Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿಕ್ಲಿಹೊಳೆ ಕಟ್ಟೆಹಾಡಿಯಲ್ಲಿ ಜೇನು ಕುರುಬ ಜನಾಂಗದ ಸಭೆ : ಗ್ರಾಮ ಅರಣ್ಯ ಸಮಿತಿ ರಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚಿಕ್ಲಿಹೊಳೆ ಕಟ್ಟೆಹಾಡಿಯಲ್ಲಿ ಜೇನು ಕುರುಬ ಜನಾಂಗದ ಸಭೆ : ಗ್ರಾಮ ಅರಣ್ಯ ಸಮಿತಿ ರಚನೆ*

ಅಕ್ಟೋಬರ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಣಿವೆ ಅ.9 NEWS DESK : ಐಟಿಡಿಪಿ ಇಲಾಖೆ ಅಧಿಕಾರಿಗಳು ಜೇನು ಕುರುಬರ ಹಾಡಿಗಳಿಗೆ ಬರುತ್ತಿಲ್ಲ. ಅವರ ಕಾರುಗಳು ಹೋಗುವಂತಹ ರಸ್ತೆಗಳು ಇರುವ ಕಡೆಗಳಲ್ಲಿ ಮಾತ್ರ ಹೋಗ್ತಾ ಇದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಾಡಿಗಳೇ ಗೊತ್ತಿಲ್ಲ. ಇಂತಹ ಬೇಜವಬ್ದಾರಿ ಇಲಾಖಾಧಿಕಾರಿಗಳಿಂದ ಜೇನು ಕುರುಬ ಜನಾಂಗಕ್ಕೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಜೇನು ಕುರುಬರ ಮುಖಂಡ, ಜಿ.ಪಂ ಮಾಜಿ ಸದಸ್ಯ ಹಾಗೂ ನಂಜರಾಯಪಟ್ಟಣ ಗ್ರಾ.ಪಂ ಸದಸ್ಯ ಆರ್.ಕೆ.ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಕುಶಾಲನಗರ ತಾಲ್ಲೂಕು ಚಿಕ್ಲಿಹೊಳೆ ಜಲಾಶಯದ ಬಳಿ ಇರುವ ಕಟ್ಟೆಹಾಡಿಯಲ್ಲಿ ನಡೆದ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜೇನು ಕುರುಬರ ಹೆಸರಿನಲ್ಲಿ ಉಳ್ಳವರು ಹಾಗೂ ಜೇನು ಕುರುಬರಲ್ಲದವರು ಜಾತಿ ಪ್ರಮಾಣ ಪತ್ರಗಳನ್ನು ಮಾಡಿಸಿಕೊಂಡು ನಿಜವಾದ ಅರ್ಹ ಫಲಾನುಭವಿಗಳಿಗೆ ವಂಚಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮೀಸಲಿಡುವ ಪರಿಶಿಷ್ಟರ ಅನುದಾನದ ಶೇ.25 ರಷ್ಟು ಹಣ ನಮ್ಮ ಜೇನು ಕುರುಬರಿಗೆ ಸಲ್ಲಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮ ನಮ್ಮ ಸಮುದಾಯಕ್ಕೆ ಮಾರಕವಾಗಿದೆ. ನಮಗೆ ಯಾವೊಂದು ಅಭಿವೃದ್ಧಿ ಯೋಜನೆಗಳೂ ಆಗಲಿಲ್ಲ. ಹಾಗಾಗಿ ನಮಗೆ ವಾಲ್ಮೀಕಿ ನಿಗಮ ಬೇಕಿಲ್ಲ ಎಂದು ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಜೇನು ಕುರುಬರಿಗಾಗಿ ಸರ್ಕಾರ ನೀಡುವ 5 ಲಕ್ಷ ರೂಗಳ ಮನೆ ನಿರ್ಮಾಣದ ಹಣ ಪ್ರಾಮಾಣಿಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪಂಚಾಯಿತಿ ಪಿಡಿಒಗಳು ಮುಂದಾಗಬೇಕು. ಹಾಗೆಯೇ ಜೇನು ಕುರುಬರ ಸೌಲಭ್ಯಗಳಿಗಾಗಿ ಹಗಲಿರುಳೆನ್ನದೇ ಹೋರಾಟ ನಡೆಸಿ ಅನೇಕ ಸೌಲಭ್ಯಗಳನ್ನು ತರುವಲ್ಲಿ ಶ್ರಮಿಸಿದ ರಂಗಸಮುದ್ರದ ಜೆ.