Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.30 ರಂದು ‘ಜಿಲ್ಲಾ ಮಟ್ಟದ ಯುವಜನೋತ್ಸವ : ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಿ.ಟಿ.ವಿಸ್ಮಯಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.30 ರಂದು ‘ಜಿಲ್ಲಾ ಮಟ್ಟದ ಯುವಜನೋತ್ಸವ : ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಿ.ಟಿ.ವಿಸ್ಮಯಿ ಕರೆ*

ನವೆಂಬರ್ 13, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.13 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ, ಸೋಮವಾರಪೇಟೆ ಮತ್ತು ವಿರಾಜಪೇಟೆ, ಫೀಲ್ಡ್ ಮಾರ್ಷಲ್ ಕೆಂ.ಎಂ.ಕಾರ್ಯಪ್ಪ ಕಾಲೇಜು ಸಹಯೋಗದೊಂದಿಗೆ ಕೊಡಗು ‘ಜಿಲ್ಲಾ ಮಟ್ಟದ ಯುವಜನೋತ್ಸವ’ ಕಾರ್ಯಕ್ರಮವು ನ.30 ರಂದು ನಗರದ ಫೀಲ್ಡ್ ಮಾರ್ಷಲ್ ಕೆಂ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಲಿದೆ.
ವಿಷಯಾಧಾರಿತ ಸ್ಪರ್ಧೆ: ವಿಜ್ಞಾನ ಮೇಳ ಗುಂಪು ಸ್ಪರ್ಧೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಧುನಿಕತೆ ವಿಷಯದ ಬಗ್ಗೆ ಪ್ರದರ್ಶನವಿರಬೇಕು. ಇದರಲ್ಲಿ ನಾವಿನ್ಯತೆಗೆ ಪ್ರಾತಿನಿಧ್ಯ ನೀಡಲಾಗುವುದು ಸಕ್ರಿಯ ಮಾದರಿ ತಯಾರಿಕೆಯ ಪ್ರದರ್ಶನವಿರಬೇಕು. (ವಿಶೇಷ ಸೂಚನೆ: ನಿಷ್ಕ್ರಿಯ ಮಾದರಿ ತಯಾರಿಕೆಗೆ ಅವಕಾಶವಿಲ್ಲ ಉದಾಹರಣೆ: ಡ್ಯಾಂ, ಸೋಲಾರ್ ಮಾದರಿ ಸಿಸ್ಟಮ್) ಪ್ರಥಮ ರೂ. 7 ಸಾವಿರ, ದ್ವಿತೀಯ ರೂ. 5 ಸಾವಿರ, ತೃತೀಯ ರೂ.3 ಸಾವಿರ. ವೈಯಕ್ತಿಕ ಸ್ಪರ್ಧೆಗಳು ಬೇರೆ ಪ್ರತ್ಯೇಕವಾಗಿದೆ. ಪ್ರಥಮ ರೂ.3 ಸಾವಿರ, ದ್ವಿತೀಯ ರೂ.2 ಸಾವಿರ, ತೃತೀಯ ರೂ.1,500 ಆಗಿರುತ್ತದೆ.
ಗುಂಪು ಸ್ಪರ್ಧೆ: ಜನಪದ ನೃತ್ಯ (ತಂಡ) ಸಾಂಸ್ಕ್ರತಿಕ ಉತ್ಸವ: 10 ಜನ ಇರಬೇಕು. 15 ನಿಮಿಷ, ಯಾವುದೇ ರೀತಿಯ ರೀಮಿಕ್ಸ್ ಅಥವಾ ಮೂಲ ಹಾಡಿನ ಬದಲಾವಣೆಗೆ ಅವಕಾಶ ಇರುವುದಿಲ. ಮೂಲ ಜಾನಪದ ಗೀತೆಯನ್ನು ಮಾತ್ರ ಪರಿಗಣಿಸತಕ್ಕದು. ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ ಇರಬೇಕು. ಪ್ರಥಮ ರೂ.7 ಸಾವಿರ, ದ್ವಿತೀಯ ರೂ. 5 ಸಾವಿರ ಮತ್ತು ತೃತೀಯ 3 ಸಾವಿರ ಬಹುಮಾನ ನೀಡಲಾಗುತ್ತದೆ.
