
ಮಡಿಕೇರಿ ನ.27 NEWS DESK : 2023-24ನೇ ಸಾಲಿನ ಶೈಕ್ಷಣಿಕ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಯು.ಅದವಿಯಾ ಕನ್ನಡ ಮಾಧ್ಯಮದಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಸಂಬಂಧ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಮಾಡುವ ಟಿ.ಪಿ.ರಮೇಶ್ ದತ್ತಿ ನಿಧಿ ಪ್ರಶಸ್ತಿಗೆ ಭಾಜನರಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈಕೆ ಉಮ್ಮರ್ ಸಿ.ಎಂ. ಮತ್ತು ಅಮೀನಾ ಕೆ.ಎ.(ಶಿಕ್ಷಕರು) ದಂಪತಿಯ ಪುತ್ರಿ. ಎಂದು ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.