ಪಿ.ರಾಜು ನಮ್ಮ ಪಾಲಿಗೆ ಗಾಂಧೀಜಿ ಇದ್ದಂತೆ ಎಂದು ಚಂದ್ರು ಇದೇ ಸಂದರ್ಭ ಹೇಳಿದರು. ಜೇನು ಕುರುಬರ ಅಭಿವೃದ್ಧಿ ಸಂಘದ ಅಧ್ಯಕ್ಷ ಮಾವಿನಹಳ್ಳ ಹಾಡಿಯ ಜೆ.ಟಿ.ಕಾಳಿಂಗ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಕೂಡ ನಮ್ಮ ಕಾಡು ಜನರಿಗೆ ಸರ್ಕಾರದ ಸೌಲಭ್ಯಗಳು ದೊರಕುತ್ತಿಲ್ಲ. ಇದೂವರೆಗೂ ನಮ್ಮ ಹಾಡಿಗಳಲ್ಲಿ ಜೇನು ಕುರುಬ ಮಂದಿ ವಾಸಿಸುತ್ತಿರುವ ಗುಡಿಸಲುಗಳಲ್ಲಿ ಸರಿಯಾಗಿ ವಿದ್ಯುತ್ ಇಲ್ಲ. ಗುಡಿಸಲುಗಳಿಗೆ ಸರಿಯಾದ ಹೊದಿಕೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಹಾಡಿಗಳ ನಿವಾಸಿಗಳ ಬಾಲ್ಯ ವಿವಾಹ ಪದ್ದತಿ ತಡೆಗಟ್ಟಬೇಕು. ಜಾಗೃತರಾಗುವ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳುವ ಉದ್ದೇಶದಿಂದಲೇ ಗ್ರಾಮ ಅರಣ್ಯ ಸಮಿತಿ ರಚನೆಯಾಗಿವೆ. ಅದರಡಿ ಅಧಿಕಾರಿಗಳು ಕಾರ್ಯನಿರ್ವಹಿಸುವ ಕಾರಣ ಜೇನು ಕುರುಬರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಗಮನ ಕೊಡಬೇಕು. ಸರ್ಕಾರ ಜೇನು ಕುರುಬರು ಹಾಗೂ ಹಿಂದುಳಿದವರಿಗೆಂದೇ ವಿವಿಧ ಶಾಲೆಗಳು ಹಾಗೂ ವಸತಿ ನಿಲಯಗಳನ್ನು ತೆರೆದಿದ್ದು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕಾಳಿಂಗ ಕರೆ ನೀಡಿದರು. ಸಭೆಯಲ್ಲಿ ಯಡವನಾಡು ಹಾಡಿಯ ಮುಖಂಡ ನಂಜಣ್ಣ, ಮಾವಿನಹಳ್ಳ ಜೇನು ಕುರುಬರ ಹಾಡಿಯ ಯಜಮಾನ ಪುಟ್ಟ, ಗೋಪಾಲ, ಸಜ್ಜಳ್ಳಿ ಹಾಡಿಯ ಮುಖಂಡ ವಿಶ್ವ ಇದ್ದರು.
ಅರಣ್ಯ ಹಕ್ಕು ಸಮಿತಿ ರಚನೆ :: ಸಭೆಯಲ್ಲಿ ಅರಣ್ಯ ಹಕ್ಕು ಸಮಿತಿಯನ್ನು ರಚಿಸಲಾಯಿತು. ಮಾವಿನಹಳ್ಳ ಹಾಡಿ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾಗಿ ಜೆ.ಆರ್.ಗೋಪಾಲ, ಉಪಾಧ್ಯಕ್ಷರಾಗಿ ಜೆ.ಎಂ.ಸರ್ವಮಂಗಳ, ಕಾರ್ಯದರ್ಶಿಯಾಗಿ ಜೆ.ಎಸ್.ಪಾಪಣ್ಣ, ಕಟ್ಟೆಹಾಡಿ ಸಮಿತಿಯ ಅಧ್ಯಕ್ಷರಾಗಿ ಅಪ್ಪು, ಉಪಾಧ್ಯಕ್ಷರಾಗಿ ಗೌರಿ, ಕಾರ್ಯದರ್ಶಿಯಾಗಿ ಚಂದ್ರಿಕಾ ಅವರನ್ನು ನೇಮಕ ಮಾಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*

ಮೇ 26, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪಮೇ 25 NEWS DESK : ಸುಂಟಿಕೊಪ್ಪದಲ್ಲಿ ವರ್ಕ್ ಶಾಪ್ ಮಾಲೀಕರ ಸಂಘದ ವತಿಯಿಂದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು…

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.