Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
  • *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಪದಗ್ರಹಣ : ಶರಣರ ವಿಚಾರಧಾರೆಗಳು ವ್ಯಕ್ತಿತ್ವ ನಿರ್ಮಾಣಕ್ಕೆ ಮೈಲಿಗಲ್ಲು : ಪಿ.ಪಿ.ಕವಿತಾ ಇಂಗಿತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಪದಗ್ರಹಣ : ಶರಣರ ವಿಚಾರಧಾರೆಗಳು ವ್ಯಕ್ತಿತ್ವ ನಿರ್ಮಾಣಕ್ಕೆ ಮೈಲಿಗಲ್ಲು : ಪಿ.ಪಿ.ಕವಿತಾ ಇಂಗಿತ*

ಡಿಸೆಂಬರ್ 14, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.14 NEWS DESK : ಹನ್ನೆರಡನೇ ಶತಮಾನದ ವಚನಕಾರರ ಆಂದೋಲನ ಹಾಗೂ ಅವರ ಜೀವನ ಸಂದೇಶ ಮನುಕುಲದ ಉನ್ನತಿಗೆ ಮಹಾಚೈತನ್ಯದಾಯಕ ಎಂದು ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಕೊಡಗು ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಕುಶಾಲನಗರದ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಆಯೋಜಿಸಿದ್ದ ಕುಶಾಲನಗರ ತಾಲ್ಲೂಕು ಕದಳಿ ವೇದಿಕೆಯ ನೂತನ ಪದಾಧಿಕಾರಿಗಳ ಸೇವಾ ದೀಕ್ಷೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆಗೆ ಶರಣರ ಆದರ್ಶಗಳನ್ನು ಅರಿತು ಅಧ್ಯಯನ ಮಾಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿ ಆದರ್ಶ ಪ್ರಾಯವಾದ ಬದುಕು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಮಡಿಕೇರಿ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಹಾಗೂ ಕಣ್ಣಿನ ತಜ್ಞೆ ವಿಜಯಲಕ್ಷ್ಮಿ ಚೇತನ್ ಮಾತನಾಡಿ, ವಿದ್ಯಾರ್ಥಿನಿಯರಿಗೆ ಕಣ್ಣುಗಳ ಆರೋಗ್ಯದ ಕುರಿತು ಮಾಹಿತಿ ನೀಡಿ, ಮೊಬೈಲ್, ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ಬಳಕೆಯ ಪ್ರತಿ 20 ನಿಮಿಷಕ್ಕೊಮ್ಮೆ 20 ಸೆಕೆಂಡ್ ಕಣ್ಣು ಮುಚ್ಚುವುದು, ಜೊತೆಗೆ ಕನಿಷ್ಟ 20 ಅಡಿಗಳಷ್ಟು ದೂರಕ್ಕೆ ಕಣ್ಣು ಹಾಯಿಸಿ ವಿಶ್ರಾಂತಿ ನೀಡುವ ಮೂಲಕ ದೇಹದ ಬಹು ಮುಖ್ಯ ಅಂಗ ಕಣ್ಣನ್ನು ಜೋಪಾನವಾಗಿ ಕಾಯ್ದುಕೊಳ್ಳಬೇಕಿದೆ ಎಂದರು.
