Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಕ್ಕಂದೂರಿನಲ್ಲಿ ಸಂಭ್ರಮದ ಉಮ್ಮೇಟಿ ಕೋಲ್‌ ಮಂದ್‌ ಮತ್ತು ಪುತ್ತರಿ ಊರೋರ್ಮೆ*
ಇತ್ತೀಚಿನ ಸುದ್ದಿಗಳು

*ಮಕ್ಕಂದೂರಿನಲ್ಲಿ ಸಂಭ್ರಮದ ಉಮ್ಮೇಟಿ ಕೋಲ್‌ ಮಂದ್‌ ಮತ್ತು ಪುತ್ತರಿ ಊರೋರ್ಮೆ*

January 4, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.4 NEWS DESK : ಕೊಡಗಿನ ಮೂಲ ನಿವಾಸಿ ಜನಾಂಗವಾಗಿರುವ ಕೊಡವರು, ಇಂದು ತಮ್ಮ ಅಸ್ತಿತ್ವಕ್ಕಾಗಿ ತಮ್ಮ ತಾಯಿನೆಲದಲ್ಲಿಯೇ ಹೋರಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ತಮ್ಮತನವನ್ನು ಕಾಯ್ದುಕೊಳ್ಳಲು, ಕೊಡವಾಮೆಯ ಬೇರನ್ನು ಗಟ್ಟಿಗೊಳಿಸುವಲ್ಲಿ ಏಳ್‌ನಾಡ್‌ ಕೊಡವರ ಜವಾಬ್ದಾರಿ ಅಧಿಕವಾಗಿದ್ದು, ಈ ನಿಟ್ಟಿನಲ್ಲಿ ಇಲ್ಲಿನ ನಾಲ್ಕು ಕೊಡವ ಸಮಾಜಗಳು ಒಮ್ಮತದ ಯೋಜನೆ ತಯಾರಿಸಬೇಕಿದೆ ಎಂದು ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ, ನಡುಬಾಡೆ ಸಂಪಾದಕ ಚಾಮೆರ ದಿನೇಶ್‌ ಬೆಳ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಂದೂರು ಕೊಡವ ಸಮಾಜದ ಆಶ್ರಯದಲ್ಲಿ ನಡೆದ ಉಮ್ಮೇಟಿ ಕೋಲ್‌ ಮಂದ್‌ ಮತ್ತು ಪುತ್ತರಿ ಊರೋರ್ಮೆ ಕಾರ್ಯಕ್ರಮವನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಏಳ್‌ನಾಡ್‌ ಎಂದರೆ ಕೊಡವಾಮೆಯ ಗೂಡು ಎನ್ನುವ ನಂಬಿಕೆ ಇದೆ. ಆದರೆ ಅದು ಇಂದಿನ ಕಾಲದಲ್ಲಿ ಎಷ್ಟರ ಮಟ್ಟಿಗೆ ಆ ಗೂಡನ್ನ ಉಳಿಸಿಕೊಂಡಿದ್ದೇವೆ ಎನ್ನುವುದನ್ನ ನಾವು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದರು. ಕೊಡಗಿನ ಮೂರು ಪ್ರಮುಖ ಭಾಗಗಳಾದ ಕ್‌ಗ್ಗಟ್ಟ್, ಮೇಂದಲೆ ಮತ್ತು ಏಳ್‌ನಾಡ್‌ ಭಾಗಗಳನ್ನು ತುಲನೆ ಮಾಡಿದರೆ, ಪದ್ಧತಿ, ಪರಂಪರೆ, ಆಟ್‌ ಪಾಟ್‌ಗಳಲ್ಲಿ ಏಳ್‌ನಾಡ್‌ ಮುಂಚೂಣಿಯಲ್ಲಿ ಇದೆ. ಆದರೆ ಕೊಡವಾಮೆಗೆ ಸಂಭಂದಿಸಿದ ಹೋರಾಟದ ವಿಚಾರಕ್ಕೆ ಬಂದಾಗ ನಾವು ಸಾಕಷ್ಟು ಹಿಂದೆ ಇದ್ದೇವೆ. ಮೇಂದಲೆ ಮತ್ತು ಕ್‌ಗ್ಗಟ್ಟ್‌ ನಾಡಿನೊಂದಿಗೆ ನಾವೂ ಈ ವಿಚಾರದಲ್ಲಿ ಒಗ್ಗಟ್ಟಿನಿಂದ ಕೈ ಜೋಡಿಸಿದರೆ ಕೊಡವಾಮೆಯ ಬೆಳವಣಿಗೆಗೆ ಮತ್ತಷ್ಟು ಪ್ರಖರತೆ ದೊರೆಯಲಿದೆ ಎಂದರು. ಆಟ್‌ ಪಾಟ್‌, ಪದ್ಧತಿ ವಿಚಾರದಲ್ಲೂ ಏಳ್‌ನಾಡ್‌ ತನ್ನ ಘತ ವೈಭವವನ್ನು ಕಳೆದುಕೊಳ್ಳುತ್ತಿದ್ದು, ಕಲೆ ಸಂಸ್ಕೃತಿಯ ಜೊತೆಗೆ ಕೊಡವಾಮೆಯ ಉಳಿವಿಗೂ ನಾವು ಕೈಜೋಡಿಸಬೇಕಿದೆ ಎಂದರು. ಕೊಡಗಿನ ಇತಿಹಾಸಕ್ಕೆ ಏಳ್‌ನಾಡಿನ ಕೊಡುಗೆ ಮಹತ್ತರವಾಗಿದ್ದು, ನಮ್ಮ ನಾಡಿನ ಬಗ್ಗೆ ನಮಗಿರುವ ಅಭಿಮಾನದ ಕೊರತೆಯೇ ಇದಕ್ಕೆ ಮೂಲ ಕಾರಣ. ಈ ಅಭಿಮಾನವನ್ನು ಬೆಳೆಸುವತ್ತ ನಾವುಗಳು ಮುಂದಡಿ ಇಡಬೇಕು ಎಂದರು. ಕೊಡವಾಮೆಯ ಭೀರ್ಯ ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ಇಂದಿನಿಂದಲೇ ಮಕ್ಕಳನ್ನು ಕೊಡವ ಪರಂಪರೆ ಮತ್ತು ಸಂಸ್ಕೃತಿಯೊಂದಿಗೆ ಬೆಸೆಯಬೇಕು. ಈ ಜವಾಬ್ದಾರಿ ತಾಯಂದಿರ ಮೇಲೆ ಹೆಚ್ಚಿದ್ದು, ಕೇವಲ ಶಾಲೆ ಮತ್ತು ಅಂಕ ಪಡೆಯುವತ್ತಲೇ ಗಮನ ಕೇಂದ್ರೀಕರಿಸದೆ, ನಮ್ಮ ಮೂಲತನದ ಉಳಿವಿಗೆ ಸಂಸ್ಕೃತಿಯ ಅರಿವು ಮೂಡಿಸುವುದೂ ಅನಿವಾರ್ಯವಿದೆ ಎಂದರು. ಈ ನಿಟ್ಟಿನಲ್ಲಿ ಏಳ್‌ನಾಡ್‌ ಭಾಗದ ಪ್ರಮುಖ ಸಮಾಜಗಳಾದ ಮಡಿಕೇರಿ, ಮಕ್ಕಂದೂರು, ಮಾದಾಪುರ, ಗರ್ವಾಲೆ ಕೊಡವ ಸಮಾಜಗಳು ಒಮ್ಮತದ ಯೋಜನೆಯನ್ನು ತಯಾರಿಸುವ ಮೂಲಕ, ಮುಂದಿನ ದಿನಗಳಲ್ಲಿ, ಕ್‌ಗ್ಗಟ್ಟ್‌ ಮತ್ತು ಮೇಂದಲೆ ನಾಡ್‌ಗಳೊಂದಿಗೆ ಕೈ ಜೋಡಿಸಿದರೆ, ಕೊಡವರ ಒಗ್ಗಟ್ಟಿಗೆ ಮತ್ತಷ್ಟು ಬಲ ಬರಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಕ್ಕಂದೂರು ಕೊಡವ ಸಮಾಜ ಅಧ್ಯಕ್ಷ ತಂಬುಕುತ್ತಿರ ಮಧು ಮಂದಣ್ಣ, ಜನಾಂಗದ ಏಳಿಗೆಗೆ ಮಕ್ಕಂದೂರು ಕೊಡವ ಸಮಾಜ ಎಂದಿಗೂ ಮುಂದೆ ನಿಂತಿದ್ದು, ಯಾವುದೇ ಸಂದರ್ಭದಲ್ಲಿಯೂ ನಾವು ಜನಾಂಗದ ಜೊತೆ ನಿಲ್ಲಲಿದ್ದೇವೆ ಎಂದರು. ಮುಂದಿನ ದಿನಗಳಲ್ಲಿ ಯುವಕರನ್ನು ಕೊಡವಾಮೆಯತ್ತ ಸೆಳೆಯಲು ಹಲವು ಯೋಜನೆಗಳನ್ನು ಸಿದ್ದಪಡಿಸುವ ಚಿಂತನೆ ಇದ್ದು, ಈ ನಿಟ್ಟಿನಲ್ಲಿ ಕೊಡವ ಸಮಾಜದ ಮಹಿಳಾ ಘಟಕ ಮತ್ತು ಯುವ ಘಟಕ ಶ್ರಮಿಸುತ್ತಿದೆ. ಸರ್ವರೂ ಸಹಕರಿಸಿದರೆ ಕೆಲವೇ ವರ್ಷಗಳಲ್ಲಿ ಪ್ರಬುದ್ಧ ಕೊಡವಾಭಿಮಾನದ ಸಮಾಜವಾಗಿ ರೂಪಿಸಲು ಪಣತೊಡುವುದಾಗಿ ಭರವಸೆಯಿತ್ತರು. ಕಾರ್ಯಕ್ರಮದಲ್ಲಿ ಮಕ್ಕ್ನಾಡ್‌ ತಕ್ಕರಾದ ಸಬ್ಬುಡ ದಿನೇಶ್‌, ಪಾಲೇರಿ ನಾಡ್‌ ತಕ್ಕರಾದ ಐಮುಡಿಯಂಡ ದೇವಯ್ಯ, ಬದಿಗೇರಿ ನಾಡ್‌ತಕ್ಕರಾದ ಶಾಂತೆಯಂಡ ರಾಜೇಶ್‌ ಕಾವೇರಪ್ಪ, ಮಕ್ಕಂದೂರು ಕೊಡವ ಸಮಾಜ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು, ಮಹಿಳಾಘಟಕ, ಯುವ ಘಟಕದ ಪಧಾದಿಕಾರಿಗಳು ಮತ್ತು ಸದಸ್ಯರು, ಸಮಾಜ ವ್ಯಾಪ್ತಿಯ ಕೊಡವಾಭಿಮಾನಿಗಳು ಹಾಜರಿದ್ದರು. ಸಮಾಜ ಕಾರ್ಯದರ್ಶಿ ಮುಲುವೆರ ಬಿದ್ದಪ್ಪ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಮೊದಲಿಗೆ ಶ್ರೀ ಭದ್ರಕಾಳೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಉಮ್ಮೇಟಿ ಮಂದ್‌ನಲ್ಲಿ ಕೋಲಾಟ ಆಡುವ ಮೂಲಕ ಸಂಭ್ರಮಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ಸಂವಾದ : ಕೂಡಿಗೆ ಹಾಲಿನ ಡೈರಿ ಸದ್ಯದಲ್ಲೇ ಮೇಲ್ದರ್ಜೆಗೆ : ಹೇಮಂತ್ ಕುಮಾರ್*
Next Article *ಕುವೆಂಪು ರಚಿತ ನಾಡಗೀತೆ ಆಶಯಕ್ಕೆ ನೂರು ವರ್ಷ : ಮಡಿಕೇರಿಯಲ್ಲಿ ಗಮನ ಸೆಳೆದ ಸಹಸ್ರ ಕಂಠ ಗಾಯನ ಕಾರ್ಯಕ್ರಮ*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.