Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು : ಪೋಷಕರು ಕಾಲಕಾಲಕ್ಕೆ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ : ರವಿಕೃಷ್ಣ.ಡಿ.ಕಲ್ಲಾಜೆ ಸಲಹೆ*
ಇತ್ತೀಚಿನ ಸುದ್ದಿಗಳು

*ಪುತ್ತೂರು : ಪೋಷಕರು ಕಾಲಕಾಲಕ್ಕೆ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ : ರವಿಕೃಷ್ಣ.ಡಿ.ಕಲ್ಲಾಜೆ ಸಲಹೆ*

December 20, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ಡಿ.20 NEWS DESK : ಪ್ರಸಕ್ತ ಸನ್ನಿವೇಶದಲ್ಲಿ ಸಮಾಜದಲ್ಲಿ ಒಳ್ಳೆಯದಕ್ಕೆ ಎಷ್ಟು ಆಸ್ಪದವಿದೆಯೋ ಕೆಟ್ಟದ್ದಕ್ಕೂ ಅಷ್ಟೇ ಆಸ್ಪದವಿದೆ. ಹೀಗಾಗಿ ಪೋಷಕರುತಮ್ಮ ಮಕ್ಕಳ ದೈನಂದಿನ ಚಟುವಟಿಕೆಗಳು ಮತ್ತು ಶೈಕ್ಷಣಿಕ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಸಂಯುಕ್ತ ಆಶ್ರಯದಲ್ಲಿ ಸಾವರ್ಕರ್ ಸಭಾಭವನದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಮಾಲೋಚನ ಸಭೆಯ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳನ್ನು ಗಮನಿಸುತ್ತಾರೆ, ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಶಿಕ್ಷಕರನ್ನು ಸಂಪರ್ಕಿಸುವುದು ವಿದ್ಯಾರ್ಥಿಯ ಕರ್ತವ್ಯ ಅದೇ ರೀತಿ ಪೋಷಕರೂ ಕೂಡಾ ಆಗಾಗ ಕಾಲೇಜಿಗೆ ಭೇಟಿ ನೀಡಿ ತಮ್ಮ ಮಕ್ಕಳ ಬಗ್ಗೆ ತಿಳಿದುಕೊಳ್ಳಿ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲೇಜು ಕೆಲವೊಂದು ಕಟ್ಟುಪಾಡುಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಇದರ ಪಾಲನೆಗೆ ಹೆತ್ತವರ ಮತ್ತು ಪೋಷಕರ ಸಹಕಾರ ಅಗತ್ಯ ಎಂದು ಹೇಳಿದರು. ಹೊಸ ಶೈಕ್ಷಣಿಕ ಪದ್ದತಿಯ ಪ್ರಕಾರ ವಿದ್ಯಾರ್ಥಿಗಳ ಹಾಜರಾತಿ, ಆಂತರಿಕ ಮೌಲ್ಯಮಾಪನ, ಅಂಕಗಳು ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ನೀಡಿದರು. ಪೇರೆಂಟ್ ರಿಲೇಶನ್ ಸೆಲ್‍ನ ಅಧ್ಯಕ್ಷ ಈಶ್ವರಪ್ರಸಾದ್ ಹೆತ್ತವರು ಮತ್ತು ಕಾಲೇಜಿನ ನಡುವಿನ ಬಾಂಧವ್ಯದ ಅಗತ್ಯತೆಯ ಬಗ್ಗೆ ತಿಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್ ಮಾತನಾಡಿ, ಪೋಷಕರು ವಿದ್ಯಾರ್ಥಿಗಳ ಪ್ರಗತಿಯನ್ನು ಗಮನಿಸಿವುದಕ್ಕೆ ಆಗಾಗ ಕಾಲೇಜಿಗೆ ಭೇಟಿ ನೀಡಿ ವಿಭಾಗ ಮುಖ್ಯಸ್ಥರೊಂದಿಗೆ ಮತ್ತು ಪ್ರಾಧ್ಯಾಪಕರೊಂದಿಗೆ ಮಾತುಕತೆ ನಡೆಸಬೇಕು ಎಂದರು. ಸಾಮಾಜಿಕ ಜಾಲತಾಣಗಳ ಬಳಕೆ, ವಾಹನಗಳ ಬಳಕೆಯ ಬಗ್ಗೆ ಮಕ್ಕಳಿಗೆ ಎಚ್ಚರಿಕೆಯನ್ನು ನೀಡಬೇಕು ಮತ್ತು ಅವುಗಳಿಂದಾಗುವ ಹಾನಿಯ ಬಗ್ಗೆ ಮನವರಿಕೆ ಮಾಡಬೇಕು ಎಂದರು. ವಿದ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಭಾ ಕಾರ್ಯಕ್ರಮದ ಮೊದಲು ತಮ್ಮ ಮಕ್ಕಳಿಗೆ ಕಲಿಸುವ ಎಲ್ಲಾ ಪ್ರಾಧ್ಯಾಪಕರ ಜತೆ ಪೋಷಕರು ಸಂವಹನವನ್ನು ನಡೆಸಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ತಿಳಿದುಕೊಂಡರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ನಿರ್ದೇಶಕ ಸತ್ಯನಾರಾಯಣ ಭಟ್, ಪೇರೆಂಟ್ ರಿಲೇಶನ್ ಸೆಲ್‍ನ ಸಹ ಕಾರ್ಯದರ್ಶಿ ದೀಪಾ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಸ್ವಾಗತಿಸಿದರು. ಪೇರೆಂಟ್ ರಿಲೇಶನ್ ಸೆಲ್‍ನ ಸಂಚಾಲಕಿ ಡಾ.ಶ್ವೇತಾಂಬಿಕಾ.ಪಿ ಪ್ರಸ್ತಾವನೆಗೈದರು. ಕಾರ್ಯಕ್ರಮ ಸಂಯೋಜಕಿ ಪ್ರೊ.ಶ್ರೀಶರಣ್ಯ ಯು ಆರ್ ವಂದನಾರ್ಪಣೆಗೈದರು. ಡಾ.ರವೀಶ್.ಪಿ.ಎಂ ಮತ್ತು ಪ್ರೊ.ಅನ್ನಪೂರ್ಣಾ.ಬಿ ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಜೆಕೆ ಟೈರ್ ಆರೆಂಜ್ 4×4 ಫ್ಯೂರಿ ರ‍್ಯಾಲಿ : ಉದ್ದಪಂಡ ಚೇತನ್ ಹಾಗೂ ಸನೋಜ್ ಪ್ರಥಮ*
Next Article *ಸಿ.ಟಿ.ರವಿ ಬಂಧನಕ್ಕೆ ಖಂಡನೆ : ಕೊಡಗು ಬಿಜೆಪಿ ಪ್ರತಿಭಟನೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.