Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*
  • *ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*
  • *ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
  • *ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
  • *ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*
  • *ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*

ಸೆಪ್ಟೆಂಬರ್ 27, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.27 NEWS DESK  : ಜಿಲ್ಲೆಯಲ್ಲಿ ಸೆ.29 ರಂದು ನಡೆಯುವ ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಯ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಕಡ್ಡಾಯ ಕನ್ನಡ) ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ನಿರ್ದೇಶನ ನೀಡಿದರು. ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಓದಿಕೊಂಡು ಪರೀಕ್ಷೆಯನ್ನು ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಮಾತನಾಡಿ, ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಹಾಗೆಯೇ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 2,772 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಮಾರ್ಗಾಧಿಕಾರಿಗಳು, ಜಾಗೃತ ದಳದ ಸಿಬ್ಬಂದಿಗಳು, ವೀಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನು ನಿಯೋಜಿಸಲಾಗಿದೆ. ಹಾಗೆಯೇ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕಿದೆ ಎಂದು ಮನವಿ ಮಾಡಿದರು. ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಇರಲಿದೆ. ಪರೀಕ್ಷೆ ನಡೆಸುವಲ್ಲಿ ಮೇಲ್ವಿಚಾರಕರ ಜವಾಬ್ದಾರಿ ಹೆಚ್ಚಾಗಿರುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಸ್ಪರ್ಧಾತ್ಮಕ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು. ಮದೆ ಮಹೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ಅವರು ಪರೀಕ್ಷೆ ಸಂಬಂಧ ಮಾಹಿತಿ ನೀಡಿದರು. ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ, ವಿವಿಧ ಕಾಲೇಜಿನ ಪ್ರಾಂಶುಪಾಲರು, ಪರೀಕ್ಷಾ ಮೇಲ್ವಿಚಾರಕರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.10 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ…

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*

ಸೆಪ್ಟೆಂಬರ್ 10, 2026

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.