಧಿತ ಹೆಚ್ಚಿನ ಮಾಹಿತಿಗೆ ಸಂಪಕ೯ ಸಂಖ್ಯೆಗಳು – 9886181613, ಎಸ್ ಐ ಮುನೀರ್ ಅಹಮ್ಮದ್ , 94486 14999 ಪ್ರಧಾನ ಕಾಯ೯ದಶಿ೯, ಎಸ್ ಎಸ್ ಸಂಪತ್ ಕುಮಾರ್ ಖಜಾಂಜಿ, ಕೊಡಗು ಜಿಲ್ಲಾ ಜಾನಪದ ಪರಿಷತ್ ಸಂಪರ್ಕಿಸಬಹುದಾಗಿದೆ.









