Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಓಣಂ ಸಂಭ್ರಮ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಓಣಂ ಸಂಭ್ರಮ : ಸಾಧಕರಿಗೆ ಸನ್ಮಾನ*

ನವೆಂಬರ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.2 NEWS DESK : ಮಲಯಾಳಿಗರ ಸಂಸ್ಕೃತಿ, ಸಂಪ್ರದಾಯದ ಅನಾವರಣದೊಂದಿಗೆ ಮಡಿಕೇರಿಯಲ್ಲಿ ಓಣಾಘೋಷಂ ಹಾಗೂ ಓಣಂ ಸಧ್ಯ ಕಾರ್ಯಕ್ರಮ ನಡೆಯಿತು. ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಹಿಂದೂ ಮಲಯಾಳಿ ಸಮಾಜ ಮಡಿಕೇರಿ ಘಟಕದ ವತಿಯಿಂದ ಓಣಂ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಲಯಾಳಿಗರು ಒಂದಾಗಿ ಸಂಭ್ರಮಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯಗಳು, ಹಾಡು ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮಕ್ಕೆ ಮೆರುಗು ನೀಡಿದವು. ಇದರೊಂದಿಗೆ ಹಬ್ಬದ ಸಧ್ಯ (ಭೋಜನ) ಸವಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಓಣಂ ಅದ್ಭುತ ಐತಿಹ್ಯ, ಸಂಪ್ರದಾಯ ಹೊಂದಿರುವ ಹಬ್ಬವಾಗಿದೆ. ಸಾರ್ವಜನಿಕವಾಗಿ ಹಬ್ಬ ಆಚರಣೆ ಮೂಲಕ ಜನಾಂಗವನ್ನು ಒಗ್ಗಟ್ಟಿಸುವ ಕೆಲಸವಾಗುತ್ತಿದೆ. ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ರೀತಿಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಎಲ್ಲಿದ್ದರೂ ಸಂಸ್ಕೃತಿ, ಸಂಪ್ರದಾಯ ಮರೆಯಬಾರದು ಎಂದು ಕರೆ ನೀಡಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೂ ಸಮಾಜದಲ್ಲಿ ವಿವಿಧ ಆಚಾರ, ವಿಚಾರ, ಪದ್ಧತಿಗಳಿವೆ. ಆದರೆ ವಿವಿಧತೆಯಲ್ಲಿ ಏಕತೆಯನ್ನು ಕಾಣುತ್ತೇವೆ. ನಾವೆಲ್ಲ ಬಂಧು-ನಾವೆಲ್ಲ ಹಿಂದೂ ಎಂಬ ಭಾವನೆ ನಮ್ಮಲ್ಲಿ ಮೂಡಬೇಕು. ಮಲಯಾಳಿ ಸಂಘ ಸಂಘಟನಾತ್ಮಕವಾಗಿ ಸಂಸ್ಕೃತಿ,ಉಳಿಸುವ ಕೆಲಸ ಮಾಡುತ್ತಿದೆ. ಗ್ರಾಮ ಮಟ್ಟದಲ್ಲಿ ಸಂಘ ಬೆಳೆಯಬೇಕು. ಹಿಂದೂ ಸಮಾಜ ಗಟ್ಟಿಯಾಗಬೇಕಾದರೆ ಜನಾಂಗಗಳು ಸಂಘಟಿತಗೊಳ್ಳಬೇಕು. ಓಣಂಘೋಷಂ ಮೂಲಕ ಬೇಧ-ಭಾವವಿಲ್ಲದೆ ಒಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಲಕಸಬು, ಕರಕುಶಲ, ನಾವು ಮಾಡುತ್ತಿರುವ ಕೆಲಸವನ್ನು ಮಕ್ಕಳಿಗೆ ಕಲಿಸಬೇಕು, ಇದರಿಂದ ಮಕ್ಕಳಲ್ಲಿ ಸ್ವಾಭಿಮಾನ ಮೂಡಿ ಧೈರ್ಯದಿಂದ ಸಮಾಜದಲ್ಲಿ ಬದುಕುತ್ತಾರೆ. ಸಮಾಜ ಕ್ಲಿಷ್ಟಕರ ಪರಿಸ್ಥತಿಯಲ್ಲಿದೆ. ಈ ಹಿನ್ನೆಲೆ ಮಕ್ಕಳ ಮೇಲೆ ನಿಗಾವಹಿಸಬೇಕು. ತಪ್ಪುದಾರಿ ಹಿಡಿಯದಂತೆ ಎಚ್ಚರವಹಿಸಬೇಕು. ನೈತಿಕ ಶಿಕ್ಷಣ ನೀಡಬೇಕು ಎಂದು ಕರೆ ನೀಡಿದರು. ನಗರಸಭಾ ಮಾಜಿ ಸದಸ್ಯ ಕೆ.