ತಾಲ್ಲೂಕು ಕದಳಿ ವೇದಿಕೆಯ ನೂತನ ಪದಾಧಿಕಾರಿಗಳಿಗೆ ಸೇವಾ ದೀಕ್ಷೆ ಪ್ರಮಾಣ ವಚನ ಬೋಧಿಸಿದ ಮಡಿಕೇರಿ ನಗರ ಸಭೆ ಮಾಜಿ ಸದಸ್ಯೆ ಹಾಗೂ ಜಿಲ್ಲಾ ಕದಳಿ ವೇದಿಕೆ ಗೌರವಾಧ್ಯಕ್ಷೆ ಕಮಲಮ್ಮ ಮುರುಗೇಶ್ ಮಾತನಾಡಿ, ಬಸವಾದಿ ಶರಣರ ವಿಚಾರಧಾರೆಗಳು ಮನುಷ್ಯನಲ್ಲಿನ ಅಂಧಕಾರವನ್ನು ತೊಡೆದು ಅವರ ಬದುಕಲ್ಲಿ ಪ್ರಜ್ವಲನ ಮೂಡಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಕಲಬೇಡ – ಕೊಲಬೇಡ ಎಂಬ ಬಸವೇಶ್ವರರ ಸಪ್ತಸೂತ್ರವನ್ನು ಅರಿತು ಅದರಂತೆ ನಡೆಯಲು ಕರೆ ನೀಡಿದರು. ಹಿಂದುಳಿದ ವರ್ಗಗಳ ಇಲಾಖೆಯ ತಾಲ್ಲೂಕು ಅಧಿಕಾರಿ ಸ್ವಾಮಿ ಮಾತನಾಡಿ, ನಮ್ಮ ಪೂರ್ವಜರು ಶರಣರ ವಚನಗಳನ್ನು ಬಾಯಿಪಾಠ ಮಾಡಿದ್ದರು. ವಚನಗಳ ಸಾರದಂತೆಯೇ ಅವರು ಬದುಕಿದ್ದರು. ಹಾಗಾಗಿ ಅಂದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಹಾಗೂ ಸಾಮರಸ್ಯ ಇತ್ತು. ಆದರೆ ಇಂದಿನ ಸಾಮಾಜಿಕ ಆವಾಂತರಗಳಿಗೆ ವಚನ ಸಾಹಿತ್ಯದ ಅಧ್ಯಯನವೇ ದಿವ್ಯ ಔಷಧಿ ಎಂದರು. ಕದಳಿ ವೇದಿಕೆಯ ನೂತನ ಅಧ್ಯಕ್ಷೆ ಬಿ.ಬಿ.ಹೇಮಲತಾ ಮಾತನಾಡಿ, ತಾಲ್ಲೂಕಿನಾದ್ಯಂತ ಮನೆ ಮನೆಗಳಲ್ಲಿ ಅಕ್ಕಮಹಾದೇವಿ ಹಾಗೂ ಬಸವಣ್ಣರ ತತ್ವಾದರ್ಶಗಳನ್ನು ಸಾರಲು ಮಹಿಳಾ ಘಟಕ ಕದಳಿ ವೇದಿಕೆಯನ್ನು ಸಜ್ಜುಗೊಳಿಸುವುದಾಗಿ ಹೇಳಿದರು. ಜಿಲ್ಲಾ ವೀರಶೈವ ಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ದೀಪಾ ಕರುಣ್, ವಸತಿ ನಿಲಯದ ಮೇಲ್ವಿಚಾರಕಿ ಸುಕನ್ಯಾ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ದತ್ತಿದಾನಿಗಳಾದ ಮಡಿಕೇರಿಯ ಮುರುಗೇಶ್, ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಗೌರವಾಧ್ಯಕ್ಷೆ ವಿಜಯಪಾಲಾಕ್ಷ, ಯಶೋಧ ಮಹದೇವಪ್ಪ, ಕೋಶಾಧಿಕಾರಿ ವೇದಾವತಿ, ಜಿಲ್ಲಾ ನಿರ್ದೇಶಕಿ ಮನುಜಗದೀಶ್, ಪದಾಧಿಕಾರಿಗಳಾದ ಲೇಖನಾ ಧರ್ಮೇಂದ್ರ, ಮೋಹಿನಿ ನಟರಾಜು, ಸುಶೀಲಾ ಪುಟ್ಟರಾಜು, ಸರೋಜಾ ಆರಾಧ್ಯ, ಶಿಕ್ಷಕರಾದ ಇಂದಿರಾ, ಉಷಾ ನಾಗೇಶ್ ಇದ್ದರು. ಇದೇ ಸಂದರ್ಭ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ, ಮಡಿಕೇರಿಯ ನೇತ್ರ ತಜ್ಞೆ ವಿಜಯಲಕ್ಷ್ಮಿ ಹಾಗೂ ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಹೇಮಲತಾ ಅವರನ್ನು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.10 NEWS DESK : ವಿದ್ಯಾರ್ಥಿಗಳು ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.…

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.