Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮೊದಲ ವಷ೯ದ ಕಾಫಿ ದಸರಾಕ್ಕೆ ಸವ೯ ಸಿದ್ಧತೆ : 7 ಕೃಷಿ ಸಾಧರಿಗೆ ಸನ್ಮಾನ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮೊದಲ ವಷ೯ದ ಕಾಫಿ ದಸರಾಕ್ಕೆ ಸವ೯ ಸಿದ್ಧತೆ : 7 ಕೃಷಿ ಸಾಧರಿಗೆ ಸನ್ಮಾನ : ಶಾಸಕ ಡಾ.ಮಂತರ್ ಗೌಡ*

ಅಕ್ಟೋಬರ್ 2, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.2 NEWS DESK : ಮಡಿಕೇರಿ ದಸರಾದಲ್ಲಿ ಈ ವಷ೯ದಿಂದ ಕಾಫಿ ದಸರಾ ಎಂಬ ವಿನೂತನ ಕಾಯ೯ಕ್ರಮವನ್ನು ಜಾರಿಗೊಳಿಸಲಾಗುತ್ತಿದ್ದು, ಅ.6 ಮತ್ತು 7 ರಂದು ಆಯೋಜಿತ ಕಾಫಿ ದಸರಾದಲ್ಲಿ ಕಾಫಿ ಮತ್ತು ಇತರ ಕೃಷಿಗೆ ಸಂಬಂಧಿಸಿದ ಅನೇಕ ಮಾಹಿತಿ ಕೃಷಿಕರಿಗೆ ದೊರಕಲಿದೆ. ಅಲ್ಲದೆ ಜಿಲ್ಲೆಯ 7 ಮಂದಿ ಸಾಧಕ ಕೃಷಿಕರನ್ನೂ ಕಾಫಿ ದಸರಾ ಸಂದಭ೯ ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ನಗರದಲ್ಲಿ ಕಾಫಿ ದಸರಾ ಸಂಬಂಧಿತ ಪೂವ೯ಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಡಾ.ಮಂಥರ್ ಗೌಡ, ಇದೇ ಮೊದಲ ಬಾರಿಗೆ ಆಯೋಜಿತವಾಗಿರುವ ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್, ಕೊಡಗು ಪ್ಲಾಂಟಸ್೯ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ. ಈಗಾಗಲೇ 32 ಮಳಿಗೆಗಳು ಭತಿ೯ಯಾಗಿದ್ದು, ಕಾಫಿ, ಹೈನುಗಾರಿಕೆ, ಬಿದಿರು, ತೋಟಗಾರಿಕಾ ಬೆಳೆಗಳು, ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಈ ಮಳಿಗೆಗಳಲ್ಲಿ ದೊರಕಲಿದೆ. ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಪಶುಪಾಲನಾ ಇಲಾಖೆ, ಚೆಟ್ಟಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರ ಸೇರಿದಂತೆ ಅನೇಕ ಇಲಾಖೆಗಳು ಕಾಫಿ ದಸರಾದಲ್ಲಿ ಮಳಿಗೆಗಳು 6 ಮತ್ತು 7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತೆರೆದಿರುತ್ತವೆ ಎಂದರು. ಅ.6 ರಂದು ಬೆಳಗ್ಗೆ 10 ಗಂಟೆಗೆ ರಾಜ್ಯ ಕೃಷಿ ಸಚಿವ ಚೆಲುವರಾಯ ಸ್ವಾಮಿ ಗಾಂಧಿ ಮೈದಾನದಲ್ಲಿ ಕಾಫಿ ದಸರಾ ಕಾಯ೯ಕ್ರಮ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಕಾಫಿ ಮತ್ತು ಕೃಷಿ ಸಂಬಂಧಿತ ವಿಚಾರಸಂಕಿರಣ ನಡೆಯಲಿದ್ದು, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ದಿನೇಶ್ ದೇವವೃಂದ, ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ಕೆ.ರಾಜೀವ್, ಕೊಡಗು ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ನಂದಾಬೆಳ್ಯಪ್ಪ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅಂದು 11 ಗಂಟೆಯಿಂದ 12.30 ಗಂಟೆಯವರೆಗೆ ವಿಚಾರಸಂಕಿರಣದಲ್ಲಿ ಕೃಷಿ ರಂಗದ ಪರಿಣಿತರಾದ ಧಮ೯ರಾಜ್, ಡಾ.ಕೆಂಚರೆಡ್ಡಿ, ಕೆ ಕೆ ವಿಶ್ವನಾಥ್ ಮಾಹಿತಿ ವಿನಿಮಯ ಮಾಡಲಿದ್ದಾರೆ ಎಂದೂ ಶಾಸಕರು ಮಾಹಿತಿ ನೀಡಿದರು. ಅ.7 ರಂದು ಸೋಮವಾರ ಕೂಡ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮಳಿಗೆಗಳು ತೆರೆದಿರುತ್ತವೆ. ಕಲಾಸಂಭ್ರಮ ವೇದಿಕೆಯಲ್ಲಿ ನಡೆಯುವ ವಿಚಾರಗೋಷ್ಟಿಯಲ್ಲಿ ನಡಿಕೇರಿಯಂಡ ಬೋಸ್ ಮಂದಣ್ಣ, ಖಲಿಸ್ತಾ ಡಿಸೋಜಾ, ಡಾ.ಶಿವಪ್ರಸಾದ್, ಮಿಲನಾ ಭರತ್ ಮಾಹಿತಿ ವಿನಿಮಯ ಮಾಡಲಿದ್ದಾರೆ. ಅಂದು ರಾಜ್ಯ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕೊಡಗು ಜಿಲ್ಲೆಯ ಸಾಧಕ ಕೃಷಿಕರಿಗೆ ಸನ್ಮಾನದ ಗೌರವ ನೆರವೇರಿಸಲಿದ್ದಾರೆ ಎಂದು ಮಂಥರ್ ಗೌಡ ತಿಳಿಸಿದರು.  ಕೊಡಗು ಜಿಲ್ಲೆಯ ಕೃಷಿಕರು, ಸಾವ೯ಜನಿಕರು ಈ ಕಾಫಿ ದಸರಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಫಿ ಮತ್ತು ಕೃಷಿ ರಂಗದ ಮಾಹಿತಿ ಪಡೆದುಕೊಳ್ಳುವಂತೆಯೂ ಶಾಸಕರು ಕೋರಿದರು. ಜಿಲ್ಲಾಧಿಕಾರಿ ಮತ್ತು ಮಡಿಕೇರಿ ದಸರಾ ಸಮಿತಿ ಅಧ್ಯಕ್ಷವೆಂಕಟರಾಜಾ ಮಾತನಾಡಿ, ಕಾಫಿ ದಸರಾವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಅಗತ್ಯ ಸಹಕಾರ ನೀಡೇಕೆಂದು ಸೂಚಿಸಿದರು. ಗುಣಮಟ್ಟದ ಮಳಿಗೆಗಳನ್ನು ನಿಮಿ೯ಸಲಾಗುತ್ತದೆ, ಪ್ರತೀ ಮಳಿಗೆಯಲ್ಲಿಯೂ ಸೂಕ್ತ ಮಾಹಿತಿ ಹಾಕಲಾಗುತ್ತದೆ,  ಕರಪತ್ರ ನೀಡುವದಕ್ಕೆ ಸೀಮಿತರಾಗದೇ ಪ್ರತೀ ಇಲಾಖೆಗಳೂ ಸಕಾ೯ರದಿಂದ ಕೖಷಿಕರಿಗೆ ದೊರಕುವ ಸೌಲಭ್ಯಗಳು, ಅದನ್ನು ಪಡೆಯುವ ರೀತಿಯನ್ನು ಪರಿಣಾಮಕಾರಿಯಾಗಿ ತಿಳಿಸುವಂತೆ ಸೂಚಿಸಿದರು. ದಸರಾ ಸಾಂಸ್ಕೃತಿಕ  ಸಮಿತಿ ಅಧ್ಯಕ್ಷ, ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ಮಾತನಾಡಿ, 11 ವಷ೯ದ ಹಿಂದೆ ದಸರಾಕ್ಕೆ ಮಕ್ಕಳ ದಸರಾ ಸೇಪ೯ಡೆಯಾಗಿತ್ತು, 7 ವಷ೯ಗಳ ಹಿಂದೆ ಮಹಿಳಾ ದಸರಾ ಸೇಪ೯ಡೆಯಾಯಿತು, 