ಜನಪದ ಗೀತೆ(ತಂಡ) ಸಾಂಸ್ಕ್ರತಿಕ ಉತ್ಸವ: 10 ಜನ ಇರಬೇಕು. 07 ನಿಮಿಷ. ಯಾವುದೇ ರೀತಿಯ ರೀಮಿಕ್ಸ್ ಅಥವಾ ಮೂಲ ಹಾಡಿನ ಬದಲಾವಣೆಗೆ ಅವಕಾಶ ಇರುವುದಿಲ.್ಲ ಮೂಲ ಜಾನಪದ ಗೀತೆಯನ್ನು ಮಾತ್ರ ಪರಿಗಣಿಸತಕ್ಕದು. ಕನ್ನಡ/ ಆಂಗ್ಲ/ ಹಿಂದಿ ಭಾಷೆಯಲ್ಲಿ ಮಾತ್ರ ಇರಬೇಕು. ಪ್ರಥಮ ರೂ. 5 ಸಾವಿರ, ದ್ವಿತೀಯ ರೂ. 3 ಸಾವಿರ ಮತ್ತು ತೃತೀಯ ರೂ. 1 ಸಾವಿರ ಆಗಿರುತ್ತದೆ.
ವೈಯಕ್ತಿಕ ಸ್ಪರ್ಧೆಗಳು: ಜನಪದ ನೃತ್ಯ(ವೈಯಕ್ತಿಕ) ಸಾಂಸ್ಕ್ರತಿಕ ಉತ್ಸವ(ಒಬ್ಬರು) 15 ನಿಮಿಷ ಮತ್ತು ಜನಪದ ಗೀತೆ (ವೈಯಕ್ತಿಕ) ಸಾಂಸ್ಕ್ರತಿಕ ಉತ್ಸವ ಯಾವುದೇ ರೀತಿಯ ರೀಮಿಕ್ಸ್ ಅಥವಾ ಮೂಲ ಹಾಡಿನ ಬದಲಾವಣೆಗೆ ಅವಕಾಶ ಇರುವುದಿಲ.್ಲ ಮೂಲ ಜಾನಪದ ಗೀತೆಯನ್ನು ಮಾತ್ರ ಪರಿಗಣಿಸಬೇಕು. ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ ಇರಬೇಕು. ಪ್ರಥಮ ರೂ. 2 ಸಾವಿರ, ದ್ವಿತೀಯ ರೂ. 1500 ಮತ್ತು ತೃತೀಯ ರೂ. 1 ಸಾವಿರ ಆಗಿರುತ್ತದೆ.
ಕಥೆ ಬರೆಯುವುದು ಯುವ ಬರಹಗಾರರ ಸ್ಪರ್ಧೆ ಮತ್ತು ಕವಿತೆ ಬರೆಯುವುದು ಯುವ ಬರಹಗಾರರ ಸ್ಪರ್ಧೆ (ವೈಯಕ್ತಿಕ) 60 ನಿಮಿಷ ಪ್ರಥಮ ರೂ.2,500, ದ್ವಿತೀಯ ರೂ.1,500 ಮತ್ತು ತೃತೀಯ ರೂ.1 ಸಾವಿರ, ಆಂಗ್ಲ/ ಹಿಂದಿ ಭಾಷೆಯಲ್ಲಿ ಮಾತ್ರ ಇರಬೇಕು. ವಿಷಯವು ಆಕ್ರಮಣಕಾರಿಯಾಗಿರಬಾರದು ಈಗಾಲೇ ಪ್ರಕಟವಾಗಿರಬಾರದು. ಅಕ್ಷರಗಳು ಸ್ಪಸ್ಟವಾಗಿರಬೇಕು. ಯಾವುದೇ ಜಾತಿ/ಪಂಥ/ಧರ್ಮ ಜನಾಂಗವನ್ನು ಹಾಗೂ ಸೂಕ್ತವಲ್ಲದ ವಿಷಯ ಒಳಗೊಂಡಿರಬಾರದು (1000 ಪದಗಳಿಗೆ ಮೀರಬಾರದು). ಪೋಸ್ಟರ್ ಮೇಕಿಂಗ್ ಯುವ ಕಲಾವಿದ ಸ್ಪರ್ಧೆ (ಚಿತ್ರಕಲೆ) ವೈಯಕ್ತಿಕ 90 ನಿಮಿಷ, ಪ್ರಥಮ ರೂ.2500, ದ್ವಿತೀಯ ರೂ.1500 ಮತ್ತು ತೃತೀಯ ರೂ.1 ಸಾವಿರ ಆಂಗ್ಲ/ಹಿಂದಿ ಭಾಷೆಯಲ್ಲಿ ಮಾತ್ರ ಇರಬೇಕು ಬಿತ್ತ ಪತ್ರವು ಯಾವುದೇ ಸಂಸ್ಥೆ ಅಥಾವ ಬ್ರಾಂಡ್ ಹೆಸರು ಇರಬಾರದು. ತಾವು ಸಲ್ಲಿಸುವ ಬಿತ್ತ ಪತ್ರದ ಕೆಳಗೆ 20-30 ಪದಗಳೊಳಗೆ ಇರುವ ಶೀರ್ಷಿಕೆಯನ್ನು ಒಳಗೊಂಡಿರಬೇಕು ಬಿತ್ತ ಪತ್ರವನ್ನು ಸ್ಥಳದಲ್ಲೆ ತಯಾರಿಸತಕ್ಕದು.(ಪೊಸ್ಟರ್ ಎ3 Size Drawing Sheet) (ಘೋಷಣೆ) (ಭಾಷಣ) ವೈಯಕ್ತಿಕ 3 ನಿಮಿಷ .