Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.4 ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.4 ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ*

ಅಕ್ಟೋಬರ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪೊನ್ನಂಪೇಟೆ ಅ.24 NEWS DESK : ಬಿಟ್ಟಂಗಾಲ ಸಮೀಪದ ವಿ.ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2024ಅನ್ನು ಡಿ.4 ರಿಂದ 8ರವರೆಗೆ ಆಯೋಜಿಸಲಾಗಿದೆ ಎಂದು ಹೈಪ್ಲೈಯರ್ಸ್ ತಂಡದ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೌಟುಂಬಿಕ ಹಾಕಿ ಪಂದ್ಯಾವಳಿಯು ವಿ.ಬಾಡಗ ಗ್ರಾಮದಲ್ಲಿ 3ನೇ ಬಾರಿಗೆ ಜರುಗುತ್ತಿದೆ. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯುವ ಈ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿರುವುದಾಗಿ ರಂಜು ಪೂಣಚ್ಚ ಮಾಹಿತಿ ನೀಡಿದರು. ಕುಟುಂಬ ತಂಡಗಳಲ್ಲಿ ಗರಿಷ್ಠ 4 ಅತಿಥಿ ಆಟಗಾರರು ಭಾಗವಹಿಸಬಹುದಾಗಿದೆ. ಆದರೆ ಅತಿಥಿ ಆಟಗಾರರು ಕಡ್ಡಾಯವಾಗಿ ಕೊಡವ ಆಟಗಾರರಾಗಿರಬೇಕು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಕೊಡವ ಸಾಂಪ್ರದಾಯಿಕ ಪಾರಿತೋಷಕಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿರುವ ರಂಜು ಪೂಣಚ್ಚ, ಕ್ರೀಡಾ ಪ್ರೇಮಿಗಳ ಆರ್ಥಿಕ ನೆರವಿನಿಂದ ಕಳೆದ ಎರಡು ವರ್ಷ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಸಂಪೂರ್ಣವಾಗಿ ದಾನಿಗಳ ನೆರವಿನಿಂದಲೇ ಪಂದ್ಯಾವಳಿ ಜರುಗಲಿದ್ದು, ಗ್ರಾಮಸ್ಥರು ಮತ್ತು ಪ್ರಾಯೋಜಕರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಹಾಕಿ ಪಂದ್ಯಾವಳಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಈ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಈ ಕಾರಣಕ್ಕಾಗಿ ಹೈ ಫ್ಲೈಯರ್ಸ್ ಎಂಬ ಕ್ರೀಡಾ ಸಂಸ್ಥೆಯನ್ನು ಕಳೆದ ಎರಡು ವರ್ಷಗಳ ಹಿಂದೆ ಹುಟ್ಟು ಹಾಕಲಾಗಿದೆ ಎಂದು ವಿವರಿಸಿರುವ ರಂಜು ಪೂಣಚ್ಚ, ಹಾಕಿ ಕೂರ್ಗ್ ಸಂಸ್ಥೆಯ ಅಧೀನದಲ್ಲಿ ನಡೆಯಲಿರುವ ಈ ಹಾಕಿ ಪಂದ್ಯಾವಳಿಯು ಹಾಕಿ ಕರ್ನಾಟಕ ಸಂಸ್ಥೆಯ ನಿಯಮಾವಳಿಗೆ ಬದ್ಧವಾಗಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದೆ. ಆಸಕ್ತ ಕುಟುಂಬ ತಂಡಗಳು ಪಂದ್ಯಾವಳಿಗೆ ಹೆಸರು ನೋಂದಾಯಿಸಲು ನವೆಂಬರ್ 20 ಕೊನೆಯ ದಿನವಾಗಿರುತ್ತದೆ. ಪಂದ್ಯಾವಳಿಯ ಕುರಿತ ಹೆಚ್ಚಿನ ಮಾಹಿತಿಗಾಗಿ 9481883738/ 9448306340 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ಸಂಸ್ಥೆಯ ಕ್ರೀಡಾ ಕಾರ್ಯದರ್ಶಿಗಳಾದ ಕುಪ್ಪಂಡ ದಿಲನ್ ಬೋಪಣ್ಣ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಹಾಕಿ ಪಂದ್ಯಾವಳಿಯನ್ನು ನಿರಂತರವಾಗಿ ಆಯೋಜಿಸುವುದರಿಂದ ಹಾಕಿ ಕ್ರೀಡೆಗೆ ಮತ್ತಷ್ಟು ಉತ್ತೇಜನ ದೊರೆತಂತಾಗುತ್ತದೆ. ಗ್ರಾಮೀಣ ಮಟ್ಟದ ಕ್ರೀಡಾಕೂಟಗಳಿಂದ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಂತಾಗುತ್ತದೆ. ಕಳೆದ ಬಾರಿ ಆಯೋಜಿಸಿದ್ದ ಈ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು 19 ಕುಟುಂಬ ತಂಡಗಳು ಭಾಗವಹಿಸಿದ್ದವು. ಈ ಬಾರಿ 25 ತಂಡಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಸಂಸ್ಥೆಯ ಸಲಹಾ ಸಮಿತಿ ನಿರ್ದೇಶಕರಾದ ಕೊಂಗಂಡ ಕಾಶಿ ಕಾರ್ಯಪ್ಪ, ಉಪಾಧ್ಯಕ್ಷರಾದ ಕಂಜಿತಂಡ ವಿಕ್ರಾಂತ್ ಮತ್ತು ಸ್ವಾಗತ ಸಮಿತಿ ಸಂಚಾಲಕರಾದ ಚೇಮಿರ ಪ್ರಭು ಪೂವಯ್ಯ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ…

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.