5 ವಷ೯ದ ಮೊದಲು ಜಾನಪದ ದಸರಾ ಸೇಪ೯ಡೆಯಾಯಿತು, ಇದೀಗ ಕಾಫಿ ದಸರಾದ ಮೂಲಕ ನಾಡಹಬ್ಬದಲ್ಲಿ ಕೃಷಿಕರಿಗೂ ಪ್ರಯೋಜನಕಾರಿ ಮಾಹಿತಿ ಲಭಿಸುತ್ತಿರುವುದು ಶ್ಲಾಘನೀಯ. ದಸರಾ ಸಮಿತಿ, ಜಿಲ್ಲಾಡಳಿತ ಸಹಕಾರದಲ್ಲಿ ಎಲ್ಲಾ ಕಾಯ೯ಕ್ರಮಗಳನ್ನೂ ಈ ಬಾರಿಯೂ ಅತ್ಯಂತ ವ್ಯವಸ್ಥಿತವಾಗಿ ನಿವ೯ಹಿಸಿಕೊಂಡು ಹೋಗಲಾಗುತ್ತದೆ ಎಂದರು, ಕಾಫಿ ದಸರಾದಲ್ಲಿ ಜಿಲ್ಲೆಯ ಅನೇಕ ಕೆಫೆಗಳು ತಮ್ಮ ಮಳಿಗೆ ತೆರೆಯುತ್ತಿದ್ದು ಕಾಫಿಯ ಸ್ವಾದಿಷ್ಟ ಘಮಲು ಗಾಂಧಿ ಮೈದಾನದಲ್ಲಿ ಕಂಡುಬರಲಿದೆ. ಕಾಫಿ ಕೆಫೆಯು ಯುವಪೀಳಿಗೆಯ ಮನ ಸೆಳೆದರೆ ಕೃಷಿ ಮಳಿಗೆಗಳು ಎಲ್ಲಾ ವಗ೯ದವರ ಗಮನ ಸೆಳೆಯುವಂತಿರಲಿದೆ ಎಂದರು. ಸ್ಥಳಾವಕಾಶ ಲಭ್ಯವಿಲ್ಲದ ಕಾರಣ 32 ಮಳಿಗೆಗಳಿಗೆ ಮಾತ್ರ ಜಾಗ ನೀಡಲಾಗಿದೆ, ಸಾಕಷ್ಟು ಸಂಖ್ಯೆಯಲ್ಲಿ ಮಳಿಗೆಗಳಿಗೆ ಬೇಡಿಕೆ ಇದ್ದರೂ ಸ್ಥಳಾವಕಾಶ ಕಡಮೆ ಇರುವ ಹಿನ್ನಲೆಯಲ್ಲಿ ಹೆಚ್ಚಿನ ಮಳಿಗೆಗಳಿಗೆ ಜಾಗ ನೀಡಲಾಗಿಲ್ಲ ಎಂದರು. ದಸರಾ ಸಮಿತಿ ಕಾಯಾ೯ಧ್ಯಕ್ಷ ಪ್ರಕಾಶ್ ಆಚಾಯ೯, ಪ್ರಧಾನ ಕಾಯ೯ದಶಿ೯ ರಾಜೇಶ್ ಬಿ.ವೈ, ಖಜಾಂಚಿ ಅರುಣ್ ಶೆಟ್ಟಿ ಕಾಫಿ ಮಂಡಳಿ ಉಪನಿದೇ೯ಶಕರು ತೋಟಗಾರಿಕೆ, ಕೃಷಿ, ಕೈಗಾರಿಕೆ, ಪಶುಪಾಲನಾ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು, ಕೊಡಗು ಪ್ಲಾಂಟಸ್೯ ಅಸೋಯಿಯೇಷನ್ ಅಧ್ಯಕ್ಷ ನಂದಾಬೆಳ್ಯಪ್ಪ ನಿದೇ೯ಶಕ ಕೆ.ಕೆ.ವಿಶ್ವನಾಥ್, ಕಾಯ೯ದಶಿ೯ ಬೆಳ್ಯಪ್ಪ, ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ಕೆ.ರಾಜೀವ್ ಸೇರಿದಂತೆ ಅನೇಕ ಬೆಳೆಗಾರರು ಸಭೆಯಲ್ಲಿದ್ದರು. ಇದೇ ಸಂದಭ೯ ಕಾಫಿ ದಸರಾ ಲೋಗೋವನ್ನು ಶಾಸಕರು, ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.

ಕಾಫಿ ದಸರಾ ಸನ್ಮಾನಿತ ಸಾಧಕರು ::  ನಡಿಕೇರಿಯಂಡ ಬೋಸ್ ಮಂದಣ್ಣ, ಸುಂಟಿಕೊಪ್ಪ, (ಕಾಫಿ ಕೖಷಿ ಸಾಧನೆ) ಬಿ.ಪಿ.ರವಿಶಂಕರ್, ಪೊನ್ನಂಪೇಟೆ ( ಸಮಗ್ರ ಕೃಷಿಕ) , ಜೆಮಿ೯ ಡಿಸೋಜಾ ಕುಶಾಲನಗರ, (ಕಾಫಿ ಕೃಷಿ) ನಿಖಿಲ್ ರಾಮಮೂತಿ೯ , ಕರಡ, (ಬಿದಿರು ಕೃಷಿ) ಕೊಡಗು ಮಹಿಳಾ ಕಾಫಿ ಜಾಗ್ರತಿ ಸಂಘ, (ಸಂಘಕ್ಕಾಗಿನ ಪ್ರಶಸ್ತಿ) , ವಿ.ಎ.ತಾಹೀರ್ ಮಡಿಕೇರಿ, ( ಯಂತ್ರೋಪಕರಣಗಳ ತಯಾರಿಕೆಗಾಗಿ) ಶಿರಗಜೆ ಮಾದಪ್ಪ, ಭಾಗಮಂಡಲ ( ಜೇನು ಕೃಷಿ)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.