Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮಕ್ಕಡ ಕೂಟದ 97ನೇ ಪುಸ್ತಕ, ನಾಗೇಶ್ ಕಾಲೂರು ರಚಿತ “ಶ್ರೀ ಕಾವೇರಿ ಸುಪ್ರಭಾತ” ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮಕ್ಕಡ ಕೂಟದ 97ನೇ ಪುಸ್ತಕ, ನಾಗೇಶ್ ಕಾಲೂರು ರಚಿತ “ಶ್ರೀ ಕಾವೇರಿ ಸುಪ್ರಭಾತ” ಬಿಡುಗಡೆ*

ಅಕ್ಟೋಬರ್ 16, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.16 NEWS DESK : ಕೊಡವ ಮಕ್ಕಡ ಕೂಟದ 97ನೇ ಪುಸ್ತಕ, ಹಿರಿಯ ಸಾಹಿತಿ ನಾಗೇಶ್ ಕಾಲೂರು ಅವರು ರಚಿಸಿರುವ “ಶ್ರೀ ಕಾವೇರಿ ಸುಪ್ರಭಾತ” ಕೊಡವ, ಕನ್ನಡ ಕೃತಿ ಬಿಡುಗಡೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಕೊಡವ, ಕನ್ನಡ ಚಲನಚಿತ್ರದ ನಿರ್ದೇಶಕಿ ಹಾಗೂ ನಿರ್ಮಾಪಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಸುಪ್ರಭಾತ ಎಂಬ ಶಬ್ಧವೇ ಮನಸ್ಸಿಗೆ ಧನಾತ್ಮಕ ಭಾವನೆಯನ್ನು ತುಂಬುತ್ತದೆ. ಕಾವೇರಿ ಕುರಿತು ಕೃತಿ ರಚನೆ ದೇವರ ಕೆಲಸವಾಗಿದ್ದು, ಹಾಡಿನ ರೂಪದಲ್ಲಿರುವುದನ್ನು ಅಕ್ಷರ ರೂಪದಲ್ಲಿ ಹೊರತಲಾಗಿದೆ. ಇದನ್ನು ಮಕ್ಕಳು ಸುಲಭವಾಗಿ ಕಲಿಯಬಹುದು ಮತ್ತು ಪ್ರತಿಯೊಬ್ಬರಿಗೂ ಕಾವೇರಿಮಾತೆಯ ಹಿನ್ನೆಲೆಯನ್ನು ತಿಳಿಯಲು ಸಹಕಾರಿಯಾಗಲಿದೆ ಎಂದರು. ಬರೆಯುವುದು ಸುಲಭ, ಅದನ್ನು ಪುಸ್ತಕ ರೂಪದಲ್ಲಿ ಹೊರತರುವುದು ಸುಲಭದ ಮಾತಲ್ಲ. ಆದರೆ ಕೊಡವ ಮಕ್ಕಡ ಕೂಟ ಬರೆಯುವವರಿಗೆ ಪ್ರೋತ್ಸಾಹ ನೀಡುವ ಮೂಲಕ ವಿವಿಧ ಭಾಷೆಗಳ ಹಲವು ಪುಸ್ತಕಗಳನ್ನು ಹೊರತಂದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳನ್ನು ಹೊರತರಲಿ ಎಂದು ಹೇಳಿದರು. “ಶ್ರೀ ಕಾವೇರಿ ಸುಪ್ರಭಾತ” ಪುಸ್ತಕವನ್ನು ರಚಿಸಿರುವ ಹಿರಿಯ ಸಾಹಿತಿ ನಾಗೇಶ್ ಕಾಲೂರು ಅವರು