Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*
  • *ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
  • *ಸೆ.12 ರಂದು ವಂದೇ ಮಾತರಂ ಸ್ಪರ್ಧೆ*
  • *ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*
  • *ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಕುವೆಂಪು ಸಂಸ್ಮರಣೆ ಕಾರ್ಯಕ್ರಮ : ವಿದ್ಯಾರ್ಥಿಗಳು ಕುವೆಂಪು ಸಾಹಿತ್ಯ ಅರಿತುಕೊಳ್ಳಿ : ಸಾಹಿತಿ ಭಾರಧ್ವಜ್ ಆನಂದ ತೀರ್ಥ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಕುವೆಂಪು ಸಂಸ್ಮರಣೆ ಕಾರ್ಯಕ್ರಮ : ವಿದ್ಯಾರ್ಥಿಗಳು ಕುವೆಂಪು ಸಾಹಿತ್ಯ ಅರಿತುಕೊಳ್ಳಿ : ಸಾಹಿತಿ ಭಾರಧ್ವಜ್ ಆನಂದ ತೀರ್ಥ ಕರೆ*

ಡಿಸೆಂಬರ್ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.31 NEWS DESK  : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವ ಮೂಲಕ ನಾಡಿನಲ್ಲಿ ವೈಚಾರಿಕತೆಯನ್ನು ಭಿತ್ತಿದ ಸಾಹಿತ್ಯದ ಮೇರು ಪರ್ವತ ಕುವೆಂಪು ಎಂದು ಕೊಡಗಿನ ಹಿರಿಯ ಸಾಹಿತಿ ಕಣಿವೆ ಭಾರಧ್ವಜ್ ಆನಂದ ತೀರ್ಥ ಪ್ರತಿಪಾದಿಸಿದರು. ಕುಶಾಲನಗರದ ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಸ್ಥಳೀಯ ಕನ್ನಡ ಭಾರತಿ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕುವೆಂಪು ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥಗಳನ್ನು ಮೆಟ್ಟಿನಿಂತು ಸಂಘರ್ಷಗಳನ್ನು ಎದುರಿಸಿ ಮಾನವತೆಯ ಮೇರು ಗಿರಿಯಾದ ಕುವೆಂಪು ಪರಿಸರವನ್ನೇ ದೇವರೆಂದರು.
ಪರಿಸರವನ್ನು ಆಹ್ಲಾದಿಸಿ ಆಸ್ವಾದಿಸಿದ ರಸ ಕವಿ ತಮ್ಮ ಬಹುಪಾಲು ಕಥೆ, ಕವನ, ಕಾದಂಬರಿ, ನಾಟಕ ಮೊದಲಾದ ಮಹಾಗ್ರಂಥಗಳನ್ನು ಬರೆದು ನಾಡಿನ ಸಾಹಿತ್ಯವನ್ನು ಶ್ರೀಮಂತ ಗೊಳಿಸಿದರು. ಆದ್ದರಿಂದ ಇಂದಿನ ವಿದ್ಯಾರ್ಥಿ ಸಮೂಹ ಕನ್ನಡ ನಾಡಿಗೆ ರಸ ಋಷಿ ಕುವೆಂಪು ಕೊಟ್ಟಿರುವ ಸಾಹಿತ್ಯವನ್ನು ಉಳಿಸಿಕೊಂಡು ಹೋದರೆ ಅದು ಆ ವಿಶ್ವಮಾನವನಿಗೆ ಕೊಡುವ ಗೌರವವಾಗಲಿದೆ ಎಂದರು. ಕುವೆಂಪು ವಿಚಾರಧಾರೆಗಳ ಕುರಿತು ಮಾತನಾಡಿದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಂದ್ರಸ್ವಾಮಿ, ಅಖಂಡ ಕರ್ನಾಟಕದ ನಿರ್ಮಾಣಕ್ಕೆ ಕವಿಗಳು, ಸಾಹಿತಿಗಳು, ಋಷಿ ಮುನಿಗಳ ಕೊಡುಗೆಯನ್ನು ಬಣ್ಣಿಸಿದ್ದ ಕುವೆಂಪು, ಬೂಟಾಟಿಕೆಯ ರಾಜಕಾರಣವನ್ನು ಹರಿತವಾದ ಲೇಖನಿಯಲ್ಲಿ ಪ್ರಬಲವಾಗಿ ವಿರೋಧಿಸಿದ್ದರು. ಕನ್ನಡ ನಾಡು – ನುಡಿ, ಭಾಷೆ, ಸಂಸ್ಕೃತಿಗೆ ಜೀವ ಸವೆಸುವ ಮೂಲಕ ಸಾಹಿತ್ಯ ಲೋಕದಲ್ಲಿ ಸತ್ಯ -ಶಾಂತಿ, ಸಮಾನತೆಯೆಂಬ ಆರದ ಜ್ಯೋತಿಯನ್ನು ಹಚ್ಚಿದ ಮರೆಯಲಾಗದ ಮಾಣಿಕ್ಯ ಎಂದು ಬಣ್ಣಿಸಿದರು. ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ಮಾರಕವಾದ ಮೊಬೈಲ್ ಅನ್ನು ದೂರವಿಟ್ಟು ಕುವೆಂಪು ಸಾಹಿತ್ಯವನ್ನು ಓದಲು ಡಾ.ನಾಗೇಂದ್ರ ಸ್ವಾಮಿ ಕರೆಕೊಟ್ಟರು. ರಾಷ್ಟ್ರ ಕವಿ ಕುವೆಂಪು ಕುರಿತಾದ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಕನ್ನಡ ಭಾರತಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಸ್ಪಂದನ, ಕುವೆಂಪು ಕುರಿತು ಮಾತನಾಡಿದರಲ್ಲದೇ ಕುವೆಂಪು ವಿರಚಿತ ಕಾನೂರು ಸುಬ್ಬಮ್ಮ ಹೆಗ್ಗಡತಿ ಹಾಗೂ ಮಲೆಗಳಲ್ಲಿ ಮದು ಮಗಳು ಎಂಬ ಮೇರು ಗ್ರಂಥಗಳನ್ನು ಓದಬೇಕೆಂದು ವಿದ್ಯಾರ್ಥಿಗಳಿಗೆ ಕರೆನೀಡಿದರು. ಕನ್ನಡ ಭಾರತಿ ಪದವಿ ಕಾಲೇಜಿನ ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ ಅಧ್ಯಕ್ಷತೆ ವಹಿಸಿ ಮಾತಮಾಡಿದರು. ಇದೇ ಸಂದರ್ಭ ಸಾಹಿತಿ ಭಾರಧ್ವಜ್ ಆನಂದ ತೀರ್ಥರನ್ನು ವೇದಿಕೆ ವತಿಯಿಂದ ಗೌರವಿಸಲಾಯಿತು. ಸಾಹಿತ್ಯಾಸಕ್ತರ ವೇದಿಕೆಯ ಸಂಚಾಲಕ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು. ಪುರಸಭೆಯ ಆರೋಗ್ಯಾಧಿಕಾರಿ ಉದಯಕುಮಾರ್, ಕಾಲೇಜಿನ ಉಪನ್ಯಾಸಕ ಕೆ.ರಾಮಚಂದ್ರ, ಮಂಜುನಾಥ್ ಇದ್ದರು. ವಿದ್ಯಾರ್ಥಿಗಳಾದ ಅಮೃಯ ಸ್ವಾಗತಿಸಿದರೆ, ವಿಸ್ಮಿತಾ ನಿರೂಪಿಸಿದರು. ಅಂಜಲಿ ತಂಡ ಪ್ರಾರ್ಥಿಸಿತು. ಪ್ರಜ್ವಲ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, ಸೆ.7 NEWS DESK : ಮಾದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಪಾಲಾಕ್ಷ ಅವರಿಗೆ…

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026

*ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*

ಸೆಪ್ಟೆಂಬರ್ 7, 2026

*ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026

*ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.