Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • *ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*
  • *ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 
  • *80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*
  • *ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*
  • *ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*

ನವೆಂಬರ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.25 NEWS DESK : ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದ ಕನ್ನಡ ಭಾಷೆ, ನಾಡು, ನುಡಿ, ಅತಿ ಉತ್ಕೃಷ್ಟವಾದದ್ದು. ಕನ್ನಡ ಸಾಹಿತ್ಯ ಲೋಕದಲ್ಲಿ ದಾಸ ಸಾಹಿತ್ಯ, ವಚನ ಸಾಹಿತ್ಯ, ಶಿಶು ಸಾಹಿತ್ಯ, ಜಾನಪದ ಸಾಹಿತ್ಯ, ಪ್ರೇಮ ಸಾಹಿತ್ಯ, ದಾಂಪತ್ಯ ಸಾಹಿತ್ಯ ಈ ಹಲವಾರು ವಿಭಾಗಗಳಿದ್ದು ಎಲ್ಲವೂ ಅತ್ಯುನ್ನತ ಪರಂಪರೆ ಹೊಂದಿದೆ ಎಂದು ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ನ ಉಪಾಧ್ಯಕ್ಷ ಎಂ.ಬಿ.ನಾಸಿರ್ ಅಹಮದ್ ನುಡಿದರು.  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎ.ಎಲ್.ಜಿ ಕ್ರೆಸೆಂಟ್ ಶಾಲೆ, ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ಹಾಗೂ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ವತಿಯಿಂದ ಮಡಿಕೇರಿಯ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.‌‌‌  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಬೆಳೆಯಬೇಕು, ಕನ್ನಡ ನಾಡು ನುಡಿಯ ವಿಚಾರ ತಿಳಿಯಬೇಕು, ಕನ್ನಡ ಗೀತೆಗಳನ್ನು ಹಾಡುವ ಮೂಲಕ ಅದರ ಅರಿವು ಅವರಿಗೆ ಮೂಡಬೇಕು ಎಂದು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಕ್ರೆಸೆಂಟ್ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ.ಹೆಚ್.ಹನೀಪ್ ಮಾತನಾಡಿ ವಿದ್ಯಾರ್ಥಿಗಳಿಗೆ ಈ ರೀತಿಯ ಒಂದು ಉತ್ತಮವಾದ ಕಾರ್ಯಕ್ರಮದಿಂದ ಕನ್ನಡ ನಾಡು ನುಡಿ ಪರಿಚಯ ಮಾಡಿಕೊಡುತ್ತಿರುವ ಸಾಹಿತ್ಯ ಪರಿಷತ್ತಿಗೆ ಧನ್ಯವಾದ ಅರ್ಪಿಸಿದರು.  ಕಾರ್ಯಕ್ರಮದಲ್ಲಿ ಕ್ರಸೆಂಟ್ ಶಾಲೆಯ ಅಧ್ಯಕ್ಷ  ನಿಝಾಮುದ್ದೀನ್ ಸಿದ್ದೀಖಿ, ಉಪಾದ್ಯಕ್ಷರಾದ ಅನೀಸ್ ಜವಾಹರ್, ನಿರ್ದೇಶಕ ಉಮ್ಮರ್ ಚಡಖಾನ್, ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಎಸ್.ಐ ಮುನೀರ್ ಅಹಮದ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕೋಶಾಧಿಕಾರಿ ಸಂಪತ್ ಕುಮಾರ್, ಸಾಹಿತಿಗಳಾದ ಬೈತಡ್ಕ ಜಾನಕಿ , ಗೌರಮ್ಮ ಮಾದಮ್ಮಯ್ಯ, ಭಾರತಿ ರಮೇಶ್, ಕಟ್ಟರ್ತನ ಲಲಿತ ಅಯ್ಯಪ್ಪ, ಚೊಕ್ಕಾಡಿ ಪ್ರೇಮ ರಾಘವಯ್ಯ, ರಾಧಾ ಪೊನ್ನಪ್ಪ ಶರೀಫ್ ಶಾಲಾ ಅದ್ಯಾಪಕರುಗಳು ಹಾಜರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ಕವನ ವಾಚನ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು. 15 ಶಾಲೆಗಳ 30 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಮೊದಲ ಸುತ್ತಿನಲ್ಲಿ ಇಬ್ಬರು ವಿದ್ಯಾರ್ಥಿಗಳ ಎಂಟು ತಂಡವನ್ನು ಆಯ್ಕೆಗೊಳಿಸಲಾಯಿತು ಹತ್ತು ಸುತ್ತುಗಳ ಸ್ಪರ್ಧೆಯಲ್ಲಿ ಹಾಕತ್ತೂರಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನಿತ್ಯಶ್ರೀ ಎಂಎಸ್ ಮತ್ತು ಚೇತನ್ ಪಿ ಸಿ ಇವರು ಪ್ರಥಮ ಬಹುಮಾನಗಳಿಸಿದರು. ದ್ವಿತೀಯ ಬಹುಮಾನವನ್ನು ನಾಪೋಕ್ಲುವಿನ ಎಕ್ಸೆಲ್ ಎಜುಕೇಶನ್ ಶಾಲೆಯ ಟಿ.ಆರ್.ಸುಮಂತ್  ಮತ್ತು ದರ್ಶ ದೇಶಮ್ಮ ಪಡೆದುಕೊಂಡರು. ತೃತೀಯ ಬಹುಮಾನವನ್ನು ರಾಫೆಲ್ಸ್ ವಿದ್ಯಾಸಂಸ್ಥೆ ನಾಪೋಕ್ಲು ಶಾಲೆಯ ವಿದ್ಯಾರ್ಥಿಗಳಾದ ಮೆಹರೂಫ್ ಮತ್ತು ಸಲ್ಮಾನ್ ಫಾರಿಸ್ ಪಡೆದುಕೊಂಡರು. ಹಿರಿಯ ಸಾಹಿತಿ ಬಿ.ಎ ಶಂಷುದ್ದೀನ್ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ಸ್ಪರ್ಧಿಸಿದ 8 ತಂಡಗಳಿಗೆ ನಾಡಿನ ಪ್ರಸಿದ್ದ ನದಿಗಳಾದ ಶರಾವತಿ, ಗೋದಾವರಿ, ಭದ್ರ, ಕನ್ನಿಕೆ , ಕಾವೇರಿ, ತುಂಗಾ, ಕೃಷ್ಣ , ಭೀಮ ಹೀಗೆ ನದಿಗಳ ಹೆಸರನ್ನು ಇಡುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟರು. ನಾಡು ನುಡಿ ಸಾಹಿತ್ಯ ಇತಿಹಾಸ ಗಳಿಗೆ ಸಂಬಂಧಪಟ್ಟ ಪ್ರಶ್ನೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿತ್ತು.  ಕ್ರೆಸೆಂಟ್ ಶಾಲಾ ಅದ್ಯಾಪಕಿ ಸುಲ್ಹತ್ ನಿರೂಪಿಸಿದರು ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎಸ್ ಐ ಮುನೀರ್ ಅಹಮದ್ ಸ್ವಾಗತಿಸಿದರು. ಕೋಶಾಧಿಕಾರಿ ಸಂಪತ್ ಕುಮಾರ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ…

