Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀಲಂಕಾದಿಂದ ಕಾಳು ಮೆಣಸು ಆಮದು : ಐದು ವಾರಗಳಲ್ಲಿ ಕಿಲೋಗೆ 35 ರೂಪಾಯಿ ಕುಸಿತ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಶ್ರೀಲಂಕಾದಿಂದ ಕಾಳು ಮೆಣಸು ಆಮದು : ಐದು ವಾರಗಳಲ್ಲಿ ಕಿಲೋಗೆ 35 ರೂಪಾಯಿ ಕುಸಿತ*

ಅಕ್ಟೋಬರ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೊಚ್ಚಿನ್‌ ಅ.25 NEWS DESK : ದೇಶೀ ಮಾರುಕಟ್ಟೆಯಲ್ಲಿ ಕಾಳು ಮೆಣಸಿನ ದರವು ಎರಡು ವಾರಗಳಲಿ ಕಿಲೋಗೆ 19 ರೂಪಾಯಿಗಳಷ್ಟು ಕುಸಿತ ಕಂಡಿದೆ. ಕಳೆದ ವಾರದಲ್ಲಿಯೇ ಕಿಲೋಗೆ ₹ 11 ಕುಸಿತವಾಗಿದೆ, ಕಳೆದ ಐದು ವಾರಗಳಲ್ಲಿ ಒಟ್ಟು ಕುಸಿತವು ಕೆಜಿಗೆ ₹ 35ರಷ್ಟು ಕುಸಿದಿದೆ. (South Asian Free Trade Area ) SAFTA ಅಡಿಯಲ್ಲಿ 8 ಶೇಕಡಾ ಸುಂಕದ ಅಡಿಯಲ್ಲಿ ಶ್ರೀಲಂಕಾದಿಂದ ಆಮದು ಮಾಡಿದ ಉತ್ಪನ್ನಗಳ ಬೃಹತ್ ಆಗಮನವು ಬೆಲೆ ಕುಸಿತಕ್ಕೆ ಕಾರಣವೆಂದು ಬೆಳೆಗಾರ ಸಂಘಟನೆಗಳು ಆರೋಪಿಸಿದೆ. ಕೊಚ್ಚಿ ಟರ್ಮಿನಲ್ ಮಾರುಕಟ್ಟೆಯಲ್ಲಿ ಅನ್‌ಗಾರ್ಬಲ್ಡ್‌ ಕಿಲೋಗೆ ₹ 627 ಮತ್ತು ಗಾರ್ಬಲ್ಡ್‌ಗೆ ₹ 647 ರಂತೆ ಬೆಲೆಗಳು ಇವೆ. ಕೊಚ್ಚಿಯ ಕಾಳುಮೆಣಸಿನ ವ್ಯಾಪಾರಿ ಕಿಶೋರ್ ಶಾಮ್‌ಜಿ, ಮುಂಬೈನಿಂದ ಬಂದಿರುವ ಶ್ರೀಲಂಕಾದ ಕಾಳುಮೆಣಸು ಲಭ್ಯತೆಯೊಂದಿಗೆ ಬಹುತೇಕ ಎಲ್ಲಾ ಮಾರುಕಟ್ಟೆಗಳು ತುಂಬಿವೆ ಮತ್ತು ದಕ್ಷಿಣದ ಮಾರುಕಟ್ಟೆಗಳಲ್ಲಿಯೂ ಮಾರಾಟವಾಗುತ್ತಿದೆ ಎಂದು ಹೇಳಿದರು. ಶ್ರೀಲಂಕಾದ ಆಮದಿನ ಕಾರಣದಿಂದ ಸ್ಥಳೀಯವಾಗಿ ಬೆಳೆದ ಕಾಳುಮೆಣಸಿನ ಬೆಲೆ ಮೇಲೆ ಮತ್ತಷ್ಟು ಒತ್ತಡವನ್ನು ಹಾಕಿದ್ದು ಇದು ದರ ಕುಸಿತಕ್ಕೆ ಕಾರಣವಾಗುತ್ತದೆ ಮತ್ತು ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿ ಕಾಳು ಮೆಣಸು ಬೆಳೆಯುತ್ತಿರುವ ಬೆಳೆಗಾರರು ತಮ್ಮ ಸ್ಟಾಕ್ ಅನ್ನು ಮಾರಾಟ ಮಾಡಲು ಮುಂದಾಗುತಿದ್ದಾರೆ. ಬೆಲೆ ಚೇತರಿಕೆಯ ನಿರೀಕ್ಷೆಯಲ್ಲಿ ಕಾಳುಮೆಣಸು ದಾಸ್ತಾನು ಇಟ್ಟಿದ್ದ ರೈತರ ಸಂಘಗಳು ಸಹ ತಮ್ಮ ದಾಸ್ತಾನುಗಳನ್ನು ಖಾಲಿ ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು. ಅಂಕಿಅಂಶಗಳನ್ನು ಉಲ್ಲೇಖಿಸಿ, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಶ್ರೀಲಂಕಾದಿಂದ ಒಟ್ಟು 10,433 ಟನ್‌ ಆಮದು ಆಗಿದ್ದು ಇತರ ಉತ್ಪಾದಕ ದೇಶಗಳಿಂದ ಒಟ್ಟು 12,606 ಟನ್‌ ಆಮದಾಗಿದೆ. ಶ್ರೀಲಂಕಾ ವಾರ್ಷಿಕವಾಗಿ 25 ಸಾವಿರ ಟನ್‌ ಉತ್ಪಾದನೆ ಮಾಡುತಿದ್ದು ಇದರಲ್ಲಿ ಅರ್ದಕ್ಕಿಂತ ಹೆಚ್ಚು ಕಾಳು ಮೆಣಸನ್ನು ರಫ್ತು ಮಾಡಲೇ ಬೇಕಿದೆ. ಏಕೆಂದರೆ ಅಲ್ಲಿನ ಆಂತರಿಕ ಬಳಕೆ ಕಡಿಮೆ ಇದೆ. ತಮ್ಮ ಹೆಚ್ಚುವರಿ ದಾಸ್ತಾನುಗಳನ್ನು ಮಾರಾಟ ಮಾಡಲು ಭಾರತದತ್ತ ನೋಡುತ್ತಿದ್ದಾರೆ ಎಂದು ಭಾರತೀಯ ಮೆಣಸು ಮತ್ತು ಮಸಾಲೆಗಳ ವ್ಯಾಪಾರ ಸಂಘದ ನಿರ್ದೇಶಕರೂ ಆಗಿರುವ ಶಾಮ್‌ ಜಿ ಹೇಳಿದ್ದಾರೆ. ಆದರೆ ಆಮದು ಮಾಡಲಾದ ವಸ್ತುವು ಕಡಿಮೆ ಪ್ರಮಾಣದ ಸಾಂದ್ರತೆ, ಹೆಚ್ಚಿನ ಶೇಕಡಾವಾರು ತೇವಾಂಶ ಮತ್ತು ಶಿಲೀಂಧ್ರದ ಉಪಸ್ಥಿತಿಯನ್ನು ಹೊಂದಿದೆ ಎಂದು ಅವರು ಆರೋಪಿಸಿದರು ಮತ್ತು ಇದು ಭಾರತದಲ್ಲಿ ಉತ್ಪಾದಿಸಿದ ಮೆಣಸಿಗೆ ಬೆಲೆಗಳು ಕುಸಿಯಲು ಕಾರಣವಾಗುವ ಅಂಶವಾಗಿದೆ ಎಂದು ಅವರು ಆರೋಪಿಸಿದರು. ಭಾರತದ ಒಟ್ಟು ಉತ್ಪಾದನೆ 70 ಸಾವಿರ ಟನ್‌ಗಳಷ್ಟಿದ್ದು ಇದರಲ್ಲಿ ಶೇಕಡಾ 45 ರಷ್ಟು ಕರ್ನಾಟಕದ ಪಾಲು ಆಗಿದೆ. ಭಾರತೀಯ ಕಾಳುಮೆಣಸು ಮತ್ತು ಮಸಾಲೆ ವ್ಯಾಪಾರಿಗಳ ಒಕ್ಕೂಟದ ಕೇರಳ ಘಟಕವು ದೇಶೀಯ ರೈತರ ಹಿತಾಸಕ್ತಿಗಳಿಗೆ ಮಾರಕ ಆಗಿರುವ ಇಂತಹ ಆಮದುಗಳನ್ನು ತಡೆಯಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ. ಆಮದು ನೀತಿಯಲ್ಲಿನ ಲೋಪದೋಷಗಳು ಮರು-ರಫ್ತು ಮಾಡಲು ಉದ್ದೇಶಿಸಿರುವ ಆಮದು ಮಾಡಿದ ಕಾಳುಮೆಣಸನ್ನು ದೇಶೀಯ ಮಾರುಕಟ್ಟೆಗೆ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ ಎಂದು ಒಕ್ಕೂಟವು ಆರೋಪಿಸಿದೆ. ಭಾರತದೊಳಗೆ ಮೆಣಸನ್ನು ಆಮದು ಮಾಡಿಕೊಂಡು ಅದನ್ನು ಮರು-ರಫ್ತು ಮಾಡಲು ( Director General of Foreign Trade) ಡಿಜಿಎಫ್‌ಟಿ ಆರು ತಿಂಗಳ ಅವಧಿಯನ್ನು ನೀಡಿದೆ, ಇದು ಕಾಳುಮೆಣಸಿನಂತಹ ಸೂಕ್ಷ್ಮ ವಸ್ತುವಿನ ಆಮದು-ರಫ್ತು ನೀತಿಯಲ್ಲಿನ ಪ್ರಮುಖ ವೈಪರೀತ್ಯಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ಈ ಆರು ತಿಂಗಳು ದಾಸ್ತಾನು ಇಡುವ ಅನುಮತಿಯಿಂದಾಗಿ ಮರು ರಫ್ತು ಮಾಡಲು ಆಮದು ಮಾಡಿಕೊಂಡ ವ್ಯಾಪಾರಿಗಳು ಅದನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಲಾಭ ಗಳಿಸುತಿದ್ದಾರೆ. ಇದನ್ನು ತಡೆಯಲು ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳುವಂತೆ ಸಂಘಟನೆಗಳು ಒತ್ತಾಯಿಸಿವೆ.

ವರದಿ : ಕೋವರ್‌ ಕೊಲ್ಲಿ ಇಂದ್ರೇಶ್‌  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.