Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
  • *ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೋಳೂರು ಶೆಟ್ಟಳ್ಳಿಯಲ್ಲಿ “ಶರಣ ಸಂಸ್ಕೃತಿ” ವಿಚಾರಗೋಷ್ಠಿ : ವಚನಗಳು ಸುಂದರ ಜೀವನದ ದೀವಿಗೆಗಳು : ಮೆ.ನಾ.ವೆಂಕಟನಾಯಕ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೋಳೂರು ಶೆಟ್ಟಳ್ಳಿಯಲ್ಲಿ “ಶರಣ ಸಂಸ್ಕೃತಿ” ವಿಚಾರಗೋಷ್ಠಿ : ವಚನಗಳು ಸುಂದರ ಜೀವನದ ದೀವಿಗೆಗಳು : ಮೆ.ನಾ.ವೆಂಕಟನಾಯಕ್ ಅಭಿಮತ*

ನವೆಂಬರ್ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.20 NEWS DESK : ಮನುಷ್ಯ ಸಾಮಾಜಿಕ ಸ್ವಾಸ್ಥ್ಯದೊಂದಿಗೆ ಸುಂದರವಾದ ಜೀವನ ನಡೆಸಲು ವಚನ ಸಾಹಿತ್ಯ ದೀವಿಗೆ ಇದ್ದಂತೆ ಎಂದು ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಶಿಕ್ಷಕರೂ ಹಾಗೂ ವಾಗ್ಮಿ ಮೆ.ನಾ.ವೆಂಕಟನಾಯಕ್ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ತೋಳೂರು ಶೆಟ್ಟಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ನಡೆದ “ಶರಣ ಸಂಸ್ಕೃತಿ” ವಿಚಾರ ಗೋಷ್ಠಿಯಲ್ಲಿ ಪ್ರವಚನ ನೀಡಿದ ಅವರು, ಹನ್ನೆರಡನೇ ಶತಮಾನದಲ್ಲಿ ಕನ್ನಡದ ನೆಲದಲ್ಲಿ ನಡೆದ ಶರಣರ ಕ್ರಾಂತಿ ಸಮಾಜದಲ್ಲಿ ಸಾಮಾಜಿಕ ಬದಲಾವಣೆಗೆ ಕಾರಣವಾಯಿತು. ಅಂದಿನ ಸಮಾಜದಲ್ಲಿ ತಾಂಡವವಾಡುತ್ತಿದ್ದ ಸಾಮಾಜಿಕ ಸಂಘರ್ಷಗಳನ್ನು ತಡೆಗಟ್ಟಲು ವಚನಕಾರರು ಕಲ್ಯಾಣದ ಅನುಭವ ಮಂಟಪದಲ್ಲಿ ಮೊಳಗಿಸಿದ ವಿಚಾರ ಲಹರಿಗಳ ಕಹಳೆ ಇಂದಿಗೂ ಹಾಗೂ ಎಂದೆಂದಿಗೂ ಚಿರಸ್ಥಾಯಿ. ಅಂದಿನ ಶರಣರ ಶ್ರೇಷ್ಠ ಚಿಂತನೆಗಳು ಇಂದು ನೊಂದವರು, ದೀನ ದಲಿತರು ಹಾಗೂ ಜನಸಾಮಾನ್ಯರ ಪಾಲಿಗೆ ಆಶಾಕಿರಣಗಳಾಗಿವೆ ಎಂದರು. ಸ್ವಾತಂತ್ರ್ಯಾನಂತರ ದೇಶದಲ್ಲಿ ಜಾರಿಗೆ ಬಂದ ಸಮಾನತೆ, ಮಹಿಳಾ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯದ ಮೂಲ ಕಾರಣಿಕರೇ ಅಂದಿನ ಶರಣರು. ಏಕೆಂದರೆ ಜಗಜ್ಯೋತಿ ಬಸವೇಶ್ವರರು ಇಂತಹ ಅಸಮಾನತೆ, ಜಾತೀಯತೆಯ ವಿಷ ಬೀಜವನ್ನು ನಿರ್ಮೂಲನೆಗೊಳಿಸಲು ಹೋರಾಡಿದ ಮಹಾಪುರುಷ. ಹಾಗಾಗಿ ಇಂದಿನ ಮಕ್ಕಳು ಅಳಿದು ಹೋಗುತ್ತಿರುವ ಶರಣರ ವಿಚಾರಧಾರೆಗಳು ಹಾಗೂ ಅವರಲ್ಲಿದ್ದ ಶ್ರೇಷ್ಟ ಚಿಂತನೆಗಳನ್ನು ವಚನಗಳ ಮೂಲಕ ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ.