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

*ದಶಮಂಟಪ ಸಮಿತಿ ಅಧಿಕಾರ ಹಸ್ತಾಂತರ*

ಆಗಷ್ಟ್ 17, 2026

*ಅರಮೇರಿ ಕಳಂಚೇರಿ ಮಠದಲ್ಲಿ ‘ಕೊಡವ ಪುಸ್ತಕ ಪತ್ತಾಯ’ ಕಾರ್ಯಕ್ರಮ* 

ಆಗಷ್ಟ್ 17, 2026

*80ನೇ ಸ್ವಾತಂತ್ರ್ಯೋತ್ಸವ : ಪೌರಕಾರ್ಮಿಕರಿಗೆ ಲಯನ್ಸ್ ಸಂಸ್ಥೆಯಿಂದ ಗೌರವ*

ಆಗಷ್ಟ್ 17, 2026

*ಕಿಡಗರಹಳ್ಳಿ ಬೈತುರಪ್ಪ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಣೆ*

ಆಗಷ್ಟ್ 17, 2026

*ಕೊಡಗು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ*

ಆಗಷ್ಟ್ 17, 2026

*ಹೆರೂರಿನಲ್ಲಿ ಕಾಡಾನೆಗಳ ಹಾವಳಿ : ಕಾಫಿ, ಅಡಿಕೆ, ತೆಂಗು ನಾಶ*

ಆಗಷ್ಟ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.