Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
  • *ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡ್ಲೂರು : ನ.9 ರಂದು ಹಿ.ಚಿ ಹಬ್ಬ ಮತ್ತು ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡ್ಲೂರು : ನ.9 ರಂದು ಹಿ.ಚಿ ಹಬ್ಬ ಮತ್ತು ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*

ಅಕ್ಟೋಬರ್ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಅ.30 NEWS DESK : ಕನ್ನಡದ ಪ್ರಖ್ಯಾತ ದೇಸಿ ವಾಹಿನಿ ಜನಪದ ಸಿರಿ ಕನ್ನಡ ತಂಡದ ಆಶ್ರಯದಲ್ಲಿ ನ.9 ರಂದು
ಕುಶಾಲನಗರದ ಕೂಡ್ಲೂರು ವೀರ ಭೂಮಿ ಜನಪದ ಗ್ರಾಮದಲ್ಲಿ ಹಿ.ಚಿ ಹಬ್ಬ ಮತ್ತು ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ -2024 ಹಮ್ಮಿಕೊಳ್ಳಲಾಗಿದೆ ಎಂದು ಜನಪದ ಸಿರಿ ತಂಡದ ಮುಖ್ಯಸ್ಥ ಜರಗನಹಳ್ಳಿ ಕಾಂತರಾಜು ತಿಳಿಸಿದ್ದಾರೆ. ವೀರ ಭೂಮಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಗಿರಿಜನ ಜಾನಪದ ಸಂಪತ್ತು ಎಂದು ಖ್ಯಾತರಾಗಿರುವ ಹಂಪೆ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರು ಆಗಿರುವ ಡಾ. ಹಿ.ಚಿ ಬೋರ ಲಿಂಗಯ್ಯ ಅವರಿಗೆ 70 ವರ್ಷ ಸಂದಿರುವ ಹಿನ್ನೆಲೆಯಲ್ಲಿ ಈ ವಿಶೇಷ ಹಬ್ಬ ಆಚರಣೆ ಮಾಡಲಾಗುತ್ತಿದೆ ಎಂದರು.  ಬುಡಕಟ್ಟು ಗಿರಿಜನರ ಪರವಾಗಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿರುವ ಡಾ.ಬೋರಲಿಂಗಯ್ಯ ಅವರನ್ನು ಈ ಸಂದರ್ಭ ಗೌರವ ಪೂರ್ವಕವಾಗಿ ಜನಪದ ಸಿರಿ ಕನ್ನಡದಿಂದ ಮತ್ತು ಜನಪದ ಕಲಾವಿದರ ಮೂಲಕ ಸನ್ಮಾನಿಸಿ ಗೌರವಿಸಲಾಗುವುದು.  ಶಾಸ್ತ್ರೀಯ ಕಲೆಗಾರರಿಗೆ ದೊರಕುವ ಎಲ್ಲ ರೀತಿಯ ಸೌಲಭ್ಯಗಳು ಜಾನಪದ ಕಲೆಗಾರರಿಗೆ ಕೂಡ ಲಭಿಸಬೇಕು ಎನ್ನುವ ಉದ್ದೇಶದೊಂದಿಗೆ ಕಳೆದ ನಾಲ್ಕು ದಶಕಗಳಿಂದ ಪಶ್ಚಿಮ ಘಟ್ಟಗಳ ಅರಣ್ಯಗಳ ನಡುವೆ ಅಲೆದು ಬುಡಕಟ್ಟು ಜನರ ಸಂಪರ್ಕ ಮಾಡುವ ಮೂಲಕ ನಾಡಿಗೆ ಪರಿಚಯಿಸಿದ ಡಾ ಬೋರಲಿಂಗಯ್ಯ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.  ಈ ಕಾರ್ಯಕ್ರಮದಲ್ಲಿ ರಾಜ್ಯದ ಬುಡಕಟ್ಟು ಕಲಾವಿದರನ್ನು ಒಂದೆಡೆ ಸೇರಿಸುವ ಕಾರ್ಯಕ್ರಮ ಇದಾಗಿದೆ. ಸುಮಾರು 10 ಬುಡಕಟ್ಟು ಜನಾಂಗ ಒಂದೇ ಕಡೆ ಸೇರಿ ನಾನಾ ಪ್ರಕಾರಗಳ ಕಲೆಗಳ ಪ್ರದರ್ಶನ ನಡೆಸಲಿದೆ ಎಂದು ಕಾಂತರಾಜು ತಿಳಿಸಿದರು. ನಾಲ್ಕು ದಶಕಗಳ ಹಿಂದೆ ಗಿರಿಜನರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದ ಸರ್ಕಾರಗಳಿಗೆ ಅರಣ್ಯ ಮತ್ತು ಪಶ್ಚಿಮ ಘಟ್ಟಗಳ ನಡುವೆ ನೆಲೆಸಿದ್ದ ಗಿರಿಜನರ ಬುಡಕಟ್ಟು ಜನಾಂಗವನ್ನು ಜನಗಣತಿಯಲ್ಲಿ ಸೇರ್ಪಡೆ ಮಾಡಲು ಶ್ರಮಿಸಿದ ಬೋರಲಿಂಗಯ್ಯ ಅವರ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರ ಸಮ್ಮುಖದಲ್ಲಿ ಅವರನ್ನು ಗೌರವಿಸಲಾಗುವುದು. ಬುಡಕಟ್ಟು ಜನಾಂಗಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು. ಅಂದು ನಡೆಯುವ ಜನಪದ ಸಿರಿ ಕಾರ್ಯಕ್ರಮದಲ್ಲಿ ಜನಪದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಕೂಡ ನಡೆಯಲಿದೆ.  ಮುಖ್ಯ ಅತಿಥಿಗಳಾಗಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ವಿಶ್ರಾಂತ ಕುಲಪತಿಗಳು ನಾಡಿನ ಖ್ಯಾತ ಜಾನಪದ ಗಾಯಕರು ಜನಪ್ರತಿನಿಧಿಗಳು ಜಾನಪದ ತಜ್ಞರು ಚಿಂತಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು. ವಿವಿಧ ಸಮುದಾಯಗಳ ನೆಲಮೂಲ ಸಂಸ್ಕೃತಿಯ ಪ್ರತಿನಿಧಿಗಳಿಗೆ ಕಲಾವಿದರಿಗೆ ಖ್ಯಾತ ರಂಗ ನಿರ್ದೇಶಕರುಗಳಿಗೆ ಜಾನಪದ ಕಲೆಗಳ ಪರಿಚಯಕರಿಗೆ ಈ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ವೀರಭೂಮಿ ಜನಪದ ಗ್ರಾಮದ ಪ್ರಧಾನ ವ್ಯವಸ್ಥಾಪಕ ಎಂ.ಪಿ.ಅವಿನಾಶ್, ವ್ಯವಸ್ಥಾಪಕರಾದ ಹೆಚ್.ಆರ್.ನಾಗೇಂದ್ರ ಮತ್ತು ಜಿ.ಕೆ.ಪೃಥ್ವಿರಾಜ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 8 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 11…

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026

*ಕೋರಗಲ್ಲು ಬಸವೇಶ್ವರ ಸ್ವಾಮಿ ವಿಗ್ರಹ ಪುನರ್  ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.