ಮಾತನಾಡಿ, ನಮ್ಮ ದೇಶದ ಪವಿತ್ರ ನದಿಗಳಲ್ಲೊಂದಾದ ಕಾವೇರಿ ಕೇವಲ ಒಂದು ನದಿಯಲ್ಲ. ಅದು ಪ್ರತ್ಯಕ್ಷವಾದ ಜಲದೇವತೆ, ಆ ಪವಿತ್ರ ದೇವಿಯ ಮಹಿಮೆಯನ್ನು ಹಾಡಿನ ಮೂಲಕ ವರ್ಣಿಸಲಾಗುತ್ತಿತ್ತು. ಇದೀಗ ಅದಕ್ಕೆ ಅಕ್ಷರ ರೂಪ ನೀಡಲಾಗಿದೆ ಎಂದರು. “ಶ್ರೀ ಕಾವೇರಿ ಸುಪ್ರಭಾತ” ಪುಸ್ತಕವು ಕೊಡವ ಹಾಗೂ ಕನ್ನಡ ಅನುವಾದ ಪುಸ್ತಕವಾಗಿದ್ದು, 2004 ರಲ್ಲಿ ಸಿ.ಡಿ ರೂಪದಲ್ಲಿ ಈ ಸುಪ್ರಭಾತವನ್ನು ರವೀಂದ್ರ ಕೆ.ಸುಬ್ರಹ್ಮಣ್ಯ ಹೊರತಂದಿದ್ದರು. ನಂತರದ ದಿನಗಳಲ್ಲಿ ಮಡಿಕೇರಿ ಆಕಾಶವಾಣಿಯಲ್ಲಿ ಪ್ರಸಾರವಾಗುತ್ತಿತ್ತು. ಇದನ್ನು ಪುಸ್ತಕ ರೂಪದಲ್ಲಿ ಹೊರತರಬೇಕೆಂಬ ಆಶಯ ನಮ್ಮದಾಗಿತ್ತು. ಇದೀಗ ಕೊಡವ ಮಕ್ಕಡ ಕೂಟದ ಸಹಕಾರದೊಂದಿಗೆ ಪುಸ್ತಕವನ್ನು ಹೊರತರಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಮೂಲ ಪ್ರತಿಯನ್ನು ಕೊಡವ ಭಾಷೆಯಲ್ಲಿ ಬರೆಯಲಾಗಿದ್ದು, ಕನ್ನಡಕ್ಕೆ ಅನುವಾದ ಮಾಡಲಾಗಿದೆ. ಇದು 45 ಚರಣಗಳನ್ನು ಒಳಗೊಂಡಿದ್ದು, ಕಾವೇರಿ ತುಲಾ ಸಂಕ್ರಮಣದ ದಿನವಾದ ಅ.17 ರಂದು ತಲಕಾವೇರಿಯಲ್ಲಿ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು. ಜನರ ಅಪೇಕ್ಷೆ ಮೇರೆಗೆ ಮತ್ತಷ್ಟು ಪುಸ್ತಕಗಳು ಮರು ಮುದ್ರಣವಾಗಲಿದೆ ಎಂದರು. ಸಾಹಿತ್ಯ ಕ್ಷೇತ್ರ ಮತ್ತು ಬರಹಗಾರರಿಗೆ ಕೊಡವ ಮಕ್ಕಡ ಕೂಟ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯ ಎಂದು ನಾಗೇಶ್ ಕಾಲೂರು ಹೇಳಿದರು. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಕನ್ನಡಿಗರಿಗೆ ಓದಲು ಸಹಕಾರಿಯಾಗುವ ನಿಟ್ಟಿನಲ್ಲಿ “ಶ್ರೀ ಕಾವೇರಿ ಸುಪ್ರಭಾತ” ಪುಸ್ತಕವವನ್ನು ಕನ್ನಡದಲ್ಲೂ ಅನುವಾದ ಮಾಡಲಾಗಿದ್ದು, ಒಟ್ಟು 500 ಪ್ರತಿಗಳನ್ನು ಮುದ್ರಣ ಮಾಡಲಾಗಿದೆ. ಅವುಗಳಲ್ಲಿ 250 ಪುಸ್ತಕವನ್ನು ತಲಕಾವೇರಿಯಲ್ಲಿ ವಿತರಿಸಲಾಗುವುದು, ಮತ್ತಷ್ಟು ಪುಸ್ತಕದ ಅಗತ್ಯವಿದ್ದಲ್ಲಿ ಮುದ್ರಿಸಲಾಗುವುದೆಂದರು. ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೊಡವ ಮಕ್ಕಡ ಕೂಟ ಈವರೆಗೆ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು 96 ಕೃತಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇದೀಗ 97ನೇ ಪುಸ್ತಕವನ್ನು ಬಿಡುಗಡೆಗೊಳಿಸಿದೆ. ನಾಲ್ಕು ಪುಸ್ತಕಗಳು ತಯಾರಿ ಹಂತದಲ್ಲಿದ್ದು, ಮಹತ್ವಾಕಾಂಕ್ಷೆಯ 100ನೇ ಪುಸ್ತಕವನ್ನು ಸದ್ಯದಲ್ಲೇ ಬಿಡುಗಡೆಗೊಳಿಸಲಿದೆ ಎಂದು ಹೇಳಿದರು. ಅಂತರಾಷ್ಟ್ರೀಯ ಹಿರಿಯ ಶೆಟಲ್ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ ಮಾತನಾಡಿ, ಕಾವೇರಿ ತುಲಾ ಸಂಕ್ರಮಣದ ಸಂದರ್ಭ ಈ ಪುಸ್ತಕವನ್ನು ಹೊರತಂದಿರುವುದು ಶ್ಲಾಘನೀಯ. ಇದು ಕೊಡಗಿನ ಪ್ರತಿಯೊಬ್ಬರ ಮನೆಗಳಲ್ಲಿ ಇಡಲೇಬೇಕಾದ ಪುಸ್ತಕವಾಗಿದ್ದು, ಎಲ್ಲರೂ ಓದುವಂತಾಗಬೇಕು. ಆ ಮೂಲಕ ಕಾವೇರಿಯ ಇತಿಹಾಸವನ್ನು ತಿಳಿದುಕೊಳ್ಳುವಂತ್ತಾಗಬೇಕು ಎಂದು ಸಲಹೆ ನೀಡಿದರು. ಕೊಡವ ಮಕ್ಕಡ ಕೂಟ ಪುಸ್ತಕ ಬಿಡುಗಡೆ ಮಾಡುವ ಮೂಲಕ ಬರಹಗಾರರಿಗೆ ಪ್ರೋತ್ಸಾಹ ನೀಡುತ್ತಿದೆ. ಸಾಹಿತ್ಯಾಭಿಮಾನಿಗಳು ಆರ್ಥಿಕ ಸಹಕಾರ ನೀಡುವ ಮೂಲಕ ಬರಹಗಾರರಿಗೆ ಉತ್ತೇಜನ ನೀಡಬೇಕು ಎಂದು ತಿಳಿಸಿದರು. ವಕೀಲರಾದ ಕನ್ನಂಡ ನಳಿನಿ ಪೊನ್ನಪ್ಪ ಅವರು ಮಾತನಾಡಿ, ಪುಸ್ತಕ ಓದುವುದರಿಂದ ಜ್ಞಾನ ಹೆಚ್ಚುತ್ತದೆ. ಪ್ರತಿಯೊಬ್ಬರು ಪುಸ್ತಕ ಓದುವ ಮೂಲಕ ಬರಹಗಾರರಿಗೆ ಪ್ರೋತ್ಸಾಹ ನೀಡಬೇಕು. ಮುಂದಿನ ದಿನಗಳಲ್ಲಿ ಕೊಡವ ಮಕ್ಕಡ ಕೂಟದಿಂದ ಮತ್ತಷ್ಟು ಪುಸ್ತಕಗಳು ಹೊರಬರಲಿ ಎಂದು ಶುಭ ಹಾರೈಸಿದರು. ಸಮಾಜ ಸೇವಕರಾದ ತೆನ್ನಿರ ಗಿರಿ ಚಂಗಪ್ಪ ಉಪಸ್ಥಿತರಿದ್ದರು.