ಅದಕ್ಕಾಗಿಯೇ ಸರ್ಕಾರ ಬಸವಣ್ಣನನ್ನು ಸಾಂಸ್ಕೃತಿಕ ನಾಯಕನಾಗಿ ಘೋಷಿಸಿರುವುದು ಎಂದು ವೆಂಕಟನಾಯಕ್ ವಿಮರ್ಶಿಸಿದರು. ಶ್ರೇಷ್ಟ ವಚನಕಾರರಾದ ಅಕ್ಕಮಹಾದೇವಿ, ಅಲ್ಲಮಪ್ರಭು, ಅಂಬಿಗರ ಚೌಡಯ್ಯ, ಸೂಳೆ ಸಂಕವ್ವಾ, ಆಯ್ದಕ್ಕಿ ಮಾರಯ್ಯ, ಲಕ್ಕಮ್ಮ ಮೊದಲಾದ ಶರಣರ ವಚನಗಳ ಅನುಭೂತಿಯನ್ನು ವಿದ್ಯಾರ್ಥಿಗಳಿಗೆ ವೆಂಕಟನಾಯಕ್ ಉಣಬಡಿಸಿದರು. “ಶರಣ ಸಂಸ್ಕೃತಿ” ವಿಚಾರ ಗೋಷ್ಠಿ ಉದ್ಘಾಟಿಸಿದ ಪುಷ್ಪಗಿರಿಯ ಶಾಂತಮಲ್ಲಿ ಕಾರ್ಜುನ ದೇವಾಲಯ ಸಮಿತಿ ಅಧ್ಯಕ್ಷ ಟಿ.ಪಿ.ಚೆಂಗಪ್ಪ ಮಾತನಾಡಿ, ನೈತಿಕ ಮೌಲ್ಯ ಹಾಗೂ ಆದರ್ಶಗಳು ಕುಸಿಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಮನದಲ್ಲಿ ಹಬ್ಬೆರಡನೇ ಶತಮಾನದ ಶರಣರ ವಿಚಾರಧಾರೆಗಳು ಹಾಗೂ ನಾಡಿನ ಸಾಹಿತ್ಯ ಹಾಗೂ ಸಂಸ್ಕ್ರತಿಯ ಪುನರ್ ಪಠನ ಇಂದು
ಇಂದಿನ ಪೀಳಿಗೆಗೆ ಅತಿ ಅಗತ್ಯವಾಗಿದೆ ಎಂದರು. ಡಾ.ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ ರೆಡ್ಡಿ ಮಾತನಾಡಿ ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯ ಶ್ರೀಮಂತಿಕೆಗೆ ವಚನ ಸಾಹಿತ್ಯದ ಕೊಡುಗೆ ಅಪಾರವಾದುದು. ಹನ್ನೆರಡನೇ ಶತಮಾನದ ವಚನಕಾರರ ಕಲ್ಯಾಣ ಕ್ರಾಂತಿ ಇಂದಿನ ಸಮಾಜದಲ್ಲಿ ಅಪಾರವಾದ ಬದಲಾವಣೆಗಳಿಗೆ ಸಾಧ್ಯವಾಯಿತು. ನೊಂದವರು, ದೀನ ದಲಿತರು, ದಮನಿತರು ಹಾಗೂ ಮಹಿಳೆಯರ ಪಾಲಿಗೆ ಅಂದಿನ ಶರಣರ ಕ್ರಾಂತಿ ಇಂದಿಗೂ ಪ್ರೇರಣೆಯಾಗಿದೆ ಎಂದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ನಿರ್ದೇಶಕ ಕೂಗೆಕೋಡಿ ಬಾಲಶಂಕರ್, ಸೋಮವಾರಪೇಟೆ ತಾಲ್ಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಕೆ.ಪಿ.ಆದರ್ಶ, ವಸತಿ ಶಾಲೆಯ ಮೇಲ್ವಿಚಾರಕ ಶಭರಿ ಗಿರೀಶ್, ಶಿಕ್ಷಕರಾದ ಎಂ.ಡಿ.ಭವ್ಯ, ಎಸ್.ಎ.ಶಭಾನಾ, ಗೌತಮಿ, ರಮ್ಯಾ, ಪೂಜಾ, ಪುಷ್ಪಲತಾ, ಶೈಲಾ, ಕೀರ್ತಿ ಇದ್ದರು. ವಿದ್ಯಾರ್ಥಿನಿಯರಿಂದ ವಚನ ವೈಭವ ನೃತ್ಯ ಆಕರ್ಷಕವಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಆ.18 NEWS DESK : ಕಾಡಾನೆಗಳ ಹಾವಳಿ ತಡೆಗಟ್ಟಿ ರೈತರ ಆಸ್ತಿ ಹಾಗೂ ಬೆಳೆಗಳನ್ನು ರಕ್ಷಿಸಲು ಶಾಶ್ವತ ಕ್ರಮ…

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.