ಎಂ.ಗಣೇಶ್ ಮಾತನಾಡಿ, ರಾಜಕೀಯ ಮಧ್ಯ ಪ್ರವೇಶದಿಂದ ಸಂಘಟನೆಗಳು ಹಾಳಾದ ಉದಾಹರಣೆಗಳಿವೆ. ಆದರೆ ಮಲಯಾಳಿ ಸಂಘ ವ್ಯವಸ್ಥಿತ ಹಾಗೂ ಉತ್ತಮ ಗುರಿಯೊಂದಿಗೆ ಸಾಗುತ್ತಿದೆ. ಮಲಯಾಳಿಗರು ಸ್ಥಳೀಯ ನಾಡು-ನುಡಿಯನ್ನು ಗೌರವಿಸುತ್ತಿರುವುದು ಪ್ರಶಂಸನೀಯ ಎಂದರು. ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಆರ್.ವಾಸುದೇವ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಎನ್.ಆರ್.ಸ್ನೇಹಾ, ಕೆ.ಎ.ಅಪೇಕ್ಷಾ, ಕೆ.ಎಸ್.ಬಿನೀಶ್, ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎನ್.ಆರ್.ಸ್ನೇಹಾ, ಕೆ.ಎ.ಅಪೇಕ್ಷಾ, ಕೆ.ಎಸ್.ಬಿನೀಶ್, ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ದೀಕ್ಷಾ, ಎ.ಎಸ್.ಸಂಚಿಂತ್ ಅವರುಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೆಂದ್ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ಡಿ.ಹೆಚ್.ಗಣೇಶ್, ಹಿಂದೂ ಮಲಯಾಳಿ ಸಮಾಜ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್, ಪ್ರಧಾನ ಕಾರ್ಯದರ್ಶಿ ಎಂ.ಎಸ್.ದಿನೇಶ್ ನಾಯರ್, ಖಜಾಂಚಿ ಎಂ.ಪಿ.ರವಿ, ನಾಪೋಕ್ಲು ಘಟಕ ಅಧ್ಯಕ್ಷ ಕೆ.ಕೆ.ಅನಿಲ್, ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜನ್, ಯುವ ಘಟಕ ಅಧ್ಯಕ್ಷ ಆರ್.ಅರವಿಂದ್ ಸೇರಿದಂತೆ ವಿವಿಧ ಮಲಯಾಳಿ ಸಂಘಗಳ ಅಧ್ಯಕ್ಷರು ಹಾಜರಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಕನ್ನಡ ಧ್ವಜವನ್ನು ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ನಿವೃತ್ತ ಪೊಲೀಸ್ ಅಧಿಕಾರಿ, ರಾಷ್ಟ್ರಪತಿ ಪದಕ ಪುರಸ್ಕøತ ಎಂ.ಅಚ್ಚುತ್ತ ನಾಯರ್ ರಾಷ್ಟ್ರ ಧ್ವಜಾರೋಹಣ ಮಾಡಿದರು.
ತಿರುವದರ ನೃತ್ಯದ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ದೀಪ್ತಿ ಧರ್ಮೆಂದ್ರ ಪ್ರಾರ್ಥಿಸಿದರು. ಟಿ.ಕೆ.ಸದೀರ್ ಸ್ವಾಗತಿಸಿದರು, ಅನು ಅನೀಶ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.