
ಮಡಿಕೇರಿ ಡಿ.3 NEWS DESK : ಸಂವಿಧಾನ ಓದು ಅಭಿಯಾನವು ನಾಡಿನಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಡಿ.7 ಮತ್ತು 8 ರಂದು ಮಡಿಕೇರಿಯಲ್ಲಿ ಸಂವಿಧಾನ ಓದುವ ಅಧ್ಯಯನ ಶಿಬಿರ ನಡೆಯಲಿದೆ ಎಂದು ಅಭಿಯಾನದ ರಾಜ್ಯ ಕೇಂದ್ರ ಸಂಯೋಜಕ ವಿ.ರಾಜಶೇಖರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಂಬೇಡ್ಕರ್ ಭವನದಲ್ಲಿ ಎರಡು ದಿನಗಳು ನಡೆಯಲಿರುವ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಪ್ರತಿನಿಧಿಸಿ, ಸ್ನಾತ್ತಕೋತ್ತರ ವಿದ್ಯಾರ್ಥಿಗಳು, ಸಾಮಾಜಿಕ-ಸಾಂಸ್ಕøತಿಕ ಹಾಗೂ ಪ್ರಗತಿಪರ ಆಶಯವುಳ್ಳ 200 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಶಿಬಿರವನ್ನು ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅವರು ಉದ್ಘಾಟಿಸಲಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಎ.ಕೆ.ಲೋಕೇಶ್, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ನರಸಿಂಹಯ್ಯ, ಕೊಡಗು ವಿಶ್ವವಿದ್ಯಾಲಯದ ರಿಜಿಸ್ಟಾರ್ ಡಾ.ಸುರೇಶ್ ಶರ್ಮ, ಕೊಡಗು ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಉಪನಿರ್ದೇಶಕರಾದ ಕೆ.ಮಂಜುಳ, ಕೊಡಗು ಅಹಿಂದ ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಟಿ.ಪಿ.ರಮೇಶ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದರಾ ಅಧ್ಯಕ್ಷ ಸವಿರಾ ರೈ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಶಿಬಿರದಲ್ಲಿ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಸಂವಿಧಾನದ ರಚನೆ ಮತ್ತು ಮೂಲತತ್ವ, ಶಾಂತಿ ನಾಗಲಾಪುರ ಸಂವಿಧಾನ ಮತ್ತು ಮಹಿಳೆ, ಡಾ.ಗೋವಿಂದಪ್ಪ ಪಾವಗಡ ಸಂವಿಧಾನ ಮತ್ತು ಪ್ರಜಾಪ್ರಭುತ್ವ, ಬಿ.ರಾಜಶೇಖರ ಮೂರ್ತಿ ಸಂವಿಧಾನ ಮತ್ತು ಸಾಮಾಜಿಕ ನ್ಯಾಯ, ಆರ್.ರಾಮಕೃಷ್ಣ ಸಂವಿಧಾನ ಮತ್ತು ಜಾತ್ಯಾತೀತತೆ, ಡಾ.ಎನ್.ವೈ.ಗುರಶಾಂತ್ ಸಂವಿಧಾನ ಮತ್ತು ಒಕ್ಕಟ ವ್ಯವಸ್ಥೆ ಕುರಿತು ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ.
ಡಿ.8 ರಂದು ಸಂಜೆ 4 ಗಂಟೆಗೆ ಸಮಾರೋಪ ಮತ್ತು ಪ್ರಶಸ್ತಿ ಪತ್ರ ವಿರಣೆ ಕಾರ್ಯಕ್ರಮ ನಡೆಯಲಿದ್ದು, ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪ ನಿರ್ದೇಶಕ ರಂಗಧಾಮಪ್ಪ, ಮಡಿಕೇರಿ ಕ್ಷೇತ್ರ ಶಿಕ್ಷಣಧಿಕಾರಿ ಡಾ.ಬಿ.ಎಸ್.ಸತೀಶ್ ಸೇರಿದಂತೆ ವಿವಿಧ ಸಂಘಟನೆಯ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಸಂವಿಧಾನ ಓದು ಅಭಿಯಾನ-ಕರ್ನಾಟಕದಿಂದ 10 ಲಕ್ಷ “ಸಂವಿಧಾನ ಓದು” ಪರಿಷ್ಕøತ ಕೃತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವ ಗುರಿಯನ್ನು ಹೊಂದಲಾಗಿದೆ ಎಂದರು. ಸಂವಿಧಾನ ಓದು ಅಧ್ಯಯನ ಅಭಿಯಾನವು ದೀರ್ಘಕಾಲ ಮುನ್ನಡೆಯುತ್ತಿದ್ದು, ದಿನೇ ದಿನೇ ನಾಡಿನ ಜನರ ವಿಶ್ವಾಸವನ್ನುಗಳಿಸುತ್ತಿದೆ. ಹೀಗೆ ದೇಶದಲ್ಲೇ ಮಾದರಿಯಾಗಿ ಸಂವಿಧಾನ ಕುರಿತು ಜನಾಂದೋಲನ ರೂಪಿಸುತ್ತಿರುವ ಅಭಿಯಾನವನ್ನು ಜನತೆ ಬೆಂಬಲಿಸಬೇಕೆಂದು ಮನವಿ ಮಾಡಿದ ಅವರು, ಶಿಬಿರದಲ್ಲಿ ಆಸಕ್ತರು https://docs.google.com/forms/d/1pdMmCs4SvquCnkxfh51xKrG_qJHYMWUAHCgP7KaCol0/edit?ts=674d1237ನೊಂದಣಿ ಮಾಡಿಕೊಂಡು ಭಾಗವಹಿಸಬೇಕೆಂದು ವಿ.ರಾಜೇಖರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಅಭಿಯಾನದ ರಾಜ್ಯ ಕೇಂದ್ರ ಸಂಯೋಜರಾದ ರಾಜು ಗೊರೂರು, ಹೆಚ್.ಎನ್.ಹರಿ, ಹಾಸನ ವಿಭಾಗದ ಉಸ್ತುವಾರಿ ಜಿ.ಟಿ.ವೆಂಕಟೇಶ್, ಕೊಡಗು ಉಸ್ತುವರಿ ಹೆಚ್.ಎಂ.ನಂದಕುಮಾರ್, ಪ್ರಮುಖರಾದ ಎಮ್.ಎನ್.ರಾಜಪ್ಪ ಉಪಸ್ಥಿತರಿದ್ದರು.









