
ವಿರಾಜಪೇಟೆ ಸೆ.13 NEWS DESK : ವಿರಾಜಪೇಟೆಯ ಇತಿಹಾಸ ಪ್ರಸಿದ್ದ ಗಣಪತಿ ದೇವಾಲಯದ ಸಭಾಂಗಣದಲ್ಲಿ ನಾಟ್ಯಾಂಜಲಿ ನೃತ್ಯ ಮತ್ತು ಸಂಗೀತ ಶಾಲೆಯ ವಿದ್ಯಾರ್ಥಿಗಳ ಭಜನಾ ನೃತ್ಯ ಸಂಕೀರ್ತನೆಗಳು ಪ್ರೇಕ್ಷಕರನ್ನು ರಂಜಿಸಿತು. ಗಣಪತಿ ದೇವಾಲಯದ ಆವರಣದಲ್ಲಿ ಗಣೇಶನ ಮೂರ್ತಿಯ ಪ್ರತಿಷ್ಠಾಪನೆ ವೇಳೆ ಭಜನ ನೃತ್ಯ ಪ್ರದರ್ಶನ ನಡೆದು ಬಳಿಕ ಮೆರವಣಿಗೆ ಮುಖಾಂತರ ನೃತ್ಯ ತಂಡ ಸಾಗಿ ವಿಘ್ನ ವಿನಾಶಕನನ್ನು ದೇವಾಲಯಕ್ಕೆ ತರಲಾಯಿತು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು, ನೂರಾರು ಸಂಖ್ಯೆಯಲ್ಲಿ ಭಕ್ತರು, ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಭಜನಾ ನೃತ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವಿದ್ಯಾರ್ಥಿಗಳಿಗೆ ನೃತ್ಯ ಶಾಲೆಯ ಗುರುಗಳಾದ ಹೇಮಾವತಿ ಕಾಂತರಾಜ್, ಕು. ಕಾವ್ಯಶ್ರೀ ಮಾರ್ಗದರ್ಶನ ನೀಡಿದ್ದರು.