:: ಪರಿಚಯ ::
ನಾಗೇಶ್ ಕಾಲೂರು :: ಕನ್ನಡ, ಕೊಡವ ಸೇರಿದಂತೆ ಹಲವು ಭಾಷೆಗಳಲ್ಲಿ ಸಾಹಿತ್ಯ ರಚನೆ ಮಾಡುತ್ತಿರುವ ಇವರ ಕತೆ, ಕವನ, ವೈಚಾರಿಕ ಬರಹ, ನಾಟಕ, ಕಾದಂಬರಿ ಹೀಗೆ ಬೇರೆ ಬೇರೆ ಪ್ರಕಾರದ ಕೃಷಿ ಮಾಡುತ್ತಿದ್ದಾರೆ. ಕೊಡವ ಭಾಷೆಯಲ್ಲಿ “ಶ್ರೀ ಭಗವದ್ಗೀತಾ ದರ್ಶನ” (ಕಾವ್ಯ), ಕಾವೇರಿ ಸುಪ್ರಭಾತ, ಇಗ್ಗುತ್ತಪ್ಪ ಸುಪ್ರಭಾತ ಸೇರಿದಂತೆ ಹಲವು ಹಾಡುಗಳ ಸಿ.ಡಿ., ಕವನ ಸಂಕಲನ ಮಡಿಕೇರಿ ಆಕಾಶವಾಣಿಯಲ್ಲಿ ವಿವಿಧ ಕಾರ್ಯಕ್ರಮವನ್ನು ನೀಡಿದ್ದಾರೆ. ಲಘು ಶೈಲಿಯ ಭಾಷಣ, ರೇಡಿಯೋ ನಾಟಕ ಪ್ರಸಾರವಾಗಿದೆ. ಇವರ “ಪಳಮೆ ಪೊಮ್ಮಲೆ” ಸಣ್ಣ ನಾಟಕ ಜೊಪ್ಪೆಯಲ್ಲಿ 145 ಸಣ್ಣ ನಾಟಕ ಪ್ರಸಾರವಾಗಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕನ್ನಡದಲ್ಲಿ “ಕೊಡವ ಭಾಷಿಕ ಜನಾಂಗಗಳ ಸಾಂಸ್ಕೃತಿಕ ಬದುಕು” ಎನ್ನುವ ಸಂಶೋಧನಾ ಗ್ರಂಥ. “ಶ್ರೀ ಕಾವೇರಿ ದರ್ಶನಂ” ಎನ್ನುವ ಮಾಕಾವ್ಯ ಎನ್ನುವ ಎರಡು ಕವನ ಸಂಕಲನ, ಒಂದು ಕಥಾ ಸಂಕಲನ, ಅನುವಾದ ಸಾಹಿತ್ಯ ಲೋಕಾರ್ಪಣೆಗೊಂಡಿದೆ. ಇವರು ಮಡಿಕೇರಿ ಆಕಾಶವಾಣಿಯಲ್ಲಿ ವಾರ್ತಾ ವಾಚಕರಾಗಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ಐದನೇ ಮಡಿಕೇರಿ ತಾಲ್ಲೂರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಕೊಡವ ಅಧ್ಯಯನ ಪೀಠದ ಸದಸ್ಯರಾಗಿ, ಕೊಡವ ಪಠ್ಯ ಪುಸ್ತಕ ರಚನೆಕಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ “ಕೊಡವ ಜಯಭಾರತ” ಕಾವ್ಯವನ್ನು ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಗೌರವ ರಾಜ್ಯ ಪ್ರಶಸ್ತಿ, ರಾಜ್ಯಮಟ್ಟದ ಸಾಹಿತ್ಯ ಪ್ರಶಸ್ತಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವ ಪುರಸ್ಕಾರ, ಕೊಡಗು ಜಿಲ್ಲಾಡಳಿತ ರಾಜ್ಯೋತ್ಸವ ಪುರಸ್ಕಾರ, ಅಲ್ಲದೇ ಬೇರೆ ಬೇರೆ ಸಂಘ ಸಂಸ್ಥೆಗಳಿಂದ ಸನ್ಮಾನ, ಪುರಸ್ಕಾರ ನೀಡಲಾಗಿದೆ. ಪತ್ನಿ ಶಚಿದೇವಿ, ಮಗಳು ಪ್ರೀತಿ, ಮಗ ಸಂತೋಷ್, ಸೊಸೆ ವಿದ್ಯಾಲಕ್ಷ್ಮಿ, ಮೊಮ್ಮಗ ಶ್ರೀವರ್ಧನ್ ಅವರೊಂದಿಗೆ ಕಡಗದಾಳು ಗ್ರಾಮದಲ್ಲಿ ಇವರು ವಾಸವಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಕಾಡಾನೆ ಉಪಟಳ ತಡೆಗೆ ಸರಕಾರ ಬಿಡುಗಡೆ…

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.