
ಮಡಿಕೇರಿ ಡಿ.20 NEWS DESK : ವಿರಾಜಪೇಟೆ ತಾಲ್ಲೂಕು ಪೆರಂಬಾಡಿ ಬಡಾವಣೆಯ ರಸ್ತೆ ಕಾಮಗಾರಿಯು ರೂ.3.60 ಲಕ್ಷ ವೆಚ್ಚದಲ್ಲಿ ಇದೀಗ ಪೂರ್ಣಗೊಂಡಿದೆ. ಕಾಂಕ್ರೀಟ್ ಕಾಣದೆ ಸಾರ್ವಜನಿಕರಿಗೆ ಓಡಾಡಲು ತುಂಬಾ ದುಸ್ತರವಾಗಿದ್ದ ಈ ರಸ್ತೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿಶೇಷ ಕಾಳಜಿಯಲ್ಲಿ 73 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ಪೂರ್ಣಗೊಂಡಿದ್ದು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕಾಮಗಾರಿಗೆ ಅನುದಾನ ಮಂಜೂರು ಮಾಡಿದ ಶಾಸಕ ಪೊನ್ನಣ್ಣ, ಸಹಕರಿಸಿದ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಗ್ರಾಮ ಪಂಚಾಯತಿ ಸದಸ್ಯರಾದ ಉಪೇಂದ್ರ ಮತ್ತು ವಲಯ ಅಧ್ಯಕ್ಷ ಅನೂಪ್, ಜಾಫರ್ ಗೆ ಪೆರಂಬಾಡಿ ಬಡಾವಣೆ ನಿವಾಸಿಗಳು ಧನ್ಯವಾದ ಅರ್ಪಿಸಿದ್ದಾರೆ.