ಆಂಗ್ಲ/ ಹಿಂದಿ ಭಾಷೆಯಲ್ಲಿ ಇರಬೇಕು. (ರಾಷ್ಟ್ರ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು) 2 ಸ್ಪರ್ಧಿಗಳು ಸಿದ್ಧಪಡಿಸಿಕೊಂಡಿರುವ ಆಯ್ದ ವಿಷಯಗಳ ಬಗ್ಗೆ ಭಾಷಣ ಮಾಡಬೇಕು. ತಿರ್ಮಾನವು ಭಾಷಣದ ನಿಖರತೆ, ಹರಿವು, ವಿಷಯಕ್ಕೆ ಸಂಬಂಧಿಸಿದಂತೆ ಮಂಡಿಸುವ ಅಂಶಗಳು, ಶಬ್ಧ/ ಪದಗಳು ಪುನರಾವರ್ತನೆ ಆಗದಿರುವುದು. ವಿಷಯದ ಬಗ್ಗೆ ಅರಿವು ಮತ್ತು ಆತ್ಮ ವಿಶ್ವಾಸ ಹೊಂದಿರುವುದರ ಮೇಲೆ ಅವಲಂಬಿಸಿರುತ್ತದೆ. ಪ್ರಥಮ ರೂ.5 ಸಾವಿರ, ದ್ವಿತೀಯ ರೂ,2,500 ಮತ್ತು ತೃತೀಯ ರೂ.1500 ಆಗಿರುತ್ತದೆ. ಯುವ ಕೃತಿ ಗುಡಿ ಕೈಗಾರಿಕೆ, ನೇಕಾರಿಕೆ, ಜವಳಿ,ಕೃಷಿ ಉತ್ಪನ್ನಗಳು ಪ್ರದರ್ಶನ ಮತ್ತು ಮಾರಾಟ ಉತ್ತಮವಾದ ಮಳಿಗೆ ತಂಡವನ್ನು ರಾಜ್ಯ ಮಟ್ಟಕ್ಕೆ ಕಳುಹಿಸಿ ಕೊಡಲಾಗುವುದು. ಈ ಭಾರಿಯ ಯುವಜನೋತ್ಸವ ಕಾರ್ಯಕ್ರಮದ ಪರಿಕಲ್ಪನೆಯ ಟಿಪ್ಪಣಿ: ವಿಜ್ಞಾನ ಮತ್ತು ತಂತ್ರ ಜ್ಞಾನದಲ್ಲಿ ನಾವಿನ್ಯತೆ ಇರಬೇಕು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಯುವಕ, ಯುವತಿಯರು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ. ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವವರ ವಯೋಮಿತಿಯು 15 ರಿಂದ 29 ವರ್ಷಗಳಾಗಿರಬೇಕು. ಹಾಗೂ ವಯೋಮಿತಿಯ ಬಗ್ಗೆ ಯಾವುದಾದರು ದಾಖಲೆ ಅಥವಾ ಆಧಾರ್ ಕಾರ್ಡ್ ದೃಢೀಕರಣ ಪ್ರತಿ ಮತ್ತು ಎಸ್‍ಎಸ್‍ಎಲ್‍ಸಿ ಅಂಕ ಪಟ್ಟಿಯನ್ನು ಕಡ್ಡಾಯವಾಗಿ ತರುವುದು. ಇಲ್ಲವಾದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಬೆಳಿಗ್ಗೆ 9.30 ಗಂಟೆಯ ಒಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳುವುದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ:-ವೈಯಕ್ತಿಕ ಮತ್ತು ತಂಡದ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆಯುತ್ತಾರೆ. ಎಲ್ಲಾ ಸ್ಪರ್ಧೆಗಳು ಯುವಕ ಯುವತಿಯಗೆ ಒಟ್ಟಾಗಿ ನಡೆಯಲಿದೆ. ಭಾಗವಹಿಸುವ ತಂಡಗಳಿಗೆ ಸಾಮಾನ್ಯದರದ ಪ್ರಯಾಣ ಭತ್ಯೆಯನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಪಿ.ಪಿ.ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ, ಕೊಡಗು ಮೊ. 9481213920, 9591137275. ದಿಲೀಪ್‍ಕುಮಾರ್, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ-8618568173 ಹಾಗೂ ಸಾಬಾ ಸುಬ್ರಮಣಿ,ಕಾರ್ಯಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ, ಕೊಡಗು-9845571290 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.