Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಸ್ತೂರಿ ರಂಗನ್ ವರದಿ : ರಾಜ್ಯದ ನಿರ್ಧಾರವನ್ನು ಕೇಂದ್ರ ಸರ್ಕಾರ ಪುರಸ್ಕರಿಸಲು ಮನವಿ*
ಇತ್ತೀಚಿನ ಸುದ್ದಿಗಳು

*ಕಸ್ತೂರಿ ರಂಗನ್ ವರದಿ : ರಾಜ್ಯದ ನಿರ್ಧಾರವನ್ನು ಕೇಂದ್ರ ಸರ್ಕಾರ ಪುರಸ್ಕರಿಸಲು ಮನವಿ*

December 31, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ ಡಿ.31 NEWS DESK : ಕಸ್ತೂರಿ ರಂಗನ್ ವರದಿ ಅನುಷ್ಠಾನವಾದರೆ ಕೊಡಗಿನ ರೈತರಿಗೆ ಉಳಿಗಾಲವಿಲ್ಲ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ಆತಂಕ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ರಾಜ್ಯದ ನಿರ್ಧಾರವನ್ನು ಕೇಂದ್ರ ಸರ್ಕಾರ ಪುರಸ್ಕರಿಸಬೇಕು ಎಂದು ಮನವಿ ಮಾಡಿದರು. ಕಸ್ತೂರಿ ರಂಗನ್ ವರದಿಯಂತೆ ಕೊಡಗಿನಲ್ಲಿರುವ ಪಶ್ಚಿಮಘಟ್ಟ ಸುತ್ತಮುತ್ತಲ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯ ಎಂದು ಗುರುತಿಸಿದರೆ, ಕೊಡಗಿನ ಬಹುತೇಕ ಗ್ರಾಮಗಳು ವಲಯಕ್ಕೆ ಸೇರ್ಪಡೆಗೊಂಡು ಗ್ರಾಮೀಣ ಜನರು ಬೀದಿಪಾಲಾಗಬೇಕಾಗುತ್ತದೆ. ಪುಷ್ಪಗಿರಿ ತಪ್ಪಲಿನ ಸನಿಹವೆ ಗ್ರಾಮಗಳಿದ್ದು, ಸಿ ಆ್ಯಂಡ್ ಡಿ ಕೃಷಿ ಭೂಮಿಯಲ್ಲೆ ಬದುಕು ಕಟ್ಟಿಕೊಂಡಿದ್ದಾರೆ. ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಂಡರೆ ಸಿ ಆ್ಯಂಡ್ ಡಿ ಭೂಮಿ ಸೂಕ್ಷ್ಮ ಪರಿಸರ ವಲಯಕ್ಕೆ ಸೇರ್ಪಡೆಯಾಗುತ್ತದೆ. ನಂತರ ರೈತರು ಗುಳೆ ಹೋಗಬೇಕಾದ ಅನಿವಾರ್ಯ ಒದಗುತ್ತದೆ ಎಂದು ಹೇಳಿದರು. ಈಗಾಗಲೇ ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯಕ್ಕೆ ಸೇರಿಸಲು ಪ್ರಕ್ರಿಯೆಗಳು ಪ್ರಾರಂಭವಾಗಿವೆ. ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಜಾಗೃತಿ ಮೂಡಿಸಲಾಗಿದೆ. ರೈತರು ಹೋರಾಟದ ಮೂಲಕ ಭೂಮಿ ಉಳಿಸಿಕೊಳ್ಳವ ತೀರ್ಮಾನ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಿ ಆ್ಯಂಡ್ ಡಿ ಯ ಭೂಮಿಯ ಬಗ್ಗೆ ಪೂರ್ಣ ಮಾಹಿತಿ ಕಲೆಹಾಕಲು ಕಂದಾಯ ಸಚಿವರು ಉನ್ನತಮಟ್ಟದ ಸಮಿತಿ ರಚಿಸುವ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಭರವಸೆ ನೀಡಿದ್ದಾರೆ. ಸಮಿತಿಯಲ್ಲಿ ಕೊಡಗಿನ ಶಾಸಕರುಗಳು ಹಾಗು ರೈತ ಮುಖಂಡರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಹಾಗು ಕೂಡಲೆ ಸಮಿತಿ ಕಾರ್ಯಾರಂಭ ಮಾಡಬೇಕು. ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಸಿ ಆ್ಯಂಡ್ ಡಿ ಭೂಮಿಯ ಜಂಟಿ ಸರ್ವೆ ಮಾಡಬೇಕು ಎಂದು ಒತ್ತಾಯಿಸಿದರು. ಹೋರಾಟ ಸಮಿತಿ ಸಂಚಾಲಕರಾದ ಕೆ.ಎಂ.ಲೋಕೇಶ್ ಮಾತನಾಡಿ, ಸಿ ಆ್ಯಂಡ್ ಡಿ ಭೂಮಿ ಹಾಗು ರೈತರ ಸಮಸ್ಯೆಯ ಬಗ್ಗೆ ಕ್ಷೇತ್ರದ ಸಂಸದರು ಮತ್ತು ಉಸ್ತುವಾರಿ ಸಚಿವರು ತಿಳಿದುಕೊಳ್ಳಬೇಕು. ರೈತರ ಸಮಸ್ಯೆಯನ್ನು ಕೇಂದ್ರ ಸರ್ಕಾರಕ್ಕೆ ಮುಟ್ಟಿಸಬೇಕಾದದು ಸಂಸದರ ಕರ್ತವ್ಯವಾಗಿದೆ. ಕೂಡಲೆ ಉಸ್ತುವಾರಿ ಸಚಿವರು, ಸಂಸದರ ನೇತೃತ್ವದಲ್ಲಿ ಕೊಡಗಿನಲ್ಲಿ ರೈತ ಮುಖಂಡರ ಸಭೆಯನ್ನು ಕರೆಯಬೇಕು. ಸ್ಥಳೀಯ ಶಾಸಕರುಗಳು ಸಿ ಆ್ಯಂಡ್ ಡಿ ಭೂಮಿ ಸಮಸ್ಯೆ, ಸೆಕ್ಷನ್ 4 ಸರ್ವೆಯ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡುತ್ತಾರೆ ಎಂದು ಹೇಳಿದರು. ಕೊಡಗಿನ ರೈತರ ಭೂಮಿಯನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬುದು ಈಗ ಕೊಡಗಿನ ರೈತರಿಗೆ ಅರಿವಾಗುತ್ತಿದೆ. ಭೂಮಿಯನ್ನು ಕಳೆದುಕೊಂಡು ರೈತರು ಗುಳೆ ಹೋಗುವುದಕ್ಕೆ ಸಾಧ್ಯವೇ ಇಲ್ಲ. ಕೊಡಗಿನ ಮೂಲನಿವಾಸಿಗಳಿಗೆ ಸರ್ಕಾರಗಳು ತೊಂದರೆ ನೀಡಿದರೆ, ಮತ್ತೊಮ್ಮೆ ಕೊಡಗು ರಾಜ್ಯದ ಹೋರಾಟಕ್ಕೆ ಕೊಡಗಿನ ರೈತರು ಕರೆಕೊಡುವ ಸಂರ್ಭವೂ ಒದಗಬಹುದು ಎಂದು ಹೇಳಿದರು. ಸಮಿತಿ ಸಂಚಾಲಕ ಬಿ.ಜೆ.ದೀಪಕ್ ಮಾತನಾಡಿ, ಸರ್ಕಾರದ ಆದೇಶದಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬಂಧ ಅರ್ಜಿಗಳನ್ನು ನೀಡಲು ಕಾಲಾವಕಾಶವನ್ನು ಮುಂದಿನ 3 ತಿಂಗಳಿಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಡಿ.31 ಕೊನೆ ದಿನವಾಗಿತ್ತು. ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ರೈತರು ಅರ್ಜಿ ಸಲ್ಲಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಕೃಷಿ ಬೆಳೆಗಳ ಕಟಾವು ನಡೆಯುತ್ತಿದ್ದು, ಬಹುತೇಕ ರೈತರಿಗೆ ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಸಂಚಾಲಕರಾದ ಎಚ್.ಕೆ.ಪೃಥ್ವಿ, ದೇವರಾಜ್ ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ ಕುವೆಂಪು ಸಂಸ್ಮರಣೆ ಕಾರ್ಯಕ್ರಮ : ವಿದ್ಯಾರ್ಥಿಗಳು ಕುವೆಂಪು ಸಾಹಿತ್ಯ ಅರಿತುಕೊಳ್ಳಿ : ಸಾಹಿತಿ ಭಾರಧ್ವಜ್ ಆನಂದ ತೀರ್ಥ ಕರೆ*
Next Article *ಕುಂಜಿಲ-ಕಕ್ಕಬ್ಬೆ ರಸ್ತೆ ಕಾಮಗಾರಿ ಪ್ರಗತಿ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.