
ಮಡಿಕೇರಿ ನ.25 NEWS DESK : ಕೊಡಗು ಜಿಲ್ಲಾ ನಿವೃತ್ತ (ಮಾಜಿ)ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ ನ.29ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ. ಒಕ್ಕೂಟದ ಅಧ್ಯಕ್ಷ ಎಂ.ಜಿ.ಯತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಅರೆಸೇನಾಪಡೆಯ ಮಾಜಿ ಯೋಧರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿರುವ ಒಕ್ಕೂಟದ ಸಂಚಾಲಕ ಹಾಗೂ ಕಾರ್ಯದರ್ಶಿ ಎನ್.ಎಂ.ಭೀಮಯ್ಯ ಅವರು, ಸದಸ್ಯತ್ವ ಪಡೆದುಕೊಳ್ಳದೆ ಇರುವವರು ಸದಸ್ಯತ್ವ ಪಡೆದುಕೊಳ್ಳುವಂತೆ ಕೋರಿದ್ದಾರೆ.









