Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಟಿವಿ9 ಡಿಜಿಟಲ್ ಡೆಪ್ಯೂಟಿ ಎಡಿಟರ್​​ ಕೊಡಗಿನ ಜಗದೀಶ್ ಬೆಳ್ಯಪ್ಪಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು

*ಟಿವಿ9 ಡಿಜಿಟಲ್ ಡೆಪ್ಯೂಟಿ ಎಡಿಟರ್​​ ಕೊಡಗಿನ ಜಗದೀಶ್ ಬೆಳ್ಯಪ್ಪಗೆ ಬೆಂಗಳೂರು ಪ್ರೆಸ್​ಕ್ಲಬ್​ ಪ್ರಶಸ್ತಿ*

January 2, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.2 NEWS DESK : ಕೊಡಗು ಜಿಲ್ಲೆಯ ಜಗದೀಶ್ ಬೆಳ್ಯಪ್ಪ ಅವರು 2024ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 28 ವರ್ಷಗಳಿಂದ ನಿರಂತರವಾಗಿ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಜಗದೀಶ್ ಬೆಳ್ಯಪ್ಪ ಅವರು ಮೂಲತಃ ಕೊಡಗು ಜಿಲ್ಲೆಯವರು. 1997ರಲ್ಲಿ ತಮ್ಮ 22ನೇ ವಯಸ್ಸಿಗೆ ಕೊಡಗು ಜಿಲ್ಲೆಯ ಶಕ್ತಿ ಪತ್ರಿಕೆ ಮೂಲಕ ಪತ್ರಿಕಾ ಕ್ಷೇತ್ರಕ್ಕೆ ಛಾಯಚಿತ್ರಕಾರರಾಗಿ ಪ್ರವೇಶಿಸಿದರು. ನಂತರ ಶಕ್ತಿ ಪತ್ರಿಕೆಯ ಉಪಸಂಪಾದಕರಾದರು. ಮುಂದಿನ ದಿನಗಳಲ್ಲಿ ಸಂಯುಕ್ತ ಕರ್ನಾಟಕ, ಕಾವೇರಿ ಚಾನಲ್, ಎನ್​ಡಿ ಟಿವಿಯ ವರದಿಗಾರರಾಗಿ ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಉಷಾಕಿರಣ ಪತ್ರಿಕೆಯಲ್ಲಿ ಸ್ಟೇಟ್ ಎಡಿಷನ್ ಟೀಂ ನಲ್ಲಿದ್ದರು. ಟಿವಿ9 ಮೂಲಕ ಮತ್ತೆ ಕೊಡಗು ಜಿಲ್ಲೆಗೆ ವರದಿಗಾರರಾಗಿ ಜನಪ್ರಿಯಗೊಂಡರು. ಸ್ವಲ್ಪ ಸಮಯದ ನಂತರ ವಿಜಯ ಕರ್ನಾಟಕ ವರದಿಗಾರರಾಗಿ ರಾಜ್ಯ ಮಟ್ಟದ ಎರಡು ಸಾಹಿತ್ಯ ಸಮ್ಮೇಳನದ ವರದಿ ಮಾಡಿ ಮೆಚ್ಚುಗೆ ಪಡೆದರು. ನಂತರ ಮತ್ತೆ ಬೆಂಗಳೂರಿಗೆ ತೆರಳಿದ ಅವರು ಸುವರ್ಣ ಟಿವಿಯ ಇನ್ ಪುಟ್ ಎಡಿಟರ್ ಆಗಿ ಕೆಲಸ ಮಾಡಿದರು.
2 ವರ್ಷದ ನಂತರ ಟಿವಿ9 ನ ಇನ್ ಪುಟ್ ಎಡಿಟರ್ ಆಗುವುದರ ಮೂಲಕ ಜಿಲ್ಲಾ ವರದಿಗಾರರಾಗಿದ್ದವರು ಅದೇ ಸಂಸ್ಥೆಯ ಉನ್ನತ ಸ್ಥಾನಕ್ಕೇರಿದ ಮೊದಲಿಗರಾದರು. ಸದ್ಯ ಟಿವಿ9 ಡಿಜಿಟಲ್​​ನಲ್ಲಿ ಡೆಪ್ಯೂಟಿ ಎಡಿಟರ್ ಆಗಿದ್ದಾರೆ. 28 ವರ್ಷದ ಪತ್ರಿಕೋದ್ಯಮ ಕ್ಷೇತ್ರದ ಹಾದಿಯಲ್ಲಿ ಜಗದೀಶ್ ಬೆಳ್ಯಪ್ಪ ಅವರಿಗೆ ಶಕ್ತಿ ಪತ್ರಿಕೆಯ ಜಿ.ರಾಜೇಂದ್ರ, ಶಶಿಧರ್ ಭಟ್, ಜಯಶೀಲರಾವ್, ವಿ.ಎನ್ ಸುಬ್ಬರಾವ್, ಈಶ್ವರ ದೈತೋಟ, ಸುಗುತಾ ಶ್ರೀನಿವಾಸರಾಜು, ತಿಮ್ಮಪ್ಪ ಭಟ್, ಅನಂತ ಚೀನಿವಾರ್, ರವಿ ಹೆಗಡೆ, ಮಹೇಂದ್ರ ಮಿಶ್ರಾ ಮುಂತಾದ ಮಹನೀಯರು ಸಂಪಾದಕರಾಗಿ ಮಾರ್ಗದರ್ಶನ ಮಾಡಿದ್ದಾರೆ. ಜಗದೀಶ್ ಬೆಳ್ಯಪ್ಪ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಉತ್ತಮ ವರದಿ ನೀಡುವ 3 ಪ್ರಶಸ್ತಿ, ಕೊಡಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಷ್ಟ್ರೀಯ ಉತ್ತಮ ಛಾಯಾಗ್ರಾಹಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪತ್ರಿಕೋದ್ಯಮದ ಸಂಘಟನೆಗಳಲ್ಲಿ ನಿರಂತವಾಗಿ ತೊಡಗಿಸಿಕೊಂಡಿರುವ ಇವರು ಕೊಡಗು ಮತ್ತು ಬೆಂಗಳೂರಿನ ಪ್ರೆಸ್ ಕ್ಲಬ್, ಪತ್ರಕರ್ತರ ಸಂಘ, ಪತ್ರಕರ್ತರ ಸೊಸೈಟಿ, ಪತ್ರಿಕಾ ಭವನದಲ್ಲಿ ಅಧ್ಯಕ್ಷರಾಗಿ, ಪದಾಧಿಕಾರಿಯಾಗಿ, ಸದಸ್ಯರಾಗಿಯೂ ಶ್ರಮಿಸಿದ್ದಾರೆ. ಹೀಗೆ ಕಳೆದ 28ವರ್ಷಗಳಲ್ಲಿ ಪತ್ರಿಕೆ, ಟಿವಿ ಮಾಧ್ಯಮ, ಆಲ್ ಇಂಡಿಯಾ ರೇಡಿಯೋ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕಾ ಕ್ಷೇತ್ರದ ಎಲ್ಲಾ ವಿಭಾಗದಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಹುತಾತ್ಮ ದಿವಿನ್ ಗೆ ಯುಕೊ ಸಂಘಟನೆಯಿಂದ ಗೌರವ ಅರ್ಪಣೆ*
Next Article *ಪಡಿಯಾಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.